Homeಕರ್ನಾಟಕಗಂಗಾವತಿ: ಹೆರಿಗೆ ಮಾಡುವುದಕ್ಕೆ ಲಂಚ, ಲೈಂಗಿಕ ಕಿರುಕುಳದ ಆರೋಪ; ಕನಿಷ್ಟ ತನಿಖೆಯಾದರೂ ಇಲ್ಲವೇಕೆ?

ಗಂಗಾವತಿ: ಹೆರಿಗೆ ಮಾಡುವುದಕ್ಕೆ ಲಂಚ, ಲೈಂಗಿಕ ಕಿರುಕುಳದ ಆರೋಪ; ಕನಿಷ್ಟ ತನಿಖೆಯಾದರೂ ಇಲ್ಲವೇಕೆ?

- Advertisement -
- Advertisement -

ಕರ್ನಾಟಕದ ನೂತನ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿ, ಜಾರಿಗೊಳಿಸಲು ಮುಂದಾಗಿದೆ. ಜನರು ಇದರ ಅನುಕೂಲ ಪಡೆಯುತ್ತಿದ್ದಂತೆ ಕೆಲವರು ಅದನ್ನು ಬಿಟ್ಟಿ ಭಾಗ್ಯ, ಜನ ಸೋಮಾರಿಯಾಗುತ್ತಾರೆ ಎಂದು ಕುಹಕವಾಡುತ್ತಿದ್ದಾರೆ. ಆದರೆ ಅವರು ಕಡೆಗಣಿಸುವ ವಿಚಾರವೆಂದರೆ ಯಾವುದೇ ಬಡ ಅಥವಾ ಮಧ್ಯಮ ವರ್ಗದ ಕುಟುಂಬದ ಸದಸ್ಯರೊಬ್ಬರಿಗೆ ಗಂಭೀರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ಆ ಕುಟುಂಬ ಜೀವಮಾನ ಕೂಡಿಟ್ಟ ಹಣವನ್ನೆಲ್ಲಾ ಖರ್ಚು ಮಾಡಿ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಬರುತ್ತದೆಂಬುದು. ಕೆಲವರು ಲಕ್ಷಾಂತರ ರೂಪಾಯಿ ಸಾಲ ಮಾಡಿ ಜೀವ ಉಳಿಸಿಕೊಳ್ಳಬೇಕಾದ ಸ್ಥಿತಿ ಇದೆ. ಗಂಭೀರ ಸ್ಥಿತಿಗಳಲ್ಲಿ ಹಣಕಾಸಿನ ಸಮಸ್ಯೆ ಎಂದು ಸರ್ಕಾರಿ ಆಸ್ಪತ್ರೆಗಳಿಗೆ ಹೋದರೆ ವಾಪಸ್ ಬದುಕಿ ಬರುವ ಭರವಸೆಯೇ ಇಲ್ಲ ಎಂಬ ಪರಿಸ್ಥಿತಿಯೂ ಹಲವೆಡೆಯಿದೆ. ಆದರೂ ಬಡವರು ಅನಿವಾರ್ಯವಾಗಿ ಸರ್ಕಾರಿ ಆಸ್ಪತ್ರೆಗಳನ್ನೇ ನಂಬಿಕೊಂಡಿದ್ದಾರೆ. ಅಂತಹ ಸರ್ಕಾರಿ ಆಸ್ಪತ್ರೆಗಳಲ್ಲಿಯೂ 8-10 ಸಾವಿರ ಲಂಚ ಕೇಳುತ್ತಾರೆ ಎಂದರೆ ಬಡವರು ಎಲ್ಲಿಂದ ಹಣ ತರಬೇಕು?

ರಾಮನಗರ ಜಿಲ್ಲೆಯ ಬಿಡದಿ ಆಸ್ಪತ್ರೆಯಲ್ಲಿ ಹೆರಿಗೆ ನಂತರ ಡಿಸ್ಚಾರ್ಜ್‌ಗಾಗಿ 6 ಸಾವಿರ ಲಂಚದ ಬೇಡಿಕೆಯಿಟ್ಟಿದ್ದ ವೈದ್ಯರಾದ ಶಶಿಕಲಾ, ಐಶ್ವರ್ಯ ಎಂಬುವವರು ಸಸ್ಪೆಂಡ್ ಆಗಿದ್ದರು. ಲಿಂಗಸಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ 5 ಸಾವಿರ ಲಂಚ ಕೇಳಿದ್ದ ನರ್ಸ್‌ಗಳು ಅಮಾನತ್ತಾಗಿದ್ದರು. ’ತಾಯಿ ಕಾರ್ಡ್’ ಇಲ್ಲ ಎಂದು ಆಸ್ಪತ್ರೆಗೆ ದಾಖಲಿಸಿಕೊಳ್ಳದ ಕಾರಣ ತುಮಕೂರಿನಲ್ಲಿ ತಾಯಿ-ಮಗು ಸಾವನ್ನಪ್ಪಿದ ಕಾರಣ ವೈದ್ಯರನ್ನು ಸಸ್ಪೆಂಡ್ ಮಾಡಿದ್ದು ವರದಿಯಾಗಿದೆ. ಆದರೆ ಗಂಗಾವತಿ ತಾಲ್ಲೂಕು ವೈದ್ಯಾಧಿಕಾರಿ ಮತ್ತು ಕೊಪ್ಪಳ ಜಿಲ್ಲಾ ಸರ್ಜನ್ ಇನ್‌ಚಾರ್ಜ್ ಕೂಡ ಆಗಿರುವ ಡಾ. ಈಶ್ವರ ಸವಡಿಯವರು ’ಪ್ರತಿ ಹೆರಿಗೆಗೆ 8-10 ಸಾವಿರ ಲಂಚ ಕೇಳುತ್ತಾರೆ; ರೋಗಿಗಳಿಗೆ ನೀಡುವ ಹಾಲು, ಬ್ರೆಡ್ ಎಲ್ಲಾ ಸೇರಿದಂತೆ ಆಸ್ಪತ್ರೆಯ ಅವಶ್ಯಕ ವಸ್ತುಗಳ ಗುತ್ತಿಗೆ ನೀಡಲು ಕಮಿಷನ್ ಪಡೆಯುತ್ತಿದ್ದಾರೆ; ಜಿಲ್ಲಾ ಆಸ್ಪತ್ರೆಗೆ ಪ್ರತಿದಿನ ಬರಬೇಕೆಂಬ ನಿಯಮವಿದ್ದರೂ 15 ದಿನಕ್ಕೊಮ್ಮೆ ಮಾತ್ರ ಬರುತ್ತಾರೆ; ಖಾಸಗಿ ಕ್ಲಿನಿಕ್ ನಡೆಸುತ್ತಾ ಕಾನೂನುಬಾಹಿರವಾಗಿ ಭ್ರೂಣ ಲಿಂಗ ಪತ್ತೆ ಸ್ಕ್ಯಾನಿಂಗ್ ಮಾಡಿ ಭ್ರೂಣ ಹತ್ಯೆ ಮಾಡುತ್ತಿದ್ದಾರೆ; ಗಂಗಾವತಿ ಸರ್ಕಾರಿ ಆಸ್ಪತ್ರೆಯ 8 ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ’ ಹೀಗೆ ಸಾಲು ಸಾಲು ಆರೋಪಗಳು ಅವರ ಮೇಲಿವೆ. ಹೀಗಿದ್ದರೂ ಅವರನ್ನು ಸಸ್ಪೆಂಡ್ ಮಾಡುವುದು ಇರಲಿ ಕನಿಷ್ಟ ಒಂದು ಇಲಾಖಾ ತನಿಖೆ ಸಹ ನಡೆಸಲಾಗಿಲ್ಲ ಎಂದರೆ ಅವರು ಎಷ್ಟು ಪ್ರಭಾವಶಾಲಿಯಾಗಿರಬಹುದು ನೀವೇ ಊಹಿಸಿ.

8 ಮಹಿಳಾ ಉದ್ಯೋಗಿಗಳಿಂದ ಲೈಂಗಿಕ ಕಿರುಕುಳದ ಆರೋಪ

’ಗಂಗಾವತಿ ತಾಲ್ಲೂಕು ಆಸ್ಪತ್ರೆಯ ಮಹಿಳಾ ಉದ್ಯೋಗಿ ನಾಗಮ್ಮ ಎಂಬುವವರು 31.07.2021ರಲ್ಲಿ, ಮುಖ್ಯ ವೈದ್ಯಾಧಿಕಾರಿ ಡಾ. ಈಶ್ವರ ಸವಡಿಯಿಂದಾಗುತ್ತಿರುವ ನಿರಂತರ ಲೈಂಗಿಕ ಕಿರುಕುಳದ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳು, ಡಿಎಚ್‌ಓ, ಶಾಸಕರು, ಮಹಿಳಾ ಆಯೋಗ ಸೇರಿ ಹಲವರಿಗೆ ಎರಡನೇ ಪತ್ರ ಬರೆದಿದ್ದರು. 2019ರಿಂದಲೇ ಆತ ಕಿರುಕುಳ ನೀಡುತ್ತಿದ್ದು, ಸಹಕರಿಸದಿದ್ದರೆ ಹೆಚ್ಚಿನ ಕೆಲಸದ ಒತ್ತಡ ಹಾಕುವುದು, ಬೆದರಿಕೆ ಹಾಕುವುದು ಮಾಡುತ್ತಿದ್ದಾನೆ ಎಂದು ದೂರಿದ್ದಾರೆ. ಆದರೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಆನಂತರ ಒಂದು ವರ್ಷದ ನಂತರ 20.07.2022ರಂದು 8 ಮಹಿಳಾ ಸಿಬ್ಬಂದಿಗಳು ಡಾ.ಈಶ್ವರ ಸವಡಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿದರು. ಪ್ರಕರಣ ಅಷ್ಟು ಗಂಭೀರವಾಗಿದ್ದರೂ ಸಹ ಜಿಲ್ಲಾಧಿಕಾರಿಗಳು, ಡಿಎಚ್‌ಓ ಸೇರಿದಂತೆ ಇತರರು ತನಿಖೆ ನಡೆಸಿ ಕಾನೂನುಕ್ರಮ ಕೈಗೊಳ್ಳಿ ಎಂದು ಪತ್ರ ಬರೆದರೆ ವಿನಃ ಸವಡಿ ವಿರುದ್ಧ ಕ್ರಮ ಕೈಗೊಳ್ಳಲು ಯಾರೂ ಮುಂದಾಗಲಿಲ್ಲ. ಏಕೆಂದರೆ ಭಾರೀ ಹಣವಂತರಾದ ಡಾ.ಈಶ್ವರ ಸವಡಿ ಸಾಕಷ್ಟು ರಾಜಕೀಯ ಪ್ರಭಾವವನ್ನು ಹೊಂದಿದ್ದಾರೆ’ ಎನ್ನುತ್ತಾರೆ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷರಾದ ಡಿ.ಎಚ್ ಪೂಜಾರ್‌ರವರು.

ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ರಾಜ್ಯಾಧ್ಯಕ್ಷರಾದ ಶ್ರೀಶರಣಗೌಡ ಕೇಸರಹಟ್ಟಿ, ಭೀಮ್ ಆರ್ಮಿ ಕೊಪ್ಪಳದ ಜಿಲ್ಲಾ ಅಧ್ಯಕ್ಷರಾದ ರಾಘವೇಂದ್ರ, ಕರ್ನಾಟಕ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಬಸವರಾಜ ನರೇಗಲ್ ಸೇರಿದಂತೆ ಹಲವು ಹೋರಾಟಗಾರರು ಆರೋಗ್ಯ ಇಲಾಖೆ, ಜಿಲ್ಲಾಧಿಕಾರಿಗಳು, ಲೋಕಾಯುಕ್ತ ಸೇರಿದಂತೆ ಹಲವೆಡೆ ಈಶ್ವರ ಸವಡಿಯವರ ವಿರುದ್ಧ ಸಾಲು ಸಾಲು ದೂರು ನೀಡಿದ್ದಾರೆ. ಇಲ್ಲಿಯೂ ಸಹ ಆಯಾಯ ಇಲಾಖೆಗಳು ಕ್ರಮ ತೆಗೆದುಕೊಳ್ಳುವಂತೆ ಪತ್ರ ಬರೆದಿವೆಯೇ ಹೊರತು ಆರೋಪಿಯನ್ನು ಕರೆಸಿ ಮಾತನಾಡಿಸುವ ಗೋಜಿಗೂ ಹೋಗಿಲ್ಲ.

ಲಂಚ ಕೊಡದಿದ್ದರೆ ಹೆರಿಗೆ ಮಾಡಿಸುವುದಿಲ್ಲ!

ಕಳೆದ ಮೇ 9ರಂದು ಕುಷ್ಟಗಿ ತಾಲ್ಲೂಕಿನ ತಾವರಗೇರ ಊರಿನ ಹುಲಗಪ್ಪ ಬೊಮ್ಮನಹಳ್ಳಿ ಎಂಬುವವರು ತಮ್ಮ ಪತ್ನಿ ತುಂಬು ಗರ್ಭಿಣಿ ರೇಣುಕಮ್ಮಳನ್ನು ಹೆರಿಗೆಗಾಗಿ ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿವಿಧ ಪರೀಕ್ಷೆ ನಡೆಸಿದ ಡಾ. ಈಶ್ವರ ಸವಡಿ, “ನಿನ್ನ ಹೆಂಡತಿಗೆ ಆಪರೇಷನ್ ಮೂಲಕ ಹೆರಿಗೆ ಮಾಡಬೇಕು. ಅದಕ್ಕೆ 15 ರಿಂದ 30 ಸಾವಿರ ಖರ್ಚಾಗುತ್ತದೆ” ಎಂದು ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ. ’ನಮ್ಮಲ್ಲಿ ಹಣವಿಲ್ಲ, ನಾವು ಬಡವರು’ ಎಂದರೆ “ಕನಿಷ್ಠ 10 ಸಾವಿರ ಆದ್ರೂ ಕೊಟ್ಟರೆ ಮಾತ್ರ ಆಪರೇಷನ್ ಮಾಡುವೆ” ಎಂದು ಹೇಳಿ ಹೆರಿಗೆ ಮಾಡಿಸಲು ನಿರಾಕರಿಸಿದ್ದಾರೆ. ಅಂತಹ ಸಂಕಷ್ಟದ ಸಮಯದಲ್ಲಿ ರಾತ್ರಿ 8 ಗಂಟೆ ಸಮಯದಲ್ಲಿ ಅನಿವಾರ್ಯವಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೆರಿಗೆ ಮಾಡಿಸಬೇಕಾಯಿತು. ತಡವಾದ್ದರಿಂದ ಮಗು ಮತ್ತು ತಾಯಿ ಆರೋಗ್ಯದಲ್ಲಿ ವ್ಯತ್ಯಯವಾಯಿತು. ಇದಕ್ಕೆ ಈಶ್ವರ ಸವಡಿಯವರೇ ಕಾರಣ ಎಂದು 18.05.2023ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ದೂರು ನೀಡಿದ್ದಾರೆ.

ಎಂದಿನಂತೆ ಕೊಪ್ಪಳ ಜಿಲ್ಲಾಧಿಕಾರಿಗಳು 23.05.2023ರಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಕಾಟಾಚಾರಕ್ಕೆಂಬಂತೆ ಪತ್ರ ಬರೆದು ಡಾ.ಈಶ್ವರ ಸವಡಿಯವರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಹೇಳಿ ಕೈತೊಳೆದುಕೊಂಡಿದ್ದಾರೆ. ಆದರೆ ತನಿಖೆ ಮಾಡುವ ಧೈರ್ಯವಿಲ್ಲದ ಡಿಎಚ್‌ಓ ಕೈಕಟ್ಟಿ ಕುಳಿತಿದ್ದಾರೆ. ಇದರಿಂದ ಆಕ್ರೋಶಿತರಾದ ಜಿಲ್ಲೆಯ ಜನಪರ ಸಂಘಟನೆಯ ಮುಖಂಡರು ಸೀದಾ ಬೆಂಗಳೂರಿಗೆ ಬಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಮತ್ತು ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್‌ರವರನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದಾರೆ. ’5 ವರ್ಷಗಳಿಂದ ಜನರು ಈ ಒಬ್ಬ ವ್ಯಕ್ತಿಯಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದಾರೆ, ನೀವಾದರೂ ಆತನ ಮೇಲೆ ತನಿಖೆ ನಡೆಸಿ ಕ್ರಮ ಕೈಗೊಂಡು ನ್ಯಾಯ ಕೊಡಿ’ ಎಂದು ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಅಕ್ರಮ ಖಾತೆ ಮಾಡಿಕೊಡಲು 1 ಕೋಟಿ ಲಂಚ: ಪ್ರಶ್ನಿಸಿ RTI ಅರ್ಜಿ ಹಾಕಿದ ಹೋರಾಟಗಾರರಿಗೆ ಜೀವ ಬೆದರಿಕೆ ಆರೋಪ

ಈ ಕುರಿತು ನ್ಯಾಯಪಥ ಪತ್ರಿಕೆಯೊಂದಿಗೆ ಮಾತನಾಡಿದ ಗಂಗಾವತಿಯ ಹೋರಾಟಗಾರರಾದ ಜೆ.ಭಾರಧ್ವಾಜ್‌ರವರು “ತಾಲ್ಲೂಕು ವೈದ್ಯಾಧಿಕಾರಿ ಈಶ್ವರ ಸವಡಿಯ ವಿರುದ್ಧ ಹತ್ತಾರು ಆರೋಪಗಳು ಪದೇಪದೇ ಕೇಳಿಬರುತ್ತಿವೆ. ಬಿಜೆಪಿಯ ಪ್ರಭಾವಿ ರಾಜಕಾರಣಿಗಳ ಸಖ್ಯದಿಂದ ಅವರು ತಮ್ಮ ಮೇಲೆ ಯಾವುದೇ ಕ್ರಮ ಜರುಗಿಸದಂತೆ ನೋಡಿಕೊಂಡಿದ್ದರು. ಈಗ ಸರ್ಕಾರ ಬದಲಾಗುತ್ತಲೇ ಕಾಂಗ್ರೆಸ್ ರಾಜಕಾರಣಿಗಳ ಸಖ್ಯ ಬೆಳೆಸಿಕೊಳ್ಳಲು ಮುಂದಾಗಿದ್ದಾರೆಯೇ ಹೊರತು ತಮ್ಮ ಅಕ್ರಮಗಳನ್ನು ನಿಲ್ಲಿಸಿಲ್ಲ. ಈ ಸರ್ಕಾರವಾದರೂ ಆತನ ಮೇಲೆ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ” ಎಂದರು.

ಡಿ.ಎಚ್ ಪೂಜಾರ್‌ರವರು ಮಾತನಾಡಿ, “ಕೊಪ್ಪಳ ಜಿಲ್ಲೆಯಲ್ಲಿ ಆತನ ಮೇಲೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಧೈರ್ಯ ಯಾರಿಗೂ ಇಲ್ಲ. ಆರೋಗ್ಯ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಮತ್ತು ಪ್ರಧಾನ ಕಾರ್ಯದರ್ಶಿಗಳು ಮಾತ್ರ ಆ ಕೆಲಸ ಮಾಡಬಲ್ಲರು. ಅವರೊಂದಿಗೆ ವಿವರವಾಗಿ ಚರ್ಚಿಸಿ ಎಲ್ಲಾ ದಾಖಲೆಗಳನ್ನು ಮುಂದಿಟ್ಟಿದ್ದೇವೆ. ಅವರು ನಮಗೆ ನ್ಯಾಯ ಕೊಡಿಸುತ್ತಾರೆಂಬ ವಿಶ್ವಾಸವಿದೆ. ಇಲ್ಲದಿದ್ದರೆ ಹೋರಾಟವೇ ನಮ್ಮ ಹಾದಿಯಾಗಲಿದೆ” ಎಂದರು.

ಆರೋಪಗಳಲ್ಲಿ ಯಾವುದೇ ಹುರಳಿಲ್ಲ – ಡಾ.ಈಶ್ವರ ಸವಡಿ

ತಮ್ಮ ಮೇಲಿರುವ ಆರೋಪಗಳ ಕುರಿತು ಮಾತನಾಡಿದ ಡಾ.ಈಶ್ವರ ಸವಡಿಯವರು, “ನನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳು ಸುಳ್ಳು. ಕುಷ್ಟಗಿಯವರಿಗೆ ಕೊಪ್ಪಳ ಹತ್ತಿರವಾಗುತ್ತದೆ. ಅವರೇಕೆ ಗಂಗಾವತಿ ಆಸ್ಪತ್ರೆಗೆ ಬರುತ್ತಾರೆ? ಅವರು ನಮ್ಮ ಆಸ್ಪತ್ರೆಗೆ ಬಾರದೇ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಇನ್ನು ಲೈಂಗಿಕ ಕಿರುಕುಳದ ಆರೋಪಕ್ಕೆ ತನಿಖೆ ನಡೆದಿದ್ದು, ಮೆಹಬೂಬ ಪಾಷ ಎಂಬುವವರು ಸುಳ್ಳು ದೂರು ಬರೆದುಕೊಟ್ಟಿರುವುದಾಗಿ ಒಪ್ಪಿಕೊಂಡಿದ್ದಾರೆ. ಹಾಗಾಗಿ ನನಗೆ ಕ್ಲಿನ್ ಚಿಟ್ ನೀಡಲಾಗಿದೆ” ಎಂದರು.

ಇದೊಂದೇ ತಾಲ್ಲೂಕಿನ ಸಮಸ್ಯೆಯಲ್ಲ

ಗಂಗಾವತಿ ತಾಲ್ಲೂಕಿನಲ್ಲಿ ಮಾತ್ರ ಈ ಸಮಸ್ಯೆ ಇಲ್ಲ. ರಾಜ್ಯದ ಹಲವು ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳ ಪರಿಸ್ಥಿತಿ ಇದೇ ಆಗಿದೆ. ವೈದ್ಯರು ಸಮಯಕ್ಕೆ ಸರಿಯಾಗಿ ಬರುವುದಿಲ್ಲ, ಬಂದರೂ ಕೆಲವರು ಸಹಿ ಮಾಡಿ ತಮ್ಮತಮ್ಮ ಖಾಸಗೀ ಕ್ಲಿನಿಕ್‌ಗಳಿಗೆ ಹೊರಟುಹೋಗುತ್ತಾರೆ. ಖಾಸಗಿ ಪ್ರಾಕ್ಟಿಸ್ ಮಾಡುತ್ತಿಲ್ಲವೆಂದು ಸರ್ಕಾರದಿಂದ ಭತ್ಯೆ ಬೇರೆ ಪಡೆಯುತ್ತಾರೆ. ಆಸ್ಪತ್ರೆಯಲ್ಲಿ ಇರುವ ಒಬ್ಬರು ಇಬ್ಬರು ವೈದ್ಯರು ಸಹ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುವುದಿಲ್ಲ. ತಮ್ಮದೇ ಖಾಸಗಿ ಕ್ಲಿನಿಕ್‌ಗೆ ಬನ್ನಿ ಎನ್ನುತ್ತಾರೆ. ಪ್ರಶ್ನಿಸಿದರೆ ಕೇಸ್ ಹಾಕುತ್ತೇವೆಂದು ಬೆದರಿಸುತ್ತಾರೆ. ಲಂಚದ ಬಗ್ಗೆಯಂತೂ ಹೇಳುವುದೇ ಬೇಡ. ಇವೆಲ್ಲದರ ನಡುವೆಯ ಕೆಲ ವೈದ್ಯರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವುದನ್ನು ತಳ್ಳಿ ಹಾಕುವಂತಿಲ್ಲ. ಆದರೆ ಒಟ್ಟಾರೆ ಸರ್ಕಾರಿ ಆರೋಗ್ಯ ವ್ಯವಸ್ಥೆಯೂ ದುಸ್ಥಿತಿಯಲ್ಲಿದೆ. ತಮಗೆ ಹೇಳುವವರು, ಕೇಳುವವರು ಯಾರೂ ಇಲ್ಲ ಎಂಬಂತೆ ವೈದ್ಯರು ಮತ್ತು ಸಿಬ್ಬಂದಿ ವರ್ತಿಸುತ್ತಿದ್ದಾರೆ.

ಇದೆಲ್ಲಕ್ಕೂ ಒಂದು ಸಣ್ಣ ಪರಿಹಾರದ ರೂಪದಲ್ಲಿ 2016ರಲ್ಲಿ ರಮೇಶ್ ಕುಮಾರ್‌ರವರು ಆರೋಗ್ಯ ಸಚಿವರಾಗಿದ್ದಾಗ ಕೆಪಿಎಂಇ ಕಾಯ್ದೆ ತರುವ ಚರ್ಚೆ ಮಾಡಿದ್ದರು. ಆದರೆ ವೈದ್ಯರು ಆ ಕಾಯ್ದೆಯ ಮೇಲೆ ಮುಗಿಬಿದ್ದ ಕಾರಣ ಸರ್ಕಾರ ಅದನ್ನು ಜಾರಿಗೊಳಿಸಲಿಲ್ಲ. ಯಾವುದೇ ಸಮರ್ಪಕ ಕ್ರಮ ತೆಗೆದುಕೊಳ್ಳದ ಪರಿಣಾಮ ಇಂದು ಆರೋಗ್ಯವೆಂಬುದು ಬಡವರು ಮತ್ತು ಮಧ್ಯಮ ವರ್ಗದ ಕೈಗೆಟುಕದ ದುಬಾರಿ ಸೇವೆಯಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲಿ ನೂತನ ಆರೋಗ್ಯ ಸಚಿವರಾಗಿರುವ ದಿನೇಶ್ ಗುಂಡೂರಾವ್‌ರವರ ಮೇಲೆ ಅಪಾರ ನಿರೀಕ್ಷೆಗಳಿವೆ. ಅವರಾದರೂ ಖಾಸಗಿ ಆರೋಗ್ಯ ಲಾಬಿಗೆ ಮಣಿಯದೇ ತುಕ್ಕು ಹಿಡಿಯುತ್ತಿರುವ ಸರ್ಕಾರಿ ಆರೋಗ್ಯ ವ್ಯವಸ್ಥೆಗೆ ನಿಜವಾದ ಅರ್ಥದಲ್ಲಿ ಕಾಯಕಲ್ಪ ನೀಡಬೇಕಾಗಿದೆ. ಅದು ಸರ್ಕಾರ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೋಜನೆಗಳಷ್ಟೇ ಪ್ರಾಮುಖ್ಯತೆ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...