Homeಕರ್ನಾಟಕಗಂಗಾವತಿಯಲ್ಲಿ ಆಘಾತಕಾರಿ ಘಟನೆ | ಇಸ್ರೇಲ್ ಯುವತಿ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಕಾಲುವೆಗೆ...

ಗಂಗಾವತಿಯಲ್ಲಿ ಆಘಾತಕಾರಿ ಘಟನೆ | ಇಸ್ರೇಲ್ ಯುವತಿ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಕಾಲುವೆಗೆ ತಳ್ಳಿ ಸ್ನೇಹಿತನ ಕೊಲೆ

- Advertisement -
- Advertisement -

ಮೂವರು ದುಷ್ಕರ್ಮಿಗಳು ಇಸ್ರೇಲ್ ಮೂಲದ ಮತ್ತು ತಮಿಳುನಾಡು ಮೂಲದ ಯುವತಿಯರಿಬ್ಬರ ಮೇಲೆ ಹಲ್ಲೆ ಮಾಡಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಿರುವ ಭೀಕರ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಯುವತಿಯರ ಜೊತೆಗೆ ಇದ್ದ ಮೂವರು ಯುವಕರ ಮೇಲೆ ಕೂಡಾ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ತಿರದ ಕಾಲುವೆಗೆ ಬಿಸಾಕಿದ್ದರು. ಮೂವರಲ್ಲಿ ಇಬ್ಬರು ಈಜಿ ಬಚಾಗಿದ್ದು, ಒಬ್ಬ ಯುವಕನ ಶರೀರ ಶನಿವಾರ ಪತ್ತೆಯಾಗಿದೆ ಎಂದು ಪೊಲೀಸರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ. ಗಂಗಾವತಿಯಲ್ಲಿ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ತುಂಗಾಭದ್ರ ಎಡದಂಡೆ ಕಾಲುವೆ ಪಕ್ಕ ರಾತ್ರಿ ಸುಮಾರು 10 ಗಂಟೆಯ ನಂತರ ನಕ್ಷತ್ರ ವೀಕ್ಷಣೆಗೆ ತೆರಳಿ ಗಿಟಾರ್ ಬಾರಿಸುತ್ತ ಕುಳಿತಿದ್ದ ಇಬ್ಬರು ವಿದೇಶಿ ಪ್ರಜೆಗಳು ಹಾಗೂ ಮೂವರು ದೇಶಿಯ ಪ್ರವಾಸಿಗರ ಮೇಲೆ ಗುರುವಾರ ತಡರಾತ್ರಿ ಮೂವರ ಗುಂಪು ಹಲ್ಲೆ ನಡೆಸಿದ್ದಲ್ಲದೇ, ತಂಡದಲ್ಲಿದ್ದ ಮೂವರು ಯುವಕರನ್ನು ಕಾಲುವೆಗೆ ದೂಡಿ ಇಬ್ಬರು ಯುವತಿಯರ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.

ಗುರುವಾರ ತಡರಾತ್ರಿ ಸಾನಾಪುರ ಬಳಿಯ ಹನುಮನಹಳ್ಳಿ ಸಮೀಪದ ದುರ್ಗಮ್ಮ ಗುಡಿಯ ಬಳಿಯಲ್ಲಿರುವ ತುಂಗಭದ್ರಾ ಕಾಲುವೆ ಸಮೀಪ ಕೂತು ನಕ್ಷತ್ರ ವೀಕ್ಷಣೆಗೆಂದು ಒಬ್ಬ ಅಮೆರಿಕದ ಯುವಕ, ಇಸ್ರೇಲ್‌ನ ಯುವತಿ ಹಾಗೂ ಭಾರತದ ಇಬ್ಬರು ಪ್ರವಾಸಿಗರೊಂದಿಗೆ ಸ್ಥಳೀಯವಾಗಿ ಹೋಮ್ ಸ್ಟೇ ನಡೆಸುತ್ತಿರುವ ಯುವತಿ ಕೂಡ ತೆರಳಿದ್ದರು. ಗಂಗಾವತಿಯಲ್ಲಿ

ಈ ವೇಳೆ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು, ‘ಪೆಟ್ರೋಲ್ ಬಂಕ್ ಎಲ್ಲಿದೆ?’ ಎಂದು ಕನ್ನಡದಲ್ಲಿ ಸ್ಥಳೀಯ ಯುವತಿಯೊಂದಿಗೆ ಪ್ರಶ್ನಿಸಿದ್ದಾರೆ‌.‌ ಈ ವೇಳೆ ಉತ್ತರಿಸಿದ್ದ ಯುವತಿ, ಸಾನಾಪುರಕ್ಕೆ ಹೋಗುವಂತೆ ಸಲಹೆ ನೀಡಿದ್ದಾರೆ. ಆದರೆ, ಆ ಬಳಿಕವೂ ಅಲ್ಲಿಂದ ಕದಲದೆ, ₹100 ಕೊಡುವಂತೆ ಒತ್ತಾಯಿಸಿದ್ದಾರೆ.

ನಮ್ಮಲ್ಲಿ ದುಡ್ಡಿಲ್ಲ ಎಂದು ಸಮಜಾಯಿಷಿ ನೀಡಿದಾಗ ತಗಾದೆ ತೆಗೆದ ಮೂವರು ದುಷ್ಕರ್ಮಿಗಳು, ತಂಡದಲ್ಲಿದ್ದ ವಿದೇಶಿ ಯುವಕನ ಸಹಿತ ಮೂವರು ಯುವಕರಿಗೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಆ ಬಳಿಕ ಕಾಲುವೆಗೆ ದೂಡಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಯುವಕರನ್ನು ಕಾಲುವೆಗೆ ದೂಡಿ ಹಾಕಿದ ಬಳಿಕ ವಿದೇಶಿ ಯುವತಿ ಹಾಗೂ ಸ್ಥಳೀಯ ಯುವತಿಗೂ ಕಲ್ಲಿನಿಂದ ತಲೆಗೆ ಹಲ್ಲೆ ನಡೆಸಿದ್ದಲ್ಲದೇ, ಇಬ್ಬರನ್ನೂ ಅತ್ಯಾಚಾರಗೈದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗಂಗಾವತಿಯಲ್ಲಿ

ಕಾಲುವೆಗೆ ಬಿದ್ದಿದ್ದ ವಿದೇಶಿ ಯುವಕನ ಸಹಿತ ಇಬ್ಬರು ಭಾರತೀಯ ಪ್ರವಾಸಿಗರ ಪೈಕಿ ಓರ್ವ ಯುವಕ ಹಾಗೂ ವಿದೇಶಿ ಪ್ರವಾಸಿಗ ಈಜಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಆದರೆ, ಇನ್ನೊಬ್ಬ ಯುವಕ ಶುಕ್ರವಾರದ ವರೆಗೂ ಪತ್ತೆಯಾಗಿರಲಿಲ್ಲ. ಶನಿವಾರ ಅವರ ಶರೀರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತ ಇಸ್ರೇಲ್‌ ಪ್ರಜೆಯಾದ ಯುವತಿಯು 27 ವರ್ಷದವರಾಗಿದ್ದು, ಇನ್ನೊಬ್ಬ ಯುವತಿಯು 29 ವರ್ಷದ ತಮಿಳುನಾಡು ಮೂಲದವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ಸಂತ್ರಸ್ತ ಸ್ಥಳೀಯ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಾಲುವೆಗೆ ಬಿದ್ದಿದ್ದ ವಿದೇಶಿ ಯುವಕರಲ್ಲಿ ಒಬ್ಬರು ಅಮೆರಿಕದವರಾಗಿದ್ದು, ಇನ್ನೊಬ್ಬ ಯುವಕ ಮಹಾರಾಷ್ಟ್ರ ಮೂಲದವರಾಗಿದ್ದಾರೆ ಎಂದು ಪೊಲೀಸರು ಗುರುತಿಸಿದ್ದಾರೆ. ಸದ್ಯ ಕಾಲುವೆಗೆ ಬಿದ್ದು ಬಳಿಕ ನಾಪತ್ತೆಯಾಗಿದ್ದ ಯುವಕ ಒಡಿಶಾ ರಾಜ್ಯದ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ನಗರಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್ ಪ್ರಕಾಶ್ ಮಾಳೆ, ಶ್ವಾನದಳ ಬಂದಿದ್ದು ತಪಾಸಣೆ ನಡೆಸಿದ್ದಾರೆ.

ಘಟನಾ ಸ್ಥಳದಲ್ಲಿ ದ್ವಿಚಕ್ರ ವಾಹನ, ಹ್ಯಾಂಡ್ ಬ್ಯಾಗ್‌ ಲಭಿಸಿವೆ. ಹ್ಯಾಂಡ್‌ಬ್ಯಾಗ್‌ನಲ್ಲಿ ಕ್ಯಾಮೆರಾ, ಪವರ್‌ ಬ್ಯಾಂಕ್, ಪೆನ್ನು, ಮುರಿದು ಬಿದ್ದ ಗಿಟಾರ್, ಕೈ ವಸ್ತ್ರ, ಸಿಗರೇಟ್, ರಕ್ತದ ಕಲೆ ಇರುವ ಬಟ್ಟೆ ಲಭ್ಯವಾಗಿವೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ, ಆರೋಪಿಗಳ ಬಂಧನ ಇನ್ನೂ ಆಗಿಲ್ಲ. ನಾಪತ್ತೆಯಾಗಿರುವ ಯುವಕನ ಶರೀರ ಇದೀಗ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಆರೋಪಿಗಳ ಬಂಧನಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಅದರ ಬಗ್ಗೆ ಏನೂ ನನಗೆ ಗೊತ್ತಿಲ್ಲ. ಈ ಬಗ್ಗೆ ಎಸ್‌ಪಿ ಅವರೊಂದಿಗೆ ಮಾತನಾಡಿ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೊಪ್ಪಳ ಎಸ್‌ಪಿ, ಆರೋಪಿಗಳ ಪತ್ತೆಗಾಗಿ ಆರು ತಂಡಗಳನ್ನು ರಚಿಸಿದ್ದೇವೆ. ಯಾವುದೇ ಆರೋಪಿಗಳ ಸುಳಿವು ಸಿಕ್ಕಿಲ್ಲ ಇನ್ನೂ ಹುಡುಕುತ್ತಾ ಇದ್ದೇವೆ. ಆದಷ್ಟು ಬೇಗನೇ ಪತ್ತೆಹಚ್ಚಲಿದ್ದೇವೆ. ಹಲ್ಲೆಗೊಳಪಟ್ಟು ನಾಪತ್ತೆಯಾಗಿದ್ದ ಯುವಕನ ಶರೀರ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...