Homeಕರ್ನಾಟಕಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ...

ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ಮೊಹರಂ ಹಬ್ಬದಂದು ದಲಿತರ ಮೇಲೆ ಸವರ್ಣಿಯರು ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಕಳೆದ ವಾರ ಮಾದಿಗ ಸಮುದಾಯದ ಜನರ ಮೇಲೆ, ಕುರುಬ ಮತ್ತು ನಾಯಕ ಸಮುದಯಗಳ ಜನರು ಗುಂಪು ಕಟ್ಟಿಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದು ದಲಿತಪರ ಹೋರಾಟಗಾರ ಕರಿಯಪ್ಪ ಗುಡಿಮನಿ ಎಚ್ಚರಿಕೆ ನೀಡಿದ್ದಾರೆ.

ಸಿಂಗನಾಳ ಗ್ರಾಮದಲ್ಲಿ ಕಳೆದ ವಾರ ಮೊಹರಂ ಹಬ್ಬದ ದಿನವಾದ ಶುಕ್ರವಾರಂದು ಗೆಜ್ಜೆ ಕುಣಿತದ ಸಮಯದಲ್ಲಿ ಮೈಕೈ ಸ್ಪರ್ಶಿಸಿದ್ದಕ್ಕೆ ಜಗಳಗಳು ಪ್ರಾರಂಭವಾಗಿದೆ. ಇದುವೆ ದೊಡ್ಡದಾಗಿ ಶನಿವಾರ ಕೂಡಾ ಮಾದಿಗರ ಮೇಲೆ ಆಕ್ರಮಣ ನಡೆದಿದೆ. ಶುಕ್ರವಾರ ರಾತ್ರಿ 7 ಗಂಟೆಗೆ ಮಾದಿಗ ಸಮುದಾಯದವರು ಪೋಲಿಸರಿಗೆ ದೂರವಾಣಿ ಮೂಲಕ ಘಟನೆ ಬಗ್ಗೆ ತಿಳಿಸಿದ್ದರು.

ಪೊಲೀಸರಿಗೆ ದೂರು ನೀಡಿದಕ್ಕಾಗಿ ಕುರುಬ ಮತ್ತು ನಾಯಕ ಸಮುದಾಯದವರು ಮತ್ತೆ ಶನಿವಾರದಂದು ಮುಂಜಾನೆ ಗುಂಪು ಕಟ್ಟಿಕೊಂಡು ಮಾದಿಗ ಸಮುದಾಯದ ಮೇಲೆ ಆಕ್ರಮಣ ನಡೆಸಿದ್ದಾರೆ ಎನ್ನಲಾಗಿತ್ತು. ಆಕ್ರಮಣದಿಂದಾಗಿ ನಾಲ್ಕು ಯುವಕರಿಗೆ ಗಂಭೀರ ಗಾಯಗಾಳಾಗಿದ್ದು ಅವರು ಗಂಗಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಗುಂಪು ಕಟ್ಟಿಕೊಂಡು ಆಕ್ರಮಣ; ನಾಲ್ವರು ಆಸ್ಪತ್ರೆಗೆ ದಾಖಲು

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ಗಂಗಾವತಿ ಗ್ರಾಮೀಣ ಪೊಲೀಸ್‌ ಠಾಣೆಯ ಪಿಎಸ್‌ಐ ದೊಡ್ಡಯ್ಯ ಮಾತನಾಡಿ, “ಘಟನೆಯಲ್ಲಿ ಒಂದು ಕಡೆಯಿಂದ 20 ಮತ್ತು ಇನ್ನೊಂದು ಕಡೆಯಿಂದ 21 ಜನರ ಮೇಲೆ ಪ್ರಕರಣ ದಾಖಲಾಗಿದೆ” ಎಂದು ಹೇಳಿದ್ದರು.

ಈ ಬಗ್ಗೆ ವಿಚಾರಣೆ ನಡೆಸಲು ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಜಿಲ್ಲಾಡಳಿತವೇ ಸಿಂಗನಾಳ ಗ್ರಾಮಕ್ಕೆ ಭೇಟಿ ನೀಡಿತ್ತು. ಎರಡು ಸಮುದಾಯದ ಜನರ ನಡುವೆ ಶಾಮತಿಸಭೆ ನಡೆಸಲು ಪ್ರಯತ್ನಿಸಿತ್ತು. ಇಲ್ಲಿಯೂ ಮಾತಿನ ಚಕಮಕಿ ನಡೆದಿದೆ.

PC:gbnewskannada

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಹೋರಾಟಗಾರ ಕರಿಯಪ್ಪ ಗುಡಿಮನಿ, “ಹಲ್ಲೆಯಲ್ಲಿ ಗಾಯಗಳಾಗಿರುವುದು 8 ರಿಂದ 10 ಜನರಿಗೆ. ಆದರೆ, ಎಫ್‌ಐಆರ್‌ನಲ್ಲಿ ಸೇರಿಸಿರುವುದು ಮಾತ್ರ ಒಬ್ಬರ ಹೆಸರು ಮಾತ್ರ. ಹೀಗಾದರೆ ಅವರಿಗೆ ಪರಿಹಾರ ಹೇಗೆ ಸಿಗುತ್ತೆ…? ಅದಕ್ಕೆ ಹೆಸರು ಸೇರಿಸಲು ಒತ್ತಾಯಿಸಿದ್ದೇವೆ. ಈ ಜನರಿಗೆ ನ್ಯಾಯ ಸಿಗುವವರೆಗೆ ನಾವು ಹೋರಾಟ ಮಾಡುತ್ತೇವೆ ಅಂತ ಜಿಲ್ಲಾಧಿಕಾರಿಗೆ ಹೇಳಿದ್ದೇವೆ. ಜಿಲ್ಲಾಧಿಕಾರಿಗಳು ಗಾಯಾಳುಗಳ ಜೊತೆ ಮಾತಾಡಿಲ್ಲ. ಶಾಂತಿ ಸಭೆ ನಡೆಸುತ್ತೇವೆ ಎಂದು ಎಲ್ಲರೂ ಬಂದಿದ್ದರು. ನಾವು ಈ ಘಟನೆ ಬಗ್ಗೆ ಫ್ಯಾಕ್ಟ್ ಫೈಂಡಿಗೆ ಮಾಡುತ್ತೇವೆ” ಎಂದಿದ್ದಾರೆ.

ಮುಂದುವರೆದು… “ಕೊಪ್ಪಳ ಜಿಲ್ಲೆಯ ಅಸ್ಪೃಶ್ಯತೆ, ಜಾತಿ ವ್ಯವಸ್ಥೆಯಿಂದ ಅಮಾಯಕರ ಮೇಲೆ ಪದೇ ಪದೆ ಹಳ್ಳಿಗಳಲ್ಲಿ ಹಲ್ಲೆಗಳಾಗುತ್ತಿರುವ ಬಗ್ಗೆ ಜನ ಹೋರಾಟ ನಡೆಸಲು ನಿರ್ಧರಿಸಿದ್ದೇವೆ. ಕರ್ನಾಟಕ ಜನಶಕ್ತಿ, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ದಲಿತ ದಮನಿರ ಒಕ್ಕೂಟದ ಜೊತೆಗೆ ಹೋರಾಟ ನಡೆಸುತ್ತೇವೆ. ಸಿಂಗನಾಳ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ” ಎಂದು ಕರಿಯಪ್ಪ ಗುಡಿಮನಿ ಹೇಳಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಜಗಳದಲ್ಲಿ ಬಾಗಿಯಾದವರು ಎಲ್ಲರೂ ವಿದ್ಯಾವಂತರೇ.. ಉನ್ನತಸ್ಥಾನದಲ್ಲಿ ಇರುವವರೇ. ತಪ್ಪು ಮಾಡಿದಾಗ ಊರಿನ ಯುವಕರಿಗೆ ಬುದ್ದಿ ಹೇಳಬೇಕಾದವರೇ, ಊರಿನ ಹಿರಿಯರೇ ಈ ರೀತಿ ನಡೆದುಕೊಂಡಿರುವುದು ಅವರಿಗೆ ಶೋಭೆ ತರುವಂತದ್ದಲ್ಲ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...