Homeಕರ್ನಾಟಕಗಂಗಾವತಿಯಲ್ಲಿ ಆಘಾತಕಾರಿ ಘಟನೆ | ಇಸ್ರೇಲ್ ಯುವತಿ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಕಾಲುವೆಗೆ...

ಗಂಗಾವತಿಯಲ್ಲಿ ಆಘಾತಕಾರಿ ಘಟನೆ | ಇಸ್ರೇಲ್ ಯುವತಿ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಕಾಲುವೆಗೆ ತಳ್ಳಿ ಸ್ನೇಹಿತನ ಕೊಲೆ

- Advertisement -
- Advertisement -

ಮೂವರು ದುಷ್ಕರ್ಮಿಗಳು ಇಸ್ರೇಲ್ ಮೂಲದ ಮತ್ತು ತಮಿಳುನಾಡು ಮೂಲದ ಯುವತಿಯರಿಬ್ಬರ ಮೇಲೆ ಹಲ್ಲೆ ಮಾಡಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಿರುವ ಭೀಕರ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಯುವತಿಯರ ಜೊತೆಗೆ ಇದ್ದ ಮೂವರು ಯುವಕರ ಮೇಲೆ ಕೂಡಾ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ತಿರದ ಕಾಲುವೆಗೆ ಬಿಸಾಕಿದ್ದರು. ಮೂವರಲ್ಲಿ ಇಬ್ಬರು ಈಜಿ ಬಚಾಗಿದ್ದು, ಒಬ್ಬ ಯುವಕನ ಶರೀರ ಶನಿವಾರ ಪತ್ತೆಯಾಗಿದೆ ಎಂದು ಪೊಲೀಸರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ. ಗಂಗಾವತಿಯಲ್ಲಿ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ತುಂಗಾಭದ್ರ ಎಡದಂಡೆ ಕಾಲುವೆ ಪಕ್ಕ ರಾತ್ರಿ ಸುಮಾರು 10 ಗಂಟೆಯ ನಂತರ ನಕ್ಷತ್ರ ವೀಕ್ಷಣೆಗೆ ತೆರಳಿ ಗಿಟಾರ್ ಬಾರಿಸುತ್ತ ಕುಳಿತಿದ್ದ ಇಬ್ಬರು ವಿದೇಶಿ ಪ್ರಜೆಗಳು ಹಾಗೂ ಮೂವರು ದೇಶಿಯ ಪ್ರವಾಸಿಗರ ಮೇಲೆ ಗುರುವಾರ ತಡರಾತ್ರಿ ಮೂವರ ಗುಂಪು ಹಲ್ಲೆ ನಡೆಸಿದ್ದಲ್ಲದೇ, ತಂಡದಲ್ಲಿದ್ದ ಮೂವರು ಯುವಕರನ್ನು ಕಾಲುವೆಗೆ ದೂಡಿ ಇಬ್ಬರು ಯುವತಿಯರ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.

ಗುರುವಾರ ತಡರಾತ್ರಿ ಸಾನಾಪುರ ಬಳಿಯ ಹನುಮನಹಳ್ಳಿ ಸಮೀಪದ ದುರ್ಗಮ್ಮ ಗುಡಿಯ ಬಳಿಯಲ್ಲಿರುವ ತುಂಗಭದ್ರಾ ಕಾಲುವೆ ಸಮೀಪ ಕೂತು ನಕ್ಷತ್ರ ವೀಕ್ಷಣೆಗೆಂದು ಒಬ್ಬ ಅಮೆರಿಕದ ಯುವಕ, ಇಸ್ರೇಲ್‌ನ ಯುವತಿ ಹಾಗೂ ಭಾರತದ ಇಬ್ಬರು ಪ್ರವಾಸಿಗರೊಂದಿಗೆ ಸ್ಥಳೀಯವಾಗಿ ಹೋಮ್ ಸ್ಟೇ ನಡೆಸುತ್ತಿರುವ ಯುವತಿ ಕೂಡ ತೆರಳಿದ್ದರು. ಗಂಗಾವತಿಯಲ್ಲಿ

ಈ ವೇಳೆ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು, ‘ಪೆಟ್ರೋಲ್ ಬಂಕ್ ಎಲ್ಲಿದೆ?’ ಎಂದು ಕನ್ನಡದಲ್ಲಿ ಸ್ಥಳೀಯ ಯುವತಿಯೊಂದಿಗೆ ಪ್ರಶ್ನಿಸಿದ್ದಾರೆ‌.‌ ಈ ವೇಳೆ ಉತ್ತರಿಸಿದ್ದ ಯುವತಿ, ಸಾನಾಪುರಕ್ಕೆ ಹೋಗುವಂತೆ ಸಲಹೆ ನೀಡಿದ್ದಾರೆ. ಆದರೆ, ಆ ಬಳಿಕವೂ ಅಲ್ಲಿಂದ ಕದಲದೆ, ₹100 ಕೊಡುವಂತೆ ಒತ್ತಾಯಿಸಿದ್ದಾರೆ.

ನಮ್ಮಲ್ಲಿ ದುಡ್ಡಿಲ್ಲ ಎಂದು ಸಮಜಾಯಿಷಿ ನೀಡಿದಾಗ ತಗಾದೆ ತೆಗೆದ ಮೂವರು ದುಷ್ಕರ್ಮಿಗಳು, ತಂಡದಲ್ಲಿದ್ದ ವಿದೇಶಿ ಯುವಕನ ಸಹಿತ ಮೂವರು ಯುವಕರಿಗೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಆ ಬಳಿಕ ಕಾಲುವೆಗೆ ದೂಡಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಯುವಕರನ್ನು ಕಾಲುವೆಗೆ ದೂಡಿ ಹಾಕಿದ ಬಳಿಕ ವಿದೇಶಿ ಯುವತಿ ಹಾಗೂ ಸ್ಥಳೀಯ ಯುವತಿಗೂ ಕಲ್ಲಿನಿಂದ ತಲೆಗೆ ಹಲ್ಲೆ ನಡೆಸಿದ್ದಲ್ಲದೇ, ಇಬ್ಬರನ್ನೂ ಅತ್ಯಾಚಾರಗೈದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗಂಗಾವತಿಯಲ್ಲಿ

ಕಾಲುವೆಗೆ ಬಿದ್ದಿದ್ದ ವಿದೇಶಿ ಯುವಕನ ಸಹಿತ ಇಬ್ಬರು ಭಾರತೀಯ ಪ್ರವಾಸಿಗರ ಪೈಕಿ ಓರ್ವ ಯುವಕ ಹಾಗೂ ವಿದೇಶಿ ಪ್ರವಾಸಿಗ ಈಜಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಆದರೆ, ಇನ್ನೊಬ್ಬ ಯುವಕ ಶುಕ್ರವಾರದ ವರೆಗೂ ಪತ್ತೆಯಾಗಿರಲಿಲ್ಲ. ಶನಿವಾರ ಅವರ ಶರೀರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತ ಇಸ್ರೇಲ್‌ ಪ್ರಜೆಯಾದ ಯುವತಿಯು 27 ವರ್ಷದವರಾಗಿದ್ದು, ಇನ್ನೊಬ್ಬ ಯುವತಿಯು 29 ವರ್ಷದ ತಮಿಳುನಾಡು ಮೂಲದವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ಸಂತ್ರಸ್ತ ಸ್ಥಳೀಯ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಾಲುವೆಗೆ ಬಿದ್ದಿದ್ದ ವಿದೇಶಿ ಯುವಕರಲ್ಲಿ ಒಬ್ಬರು ಅಮೆರಿಕದವರಾಗಿದ್ದು, ಇನ್ನೊಬ್ಬ ಯುವಕ ಮಹಾರಾಷ್ಟ್ರ ಮೂಲದವರಾಗಿದ್ದಾರೆ ಎಂದು ಪೊಲೀಸರು ಗುರುತಿಸಿದ್ದಾರೆ. ಸದ್ಯ ಕಾಲುವೆಗೆ ಬಿದ್ದು ಬಳಿಕ ನಾಪತ್ತೆಯಾಗಿದ್ದ ಯುವಕ ಒಡಿಶಾ ರಾಜ್ಯದ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ನಗರಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್ ಪ್ರಕಾಶ್ ಮಾಳೆ, ಶ್ವಾನದಳ ಬಂದಿದ್ದು ತಪಾಸಣೆ ನಡೆಸಿದ್ದಾರೆ.

ಘಟನಾ ಸ್ಥಳದಲ್ಲಿ ದ್ವಿಚಕ್ರ ವಾಹನ, ಹ್ಯಾಂಡ್ ಬ್ಯಾಗ್‌ ಲಭಿಸಿವೆ. ಹ್ಯಾಂಡ್‌ಬ್ಯಾಗ್‌ನಲ್ಲಿ ಕ್ಯಾಮೆರಾ, ಪವರ್‌ ಬ್ಯಾಂಕ್, ಪೆನ್ನು, ಮುರಿದು ಬಿದ್ದ ಗಿಟಾರ್, ಕೈ ವಸ್ತ್ರ, ಸಿಗರೇಟ್, ರಕ್ತದ ಕಲೆ ಇರುವ ಬಟ್ಟೆ ಲಭ್ಯವಾಗಿವೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ, ಆರೋಪಿಗಳ ಬಂಧನ ಇನ್ನೂ ಆಗಿಲ್ಲ. ನಾಪತ್ತೆಯಾಗಿರುವ ಯುವಕನ ಶರೀರ ಇದೀಗ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಆರೋಪಿಗಳ ಬಂಧನಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಅದರ ಬಗ್ಗೆ ಏನೂ ನನಗೆ ಗೊತ್ತಿಲ್ಲ. ಈ ಬಗ್ಗೆ ಎಸ್‌ಪಿ ಅವರೊಂದಿಗೆ ಮಾತನಾಡಿ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೊಪ್ಪಳ ಎಸ್‌ಪಿ, ಆರೋಪಿಗಳ ಪತ್ತೆಗಾಗಿ ಆರು ತಂಡಗಳನ್ನು ರಚಿಸಿದ್ದೇವೆ. ಯಾವುದೇ ಆರೋಪಿಗಳ ಸುಳಿವು ಸಿಕ್ಕಿಲ್ಲ ಇನ್ನೂ ಹುಡುಕುತ್ತಾ ಇದ್ದೇವೆ. ಆದಷ್ಟು ಬೇಗನೇ ಪತ್ತೆಹಚ್ಚಲಿದ್ದೇವೆ. ಹಲ್ಲೆಗೊಳಪಟ್ಟು ನಾಪತ್ತೆಯಾಗಿದ್ದ ಯುವಕನ ಶರೀರ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...