Homeಕರ್ನಾಟಕಗಂಗಾವತಿ: ಮಾದಿಗ ಸಮುದಾಯದ ಮೇಲೆ ಗುಂಪು ಕಟ್ಟಿಕೊಂಡು ಆಕ್ರಮಣ; ನಾಲ್ವರು ಆಸ್ಪತ್ರೆಗೆ ದಾಖಲು

ಗಂಗಾವತಿ: ಮಾದಿಗ ಸಮುದಾಯದ ಮೇಲೆ ಗುಂಪು ಕಟ್ಟಿಕೊಂಡು ಆಕ್ರಮಣ; ನಾಲ್ವರು ಆಸ್ಪತ್ರೆಗೆ ದಾಖಲು

- Advertisement -
- Advertisement -

ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಶನಿವಾರದಂದು ಮಾದಿಗ ಸಮುದಾಯದ ಜನರ ಮೇಲೆ, ಕುರುಬ ಮತ್ತು ನಾಯಕ ಸಮುದಯಗಳ ಜನರು ಗುಂಪು ಕಟ್ಟಿಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮೊಹರಂ ಹಬ್ಬದ ದಿನವಾದ ಶುಕ್ರವಾರಂದು ಗೆಜ್ಜೆ ಕುಣಿತದ ಸಮಯದಲ್ಲಿ ಮೈಕೈ ಸ್ಪರ್ಶಿಸಿದ್ದಕ್ಕೆ ಜಗಳಗಳು ಪ್ರಾರಂಭವಾಗಿದೆ. ಇದುವೆ ದೊಡ್ಡದಾಗಿ ಶನಿವಾರ ಕೂಡಾ ಮಾದಿಗರ ಮೇಲೆ ಆಕ್ರಮಣ ನಡೆದಿದೆ ಎಂದು ವ್ಯಕ್ತಿಯೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ಮೊದಲ ಘಟನೆಯ ಬಗ್ಗೆ ಶುಕ್ರವಾರ ರಾತ್ರಿ 7 ಗಂಟೆಗೆ ಪೋಲಿಸರಿಗೆ ದೂರವಾಣಿ ಮುಖಾಂತರ ತಿಳಿಸಲಾಗಿತ್ತು ಎನ್ನಲಾಗಿದ್ದು, ಆದರೆ ಪೊಲೀಸರು ಶನಿವಾರ ಬೆಳಿಗ್ಗೆ ಎಲ್ಲಾ ಸಮುದಾಯದವರು ಸೇರಿ ಶಾಂತಿ ಸಭೆ ಮಾಡುವ ಬಗ್ಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಅದಾಗ್ಯೂ ಪೊಲೀಸರಿಗೆ ದೂರಿದ್ದಕ್ಕಾಗಿ ಕುರುಬ ಮತ್ತು ನಾಯಕ ಸಮುದಾಯದವರು ಮತ್ತೆ ಶನಿವಾರದಂದು ಮುಂಜಾನೆ ಗುಂಪುಕಟ್ಟಿಕೊಂಡು ಮಾದಿಗ ಸಮುದಾಯದ ಮೇಲೆ ಆಕ್ರಮಣ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಕ್ರಮಣದಿಂದಾಗಿ ನಾಲ್ಕು ಯುವಕರಿಗೆ ಗಂಭೀರ ಗಾಯಗಾಳಾಗಿದ್ದು ಅವರು ಗಂಗಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಗುಂಪುಗಳು ಹೊಡೆದಾಡುತ್ತಿರುವ  ದೃಶ್ಯಗಳು ವೈರಲ್‌ ಆಗಿದೆ.

ಶನಿವಾರ ನಡೆದ ಆಕ್ರಮಣದ ಬಗ್ಗೆ ದೂರು ನೀಡಲು ಅಂದು ಬೆಳಿಗ್ಗೆ ಗಂಗಾವತಿ ಗ್ರಾಮೀಣ ಠಾಣೆಗೆ ತೆರಳಿದರೂ ಮಾದಿಗ ಸಮುದಾಯದಿಂದ ದೂರು ಸ್ವೀಕರಿಸಲು ಆರಂಭದಲ್ಲಿ ಪೊಲೀಸರು ನಿರಾಕರಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ರಘು ಆರೋಪಿಸಿದ್ದಾರೆ. ಇದರ ನಂತರ ಮಾದಿಗ ಸಮುದಾಯದ ಜನರು ಠಾಣೆಯ ಮುಂದೆ ಪ್ರತಿಭಟನೆಗೆ ಮುಂದಾದಾಗ ಮಧ್ಯಾಹ್ನದ ನಂತರ ಪೊಲೀಸರು ದೂರು ಸ್ವೀಕರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ಈ ಜಾತಿ ದಾಂಧಲೆ ತೆಂಡೂಲ್ಕರ್ ಮನೆ ಮುಂದೆ ನಡೆದಿದ್ದರೆ!

ಘಟನೆಯ ಬಗ್ಗೆಗಿನ ದೃಶ್ಯಾವಳಿಗಳು ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿದೆ. ವಿಡಿಯೊದಲ್ಲಿ, ಜಾತಿ ಕಾರಣಕ್ಕೆ ಊರಿಗೆ ಬರಬಾರದು ಎಂದು ಮೇಲ್ಜಾತಿಯ ಸಮುದಾಯಗಳು ಹಲ್ಲೆ ನಡೆಸಿವೆ ಎಂದು ಮಹಿಳೆಯರು ದೂರುತ್ತಿರುವುದನ್ನು ನೋಡಬಹುದಾಗಿದೆ.

ಅಲ್ಲದೆ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿರುವ ಯುವಕರ ವಿಡಿಯೊಗಳು ಕೂಡಾ ಹರಿದಾಡುತ್ತಿದೆ. ಅದರಲ್ಲೂ ಮಹಿಳೆಯರು ತಮ್ಮ ಯುವಕರಿಗೆ ಹಲ್ಲೆಗೊಳಗಾಗಿರುವ ಘಟನೆಯನ್ನು ವಿವರಿಸುತ್ತಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಗಂಗಾವತಿ ಗ್ರಾಮೀಣ ಪೊಲೀಸ್‌ ಠಾಣೆಯ ಪಿಎಸ್‌ಐ ದೊಡ್ಡಯ್ಯ ಮಾತನಾಡಿ, “ಘಟನೆಯಲ್ಲಿ ಒಂದು ಕಡೆಯಿಂದ 20 ಮತ್ತು ಇನ್ನೊಂದು ಕಡೆಯಿಂದ 21 ಜನರ ಮೇಲೆ ಪ್ರಕರಣ ದಾಖಲಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...