Homeಮುಖಪುಟಕವಿತೆಗೆ ಜೈಲು: ಕವನ ವಾಚಿಸಿದ್ದಕ್ಕಾಗಿ ಪತ್ರಕರ್ತರನ್ನು ಕಸ್ಟಡಿಗೆ ಪಡೆದ ಗಂಗಾವತಿ ಪೊಲೀಸರು!

ಕವಿತೆಗೆ ಜೈಲು: ಕವನ ವಾಚಿಸಿದ್ದಕ್ಕಾಗಿ ಪತ್ರಕರ್ತರನ್ನು ಕಸ್ಟಡಿಗೆ ಪಡೆದ ಗಂಗಾವತಿ ಪೊಲೀಸರು!

ಕವಿತೆಗೆ ಜೈಲು ಸರಿಯಲ್ಲ, ನಮ್ಮ ಮೇಲೆಯೂ ಕೇಸು ಹಾಕಿ ಎಂದು ನೂರಾರು ಜನ ಆ ಕವಿತೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಆ ಕವಿತೆ ಸುಮಾರು 12 ಭಾಷೆಗಳಿಗೆ ಅನುವಾದಗೊಂಡಿತ್ತು.

- Advertisement -
- Advertisement -

ಕೊಪ್ಪಳದ ಆನೆಗೊಂದಿ ಉತ್ಸವದಲ್ಲಿ ಜರುಗಿದ ಕವಿಗೋಷ್ಠಿಯಲ್ಲಿ ಕವಿತೆ ಓದಿದ್ದಕ್ಕಾಗಿ ಕವಿ ಹಾಗೂ ಪತ್ರಕರ್ತ ಸಿರಾಜ್ ಬಿಸರಳ್ಳಿ ಹಾಗೂ ಕನ್ನಡ ನೆಟ್ ಸಂಪಾದಕರಾದ ರಾಜಭಕ್ಷಿಯವರನ್ನು ಗಂಗಾವತಿ ಪೊಲೀಸರು ಇಂದು ಕಸ್ಟಡಿಗೆ ಪಡೆದಿದ್ದಾರೆ. ಆ ಮೂಲಕ ಕವಿತೆಗೆ ಜೈಲುವಾಸವಾಗಿದೆ.

ಇಂದು ಗಂಗಾವತಿ ಕೋರ್ಟ್‌ನಲ್ಲಿ ವಿಚಾರಣೆಗೆ ಹಾಜರಾದ ಹಿನ್ನೆಲೆಯಲ್ಲಿ ಪೊಲೀಸರು ಕವಿತೆ ಓದಿದ ಮತ್ತು ಪ್ರಸಾರ ಮಾಡಿದ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದ್ದರು. ಅದಕ್ಕೆ ಒಪ್ಪಿಗೆ ಸೂಚಿಸಿದ ಕೋರ್ಟ್‌ ಆರೋಪಿಗಳ ಜಾಮೀನು ವಿಚಾರಣೆಯನ್ನು ನಾಳೆ ಸಂಜೆಗೆ ಮೂಂದೂಡಿದ್ದಾರೆ.

ಕವಿತೆಯ ಆರೋಪಿಗಳ ಪರ ವಕೀಲರಾದ ಆರ್‌ ಜಗನ್ನಾಥ್‌ ಮಾತನಾಡಿ, ಕವಿತೆ, ಕಾದಂಬರಿ ಥರದ ಸೃಜನಶೀಲ ಸಾಹಿತ್ಯವನ್ನು ಅಭಿವ್ಯಕ್ತಪಡಿಸುವುದು ಸಾಂವಿಧಾನಿಕವಾಗಿ ದಕ್ಕಿರುವ ಹಕ್ಕಾಗಿದೆ. ಅದು ಪ್ರತಿಯೊಬ್ಬ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವಾಗಿದೆ. ಹಾಗಾಗಿ ಕವಿತೆ ಓದಿದ್ದಕ್ಕೆ ಕ್ರಿಮಿನಲ್ ಕೇಸು ಹಾಕಿದ್ದಲ್ಲದೇ ಪೊಲೀಸರು  ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ. ನಾಳೆ ಜಾಮೀನು ಸಿಗುವ ವಿಶ್ವಾಸವಿದೆ ಎಂದಿದ್ದಾರೆ.

ಜನವರಿ 9 ರಂದು ಆನೆಗುಂದಿ ಉತ್ಸವದ ಕವಿಗೋಷ್ಠಿಯಲ್ಲಿ ಕೊಪ್ಪಳದ ಸಿರಾಜ್ ಬಿಸ್ರಳ್ಳಿಯವರು ’ನಿನ್ನ ದಾಖಲೆ ಯಾವಾಗ ನೀಡುತ್ತೀ? ಎನ್ನುವ ಪದ್ಯ ಓದಿದ್ದರು. ಇದನ್ನೇ ದೇಶದ್ರೋಹವೆಂದು ಕರೆದು ಬಿಜೆಪಿಯು ದೂರು ನೀಡಿದ್ದರು. ಅದರ ಆಧಾರದಲ್ಲಿ ಖೈ.ನಂ. 23/2020 ರಲ್ಲಿ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 5045052 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಕವಿತೆ ನೋಡಿ

ಈ ಕವನಕ್ಕೆ BJP ದೂರು ನೀಡಿದೆ. ಪೊಲೀಸರು FIR ಹಾಕಿದ್ದಾರೆ.ಸಿರಾಜ್ ಬಿಸ್ರಳ್ಳಿಯವರು ಅನೆಗೊಂದಿ ಉತ್ಸವದಲ್ಲಿ ವಾಚಿಸಿದ ವೈರಲ್ ಆದ ಕವನ ಏಳೆಂಟು ಭಾಷೆಗಳಿಗೆ ಅನುವಾದಗೊಂಡಿದೆ. ನೀವೂ ಕೇಳಿ

Posted by Naanu Gauri on Monday, January 27, 2020

ತದನಂತರ ಪೊಲೀಸರು ವಿಚಾರಣೆ ನೆಪದಲ್ಲಿ ಸಿರಾಜ್‌ ಮತ್ತು ರಾಜಭಕ್ಷಿಯವರ ಮನೆಯವರಿಗೆ ಕಿರುಕುಳ ನೀಡಿದ್ದರು. ನಂತರ ಸಿರಾಜ್‌ ಮತ್ತು ರಾಜಭಕ್ಷಿಯವರನ್ನು ಬಂಧಿಸಲು ಪೊಲೀಸರು ಎಲ್ಲಾ ಕಡೆ ಶೋಧ ನಡೆಸಿದ್ದರು. ಇಂದು ವಿಚಾರಣೆಗೆ ಹಾಜರಾದಾಗ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಹಲವು ವಕೀಲರು ಗಂಗಾವತಿ ಪೊಲೀಸರ ಕ್ರಮವನ್ನು ಟೀಕಿಸಿದ್ದಾರೆ. ಕವಿತೆಗೆ ಜೈಲು ಸರಿಯಲ್ಲ, ನಮ್ಮ ಮೇಲೆಯೂ ಕೇಸು ಹಾಕಿ ಎಂದು ನೂರಾರು ಜನ ಆ ಕವಿತೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಆ ಕವಿತೆ ಸುಮಾರು 12 ಭಾಷೆಗಳಿಗೆ ಅನುವಾದಗೊಂಡಿತ್ತು.

ಅಖಿಲ ಭಾರತ ವಕೀಲ ಒಕ್ಕೂಟದ ಪ್ರಧಾನ‌ ಕಾರ್ಯದರ್ಶಿ ಶ್ರೀನಿವಾಸ ಕುಮಾರ್‌ ಮಾತನಾಡಿ, ಸಿರಾಜ್ ಬಿಸರಳ್ಳಿ ಹಾಗೂ ರಾಜಬಕ್ಷಿ ಅವರ ಪ್ರಕರಣದಲ್ಲಿ ಮೇಲ್ನೋಟಕ್ಕೆ ರಾಜಕೀಯ ಒತ್ತಡ ಹೇರಲಾಗುತ್ತಿದೆ. ಪೊಲೀಸರು ರಾಜಕೀಯ ಪಕ್ಷದ ಪ್ರತಿನಿಧಿಗಳಂತೆ ವರ್ತಿಸಿ ರಾಜಕಾರಣಿಗಳ ಒತ್ತಡಕ್ಕೆ ಮಣಿದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂವಿಧಾನ ಹಾಗೂ ಕಾನೂನು ವಿರುದ್ಧವಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...