Homeಕರ್ನಾಟಕಗಂಗಾವತಿಯಲ್ಲಿ ಆಘಾತಕಾರಿ ಘಟನೆ | ಇಸ್ರೇಲ್ ಯುವತಿ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಕಾಲುವೆಗೆ...

ಗಂಗಾವತಿಯಲ್ಲಿ ಆಘಾತಕಾರಿ ಘಟನೆ | ಇಸ್ರೇಲ್ ಯುವತಿ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಕಾಲುವೆಗೆ ತಳ್ಳಿ ಸ್ನೇಹಿತನ ಕೊಲೆ

- Advertisement -
- Advertisement -

ಮೂವರು ದುಷ್ಕರ್ಮಿಗಳು ಇಸ್ರೇಲ್ ಮೂಲದ ಮತ್ತು ತಮಿಳುನಾಡು ಮೂಲದ ಯುವತಿಯರಿಬ್ಬರ ಮೇಲೆ ಹಲ್ಲೆ ಮಾಡಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಿರುವ ಭೀಕರ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಯುವತಿಯರ ಜೊತೆಗೆ ಇದ್ದ ಮೂವರು ಯುವಕರ ಮೇಲೆ ಕೂಡಾ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ತಿರದ ಕಾಲುವೆಗೆ ಬಿಸಾಕಿದ್ದರು. ಮೂವರಲ್ಲಿ ಇಬ್ಬರು ಈಜಿ ಬಚಾಗಿದ್ದು, ಒಬ್ಬ ಯುವಕನ ಶರೀರ ಶನಿವಾರ ಪತ್ತೆಯಾಗಿದೆ ಎಂದು ಪೊಲೀಸರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ. ಗಂಗಾವತಿಯಲ್ಲಿ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ತುಂಗಾಭದ್ರ ಎಡದಂಡೆ ಕಾಲುವೆ ಪಕ್ಕ ರಾತ್ರಿ ಸುಮಾರು 10 ಗಂಟೆಯ ನಂತರ ನಕ್ಷತ್ರ ವೀಕ್ಷಣೆಗೆ ತೆರಳಿ ಗಿಟಾರ್ ಬಾರಿಸುತ್ತ ಕುಳಿತಿದ್ದ ಇಬ್ಬರು ವಿದೇಶಿ ಪ್ರಜೆಗಳು ಹಾಗೂ ಮೂವರು ದೇಶಿಯ ಪ್ರವಾಸಿಗರ ಮೇಲೆ ಗುರುವಾರ ತಡರಾತ್ರಿ ಮೂವರ ಗುಂಪು ಹಲ್ಲೆ ನಡೆಸಿದ್ದಲ್ಲದೇ, ತಂಡದಲ್ಲಿದ್ದ ಮೂವರು ಯುವಕರನ್ನು ಕಾಲುವೆಗೆ ದೂಡಿ ಇಬ್ಬರು ಯುವತಿಯರ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.

ಗುರುವಾರ ತಡರಾತ್ರಿ ಸಾನಾಪುರ ಬಳಿಯ ಹನುಮನಹಳ್ಳಿ ಸಮೀಪದ ದುರ್ಗಮ್ಮ ಗುಡಿಯ ಬಳಿಯಲ್ಲಿರುವ ತುಂಗಭದ್ರಾ ಕಾಲುವೆ ಸಮೀಪ ಕೂತು ನಕ್ಷತ್ರ ವೀಕ್ಷಣೆಗೆಂದು ಒಬ್ಬ ಅಮೆರಿಕದ ಯುವಕ, ಇಸ್ರೇಲ್‌ನ ಯುವತಿ ಹಾಗೂ ಭಾರತದ ಇಬ್ಬರು ಪ್ರವಾಸಿಗರೊಂದಿಗೆ ಸ್ಥಳೀಯವಾಗಿ ಹೋಮ್ ಸ್ಟೇ ನಡೆಸುತ್ತಿರುವ ಯುವತಿ ಕೂಡ ತೆರಳಿದ್ದರು. ಗಂಗಾವತಿಯಲ್ಲಿ

ಈ ವೇಳೆ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು, ‘ಪೆಟ್ರೋಲ್ ಬಂಕ್ ಎಲ್ಲಿದೆ?’ ಎಂದು ಕನ್ನಡದಲ್ಲಿ ಸ್ಥಳೀಯ ಯುವತಿಯೊಂದಿಗೆ ಪ್ರಶ್ನಿಸಿದ್ದಾರೆ‌.‌ ಈ ವೇಳೆ ಉತ್ತರಿಸಿದ್ದ ಯುವತಿ, ಸಾನಾಪುರಕ್ಕೆ ಹೋಗುವಂತೆ ಸಲಹೆ ನೀಡಿದ್ದಾರೆ. ಆದರೆ, ಆ ಬಳಿಕವೂ ಅಲ್ಲಿಂದ ಕದಲದೆ, ₹100 ಕೊಡುವಂತೆ ಒತ್ತಾಯಿಸಿದ್ದಾರೆ.

ನಮ್ಮಲ್ಲಿ ದುಡ್ಡಿಲ್ಲ ಎಂದು ಸಮಜಾಯಿಷಿ ನೀಡಿದಾಗ ತಗಾದೆ ತೆಗೆದ ಮೂವರು ದುಷ್ಕರ್ಮಿಗಳು, ತಂಡದಲ್ಲಿದ್ದ ವಿದೇಶಿ ಯುವಕನ ಸಹಿತ ಮೂವರು ಯುವಕರಿಗೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಆ ಬಳಿಕ ಕಾಲುವೆಗೆ ದೂಡಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಯುವಕರನ್ನು ಕಾಲುವೆಗೆ ದೂಡಿ ಹಾಕಿದ ಬಳಿಕ ವಿದೇಶಿ ಯುವತಿ ಹಾಗೂ ಸ್ಥಳೀಯ ಯುವತಿಗೂ ಕಲ್ಲಿನಿಂದ ತಲೆಗೆ ಹಲ್ಲೆ ನಡೆಸಿದ್ದಲ್ಲದೇ, ಇಬ್ಬರನ್ನೂ ಅತ್ಯಾಚಾರಗೈದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗಂಗಾವತಿಯಲ್ಲಿ

ಕಾಲುವೆಗೆ ಬಿದ್ದಿದ್ದ ವಿದೇಶಿ ಯುವಕನ ಸಹಿತ ಇಬ್ಬರು ಭಾರತೀಯ ಪ್ರವಾಸಿಗರ ಪೈಕಿ ಓರ್ವ ಯುವಕ ಹಾಗೂ ವಿದೇಶಿ ಪ್ರವಾಸಿಗ ಈಜಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಆದರೆ, ಇನ್ನೊಬ್ಬ ಯುವಕ ಶುಕ್ರವಾರದ ವರೆಗೂ ಪತ್ತೆಯಾಗಿರಲಿಲ್ಲ. ಶನಿವಾರ ಅವರ ಶರೀರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತ ಇಸ್ರೇಲ್‌ ಪ್ರಜೆಯಾದ ಯುವತಿಯು 27 ವರ್ಷದವರಾಗಿದ್ದು, ಇನ್ನೊಬ್ಬ ಯುವತಿಯು 29 ವರ್ಷದ ತಮಿಳುನಾಡು ಮೂಲದವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ಸಂತ್ರಸ್ತ ಸ್ಥಳೀಯ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಾಲುವೆಗೆ ಬಿದ್ದಿದ್ದ ವಿದೇಶಿ ಯುವಕರಲ್ಲಿ ಒಬ್ಬರು ಅಮೆರಿಕದವರಾಗಿದ್ದು, ಇನ್ನೊಬ್ಬ ಯುವಕ ಮಹಾರಾಷ್ಟ್ರ ಮೂಲದವರಾಗಿದ್ದಾರೆ ಎಂದು ಪೊಲೀಸರು ಗುರುತಿಸಿದ್ದಾರೆ. ಸದ್ಯ ಕಾಲುವೆಗೆ ಬಿದ್ದು ಬಳಿಕ ನಾಪತ್ತೆಯಾಗಿದ್ದ ಯುವಕ ಒಡಿಶಾ ರಾಜ್ಯದ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ನಗರಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್ ಪ್ರಕಾಶ್ ಮಾಳೆ, ಶ್ವಾನದಳ ಬಂದಿದ್ದು ತಪಾಸಣೆ ನಡೆಸಿದ್ದಾರೆ.

ಘಟನಾ ಸ್ಥಳದಲ್ಲಿ ದ್ವಿಚಕ್ರ ವಾಹನ, ಹ್ಯಾಂಡ್ ಬ್ಯಾಗ್‌ ಲಭಿಸಿವೆ. ಹ್ಯಾಂಡ್‌ಬ್ಯಾಗ್‌ನಲ್ಲಿ ಕ್ಯಾಮೆರಾ, ಪವರ್‌ ಬ್ಯಾಂಕ್, ಪೆನ್ನು, ಮುರಿದು ಬಿದ್ದ ಗಿಟಾರ್, ಕೈ ವಸ್ತ್ರ, ಸಿಗರೇಟ್, ರಕ್ತದ ಕಲೆ ಇರುವ ಬಟ್ಟೆ ಲಭ್ಯವಾಗಿವೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ, ಆರೋಪಿಗಳ ಬಂಧನ ಇನ್ನೂ ಆಗಿಲ್ಲ. ನಾಪತ್ತೆಯಾಗಿರುವ ಯುವಕನ ಶರೀರ ಇದೀಗ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಆರೋಪಿಗಳ ಬಂಧನಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಅದರ ಬಗ್ಗೆ ಏನೂ ನನಗೆ ಗೊತ್ತಿಲ್ಲ. ಈ ಬಗ್ಗೆ ಎಸ್‌ಪಿ ಅವರೊಂದಿಗೆ ಮಾತನಾಡಿ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೊಪ್ಪಳ ಎಸ್‌ಪಿ, ಆರೋಪಿಗಳ ಪತ್ತೆಗಾಗಿ ಆರು ತಂಡಗಳನ್ನು ರಚಿಸಿದ್ದೇವೆ. ಯಾವುದೇ ಆರೋಪಿಗಳ ಸುಳಿವು ಸಿಕ್ಕಿಲ್ಲ ಇನ್ನೂ ಹುಡುಕುತ್ತಾ ಇದ್ದೇವೆ. ಆದಷ್ಟು ಬೇಗನೇ ಪತ್ತೆಹಚ್ಚಲಿದ್ದೇವೆ. ಹಲ್ಲೆಗೊಳಪಟ್ಟು ನಾಪತ್ತೆಯಾಗಿದ್ದ ಯುವಕನ ಶರೀರ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...