Homeಕರ್ನಾಟಕಗಂಗಾವತಿಯಲ್ಲಿ ಆಘಾತಕಾರಿ ಘಟನೆ | ಇಸ್ರೇಲ್ ಯುವತಿ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಕಾಲುವೆಗೆ...

ಗಂಗಾವತಿಯಲ್ಲಿ ಆಘಾತಕಾರಿ ಘಟನೆ | ಇಸ್ರೇಲ್ ಯುವತಿ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಕಾಲುವೆಗೆ ತಳ್ಳಿ ಸ್ನೇಹಿತನ ಕೊಲೆ

- Advertisement -
- Advertisement -

ಮೂವರು ದುಷ್ಕರ್ಮಿಗಳು ಇಸ್ರೇಲ್ ಮೂಲದ ಮತ್ತು ತಮಿಳುನಾಡು ಮೂಲದ ಯುವತಿಯರಿಬ್ಬರ ಮೇಲೆ ಹಲ್ಲೆ ಮಾಡಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಿರುವ ಭೀಕರ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಯುವತಿಯರ ಜೊತೆಗೆ ಇದ್ದ ಮೂವರು ಯುವಕರ ಮೇಲೆ ಕೂಡಾ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ತಿರದ ಕಾಲುವೆಗೆ ಬಿಸಾಕಿದ್ದರು. ಮೂವರಲ್ಲಿ ಇಬ್ಬರು ಈಜಿ ಬಚಾಗಿದ್ದು, ಒಬ್ಬ ಯುವಕನ ಶರೀರ ಶನಿವಾರ ಪತ್ತೆಯಾಗಿದೆ ಎಂದು ಪೊಲೀಸರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ. ಗಂಗಾವತಿಯಲ್ಲಿ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ತುಂಗಾಭದ್ರ ಎಡದಂಡೆ ಕಾಲುವೆ ಪಕ್ಕ ರಾತ್ರಿ ಸುಮಾರು 10 ಗಂಟೆಯ ನಂತರ ನಕ್ಷತ್ರ ವೀಕ್ಷಣೆಗೆ ತೆರಳಿ ಗಿಟಾರ್ ಬಾರಿಸುತ್ತ ಕುಳಿತಿದ್ದ ಇಬ್ಬರು ವಿದೇಶಿ ಪ್ರಜೆಗಳು ಹಾಗೂ ಮೂವರು ದೇಶಿಯ ಪ್ರವಾಸಿಗರ ಮೇಲೆ ಗುರುವಾರ ತಡರಾತ್ರಿ ಮೂವರ ಗುಂಪು ಹಲ್ಲೆ ನಡೆಸಿದ್ದಲ್ಲದೇ, ತಂಡದಲ್ಲಿದ್ದ ಮೂವರು ಯುವಕರನ್ನು ಕಾಲುವೆಗೆ ದೂಡಿ ಇಬ್ಬರು ಯುವತಿಯರ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.

ಗುರುವಾರ ತಡರಾತ್ರಿ ಸಾನಾಪುರ ಬಳಿಯ ಹನುಮನಹಳ್ಳಿ ಸಮೀಪದ ದುರ್ಗಮ್ಮ ಗುಡಿಯ ಬಳಿಯಲ್ಲಿರುವ ತುಂಗಭದ್ರಾ ಕಾಲುವೆ ಸಮೀಪ ಕೂತು ನಕ್ಷತ್ರ ವೀಕ್ಷಣೆಗೆಂದು ಒಬ್ಬ ಅಮೆರಿಕದ ಯುವಕ, ಇಸ್ರೇಲ್‌ನ ಯುವತಿ ಹಾಗೂ ಭಾರತದ ಇಬ್ಬರು ಪ್ರವಾಸಿಗರೊಂದಿಗೆ ಸ್ಥಳೀಯವಾಗಿ ಹೋಮ್ ಸ್ಟೇ ನಡೆಸುತ್ತಿರುವ ಯುವತಿ ಕೂಡ ತೆರಳಿದ್ದರು. ಗಂಗಾವತಿಯಲ್ಲಿ

ಈ ವೇಳೆ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು, ‘ಪೆಟ್ರೋಲ್ ಬಂಕ್ ಎಲ್ಲಿದೆ?’ ಎಂದು ಕನ್ನಡದಲ್ಲಿ ಸ್ಥಳೀಯ ಯುವತಿಯೊಂದಿಗೆ ಪ್ರಶ್ನಿಸಿದ್ದಾರೆ‌.‌ ಈ ವೇಳೆ ಉತ್ತರಿಸಿದ್ದ ಯುವತಿ, ಸಾನಾಪುರಕ್ಕೆ ಹೋಗುವಂತೆ ಸಲಹೆ ನೀಡಿದ್ದಾರೆ. ಆದರೆ, ಆ ಬಳಿಕವೂ ಅಲ್ಲಿಂದ ಕದಲದೆ, ₹100 ಕೊಡುವಂತೆ ಒತ್ತಾಯಿಸಿದ್ದಾರೆ.

ನಮ್ಮಲ್ಲಿ ದುಡ್ಡಿಲ್ಲ ಎಂದು ಸಮಜಾಯಿಷಿ ನೀಡಿದಾಗ ತಗಾದೆ ತೆಗೆದ ಮೂವರು ದುಷ್ಕರ್ಮಿಗಳು, ತಂಡದಲ್ಲಿದ್ದ ವಿದೇಶಿ ಯುವಕನ ಸಹಿತ ಮೂವರು ಯುವಕರಿಗೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಆ ಬಳಿಕ ಕಾಲುವೆಗೆ ದೂಡಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಯುವಕರನ್ನು ಕಾಲುವೆಗೆ ದೂಡಿ ಹಾಕಿದ ಬಳಿಕ ವಿದೇಶಿ ಯುವತಿ ಹಾಗೂ ಸ್ಥಳೀಯ ಯುವತಿಗೂ ಕಲ್ಲಿನಿಂದ ತಲೆಗೆ ಹಲ್ಲೆ ನಡೆಸಿದ್ದಲ್ಲದೇ, ಇಬ್ಬರನ್ನೂ ಅತ್ಯಾಚಾರಗೈದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗಂಗಾವತಿಯಲ್ಲಿ

ಕಾಲುವೆಗೆ ಬಿದ್ದಿದ್ದ ವಿದೇಶಿ ಯುವಕನ ಸಹಿತ ಇಬ್ಬರು ಭಾರತೀಯ ಪ್ರವಾಸಿಗರ ಪೈಕಿ ಓರ್ವ ಯುವಕ ಹಾಗೂ ವಿದೇಶಿ ಪ್ರವಾಸಿಗ ಈಜಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಆದರೆ, ಇನ್ನೊಬ್ಬ ಯುವಕ ಶುಕ್ರವಾರದ ವರೆಗೂ ಪತ್ತೆಯಾಗಿರಲಿಲ್ಲ. ಶನಿವಾರ ಅವರ ಶರೀರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತ ಇಸ್ರೇಲ್‌ ಪ್ರಜೆಯಾದ ಯುವತಿಯು 27 ವರ್ಷದವರಾಗಿದ್ದು, ಇನ್ನೊಬ್ಬ ಯುವತಿಯು 29 ವರ್ಷದ ತಮಿಳುನಾಡು ಮೂಲದವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ಸಂತ್ರಸ್ತ ಸ್ಥಳೀಯ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಾಲುವೆಗೆ ಬಿದ್ದಿದ್ದ ವಿದೇಶಿ ಯುವಕರಲ್ಲಿ ಒಬ್ಬರು ಅಮೆರಿಕದವರಾಗಿದ್ದು, ಇನ್ನೊಬ್ಬ ಯುವಕ ಮಹಾರಾಷ್ಟ್ರ ಮೂಲದವರಾಗಿದ್ದಾರೆ ಎಂದು ಪೊಲೀಸರು ಗುರುತಿಸಿದ್ದಾರೆ. ಸದ್ಯ ಕಾಲುವೆಗೆ ಬಿದ್ದು ಬಳಿಕ ನಾಪತ್ತೆಯಾಗಿದ್ದ ಯುವಕ ಒಡಿಶಾ ರಾಜ್ಯದ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ನಗರಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್ ಪ್ರಕಾಶ್ ಮಾಳೆ, ಶ್ವಾನದಳ ಬಂದಿದ್ದು ತಪಾಸಣೆ ನಡೆಸಿದ್ದಾರೆ.

ಘಟನಾ ಸ್ಥಳದಲ್ಲಿ ದ್ವಿಚಕ್ರ ವಾಹನ, ಹ್ಯಾಂಡ್ ಬ್ಯಾಗ್‌ ಲಭಿಸಿವೆ. ಹ್ಯಾಂಡ್‌ಬ್ಯಾಗ್‌ನಲ್ಲಿ ಕ್ಯಾಮೆರಾ, ಪವರ್‌ ಬ್ಯಾಂಕ್, ಪೆನ್ನು, ಮುರಿದು ಬಿದ್ದ ಗಿಟಾರ್, ಕೈ ವಸ್ತ್ರ, ಸಿಗರೇಟ್, ರಕ್ತದ ಕಲೆ ಇರುವ ಬಟ್ಟೆ ಲಭ್ಯವಾಗಿವೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ, ಆರೋಪಿಗಳ ಬಂಧನ ಇನ್ನೂ ಆಗಿಲ್ಲ. ನಾಪತ್ತೆಯಾಗಿರುವ ಯುವಕನ ಶರೀರ ಇದೀಗ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಆರೋಪಿಗಳ ಬಂಧನಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಅದರ ಬಗ್ಗೆ ಏನೂ ನನಗೆ ಗೊತ್ತಿಲ್ಲ. ಈ ಬಗ್ಗೆ ಎಸ್‌ಪಿ ಅವರೊಂದಿಗೆ ಮಾತನಾಡಿ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೊಪ್ಪಳ ಎಸ್‌ಪಿ, ಆರೋಪಿಗಳ ಪತ್ತೆಗಾಗಿ ಆರು ತಂಡಗಳನ್ನು ರಚಿಸಿದ್ದೇವೆ. ಯಾವುದೇ ಆರೋಪಿಗಳ ಸುಳಿವು ಸಿಕ್ಕಿಲ್ಲ ಇನ್ನೂ ಹುಡುಕುತ್ತಾ ಇದ್ದೇವೆ. ಆದಷ್ಟು ಬೇಗನೇ ಪತ್ತೆಹಚ್ಚಲಿದ್ದೇವೆ. ಹಲ್ಲೆಗೊಳಪಟ್ಟು ನಾಪತ್ತೆಯಾಗಿದ್ದ ಯುವಕನ ಶರೀರ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...