Homeಕರ್ನಾಟಕಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?

ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?

ಈ ನಾಡಿನಲ್ಲಾದ ಒಂದು ಸಾವಿಗೆ ಸಂಬಂಧವೇ ಇಲ್ಲದ ನೂರಾರು ಆತ್ಮಸಾಕ್ಷಿಯುಳ್ಳ ಮನಸ್ಸುಗಳು ಇದಕ್ಕೆ ನಾನು ಹೊಣೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಆದರೆ ದಿನವೀಡಿ ಇನ್ನೊಬ್ಬರ ಮೇಲೆ ದ್ವೇಷ ಕಾರುವ ಧರ್ಮವೀರರು ಮತ್ತು ಮಾಧ್ಯಮಗಳಿಗೆ ಈ ಸಾವು ಏನು ಅನ್ನಿಸುತ್ತಿಲ್ಲ ಏಕೆ? 

- Advertisement -
- Advertisement -

ಏಪ್ರಿಲ್ 5ರ ರಾತ್ರಿ 9ಗಂಟೆಗೆ ದೇಶದ ಬಹುತೇಕರು ದೇಶದ ಪ್ರಧಾನಿಗಳ ಕರೆಗೆ ಓಗೊಟ್ಟು 9 ನಿಮಿಷಗಳ ಕಾಲ ದೀಪ ಹಚ್ಚಿದರು. ಇನ್ನು ಕೆಲವರು ಪಟಾಕಿ ಹೊಡೆದು ಹುಚ್ಚೆದ್ದು ಕುಣಿದರು. ಅದೇ ಸಂದರ್ಭದಲ್ಲಿ ಅನ್ನ ಆಹಾರವಿಲ್ಲದೇ, ಮನೆ ತಲುಪುವ ಉದ್ದೇಶದಿಂದ ಮೂರು ದಿನ ನಡೆದ ಕಾರಣಕ್ಕೆ ಬಳಲಿದ್ದ ಗಂಗಮ್ಮ ಎಂಬ ಅಮಾಯಕ ಮಹಿಳೆ ತನ್ನ ಸಾವಿನ ಕ್ಷಣಗಳನ್ನು ಎಣಿಸುತ್ತಾ ಬಳ್ಳಾರಿಯ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದಳು.

ಪೂರ್ವ ಸಿದ್ದತೆ ಮತ್ತು ಬಡವರ ಸ್ಥಿತಿಗತಿ ಏನಾಗಬಹುದೆಂದು ಯೋಚಿಸದೇ ಘೋಷಿಸಿದ ಲಾಕ್‌ಡೌನ್‌ನಿಂದ 30ಕ್ಕೂ ಹೆಚ್ಚು ಜನರು ಜೀವತೆತ್ತಿದ್ದಾರೆ. ಹಸಿವಿನಿಂದ ಸತ್ತವರ ಲೆಕ್ಕ ಸಿಕ್ಕಿಲ್ಲ ಮತ್ತು ಸಿಗುವುದೂ ಇಲ್ಲ. ಈ ನಡುವೆ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸಿಂಧನೂರಿನ 29 ವರ್ಷದ ಗಂಗಮ್ಮ ಎಂಬ ಮಹಿಳೆ ತನ್ನೂರಿಗೆ ತೆರಳಲು ನಡೆದು ನಡೆದು ಸುಸ್ತಾಗಿ, ಅನ್ನ ನೀರಿಲ್ಲದೆ ಸೋಮವಾರ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಪತ್ರಿಕೆಗಳಲ್ಲಿ ವರದಿಯಾಗಿದೆ.

ಬೆಂಗಳೂರಿನ ಗ್ಲೋಬಲ್ ವಿಲೇಜ್ ಎಂಬ ಐಟಿ ಕಂಪನಿಯು ಪ್ರಪಂಚದಲ್ಲಿಯೇ ಫೇಮಸ್. ಆದರೆ ಅದೇ ಅಪಾರ್ಟ್ಮೆಂಟ್ ನಿರ್ಮಾಣದಲ್ಲಿ ತೊಡಗಿಸಿಕೊಂಡ ಕೂಲಿ ಕಾರ್ಮಿಕರ ಬಗ್ಗೆ ಯಾರೂ ಕಾಳಜಿ ವಹಿಸುವುದಿಲ್ಲ. ಅಂತಹ ನತದೃಷ್ಟರಲ್ಲಿ ಗಂಗಮ್ಮಳು ಕೂಡ ಒಬ್ಬಳು. ಅವಳ ಸಾವಿನ ನಂತರದ ಅವರ ಮನೆ ಪರಿಸ್ಥಿತಿಯನ್ನು ಗಮನಿಸಿದರೆ ನಾವೆಲ್ಲರೂ ನಾಗರಿಕರು ಎನಿಸಿಕೊಳ್ಳಲು ಸಹ ನಾಚಿಕೆಯಾಗುತ್ತದೆ.

ಗಂಗಮ್ಮಳ ಗಂಡ ಕುಡಿತದ ದಾಸನಾಗಿದ್ದನು. ಈತನ ಕಿರುಕುಳದಿಂದ ರೋಸಿಹೋಗಿದ್ದ ಗಂಗಮ್ಮ ಒಮ್ಮೆ ಮಲೇರಿಯಾ ರೋಗಕ್ಕೆ ತುತ್ತಾದಳು. ಇನ್ನು ಅಲ್ಲಿರುವುದು ಅಸಾಧ್ಯ ಎನಿಸಿದಾಗ ಉಳಿದೊಂದು ದಾರಿಯಂತೆ ಬೆಂಗಳೂರಿಗೆ ಗುಳೆ ಹೊರಟಳು.

ಕಟ್ಟಡ ನಿರ್ಮಾಣದಲ್ಲಿ ದುಡಿದು ದುಡಿದು ಬಸವಳಿದಿದ್ದ ಆಕೆ ಇಲ್ಲಿ ಒಂದಷ್ಟು ನೆಮ್ಮದಿಯನ್ನಾದರೂ ಕಂಡುಕೊಂಡಿದ್ದಳು. ಅಷ್ಟರಲ್ಲಿ ಅಪ್ಪಳಿಸಿದ್ದೆ 21 ದಿನಗಳ ಕೊರೊನಾ ಲಾಕ್‌ಡೌನ್. ಎಷ್ಟು ದಿನ ಕಾದರೂ ಕೆಲಸ ಸಿಗದಾಗ ಮತ್ತೆ ತನ್ನೂರು ಸಿಂಧನೂರಿಗೆ ಹೊರಟು ನಿಂತಿದ್ದಾಳೆ. ಕೈಯಲ್ಲಿ ದುಡ್ಡಿಲ್ಲ, ಹೊಟ್ಟೆಗೆ ಆಹಾರವಿಲ್ಲ. ಊರು ತಲುಪಿದರೆ ಏನಾದರೂ ಸಿಗಬಹುದೆಂಬ ಆಸೆಯೊತ್ತು ಹೊರಟ ಗಂಗಮ್ಮ ಕೊನೆಗೆ ಸೇರಿದ್ದು ಮಾತ್ರ ಸ್ಮಶಾನಕ್ಕೆ.

ಟ್ರಾಕ್ಟರ್‌ನಲ್ಲಿ ಒಂದಷ್ಟು ಜೊತೆಗಾರರೊಂದಿಗೆ ಗಂಗಮ್ಮ ಹೊರಟಿದ್ದಾಗ ತುಮಕೂರಿನಲ್ಲಿ ಪೊಲೀಸರು ತಡೆದಿದ್ದಾರೆ. ಅಲ್ಲಿಂದ ಕಾಲ್ನಡಿಗೆ ಆರಂಭಿಸಿದ ಆಕೆಗೆ ಆಹಾರ ನೀರು ದಕ್ಕಿಲ್ಲ. ಮೊದಲೇ ಅನಾರೋಗ್ಯವಿದ್ದ ಆಕೆ ಛಲಬಿಡದೇ ನಡೆದಿದ್ದಾಳೆ. ನಂತರ ಟ್ರಾಕ್ಟರ್ ಬಂದು ಬಳ್ಳಾರಿವರೆಗೂ ತಲುಪಿಸಿದೆ. ಅಷ್ಟರಲ್ಲಿ ಬಸವಳಿದಿದ್ದ ಆಕೆಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನ ಅಲ್ಲಿಯೂ ನರಳಿದ ಆಕೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾಳೆ.

ಸತ್ತ ನಂತರವೂ ಬಿಡದ ಅವಮಾನ

ಗಂಗಮ್ಮ ಸಾವನಪ್ಪುವ ಮುನ್ನ ಒಂದು ವಾರಗಳ ಮುಂಚೆ ತಾನೇ ಆಕೆಯ ಅತ್ತೆ (ಗಂಡನ ತಾಯಿ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಗಂಗಮ್ಮನ ಮೃತದೇಹವನ್ನು ಸಿಂಧನೂರಿಗೆ ತರಬಾರದು, ಇದರಿಂದ ಇಡೀ ನಗರಕ್ಕೆ ತೊಂದರೆಯಾಗುತ್ತದೆ ಎಂದು ವೆಂಕಟೇಶ್ವರ ನಗರದ ಕೆಲವರು ತಗಾದೆ ತೆಗೆದಿದ್ದಾರೆ.

ಇದರಿಂದ ಮತ್ತಷ್ಟು ಭೀತಿಕ್ಕೊಳಗಾದ ಕುಟುಂಬವು ಸಾಸಲುಮರೆ ಎಂಬ ಗ್ರಾಮದಲ್ಲಿ ರಾತ್ರೋರಾತ್ರಿ ದಫನ್ ಮಾಡಿದೆ. ಕುಟುಂಬದ ಕಡೆ ಯಾರೂ ಸಹ ತಿರುಗಿ ನೋಡಿಲ್ಲ. ಬಡವರ ಸಾವಿಗೆ ಅಳುವವರು ಯಾರು ಎಂಬಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾಲುತ್ತಿಲ್ಲ ಸಹಾಯ

ಮೋದಿ ಸರ್ಕಾರವೇನೋ ಲಾಕ್‌ಡೌನ್‌ ಘೋಷಿಸಿ ಮಧ್ಯಮ ವರ್ಗದ ಜನರಿಗೆ ಬೇಸರವಾಗದಿರಲೆಂದು ಟಿವಿಯಲ್ಲಿ ರಾಮಾಯಣ, ಮಹಾಭಾರತ ಪ್ರದರ್ಶನ ಮಾಡುತ್ತಿದೆ. ಇನ್ನೂ ಮುಂದೆ ಹೋಗಿ ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ವಾರಕ್ಕೊಂದು ಕರೆ ನೀಡಲಾಗುತ್ತಿದೆ. ಆದರೆ ದೇಶದ ಅರ್ಧ ಸಂಖ್ಯೆಯಷ್ಟಿರುವ ಬಡವರು ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ, ಅವರಿಗೆ ಊಟ ವಸತಿ ಸಿಗುತ್ತಿದೆಯೇ ಎಂದು ಯೋಚಿಸುವ ಗೋಜಿಗೆ ಸರ್ಕಾರ ಹೋಗಿಲ್ಲ. ಚಿಲ್ಲರೆ ಪ್ಯಾಕೇಜ್ ಘೋಷಿಸಿ ಕೇಂದ್ರ ಸರ್ಕಾರ ಕೈತೊಳೆದುಕೊಂಡರೆ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟ ಕೊಡಲಾರದಷ್ಟು ಬೊಕ್ಕಸದಲ್ಲಿ ಹಣವಿಲ್ಲದೇ ಒದ್ದಾಡುತ್ತಾ ದಾನಿಗಳತ್ತ ಮುಖ ಮಾಡಿದೆ.

ಅಂದ ಮಾತ್ರಕ್ಕೆ ಪ್ರಜ್ಞಾವಂತರು, ಮಾನವೀಯ ಕಾಳಜಿಯುಳ್ಳವರು ಕೈಕಟ್ಟಿ ಕುಳಿತಿದ್ದಾರೆ ಅಂತಲ್ಲ. ದೇಶಾದ್ಯಂತ ಲಕ್ಷಾಂತರ ಮಂದಿ ಪ್ರಾಣದ ಹಂಗು ತೊರೆದು ಬಡವರಿಗೆ ತುತ್ತು ಊಟ ಕೊಡಲು ಶ್ರಮಿಸುತ್ತಿದ್ದಾರೆ. ದಿನಕ್ಕೆ ಲಕ್ಷಾಂತರ ಖರ್ಚು ಮಾಡಿ ಊಟ ಬೇಯಿಸಿ ಅಗತ್ಯವಿದ್ದವರಿಗೆ ತಲುಪಿಸುವ ಮಾದರಿ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಮುಸ್ಲಿಂ ಧರ್ಮಿಯರು ಸಹಾಯಹಸ್ತ ಕೆಲಸದಲ್ಲಿ ನಿರತರಾಗಿದ್ದಾರೆ ಎಂಬುದನ್ನು ಒತ್ತಿಯೇ ಹೇಳಬೇಕಾಗಿದೆ.

ಆದರೂ ಸಾಲುತ್ತಿಲ್ಲ. ಹಸಿದ ಎಲ್ಲರ ಹೊಟ್ಟೆ ಹೊರೆಯಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ಭಾರತ ಬೃಹತ್ ರಾಷ್ಟ್ರ. ಇಲ್ಲಿನ ಎಲ್ಲರ ಹೊಟ್ಟೆ ತುಂಬಿಸಬೇಕಾದರೆ ಸರ್ಕಾರವೇ ಮುಂದೆ ನಿಂತು ಸಾವಿರಾರು ಕೋಟಿ ಖರ್ಚಾದರೂ ಸರಿಯೇ ಬಡವರ ಜೀವ ಮುಖ್ಯ ಅನ್ನುವ ದಿಟ್ಟತನ ಪ್ರದರ್ಶಿಸಬೇಕು. ಹಸಿವಿನಿಂದ ಸಾಯದಂತೆ ಕಾಯುವುದೇ ತನ್ನ ಪರಮ ಗುರಿಯಾಗಿ ತೆಗೆದುಕೊಳ್ಳಬೇಕಿತ್ತು. ಆದರೆ ಅದು ಆಗುತ್ತಿಲ್ಲ. ಆದ್ದರಿಂದಲೇ ಗಂಗಮ್ಮನಂತಹ ಅದೆಷ್ಟು ಜನ ಅನಾಥ ಶವವಾಗುತ್ತಿದ್ದಾರೋ. ಅವೆಲ್ಲವೂ ವರದಿಯಾಗುತ್ತಿಲ್ಲವಷ್ಟೇ.
ಏಕೆಂದರೆ, ಗಡ್ಡ ಬಿಟ್ಟು ಟೊಪ್ಪಿ ತೊಟ್ಟ ಮುಸ್ಲಿಮರು ಯಾವ್ಯಾವುದೋ ಕಾಲದ ವಿಡಿಯೋಗಳನ್ನೆಲ್ಲಾ ಹುಡುಕುವುದರಲ್ಲಿ ಐಟಿ ಸೆಲ್‌ಗಳು ಬ್ಯುಸಿಯಾಗಿದ್ದರೆ, ಎಲ್ಲವನ್ನೂ ಸೆನ್ಸೇಷನ್ ಮಾಡಲು ಟಿಆರ್‌ಪಿ ಟಿವಿಗಳು ನಿರತವಾಗಿವೆ.

ಗಂಗಮ್ಮನ ಸಾವಿಗೆ ನೂರಾರು ಜನ ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮಿಡಿದಿದ್ದಾರೆ. ಕೊಲೆಗಾರರು ನಾವೇ ಎನ್ನುವಷ್ಟರ ಮಟ್ಟಿಗೆ ತಪ್ಪನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರೆಲ್ಲರೂ ತಮ್ಮ ಕೈಲಾದಷ್ಟು ಜನರಿಗೆ ಸಹಾಯ ಮಾಡಿದವರೆ. ಆದರೆ ಯಾರಿಗೂ ಒಂದು ಪೈಸೆ ಸಹಾಯ ಮಾಡದ ಕೆಲವು ಧರ್ಮಾಂಧರು ಇಂದಿಗೂ ಮುಸ್ಲಿಮರಿಂದಲೇ ಕೊರೊನಾ ಹರಡಿದೆ, ಜಿಹಾದಿ ವೈರಸ್ ಎನ್ನುವ ಸುಳ್ಳು ಸುದ್ದಿ ಹರಡಲು ಮುಂದಾಗಿದ್ದಾರೆ. ಮುಖ್ಯವಾಹಿನಿ ಮಾಧ್ಯಮಗಳು ಇದಕ್ಕೆ ಕುಮ್ಮಕ್ಕು ಕೊಡುತ್ತಿದ್ದು ಇಡೀ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಲು ಕೊರೊನಾವನ್ನು ಬಳಸಿಕೊಳ್ಳುತ್ತಿದ್ದಾರೆ. ನೆನಪಿಸಿಕೊಳ್ಳಿ ಇದುವರೆಗೂ ಯಾವ ಟಿವಿ ಚಾನೆಲ್‌ನವರೂ ಸಹ ಕೊರೊನಾ ವಿರುದ್ಧದ ಹೋರಾಟಕ್ಕೆ ಒಂದು ರೂಪಾಯಿ ಕೂಡ ನೆರವು ನೀಡಿಲ್ಲ. ಬದಲಿಗೆ ದ್ವೇಷದ ವಿಷ ಬಿತ್ತುತ್ತಾ ಅಮಾಯಕ ಜನರ ಸಾವನ್ನು ಸಂಭ್ರಮಿಸುತ್ತಿದ್ದಾರೆ. ಈ ನಾಡಿನಲ್ಲಾದ ಒಂದು ಸಾವಿಗೆ ಸಂಬಂಧವೇ ಇಲ್ಲದ ನೂರಾರು ಆತ್ಮಸಾಕ್ಷಿಯುಳ್ಳ ಮನಸ್ಸುಗಳು ಇದಕ್ಕೆ ನಾನು ಹೊಣೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಆದರೆ ದಿನವೀಡಿ ಇನ್ನೊಬ್ಬರ ಮೇಲೆ ದ್ವೇಷ ಕಾರುವ ಧರ್ಮವೀರರು ಮತ್ತು ಮಾಧ್ಯಮಗಳಿಗೆ ಈ ಸಾವು ಏನು ಅನ್ನಿಸುತ್ತಿಲ್ಲ ಏಕೆ?

ಗಂಗಮ್ಮನ ಸಾವನ್ನು ಯಾವ ಮುಸ್ಲಿಮರ ತಲೆಗೂ ಕಟ್ಟಲು ಸಾಧ್ಯವಿಲ್ಲವಾದ್ದರಿಂದ ಅದು ಸುದ್ದಿಯಾಗಿಲ್ಲ ಎಂಬುದನ್ನು ಮರೆಯದಿರೋಣ. ನಾವೆಂತಹ ದೇಶದಲ್ಲಿ ಬದುಕುತ್ತಿದ್ದೇವೆ? ಮಾನವೀಯತೆ ಇಲ್ಲದ ದೇಶ ಉಳಿದೀತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...