Homeಮುಖಪುಟಕವಿತೆಗೆ ಜೈಲು: ಕವನ ವಾಚಿಸಿದ್ದಕ್ಕಾಗಿ ಪತ್ರಕರ್ತರನ್ನು ಕಸ್ಟಡಿಗೆ ಪಡೆದ ಗಂಗಾವತಿ ಪೊಲೀಸರು!

ಕವಿತೆಗೆ ಜೈಲು: ಕವನ ವಾಚಿಸಿದ್ದಕ್ಕಾಗಿ ಪತ್ರಕರ್ತರನ್ನು ಕಸ್ಟಡಿಗೆ ಪಡೆದ ಗಂಗಾವತಿ ಪೊಲೀಸರು!

ಕವಿತೆಗೆ ಜೈಲು ಸರಿಯಲ್ಲ, ನಮ್ಮ ಮೇಲೆಯೂ ಕೇಸು ಹಾಕಿ ಎಂದು ನೂರಾರು ಜನ ಆ ಕವಿತೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಆ ಕವಿತೆ ಸುಮಾರು 12 ಭಾಷೆಗಳಿಗೆ ಅನುವಾದಗೊಂಡಿತ್ತು.

- Advertisement -
- Advertisement -

ಕೊಪ್ಪಳದ ಆನೆಗೊಂದಿ ಉತ್ಸವದಲ್ಲಿ ಜರುಗಿದ ಕವಿಗೋಷ್ಠಿಯಲ್ಲಿ ಕವಿತೆ ಓದಿದ್ದಕ್ಕಾಗಿ ಕವಿ ಹಾಗೂ ಪತ್ರಕರ್ತ ಸಿರಾಜ್ ಬಿಸರಳ್ಳಿ ಹಾಗೂ ಕನ್ನಡ ನೆಟ್ ಸಂಪಾದಕರಾದ ರಾಜಭಕ್ಷಿಯವರನ್ನು ಗಂಗಾವತಿ ಪೊಲೀಸರು ಇಂದು ಕಸ್ಟಡಿಗೆ ಪಡೆದಿದ್ದಾರೆ. ಆ ಮೂಲಕ ಕವಿತೆಗೆ ಜೈಲುವಾಸವಾಗಿದೆ.

ಇಂದು ಗಂಗಾವತಿ ಕೋರ್ಟ್‌ನಲ್ಲಿ ವಿಚಾರಣೆಗೆ ಹಾಜರಾದ ಹಿನ್ನೆಲೆಯಲ್ಲಿ ಪೊಲೀಸರು ಕವಿತೆ ಓದಿದ ಮತ್ತು ಪ್ರಸಾರ ಮಾಡಿದ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದ್ದರು. ಅದಕ್ಕೆ ಒಪ್ಪಿಗೆ ಸೂಚಿಸಿದ ಕೋರ್ಟ್‌ ಆರೋಪಿಗಳ ಜಾಮೀನು ವಿಚಾರಣೆಯನ್ನು ನಾಳೆ ಸಂಜೆಗೆ ಮೂಂದೂಡಿದ್ದಾರೆ.

ಕವಿತೆಯ ಆರೋಪಿಗಳ ಪರ ವಕೀಲರಾದ ಆರ್‌ ಜಗನ್ನಾಥ್‌ ಮಾತನಾಡಿ, ಕವಿತೆ, ಕಾದಂಬರಿ ಥರದ ಸೃಜನಶೀಲ ಸಾಹಿತ್ಯವನ್ನು ಅಭಿವ್ಯಕ್ತಪಡಿಸುವುದು ಸಾಂವಿಧಾನಿಕವಾಗಿ ದಕ್ಕಿರುವ ಹಕ್ಕಾಗಿದೆ. ಅದು ಪ್ರತಿಯೊಬ್ಬ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವಾಗಿದೆ. ಹಾಗಾಗಿ ಕವಿತೆ ಓದಿದ್ದಕ್ಕೆ ಕ್ರಿಮಿನಲ್ ಕೇಸು ಹಾಕಿದ್ದಲ್ಲದೇ ಪೊಲೀಸರು  ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ. ನಾಳೆ ಜಾಮೀನು ಸಿಗುವ ವಿಶ್ವಾಸವಿದೆ ಎಂದಿದ್ದಾರೆ.

ಜನವರಿ 9 ರಂದು ಆನೆಗುಂದಿ ಉತ್ಸವದ ಕವಿಗೋಷ್ಠಿಯಲ್ಲಿ ಕೊಪ್ಪಳದ ಸಿರಾಜ್ ಬಿಸ್ರಳ್ಳಿಯವರು ’ನಿನ್ನ ದಾಖಲೆ ಯಾವಾಗ ನೀಡುತ್ತೀ? ಎನ್ನುವ ಪದ್ಯ ಓದಿದ್ದರು. ಇದನ್ನೇ ದೇಶದ್ರೋಹವೆಂದು ಕರೆದು ಬಿಜೆಪಿಯು ದೂರು ನೀಡಿದ್ದರು. ಅದರ ಆಧಾರದಲ್ಲಿ ಖೈ.ನಂ. 23/2020 ರಲ್ಲಿ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 5045052 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಕವಿತೆ ನೋಡಿ

ಈ ಕವನಕ್ಕೆ BJP ದೂರು ನೀಡಿದೆ. ಪೊಲೀಸರು FIR ಹಾಕಿದ್ದಾರೆ.ಸಿರಾಜ್ ಬಿಸ್ರಳ್ಳಿಯವರು ಅನೆಗೊಂದಿ ಉತ್ಸವದಲ್ಲಿ ವಾಚಿಸಿದ ವೈರಲ್ ಆದ ಕವನ ಏಳೆಂಟು ಭಾಷೆಗಳಿಗೆ ಅನುವಾದಗೊಂಡಿದೆ. ನೀವೂ ಕೇಳಿ

Posted by Naanu Gauri on Monday, January 27, 2020

ತದನಂತರ ಪೊಲೀಸರು ವಿಚಾರಣೆ ನೆಪದಲ್ಲಿ ಸಿರಾಜ್‌ ಮತ್ತು ರಾಜಭಕ್ಷಿಯವರ ಮನೆಯವರಿಗೆ ಕಿರುಕುಳ ನೀಡಿದ್ದರು. ನಂತರ ಸಿರಾಜ್‌ ಮತ್ತು ರಾಜಭಕ್ಷಿಯವರನ್ನು ಬಂಧಿಸಲು ಪೊಲೀಸರು ಎಲ್ಲಾ ಕಡೆ ಶೋಧ ನಡೆಸಿದ್ದರು. ಇಂದು ವಿಚಾರಣೆಗೆ ಹಾಜರಾದಾಗ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಹಲವು ವಕೀಲರು ಗಂಗಾವತಿ ಪೊಲೀಸರ ಕ್ರಮವನ್ನು ಟೀಕಿಸಿದ್ದಾರೆ. ಕವಿತೆಗೆ ಜೈಲು ಸರಿಯಲ್ಲ, ನಮ್ಮ ಮೇಲೆಯೂ ಕೇಸು ಹಾಕಿ ಎಂದು ನೂರಾರು ಜನ ಆ ಕವಿತೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಆ ಕವಿತೆ ಸುಮಾರು 12 ಭಾಷೆಗಳಿಗೆ ಅನುವಾದಗೊಂಡಿತ್ತು.

ಅಖಿಲ ಭಾರತ ವಕೀಲ ಒಕ್ಕೂಟದ ಪ್ರಧಾನ‌ ಕಾರ್ಯದರ್ಶಿ ಶ್ರೀನಿವಾಸ ಕುಮಾರ್‌ ಮಾತನಾಡಿ, ಸಿರಾಜ್ ಬಿಸರಳ್ಳಿ ಹಾಗೂ ರಾಜಬಕ್ಷಿ ಅವರ ಪ್ರಕರಣದಲ್ಲಿ ಮೇಲ್ನೋಟಕ್ಕೆ ರಾಜಕೀಯ ಒತ್ತಡ ಹೇರಲಾಗುತ್ತಿದೆ. ಪೊಲೀಸರು ರಾಜಕೀಯ ಪಕ್ಷದ ಪ್ರತಿನಿಧಿಗಳಂತೆ ವರ್ತಿಸಿ ರಾಜಕಾರಣಿಗಳ ಒತ್ತಡಕ್ಕೆ ಮಣಿದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂವಿಧಾನ ಹಾಗೂ ಕಾನೂನು ವಿರುದ್ಧವಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...