Homeಕರ್ನಾಟಕ'ಗಂಗಮ್ಮ' ಸಾವಿನ ಹೊಣೆಯನ್ನು ರಾಜ್ಯ ಸರ್ಕಾರವೂ ಹೊರಬೇಕು: ಕುಮಾರಸ್ವಾಮಿ

‘ಗಂಗಮ್ಮ’ ಸಾವಿನ ಹೊಣೆಯನ್ನು ರಾಜ್ಯ ಸರ್ಕಾರವೂ ಹೊರಬೇಕು: ಕುಮಾರಸ್ವಾಮಿ

- Advertisement -
- Advertisement -

ಬೆಂಗಳೂರಿನಿಂದ ತನ್ನ ಊರಾದ ಸಿಂಧನೂರಿಗೆ ಕಾಲ್ನಡಿಗೆಯಿಂದ ಹೊರಟು ಬಳಲಿ ಮೃತಪಟ್ಟ ಕಾರ್ಮಿಕ ಮಹಿಳೆ ಗಂಗಮ್ಮ ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದ್ವನಿಯೆತ್ತಿದ್ದಾರೆ.

ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಗಂಗಮ್ಮ ತನ್ನ ಊರಾದ ರಾಯಚೂರಿನ ಸಿಂಧನೂರಿಗೆ ಹೊರಟಿದ್ದರು. ಇವರನ್ನು ದುಡಿಸುತ್ತಿದ್ದ ಗುತ್ತಿಗೆಗಾರ ಅವರು ದುಡಿದ ಹಣವನ್ನು ಕೊಡದ ಹಿನ್ನಲೆಯಲ್ಲಿ ಅವರು ನಡೆದುಕೊಂಡೆ ಅನ್ನ ನೀರಿಲ್ಲದೆ ಮೂರು ದಿನಗಳ ಕಾಲ ತನ್ನ ಊರಿಗೆ ಹೊರಟಿದ್ದ ವೇಳೆ ಅವರು ಸಾವನಪ್ಪಿದ್ದಾರೆ.

ಈ ಕುರಿತು ಕುಮಾರಸ್ವಾಮಿ ಅವರು “ಹುಟ್ಟೂರು ಸೇರಬೇಕೆಂಬ ಆಸೆಯೊಂದಿಗೆ ಹಸಿವಿನಲ್ಲೇ ರಾಯಚೂರಿನತ್ತ ಹೆಜ್ಜೆ ಹಾಕುತ್ತಿದ್ದ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಮಾರ್ಗ ಮಧ್ಯೆ ಅನ್ನಾಹಾರವಿಲ್ಲದೆ, ಸಕಾಲಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟರೆಂಬ ಸುದ್ದಿ ತೀವ್ರ ನೋವುಂಟುಮಾಡಿತು” ಎಂದು ಸಂತಾಪ ವ್ಯಕ್ತ ಪಡಿಸಿದ್ದಾರೆ.


ಇದನ್ನೂ ಓದಿ: ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?


“ಗಂಗಮ್ಮ ಅವರ ಈ ಪ್ರಕರಣ ವಲಸೆ ಕಾರ್ಮಿಕರು, ಕೂಲಿಕಾರ್ಮಿಕರ ಬದುಕನ್ನು ಸಾಕ್ಷಿಕರಿಸುವಂತಿದೆ. ಈ ಪ್ರಕರಣದಲ್ಲಿ ಕೂಲಿ ನೀಡದ ಗುತ್ತಿಗೆದಾರನೊಬ್ಬನದ್ದೇ ತಪ್ಪಿಲ್ಲ, ಸರ್ಕಾರದ್ದೂ ತಪ್ಪಿದೆ. ಕಾರ್ಮಿಕರ ಇಲಾಖೆಯಲ್ಲಿ 8000 ಕೋಟಿ ಹಣವಿದೆ. ಆದರೆ ಇಂಥವರಿಗೆ ವಿನಿಯೋಗವಾಗುತ್ತಿಲ್ಲವೇಕೆ? ಗಂಗಮ್ಮರನ್ನು ಬಳ್ಳಾರಿ ಜಿಲ್ಲಾಡಳಿತ ನಿರಾಶ್ರಿತರ ಕ್ಯಾಂಪ್‌ನಲ್ಲಿ ಇರಿಸಿತ್ತಂತೆ. ಕ್ಯಾಂಪ್‌ನಲ್ಲಿದ್ದೂ ಆಕೆಗೆ ಆಹಾರ, ಚಿಕಿತ್ಸೆ ಸಿಗಲಿಲ್ಲ ಏಕೆ?” ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

“ಲಾಕ್‌ಡೌನ್‌ ಮಧ್ಯಮ ವರ್ಗ ಮತ್ತು ಶ್ರೀಮಂತರನ್ನು ಮನೆಯಲ್ಲಿ ಬಂಧಿಸಿಟ್ಟಿರಬಹುದು. ಆದರೆ, ಕೂಲಿಕಾರ್ಮಿಕರನ್ನು, ವಲಸಿಗರನ್ನು ಬೀದಿಗೆ ತಳ್ಳಿದೆ. ಸರ್ಕಾರ ಕೂಡಲೇ ಇಂಥವರ ಕಡೆಗೂ ಗಮನ ಹರಿಸಬೇಕು. ದೂರದೂರುಗಳಿಗೆ ಹೆಜ್ಜೆ ಹಾಕಿರುವವರ ಬದುಕು ಬವಣೆನ್ನು ನೋಡಬೇಕು. ಮೃತ ಗಂಗಮ್ಮನ ಕುಟುಂಬಕ್ಕೆ ಪರಿಹಾರ ನೀಡಬೇಕು” ಎಂದು ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ವಿದೇಶದಿಂದ ಬಂದ ಸೋಂಕು ಅತ್ತ ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಬಾಧಿಸುತ್ತಿದೆ. ಇತ್ತ, ದೇಶದ ಅಭಿವೃದ್ಧಿಗೆ ಹೆಗಲಾದವರು, ದೇಶ ಕಟ್ಟಿದವರು, ಕಟ್ಟುವ ಕೆಲಸಕ್ಕೆ ಮಣ್ಣು, ಕಲ್ಲು, ಇಟ್ಟಿಗೆ ಹೊತ್ತವರು ತಾವು ಮಾಡದ ತಪ್ಪಿಗೆ ಅನ್ನಾಹಾರಗಳಿಲ್ಲದೇ ಸಾವಿಗೆ ಶರಣಾಗುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...