Homeಮುಖಪುಟಕವಿತೆಗೆ ಜೈಲು: ಕವನ ವಾಚಿಸಿದ್ದಕ್ಕಾಗಿ ಪತ್ರಕರ್ತರನ್ನು ಕಸ್ಟಡಿಗೆ ಪಡೆದ ಗಂಗಾವತಿ ಪೊಲೀಸರು!

ಕವಿತೆಗೆ ಜೈಲು: ಕವನ ವಾಚಿಸಿದ್ದಕ್ಕಾಗಿ ಪತ್ರಕರ್ತರನ್ನು ಕಸ್ಟಡಿಗೆ ಪಡೆದ ಗಂಗಾವತಿ ಪೊಲೀಸರು!

ಕವಿತೆಗೆ ಜೈಲು ಸರಿಯಲ್ಲ, ನಮ್ಮ ಮೇಲೆಯೂ ಕೇಸು ಹಾಕಿ ಎಂದು ನೂರಾರು ಜನ ಆ ಕವಿತೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಆ ಕವಿತೆ ಸುಮಾರು 12 ಭಾಷೆಗಳಿಗೆ ಅನುವಾದಗೊಂಡಿತ್ತು.

- Advertisement -
- Advertisement -

ಕೊಪ್ಪಳದ ಆನೆಗೊಂದಿ ಉತ್ಸವದಲ್ಲಿ ಜರುಗಿದ ಕವಿಗೋಷ್ಠಿಯಲ್ಲಿ ಕವಿತೆ ಓದಿದ್ದಕ್ಕಾಗಿ ಕವಿ ಹಾಗೂ ಪತ್ರಕರ್ತ ಸಿರಾಜ್ ಬಿಸರಳ್ಳಿ ಹಾಗೂ ಕನ್ನಡ ನೆಟ್ ಸಂಪಾದಕರಾದ ರಾಜಭಕ್ಷಿಯವರನ್ನು ಗಂಗಾವತಿ ಪೊಲೀಸರು ಇಂದು ಕಸ್ಟಡಿಗೆ ಪಡೆದಿದ್ದಾರೆ. ಆ ಮೂಲಕ ಕವಿತೆಗೆ ಜೈಲುವಾಸವಾಗಿದೆ.

ಇಂದು ಗಂಗಾವತಿ ಕೋರ್ಟ್‌ನಲ್ಲಿ ವಿಚಾರಣೆಗೆ ಹಾಜರಾದ ಹಿನ್ನೆಲೆಯಲ್ಲಿ ಪೊಲೀಸರು ಕವಿತೆ ಓದಿದ ಮತ್ತು ಪ್ರಸಾರ ಮಾಡಿದ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದ್ದರು. ಅದಕ್ಕೆ ಒಪ್ಪಿಗೆ ಸೂಚಿಸಿದ ಕೋರ್ಟ್‌ ಆರೋಪಿಗಳ ಜಾಮೀನು ವಿಚಾರಣೆಯನ್ನು ನಾಳೆ ಸಂಜೆಗೆ ಮೂಂದೂಡಿದ್ದಾರೆ.

ಕವಿತೆಯ ಆರೋಪಿಗಳ ಪರ ವಕೀಲರಾದ ಆರ್‌ ಜಗನ್ನಾಥ್‌ ಮಾತನಾಡಿ, ಕವಿತೆ, ಕಾದಂಬರಿ ಥರದ ಸೃಜನಶೀಲ ಸಾಹಿತ್ಯವನ್ನು ಅಭಿವ್ಯಕ್ತಪಡಿಸುವುದು ಸಾಂವಿಧಾನಿಕವಾಗಿ ದಕ್ಕಿರುವ ಹಕ್ಕಾಗಿದೆ. ಅದು ಪ್ರತಿಯೊಬ್ಬ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವಾಗಿದೆ. ಹಾಗಾಗಿ ಕವಿತೆ ಓದಿದ್ದಕ್ಕೆ ಕ್ರಿಮಿನಲ್ ಕೇಸು ಹಾಕಿದ್ದಲ್ಲದೇ ಪೊಲೀಸರು  ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ. ನಾಳೆ ಜಾಮೀನು ಸಿಗುವ ವಿಶ್ವಾಸವಿದೆ ಎಂದಿದ್ದಾರೆ.

ಜನವರಿ 9 ರಂದು ಆನೆಗುಂದಿ ಉತ್ಸವದ ಕವಿಗೋಷ್ಠಿಯಲ್ಲಿ ಕೊಪ್ಪಳದ ಸಿರಾಜ್ ಬಿಸ್ರಳ್ಳಿಯವರು ’ನಿನ್ನ ದಾಖಲೆ ಯಾವಾಗ ನೀಡುತ್ತೀ? ಎನ್ನುವ ಪದ್ಯ ಓದಿದ್ದರು. ಇದನ್ನೇ ದೇಶದ್ರೋಹವೆಂದು ಕರೆದು ಬಿಜೆಪಿಯು ದೂರು ನೀಡಿದ್ದರು. ಅದರ ಆಧಾರದಲ್ಲಿ ಖೈ.ನಂ. 23/2020 ರಲ್ಲಿ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 5045052 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಕವಿತೆ ನೋಡಿ

ಈ ಕವನಕ್ಕೆ BJP ದೂರು ನೀಡಿದೆ. ಪೊಲೀಸರು FIR ಹಾಕಿದ್ದಾರೆ.ಸಿರಾಜ್ ಬಿಸ್ರಳ್ಳಿಯವರು ಅನೆಗೊಂದಿ ಉತ್ಸವದಲ್ಲಿ ವಾಚಿಸಿದ ವೈರಲ್ ಆದ ಕವನ ಏಳೆಂಟು ಭಾಷೆಗಳಿಗೆ ಅನುವಾದಗೊಂಡಿದೆ. ನೀವೂ ಕೇಳಿ

Posted by Naanu Gauri on Monday, January 27, 2020

ತದನಂತರ ಪೊಲೀಸರು ವಿಚಾರಣೆ ನೆಪದಲ್ಲಿ ಸಿರಾಜ್‌ ಮತ್ತು ರಾಜಭಕ್ಷಿಯವರ ಮನೆಯವರಿಗೆ ಕಿರುಕುಳ ನೀಡಿದ್ದರು. ನಂತರ ಸಿರಾಜ್‌ ಮತ್ತು ರಾಜಭಕ್ಷಿಯವರನ್ನು ಬಂಧಿಸಲು ಪೊಲೀಸರು ಎಲ್ಲಾ ಕಡೆ ಶೋಧ ನಡೆಸಿದ್ದರು. ಇಂದು ವಿಚಾರಣೆಗೆ ಹಾಜರಾದಾಗ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಹಲವು ವಕೀಲರು ಗಂಗಾವತಿ ಪೊಲೀಸರ ಕ್ರಮವನ್ನು ಟೀಕಿಸಿದ್ದಾರೆ. ಕವಿತೆಗೆ ಜೈಲು ಸರಿಯಲ್ಲ, ನಮ್ಮ ಮೇಲೆಯೂ ಕೇಸು ಹಾಕಿ ಎಂದು ನೂರಾರು ಜನ ಆ ಕವಿತೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಆ ಕವಿತೆ ಸುಮಾರು 12 ಭಾಷೆಗಳಿಗೆ ಅನುವಾದಗೊಂಡಿತ್ತು.

ಅಖಿಲ ಭಾರತ ವಕೀಲ ಒಕ್ಕೂಟದ ಪ್ರಧಾನ‌ ಕಾರ್ಯದರ್ಶಿ ಶ್ರೀನಿವಾಸ ಕುಮಾರ್‌ ಮಾತನಾಡಿ, ಸಿರಾಜ್ ಬಿಸರಳ್ಳಿ ಹಾಗೂ ರಾಜಬಕ್ಷಿ ಅವರ ಪ್ರಕರಣದಲ್ಲಿ ಮೇಲ್ನೋಟಕ್ಕೆ ರಾಜಕೀಯ ಒತ್ತಡ ಹೇರಲಾಗುತ್ತಿದೆ. ಪೊಲೀಸರು ರಾಜಕೀಯ ಪಕ್ಷದ ಪ್ರತಿನಿಧಿಗಳಂತೆ ವರ್ತಿಸಿ ರಾಜಕಾರಣಿಗಳ ಒತ್ತಡಕ್ಕೆ ಮಣಿದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂವಿಧಾನ ಹಾಗೂ ಕಾನೂನು ವಿರುದ್ಧವಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...