Homeಕರ್ನಾಟಕಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?

ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?

ಈ ನಾಡಿನಲ್ಲಾದ ಒಂದು ಸಾವಿಗೆ ಸಂಬಂಧವೇ ಇಲ್ಲದ ನೂರಾರು ಆತ್ಮಸಾಕ್ಷಿಯುಳ್ಳ ಮನಸ್ಸುಗಳು ಇದಕ್ಕೆ ನಾನು ಹೊಣೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಆದರೆ ದಿನವೀಡಿ ಇನ್ನೊಬ್ಬರ ಮೇಲೆ ದ್ವೇಷ ಕಾರುವ ಧರ್ಮವೀರರು ಮತ್ತು ಮಾಧ್ಯಮಗಳಿಗೆ ಈ ಸಾವು ಏನು ಅನ್ನಿಸುತ್ತಿಲ್ಲ ಏಕೆ? 

- Advertisement -
- Advertisement -

ಏಪ್ರಿಲ್ 5ರ ರಾತ್ರಿ 9ಗಂಟೆಗೆ ದೇಶದ ಬಹುತೇಕರು ದೇಶದ ಪ್ರಧಾನಿಗಳ ಕರೆಗೆ ಓಗೊಟ್ಟು 9 ನಿಮಿಷಗಳ ಕಾಲ ದೀಪ ಹಚ್ಚಿದರು. ಇನ್ನು ಕೆಲವರು ಪಟಾಕಿ ಹೊಡೆದು ಹುಚ್ಚೆದ್ದು ಕುಣಿದರು. ಅದೇ ಸಂದರ್ಭದಲ್ಲಿ ಅನ್ನ ಆಹಾರವಿಲ್ಲದೇ, ಮನೆ ತಲುಪುವ ಉದ್ದೇಶದಿಂದ ಮೂರು ದಿನ ನಡೆದ ಕಾರಣಕ್ಕೆ ಬಳಲಿದ್ದ ಗಂಗಮ್ಮ ಎಂಬ ಅಮಾಯಕ ಮಹಿಳೆ ತನ್ನ ಸಾವಿನ ಕ್ಷಣಗಳನ್ನು ಎಣಿಸುತ್ತಾ ಬಳ್ಳಾರಿಯ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದಳು.

ಪೂರ್ವ ಸಿದ್ದತೆ ಮತ್ತು ಬಡವರ ಸ್ಥಿತಿಗತಿ ಏನಾಗಬಹುದೆಂದು ಯೋಚಿಸದೇ ಘೋಷಿಸಿದ ಲಾಕ್‌ಡೌನ್‌ನಿಂದ 30ಕ್ಕೂ ಹೆಚ್ಚು ಜನರು ಜೀವತೆತ್ತಿದ್ದಾರೆ. ಹಸಿವಿನಿಂದ ಸತ್ತವರ ಲೆಕ್ಕ ಸಿಕ್ಕಿಲ್ಲ ಮತ್ತು ಸಿಗುವುದೂ ಇಲ್ಲ. ಈ ನಡುವೆ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸಿಂಧನೂರಿನ 29 ವರ್ಷದ ಗಂಗಮ್ಮ ಎಂಬ ಮಹಿಳೆ ತನ್ನೂರಿಗೆ ತೆರಳಲು ನಡೆದು ನಡೆದು ಸುಸ್ತಾಗಿ, ಅನ್ನ ನೀರಿಲ್ಲದೆ ಸೋಮವಾರ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಪತ್ರಿಕೆಗಳಲ್ಲಿ ವರದಿಯಾಗಿದೆ.

ಬೆಂಗಳೂರಿನ ಗ್ಲೋಬಲ್ ವಿಲೇಜ್ ಎಂಬ ಐಟಿ ಕಂಪನಿಯು ಪ್ರಪಂಚದಲ್ಲಿಯೇ ಫೇಮಸ್. ಆದರೆ ಅದೇ ಅಪಾರ್ಟ್ಮೆಂಟ್ ನಿರ್ಮಾಣದಲ್ಲಿ ತೊಡಗಿಸಿಕೊಂಡ ಕೂಲಿ ಕಾರ್ಮಿಕರ ಬಗ್ಗೆ ಯಾರೂ ಕಾಳಜಿ ವಹಿಸುವುದಿಲ್ಲ. ಅಂತಹ ನತದೃಷ್ಟರಲ್ಲಿ ಗಂಗಮ್ಮಳು ಕೂಡ ಒಬ್ಬಳು. ಅವಳ ಸಾವಿನ ನಂತರದ ಅವರ ಮನೆ ಪರಿಸ್ಥಿತಿಯನ್ನು ಗಮನಿಸಿದರೆ ನಾವೆಲ್ಲರೂ ನಾಗರಿಕರು ಎನಿಸಿಕೊಳ್ಳಲು ಸಹ ನಾಚಿಕೆಯಾಗುತ್ತದೆ.

ಗಂಗಮ್ಮಳ ಗಂಡ ಕುಡಿತದ ದಾಸನಾಗಿದ್ದನು. ಈತನ ಕಿರುಕುಳದಿಂದ ರೋಸಿಹೋಗಿದ್ದ ಗಂಗಮ್ಮ ಒಮ್ಮೆ ಮಲೇರಿಯಾ ರೋಗಕ್ಕೆ ತುತ್ತಾದಳು. ಇನ್ನು ಅಲ್ಲಿರುವುದು ಅಸಾಧ್ಯ ಎನಿಸಿದಾಗ ಉಳಿದೊಂದು ದಾರಿಯಂತೆ ಬೆಂಗಳೂರಿಗೆ ಗುಳೆ ಹೊರಟಳು.

ಕಟ್ಟಡ ನಿರ್ಮಾಣದಲ್ಲಿ ದುಡಿದು ದುಡಿದು ಬಸವಳಿದಿದ್ದ ಆಕೆ ಇಲ್ಲಿ ಒಂದಷ್ಟು ನೆಮ್ಮದಿಯನ್ನಾದರೂ ಕಂಡುಕೊಂಡಿದ್ದಳು. ಅಷ್ಟರಲ್ಲಿ ಅಪ್ಪಳಿಸಿದ್ದೆ 21 ದಿನಗಳ ಕೊರೊನಾ ಲಾಕ್‌ಡೌನ್. ಎಷ್ಟು ದಿನ ಕಾದರೂ ಕೆಲಸ ಸಿಗದಾಗ ಮತ್ತೆ ತನ್ನೂರು ಸಿಂಧನೂರಿಗೆ ಹೊರಟು ನಿಂತಿದ್ದಾಳೆ. ಕೈಯಲ್ಲಿ ದುಡ್ಡಿಲ್ಲ, ಹೊಟ್ಟೆಗೆ ಆಹಾರವಿಲ್ಲ. ಊರು ತಲುಪಿದರೆ ಏನಾದರೂ ಸಿಗಬಹುದೆಂಬ ಆಸೆಯೊತ್ತು ಹೊರಟ ಗಂಗಮ್ಮ ಕೊನೆಗೆ ಸೇರಿದ್ದು ಮಾತ್ರ ಸ್ಮಶಾನಕ್ಕೆ.

ಟ್ರಾಕ್ಟರ್‌ನಲ್ಲಿ ಒಂದಷ್ಟು ಜೊತೆಗಾರರೊಂದಿಗೆ ಗಂಗಮ್ಮ ಹೊರಟಿದ್ದಾಗ ತುಮಕೂರಿನಲ್ಲಿ ಪೊಲೀಸರು ತಡೆದಿದ್ದಾರೆ. ಅಲ್ಲಿಂದ ಕಾಲ್ನಡಿಗೆ ಆರಂಭಿಸಿದ ಆಕೆಗೆ ಆಹಾರ ನೀರು ದಕ್ಕಿಲ್ಲ. ಮೊದಲೇ ಅನಾರೋಗ್ಯವಿದ್ದ ಆಕೆ ಛಲಬಿಡದೇ ನಡೆದಿದ್ದಾಳೆ. ನಂತರ ಟ್ರಾಕ್ಟರ್ ಬಂದು ಬಳ್ಳಾರಿವರೆಗೂ ತಲುಪಿಸಿದೆ. ಅಷ್ಟರಲ್ಲಿ ಬಸವಳಿದಿದ್ದ ಆಕೆಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನ ಅಲ್ಲಿಯೂ ನರಳಿದ ಆಕೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾಳೆ.

ಸತ್ತ ನಂತರವೂ ಬಿಡದ ಅವಮಾನ

ಗಂಗಮ್ಮ ಸಾವನಪ್ಪುವ ಮುನ್ನ ಒಂದು ವಾರಗಳ ಮುಂಚೆ ತಾನೇ ಆಕೆಯ ಅತ್ತೆ (ಗಂಡನ ತಾಯಿ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಗಂಗಮ್ಮನ ಮೃತದೇಹವನ್ನು ಸಿಂಧನೂರಿಗೆ ತರಬಾರದು, ಇದರಿಂದ ಇಡೀ ನಗರಕ್ಕೆ ತೊಂದರೆಯಾಗುತ್ತದೆ ಎಂದು ವೆಂಕಟೇಶ್ವರ ನಗರದ ಕೆಲವರು ತಗಾದೆ ತೆಗೆದಿದ್ದಾರೆ.

ಇದರಿಂದ ಮತ್ತಷ್ಟು ಭೀತಿಕ್ಕೊಳಗಾದ ಕುಟುಂಬವು ಸಾಸಲುಮರೆ ಎಂಬ ಗ್ರಾಮದಲ್ಲಿ ರಾತ್ರೋರಾತ್ರಿ ದಫನ್ ಮಾಡಿದೆ. ಕುಟುಂಬದ ಕಡೆ ಯಾರೂ ಸಹ ತಿರುಗಿ ನೋಡಿಲ್ಲ. ಬಡವರ ಸಾವಿಗೆ ಅಳುವವರು ಯಾರು ಎಂಬಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾಲುತ್ತಿಲ್ಲ ಸಹಾಯ

ಮೋದಿ ಸರ್ಕಾರವೇನೋ ಲಾಕ್‌ಡೌನ್‌ ಘೋಷಿಸಿ ಮಧ್ಯಮ ವರ್ಗದ ಜನರಿಗೆ ಬೇಸರವಾಗದಿರಲೆಂದು ಟಿವಿಯಲ್ಲಿ ರಾಮಾಯಣ, ಮಹಾಭಾರತ ಪ್ರದರ್ಶನ ಮಾಡುತ್ತಿದೆ. ಇನ್ನೂ ಮುಂದೆ ಹೋಗಿ ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ವಾರಕ್ಕೊಂದು ಕರೆ ನೀಡಲಾಗುತ್ತಿದೆ. ಆದರೆ ದೇಶದ ಅರ್ಧ ಸಂಖ್ಯೆಯಷ್ಟಿರುವ ಬಡವರು ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ, ಅವರಿಗೆ ಊಟ ವಸತಿ ಸಿಗುತ್ತಿದೆಯೇ ಎಂದು ಯೋಚಿಸುವ ಗೋಜಿಗೆ ಸರ್ಕಾರ ಹೋಗಿಲ್ಲ. ಚಿಲ್ಲರೆ ಪ್ಯಾಕೇಜ್ ಘೋಷಿಸಿ ಕೇಂದ್ರ ಸರ್ಕಾರ ಕೈತೊಳೆದುಕೊಂಡರೆ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟ ಕೊಡಲಾರದಷ್ಟು ಬೊಕ್ಕಸದಲ್ಲಿ ಹಣವಿಲ್ಲದೇ ಒದ್ದಾಡುತ್ತಾ ದಾನಿಗಳತ್ತ ಮುಖ ಮಾಡಿದೆ.

ಅಂದ ಮಾತ್ರಕ್ಕೆ ಪ್ರಜ್ಞಾವಂತರು, ಮಾನವೀಯ ಕಾಳಜಿಯುಳ್ಳವರು ಕೈಕಟ್ಟಿ ಕುಳಿತಿದ್ದಾರೆ ಅಂತಲ್ಲ. ದೇಶಾದ್ಯಂತ ಲಕ್ಷಾಂತರ ಮಂದಿ ಪ್ರಾಣದ ಹಂಗು ತೊರೆದು ಬಡವರಿಗೆ ತುತ್ತು ಊಟ ಕೊಡಲು ಶ್ರಮಿಸುತ್ತಿದ್ದಾರೆ. ದಿನಕ್ಕೆ ಲಕ್ಷಾಂತರ ಖರ್ಚು ಮಾಡಿ ಊಟ ಬೇಯಿಸಿ ಅಗತ್ಯವಿದ್ದವರಿಗೆ ತಲುಪಿಸುವ ಮಾದರಿ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಮುಸ್ಲಿಂ ಧರ್ಮಿಯರು ಸಹಾಯಹಸ್ತ ಕೆಲಸದಲ್ಲಿ ನಿರತರಾಗಿದ್ದಾರೆ ಎಂಬುದನ್ನು ಒತ್ತಿಯೇ ಹೇಳಬೇಕಾಗಿದೆ.

ಆದರೂ ಸಾಲುತ್ತಿಲ್ಲ. ಹಸಿದ ಎಲ್ಲರ ಹೊಟ್ಟೆ ಹೊರೆಯಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ಭಾರತ ಬೃಹತ್ ರಾಷ್ಟ್ರ. ಇಲ್ಲಿನ ಎಲ್ಲರ ಹೊಟ್ಟೆ ತುಂಬಿಸಬೇಕಾದರೆ ಸರ್ಕಾರವೇ ಮುಂದೆ ನಿಂತು ಸಾವಿರಾರು ಕೋಟಿ ಖರ್ಚಾದರೂ ಸರಿಯೇ ಬಡವರ ಜೀವ ಮುಖ್ಯ ಅನ್ನುವ ದಿಟ್ಟತನ ಪ್ರದರ್ಶಿಸಬೇಕು. ಹಸಿವಿನಿಂದ ಸಾಯದಂತೆ ಕಾಯುವುದೇ ತನ್ನ ಪರಮ ಗುರಿಯಾಗಿ ತೆಗೆದುಕೊಳ್ಳಬೇಕಿತ್ತು. ಆದರೆ ಅದು ಆಗುತ್ತಿಲ್ಲ. ಆದ್ದರಿಂದಲೇ ಗಂಗಮ್ಮನಂತಹ ಅದೆಷ್ಟು ಜನ ಅನಾಥ ಶವವಾಗುತ್ತಿದ್ದಾರೋ. ಅವೆಲ್ಲವೂ ವರದಿಯಾಗುತ್ತಿಲ್ಲವಷ್ಟೇ.
ಏಕೆಂದರೆ, ಗಡ್ಡ ಬಿಟ್ಟು ಟೊಪ್ಪಿ ತೊಟ್ಟ ಮುಸ್ಲಿಮರು ಯಾವ್ಯಾವುದೋ ಕಾಲದ ವಿಡಿಯೋಗಳನ್ನೆಲ್ಲಾ ಹುಡುಕುವುದರಲ್ಲಿ ಐಟಿ ಸೆಲ್‌ಗಳು ಬ್ಯುಸಿಯಾಗಿದ್ದರೆ, ಎಲ್ಲವನ್ನೂ ಸೆನ್ಸೇಷನ್ ಮಾಡಲು ಟಿಆರ್‌ಪಿ ಟಿವಿಗಳು ನಿರತವಾಗಿವೆ.

ಗಂಗಮ್ಮನ ಸಾವಿಗೆ ನೂರಾರು ಜನ ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮಿಡಿದಿದ್ದಾರೆ. ಕೊಲೆಗಾರರು ನಾವೇ ಎನ್ನುವಷ್ಟರ ಮಟ್ಟಿಗೆ ತಪ್ಪನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರೆಲ್ಲರೂ ತಮ್ಮ ಕೈಲಾದಷ್ಟು ಜನರಿಗೆ ಸಹಾಯ ಮಾಡಿದವರೆ. ಆದರೆ ಯಾರಿಗೂ ಒಂದು ಪೈಸೆ ಸಹಾಯ ಮಾಡದ ಕೆಲವು ಧರ್ಮಾಂಧರು ಇಂದಿಗೂ ಮುಸ್ಲಿಮರಿಂದಲೇ ಕೊರೊನಾ ಹರಡಿದೆ, ಜಿಹಾದಿ ವೈರಸ್ ಎನ್ನುವ ಸುಳ್ಳು ಸುದ್ದಿ ಹರಡಲು ಮುಂದಾಗಿದ್ದಾರೆ. ಮುಖ್ಯವಾಹಿನಿ ಮಾಧ್ಯಮಗಳು ಇದಕ್ಕೆ ಕುಮ್ಮಕ್ಕು ಕೊಡುತ್ತಿದ್ದು ಇಡೀ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಲು ಕೊರೊನಾವನ್ನು ಬಳಸಿಕೊಳ್ಳುತ್ತಿದ್ದಾರೆ. ನೆನಪಿಸಿಕೊಳ್ಳಿ ಇದುವರೆಗೂ ಯಾವ ಟಿವಿ ಚಾನೆಲ್‌ನವರೂ ಸಹ ಕೊರೊನಾ ವಿರುದ್ಧದ ಹೋರಾಟಕ್ಕೆ ಒಂದು ರೂಪಾಯಿ ಕೂಡ ನೆರವು ನೀಡಿಲ್ಲ. ಬದಲಿಗೆ ದ್ವೇಷದ ವಿಷ ಬಿತ್ತುತ್ತಾ ಅಮಾಯಕ ಜನರ ಸಾವನ್ನು ಸಂಭ್ರಮಿಸುತ್ತಿದ್ದಾರೆ. ಈ ನಾಡಿನಲ್ಲಾದ ಒಂದು ಸಾವಿಗೆ ಸಂಬಂಧವೇ ಇಲ್ಲದ ನೂರಾರು ಆತ್ಮಸಾಕ್ಷಿಯುಳ್ಳ ಮನಸ್ಸುಗಳು ಇದಕ್ಕೆ ನಾನು ಹೊಣೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಆದರೆ ದಿನವೀಡಿ ಇನ್ನೊಬ್ಬರ ಮೇಲೆ ದ್ವೇಷ ಕಾರುವ ಧರ್ಮವೀರರು ಮತ್ತು ಮಾಧ್ಯಮಗಳಿಗೆ ಈ ಸಾವು ಏನು ಅನ್ನಿಸುತ್ತಿಲ್ಲ ಏಕೆ?

ಗಂಗಮ್ಮನ ಸಾವನ್ನು ಯಾವ ಮುಸ್ಲಿಮರ ತಲೆಗೂ ಕಟ್ಟಲು ಸಾಧ್ಯವಿಲ್ಲವಾದ್ದರಿಂದ ಅದು ಸುದ್ದಿಯಾಗಿಲ್ಲ ಎಂಬುದನ್ನು ಮರೆಯದಿರೋಣ. ನಾವೆಂತಹ ದೇಶದಲ್ಲಿ ಬದುಕುತ್ತಿದ್ದೇವೆ? ಮಾನವೀಯತೆ ಇಲ್ಲದ ದೇಶ ಉಳಿದೀತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...