Homeಕರ್ನಾಟಕಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?

ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?

ಈ ನಾಡಿನಲ್ಲಾದ ಒಂದು ಸಾವಿಗೆ ಸಂಬಂಧವೇ ಇಲ್ಲದ ನೂರಾರು ಆತ್ಮಸಾಕ್ಷಿಯುಳ್ಳ ಮನಸ್ಸುಗಳು ಇದಕ್ಕೆ ನಾನು ಹೊಣೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಆದರೆ ದಿನವೀಡಿ ಇನ್ನೊಬ್ಬರ ಮೇಲೆ ದ್ವೇಷ ಕಾರುವ ಧರ್ಮವೀರರು ಮತ್ತು ಮಾಧ್ಯಮಗಳಿಗೆ ಈ ಸಾವು ಏನು ಅನ್ನಿಸುತ್ತಿಲ್ಲ ಏಕೆ? 

- Advertisement -
- Advertisement -

ಏಪ್ರಿಲ್ 5ರ ರಾತ್ರಿ 9ಗಂಟೆಗೆ ದೇಶದ ಬಹುತೇಕರು ದೇಶದ ಪ್ರಧಾನಿಗಳ ಕರೆಗೆ ಓಗೊಟ್ಟು 9 ನಿಮಿಷಗಳ ಕಾಲ ದೀಪ ಹಚ್ಚಿದರು. ಇನ್ನು ಕೆಲವರು ಪಟಾಕಿ ಹೊಡೆದು ಹುಚ್ಚೆದ್ದು ಕುಣಿದರು. ಅದೇ ಸಂದರ್ಭದಲ್ಲಿ ಅನ್ನ ಆಹಾರವಿಲ್ಲದೇ, ಮನೆ ತಲುಪುವ ಉದ್ದೇಶದಿಂದ ಮೂರು ದಿನ ನಡೆದ ಕಾರಣಕ್ಕೆ ಬಳಲಿದ್ದ ಗಂಗಮ್ಮ ಎಂಬ ಅಮಾಯಕ ಮಹಿಳೆ ತನ್ನ ಸಾವಿನ ಕ್ಷಣಗಳನ್ನು ಎಣಿಸುತ್ತಾ ಬಳ್ಳಾರಿಯ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದಳು.

ಪೂರ್ವ ಸಿದ್ದತೆ ಮತ್ತು ಬಡವರ ಸ್ಥಿತಿಗತಿ ಏನಾಗಬಹುದೆಂದು ಯೋಚಿಸದೇ ಘೋಷಿಸಿದ ಲಾಕ್‌ಡೌನ್‌ನಿಂದ 30ಕ್ಕೂ ಹೆಚ್ಚು ಜನರು ಜೀವತೆತ್ತಿದ್ದಾರೆ. ಹಸಿವಿನಿಂದ ಸತ್ತವರ ಲೆಕ್ಕ ಸಿಕ್ಕಿಲ್ಲ ಮತ್ತು ಸಿಗುವುದೂ ಇಲ್ಲ. ಈ ನಡುವೆ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸಿಂಧನೂರಿನ 29 ವರ್ಷದ ಗಂಗಮ್ಮ ಎಂಬ ಮಹಿಳೆ ತನ್ನೂರಿಗೆ ತೆರಳಲು ನಡೆದು ನಡೆದು ಸುಸ್ತಾಗಿ, ಅನ್ನ ನೀರಿಲ್ಲದೆ ಸೋಮವಾರ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಪತ್ರಿಕೆಗಳಲ್ಲಿ ವರದಿಯಾಗಿದೆ.

ಬೆಂಗಳೂರಿನ ಗ್ಲೋಬಲ್ ವಿಲೇಜ್ ಎಂಬ ಐಟಿ ಕಂಪನಿಯು ಪ್ರಪಂಚದಲ್ಲಿಯೇ ಫೇಮಸ್. ಆದರೆ ಅದೇ ಅಪಾರ್ಟ್ಮೆಂಟ್ ನಿರ್ಮಾಣದಲ್ಲಿ ತೊಡಗಿಸಿಕೊಂಡ ಕೂಲಿ ಕಾರ್ಮಿಕರ ಬಗ್ಗೆ ಯಾರೂ ಕಾಳಜಿ ವಹಿಸುವುದಿಲ್ಲ. ಅಂತಹ ನತದೃಷ್ಟರಲ್ಲಿ ಗಂಗಮ್ಮಳು ಕೂಡ ಒಬ್ಬಳು. ಅವಳ ಸಾವಿನ ನಂತರದ ಅವರ ಮನೆ ಪರಿಸ್ಥಿತಿಯನ್ನು ಗಮನಿಸಿದರೆ ನಾವೆಲ್ಲರೂ ನಾಗರಿಕರು ಎನಿಸಿಕೊಳ್ಳಲು ಸಹ ನಾಚಿಕೆಯಾಗುತ್ತದೆ.

ಗಂಗಮ್ಮಳ ಗಂಡ ಕುಡಿತದ ದಾಸನಾಗಿದ್ದನು. ಈತನ ಕಿರುಕುಳದಿಂದ ರೋಸಿಹೋಗಿದ್ದ ಗಂಗಮ್ಮ ಒಮ್ಮೆ ಮಲೇರಿಯಾ ರೋಗಕ್ಕೆ ತುತ್ತಾದಳು. ಇನ್ನು ಅಲ್ಲಿರುವುದು ಅಸಾಧ್ಯ ಎನಿಸಿದಾಗ ಉಳಿದೊಂದು ದಾರಿಯಂತೆ ಬೆಂಗಳೂರಿಗೆ ಗುಳೆ ಹೊರಟಳು.

ಕಟ್ಟಡ ನಿರ್ಮಾಣದಲ್ಲಿ ದುಡಿದು ದುಡಿದು ಬಸವಳಿದಿದ್ದ ಆಕೆ ಇಲ್ಲಿ ಒಂದಷ್ಟು ನೆಮ್ಮದಿಯನ್ನಾದರೂ ಕಂಡುಕೊಂಡಿದ್ದಳು. ಅಷ್ಟರಲ್ಲಿ ಅಪ್ಪಳಿಸಿದ್ದೆ 21 ದಿನಗಳ ಕೊರೊನಾ ಲಾಕ್‌ಡೌನ್. ಎಷ್ಟು ದಿನ ಕಾದರೂ ಕೆಲಸ ಸಿಗದಾಗ ಮತ್ತೆ ತನ್ನೂರು ಸಿಂಧನೂರಿಗೆ ಹೊರಟು ನಿಂತಿದ್ದಾಳೆ. ಕೈಯಲ್ಲಿ ದುಡ್ಡಿಲ್ಲ, ಹೊಟ್ಟೆಗೆ ಆಹಾರವಿಲ್ಲ. ಊರು ತಲುಪಿದರೆ ಏನಾದರೂ ಸಿಗಬಹುದೆಂಬ ಆಸೆಯೊತ್ತು ಹೊರಟ ಗಂಗಮ್ಮ ಕೊನೆಗೆ ಸೇರಿದ್ದು ಮಾತ್ರ ಸ್ಮಶಾನಕ್ಕೆ.

ಟ್ರಾಕ್ಟರ್‌ನಲ್ಲಿ ಒಂದಷ್ಟು ಜೊತೆಗಾರರೊಂದಿಗೆ ಗಂಗಮ್ಮ ಹೊರಟಿದ್ದಾಗ ತುಮಕೂರಿನಲ್ಲಿ ಪೊಲೀಸರು ತಡೆದಿದ್ದಾರೆ. ಅಲ್ಲಿಂದ ಕಾಲ್ನಡಿಗೆ ಆರಂಭಿಸಿದ ಆಕೆಗೆ ಆಹಾರ ನೀರು ದಕ್ಕಿಲ್ಲ. ಮೊದಲೇ ಅನಾರೋಗ್ಯವಿದ್ದ ಆಕೆ ಛಲಬಿಡದೇ ನಡೆದಿದ್ದಾಳೆ. ನಂತರ ಟ್ರಾಕ್ಟರ್ ಬಂದು ಬಳ್ಳಾರಿವರೆಗೂ ತಲುಪಿಸಿದೆ. ಅಷ್ಟರಲ್ಲಿ ಬಸವಳಿದಿದ್ದ ಆಕೆಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನ ಅಲ್ಲಿಯೂ ನರಳಿದ ಆಕೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾಳೆ.

ಸತ್ತ ನಂತರವೂ ಬಿಡದ ಅವಮಾನ

ಗಂಗಮ್ಮ ಸಾವನಪ್ಪುವ ಮುನ್ನ ಒಂದು ವಾರಗಳ ಮುಂಚೆ ತಾನೇ ಆಕೆಯ ಅತ್ತೆ (ಗಂಡನ ತಾಯಿ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಗಂಗಮ್ಮನ ಮೃತದೇಹವನ್ನು ಸಿಂಧನೂರಿಗೆ ತರಬಾರದು, ಇದರಿಂದ ಇಡೀ ನಗರಕ್ಕೆ ತೊಂದರೆಯಾಗುತ್ತದೆ ಎಂದು ವೆಂಕಟೇಶ್ವರ ನಗರದ ಕೆಲವರು ತಗಾದೆ ತೆಗೆದಿದ್ದಾರೆ.

ಇದರಿಂದ ಮತ್ತಷ್ಟು ಭೀತಿಕ್ಕೊಳಗಾದ ಕುಟುಂಬವು ಸಾಸಲುಮರೆ ಎಂಬ ಗ್ರಾಮದಲ್ಲಿ ರಾತ್ರೋರಾತ್ರಿ ದಫನ್ ಮಾಡಿದೆ. ಕುಟುಂಬದ ಕಡೆ ಯಾರೂ ಸಹ ತಿರುಗಿ ನೋಡಿಲ್ಲ. ಬಡವರ ಸಾವಿಗೆ ಅಳುವವರು ಯಾರು ಎಂಬಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾಲುತ್ತಿಲ್ಲ ಸಹಾಯ

ಮೋದಿ ಸರ್ಕಾರವೇನೋ ಲಾಕ್‌ಡೌನ್‌ ಘೋಷಿಸಿ ಮಧ್ಯಮ ವರ್ಗದ ಜನರಿಗೆ ಬೇಸರವಾಗದಿರಲೆಂದು ಟಿವಿಯಲ್ಲಿ ರಾಮಾಯಣ, ಮಹಾಭಾರತ ಪ್ರದರ್ಶನ ಮಾಡುತ್ತಿದೆ. ಇನ್ನೂ ಮುಂದೆ ಹೋಗಿ ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ವಾರಕ್ಕೊಂದು ಕರೆ ನೀಡಲಾಗುತ್ತಿದೆ. ಆದರೆ ದೇಶದ ಅರ್ಧ ಸಂಖ್ಯೆಯಷ್ಟಿರುವ ಬಡವರು ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ, ಅವರಿಗೆ ಊಟ ವಸತಿ ಸಿಗುತ್ತಿದೆಯೇ ಎಂದು ಯೋಚಿಸುವ ಗೋಜಿಗೆ ಸರ್ಕಾರ ಹೋಗಿಲ್ಲ. ಚಿಲ್ಲರೆ ಪ್ಯಾಕೇಜ್ ಘೋಷಿಸಿ ಕೇಂದ್ರ ಸರ್ಕಾರ ಕೈತೊಳೆದುಕೊಂಡರೆ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟ ಕೊಡಲಾರದಷ್ಟು ಬೊಕ್ಕಸದಲ್ಲಿ ಹಣವಿಲ್ಲದೇ ಒದ್ದಾಡುತ್ತಾ ದಾನಿಗಳತ್ತ ಮುಖ ಮಾಡಿದೆ.

ಅಂದ ಮಾತ್ರಕ್ಕೆ ಪ್ರಜ್ಞಾವಂತರು, ಮಾನವೀಯ ಕಾಳಜಿಯುಳ್ಳವರು ಕೈಕಟ್ಟಿ ಕುಳಿತಿದ್ದಾರೆ ಅಂತಲ್ಲ. ದೇಶಾದ್ಯಂತ ಲಕ್ಷಾಂತರ ಮಂದಿ ಪ್ರಾಣದ ಹಂಗು ತೊರೆದು ಬಡವರಿಗೆ ತುತ್ತು ಊಟ ಕೊಡಲು ಶ್ರಮಿಸುತ್ತಿದ್ದಾರೆ. ದಿನಕ್ಕೆ ಲಕ್ಷಾಂತರ ಖರ್ಚು ಮಾಡಿ ಊಟ ಬೇಯಿಸಿ ಅಗತ್ಯವಿದ್ದವರಿಗೆ ತಲುಪಿಸುವ ಮಾದರಿ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಮುಸ್ಲಿಂ ಧರ್ಮಿಯರು ಸಹಾಯಹಸ್ತ ಕೆಲಸದಲ್ಲಿ ನಿರತರಾಗಿದ್ದಾರೆ ಎಂಬುದನ್ನು ಒತ್ತಿಯೇ ಹೇಳಬೇಕಾಗಿದೆ.

ಆದರೂ ಸಾಲುತ್ತಿಲ್ಲ. ಹಸಿದ ಎಲ್ಲರ ಹೊಟ್ಟೆ ಹೊರೆಯಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ಭಾರತ ಬೃಹತ್ ರಾಷ್ಟ್ರ. ಇಲ್ಲಿನ ಎಲ್ಲರ ಹೊಟ್ಟೆ ತುಂಬಿಸಬೇಕಾದರೆ ಸರ್ಕಾರವೇ ಮುಂದೆ ನಿಂತು ಸಾವಿರಾರು ಕೋಟಿ ಖರ್ಚಾದರೂ ಸರಿಯೇ ಬಡವರ ಜೀವ ಮುಖ್ಯ ಅನ್ನುವ ದಿಟ್ಟತನ ಪ್ರದರ್ಶಿಸಬೇಕು. ಹಸಿವಿನಿಂದ ಸಾಯದಂತೆ ಕಾಯುವುದೇ ತನ್ನ ಪರಮ ಗುರಿಯಾಗಿ ತೆಗೆದುಕೊಳ್ಳಬೇಕಿತ್ತು. ಆದರೆ ಅದು ಆಗುತ್ತಿಲ್ಲ. ಆದ್ದರಿಂದಲೇ ಗಂಗಮ್ಮನಂತಹ ಅದೆಷ್ಟು ಜನ ಅನಾಥ ಶವವಾಗುತ್ತಿದ್ದಾರೋ. ಅವೆಲ್ಲವೂ ವರದಿಯಾಗುತ್ತಿಲ್ಲವಷ್ಟೇ.
ಏಕೆಂದರೆ, ಗಡ್ಡ ಬಿಟ್ಟು ಟೊಪ್ಪಿ ತೊಟ್ಟ ಮುಸ್ಲಿಮರು ಯಾವ್ಯಾವುದೋ ಕಾಲದ ವಿಡಿಯೋಗಳನ್ನೆಲ್ಲಾ ಹುಡುಕುವುದರಲ್ಲಿ ಐಟಿ ಸೆಲ್‌ಗಳು ಬ್ಯುಸಿಯಾಗಿದ್ದರೆ, ಎಲ್ಲವನ್ನೂ ಸೆನ್ಸೇಷನ್ ಮಾಡಲು ಟಿಆರ್‌ಪಿ ಟಿವಿಗಳು ನಿರತವಾಗಿವೆ.

ಗಂಗಮ್ಮನ ಸಾವಿಗೆ ನೂರಾರು ಜನ ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮಿಡಿದಿದ್ದಾರೆ. ಕೊಲೆಗಾರರು ನಾವೇ ಎನ್ನುವಷ್ಟರ ಮಟ್ಟಿಗೆ ತಪ್ಪನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರೆಲ್ಲರೂ ತಮ್ಮ ಕೈಲಾದಷ್ಟು ಜನರಿಗೆ ಸಹಾಯ ಮಾಡಿದವರೆ. ಆದರೆ ಯಾರಿಗೂ ಒಂದು ಪೈಸೆ ಸಹಾಯ ಮಾಡದ ಕೆಲವು ಧರ್ಮಾಂಧರು ಇಂದಿಗೂ ಮುಸ್ಲಿಮರಿಂದಲೇ ಕೊರೊನಾ ಹರಡಿದೆ, ಜಿಹಾದಿ ವೈರಸ್ ಎನ್ನುವ ಸುಳ್ಳು ಸುದ್ದಿ ಹರಡಲು ಮುಂದಾಗಿದ್ದಾರೆ. ಮುಖ್ಯವಾಹಿನಿ ಮಾಧ್ಯಮಗಳು ಇದಕ್ಕೆ ಕುಮ್ಮಕ್ಕು ಕೊಡುತ್ತಿದ್ದು ಇಡೀ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಲು ಕೊರೊನಾವನ್ನು ಬಳಸಿಕೊಳ್ಳುತ್ತಿದ್ದಾರೆ. ನೆನಪಿಸಿಕೊಳ್ಳಿ ಇದುವರೆಗೂ ಯಾವ ಟಿವಿ ಚಾನೆಲ್‌ನವರೂ ಸಹ ಕೊರೊನಾ ವಿರುದ್ಧದ ಹೋರಾಟಕ್ಕೆ ಒಂದು ರೂಪಾಯಿ ಕೂಡ ನೆರವು ನೀಡಿಲ್ಲ. ಬದಲಿಗೆ ದ್ವೇಷದ ವಿಷ ಬಿತ್ತುತ್ತಾ ಅಮಾಯಕ ಜನರ ಸಾವನ್ನು ಸಂಭ್ರಮಿಸುತ್ತಿದ್ದಾರೆ. ಈ ನಾಡಿನಲ್ಲಾದ ಒಂದು ಸಾವಿಗೆ ಸಂಬಂಧವೇ ಇಲ್ಲದ ನೂರಾರು ಆತ್ಮಸಾಕ್ಷಿಯುಳ್ಳ ಮನಸ್ಸುಗಳು ಇದಕ್ಕೆ ನಾನು ಹೊಣೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಆದರೆ ದಿನವೀಡಿ ಇನ್ನೊಬ್ಬರ ಮೇಲೆ ದ್ವೇಷ ಕಾರುವ ಧರ್ಮವೀರರು ಮತ್ತು ಮಾಧ್ಯಮಗಳಿಗೆ ಈ ಸಾವು ಏನು ಅನ್ನಿಸುತ್ತಿಲ್ಲ ಏಕೆ?

ಗಂಗಮ್ಮನ ಸಾವನ್ನು ಯಾವ ಮುಸ್ಲಿಮರ ತಲೆಗೂ ಕಟ್ಟಲು ಸಾಧ್ಯವಿಲ್ಲವಾದ್ದರಿಂದ ಅದು ಸುದ್ದಿಯಾಗಿಲ್ಲ ಎಂಬುದನ್ನು ಮರೆಯದಿರೋಣ. ನಾವೆಂತಹ ದೇಶದಲ್ಲಿ ಬದುಕುತ್ತಿದ್ದೇವೆ? ಮಾನವೀಯತೆ ಇಲ್ಲದ ದೇಶ ಉಳಿದೀತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...