Homeಕರ್ನಾಟಕಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?

ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?

ಈ ನಾಡಿನಲ್ಲಾದ ಒಂದು ಸಾವಿಗೆ ಸಂಬಂಧವೇ ಇಲ್ಲದ ನೂರಾರು ಆತ್ಮಸಾಕ್ಷಿಯುಳ್ಳ ಮನಸ್ಸುಗಳು ಇದಕ್ಕೆ ನಾನು ಹೊಣೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಆದರೆ ದಿನವೀಡಿ ಇನ್ನೊಬ್ಬರ ಮೇಲೆ ದ್ವೇಷ ಕಾರುವ ಧರ್ಮವೀರರು ಮತ್ತು ಮಾಧ್ಯಮಗಳಿಗೆ ಈ ಸಾವು ಏನು ಅನ್ನಿಸುತ್ತಿಲ್ಲ ಏಕೆ? 

- Advertisement -
- Advertisement -

ಏಪ್ರಿಲ್ 5ರ ರಾತ್ರಿ 9ಗಂಟೆಗೆ ದೇಶದ ಬಹುತೇಕರು ದೇಶದ ಪ್ರಧಾನಿಗಳ ಕರೆಗೆ ಓಗೊಟ್ಟು 9 ನಿಮಿಷಗಳ ಕಾಲ ದೀಪ ಹಚ್ಚಿದರು. ಇನ್ನು ಕೆಲವರು ಪಟಾಕಿ ಹೊಡೆದು ಹುಚ್ಚೆದ್ದು ಕುಣಿದರು. ಅದೇ ಸಂದರ್ಭದಲ್ಲಿ ಅನ್ನ ಆಹಾರವಿಲ್ಲದೇ, ಮನೆ ತಲುಪುವ ಉದ್ದೇಶದಿಂದ ಮೂರು ದಿನ ನಡೆದ ಕಾರಣಕ್ಕೆ ಬಳಲಿದ್ದ ಗಂಗಮ್ಮ ಎಂಬ ಅಮಾಯಕ ಮಹಿಳೆ ತನ್ನ ಸಾವಿನ ಕ್ಷಣಗಳನ್ನು ಎಣಿಸುತ್ತಾ ಬಳ್ಳಾರಿಯ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದಳು.

ಪೂರ್ವ ಸಿದ್ದತೆ ಮತ್ತು ಬಡವರ ಸ್ಥಿತಿಗತಿ ಏನಾಗಬಹುದೆಂದು ಯೋಚಿಸದೇ ಘೋಷಿಸಿದ ಲಾಕ್‌ಡೌನ್‌ನಿಂದ 30ಕ್ಕೂ ಹೆಚ್ಚು ಜನರು ಜೀವತೆತ್ತಿದ್ದಾರೆ. ಹಸಿವಿನಿಂದ ಸತ್ತವರ ಲೆಕ್ಕ ಸಿಕ್ಕಿಲ್ಲ ಮತ್ತು ಸಿಗುವುದೂ ಇಲ್ಲ. ಈ ನಡುವೆ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸಿಂಧನೂರಿನ 29 ವರ್ಷದ ಗಂಗಮ್ಮ ಎಂಬ ಮಹಿಳೆ ತನ್ನೂರಿಗೆ ತೆರಳಲು ನಡೆದು ನಡೆದು ಸುಸ್ತಾಗಿ, ಅನ್ನ ನೀರಿಲ್ಲದೆ ಸೋಮವಾರ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಪತ್ರಿಕೆಗಳಲ್ಲಿ ವರದಿಯಾಗಿದೆ.

ಬೆಂಗಳೂರಿನ ಗ್ಲೋಬಲ್ ವಿಲೇಜ್ ಎಂಬ ಐಟಿ ಕಂಪನಿಯು ಪ್ರಪಂಚದಲ್ಲಿಯೇ ಫೇಮಸ್. ಆದರೆ ಅದೇ ಅಪಾರ್ಟ್ಮೆಂಟ್ ನಿರ್ಮಾಣದಲ್ಲಿ ತೊಡಗಿಸಿಕೊಂಡ ಕೂಲಿ ಕಾರ್ಮಿಕರ ಬಗ್ಗೆ ಯಾರೂ ಕಾಳಜಿ ವಹಿಸುವುದಿಲ್ಲ. ಅಂತಹ ನತದೃಷ್ಟರಲ್ಲಿ ಗಂಗಮ್ಮಳು ಕೂಡ ಒಬ್ಬಳು. ಅವಳ ಸಾವಿನ ನಂತರದ ಅವರ ಮನೆ ಪರಿಸ್ಥಿತಿಯನ್ನು ಗಮನಿಸಿದರೆ ನಾವೆಲ್ಲರೂ ನಾಗರಿಕರು ಎನಿಸಿಕೊಳ್ಳಲು ಸಹ ನಾಚಿಕೆಯಾಗುತ್ತದೆ.

ಗಂಗಮ್ಮಳ ಗಂಡ ಕುಡಿತದ ದಾಸನಾಗಿದ್ದನು. ಈತನ ಕಿರುಕುಳದಿಂದ ರೋಸಿಹೋಗಿದ್ದ ಗಂಗಮ್ಮ ಒಮ್ಮೆ ಮಲೇರಿಯಾ ರೋಗಕ್ಕೆ ತುತ್ತಾದಳು. ಇನ್ನು ಅಲ್ಲಿರುವುದು ಅಸಾಧ್ಯ ಎನಿಸಿದಾಗ ಉಳಿದೊಂದು ದಾರಿಯಂತೆ ಬೆಂಗಳೂರಿಗೆ ಗುಳೆ ಹೊರಟಳು.

ಕಟ್ಟಡ ನಿರ್ಮಾಣದಲ್ಲಿ ದುಡಿದು ದುಡಿದು ಬಸವಳಿದಿದ್ದ ಆಕೆ ಇಲ್ಲಿ ಒಂದಷ್ಟು ನೆಮ್ಮದಿಯನ್ನಾದರೂ ಕಂಡುಕೊಂಡಿದ್ದಳು. ಅಷ್ಟರಲ್ಲಿ ಅಪ್ಪಳಿಸಿದ್ದೆ 21 ದಿನಗಳ ಕೊರೊನಾ ಲಾಕ್‌ಡೌನ್. ಎಷ್ಟು ದಿನ ಕಾದರೂ ಕೆಲಸ ಸಿಗದಾಗ ಮತ್ತೆ ತನ್ನೂರು ಸಿಂಧನೂರಿಗೆ ಹೊರಟು ನಿಂತಿದ್ದಾಳೆ. ಕೈಯಲ್ಲಿ ದುಡ್ಡಿಲ್ಲ, ಹೊಟ್ಟೆಗೆ ಆಹಾರವಿಲ್ಲ. ಊರು ತಲುಪಿದರೆ ಏನಾದರೂ ಸಿಗಬಹುದೆಂಬ ಆಸೆಯೊತ್ತು ಹೊರಟ ಗಂಗಮ್ಮ ಕೊನೆಗೆ ಸೇರಿದ್ದು ಮಾತ್ರ ಸ್ಮಶಾನಕ್ಕೆ.

ಟ್ರಾಕ್ಟರ್‌ನಲ್ಲಿ ಒಂದಷ್ಟು ಜೊತೆಗಾರರೊಂದಿಗೆ ಗಂಗಮ್ಮ ಹೊರಟಿದ್ದಾಗ ತುಮಕೂರಿನಲ್ಲಿ ಪೊಲೀಸರು ತಡೆದಿದ್ದಾರೆ. ಅಲ್ಲಿಂದ ಕಾಲ್ನಡಿಗೆ ಆರಂಭಿಸಿದ ಆಕೆಗೆ ಆಹಾರ ನೀರು ದಕ್ಕಿಲ್ಲ. ಮೊದಲೇ ಅನಾರೋಗ್ಯವಿದ್ದ ಆಕೆ ಛಲಬಿಡದೇ ನಡೆದಿದ್ದಾಳೆ. ನಂತರ ಟ್ರಾಕ್ಟರ್ ಬಂದು ಬಳ್ಳಾರಿವರೆಗೂ ತಲುಪಿಸಿದೆ. ಅಷ್ಟರಲ್ಲಿ ಬಸವಳಿದಿದ್ದ ಆಕೆಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನ ಅಲ್ಲಿಯೂ ನರಳಿದ ಆಕೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾಳೆ.

ಸತ್ತ ನಂತರವೂ ಬಿಡದ ಅವಮಾನ

ಗಂಗಮ್ಮ ಸಾವನಪ್ಪುವ ಮುನ್ನ ಒಂದು ವಾರಗಳ ಮುಂಚೆ ತಾನೇ ಆಕೆಯ ಅತ್ತೆ (ಗಂಡನ ತಾಯಿ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಗಂಗಮ್ಮನ ಮೃತದೇಹವನ್ನು ಸಿಂಧನೂರಿಗೆ ತರಬಾರದು, ಇದರಿಂದ ಇಡೀ ನಗರಕ್ಕೆ ತೊಂದರೆಯಾಗುತ್ತದೆ ಎಂದು ವೆಂಕಟೇಶ್ವರ ನಗರದ ಕೆಲವರು ತಗಾದೆ ತೆಗೆದಿದ್ದಾರೆ.

ಇದರಿಂದ ಮತ್ತಷ್ಟು ಭೀತಿಕ್ಕೊಳಗಾದ ಕುಟುಂಬವು ಸಾಸಲುಮರೆ ಎಂಬ ಗ್ರಾಮದಲ್ಲಿ ರಾತ್ರೋರಾತ್ರಿ ದಫನ್ ಮಾಡಿದೆ. ಕುಟುಂಬದ ಕಡೆ ಯಾರೂ ಸಹ ತಿರುಗಿ ನೋಡಿಲ್ಲ. ಬಡವರ ಸಾವಿಗೆ ಅಳುವವರು ಯಾರು ಎಂಬಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾಲುತ್ತಿಲ್ಲ ಸಹಾಯ

ಮೋದಿ ಸರ್ಕಾರವೇನೋ ಲಾಕ್‌ಡೌನ್‌ ಘೋಷಿಸಿ ಮಧ್ಯಮ ವರ್ಗದ ಜನರಿಗೆ ಬೇಸರವಾಗದಿರಲೆಂದು ಟಿವಿಯಲ್ಲಿ ರಾಮಾಯಣ, ಮಹಾಭಾರತ ಪ್ರದರ್ಶನ ಮಾಡುತ್ತಿದೆ. ಇನ್ನೂ ಮುಂದೆ ಹೋಗಿ ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ವಾರಕ್ಕೊಂದು ಕರೆ ನೀಡಲಾಗುತ್ತಿದೆ. ಆದರೆ ದೇಶದ ಅರ್ಧ ಸಂಖ್ಯೆಯಷ್ಟಿರುವ ಬಡವರು ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ, ಅವರಿಗೆ ಊಟ ವಸತಿ ಸಿಗುತ್ತಿದೆಯೇ ಎಂದು ಯೋಚಿಸುವ ಗೋಜಿಗೆ ಸರ್ಕಾರ ಹೋಗಿಲ್ಲ. ಚಿಲ್ಲರೆ ಪ್ಯಾಕೇಜ್ ಘೋಷಿಸಿ ಕೇಂದ್ರ ಸರ್ಕಾರ ಕೈತೊಳೆದುಕೊಂಡರೆ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟ ಕೊಡಲಾರದಷ್ಟು ಬೊಕ್ಕಸದಲ್ಲಿ ಹಣವಿಲ್ಲದೇ ಒದ್ದಾಡುತ್ತಾ ದಾನಿಗಳತ್ತ ಮುಖ ಮಾಡಿದೆ.

ಅಂದ ಮಾತ್ರಕ್ಕೆ ಪ್ರಜ್ಞಾವಂತರು, ಮಾನವೀಯ ಕಾಳಜಿಯುಳ್ಳವರು ಕೈಕಟ್ಟಿ ಕುಳಿತಿದ್ದಾರೆ ಅಂತಲ್ಲ. ದೇಶಾದ್ಯಂತ ಲಕ್ಷಾಂತರ ಮಂದಿ ಪ್ರಾಣದ ಹಂಗು ತೊರೆದು ಬಡವರಿಗೆ ತುತ್ತು ಊಟ ಕೊಡಲು ಶ್ರಮಿಸುತ್ತಿದ್ದಾರೆ. ದಿನಕ್ಕೆ ಲಕ್ಷಾಂತರ ಖರ್ಚು ಮಾಡಿ ಊಟ ಬೇಯಿಸಿ ಅಗತ್ಯವಿದ್ದವರಿಗೆ ತಲುಪಿಸುವ ಮಾದರಿ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಮುಸ್ಲಿಂ ಧರ್ಮಿಯರು ಸಹಾಯಹಸ್ತ ಕೆಲಸದಲ್ಲಿ ನಿರತರಾಗಿದ್ದಾರೆ ಎಂಬುದನ್ನು ಒತ್ತಿಯೇ ಹೇಳಬೇಕಾಗಿದೆ.

ಆದರೂ ಸಾಲುತ್ತಿಲ್ಲ. ಹಸಿದ ಎಲ್ಲರ ಹೊಟ್ಟೆ ಹೊರೆಯಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ಭಾರತ ಬೃಹತ್ ರಾಷ್ಟ್ರ. ಇಲ್ಲಿನ ಎಲ್ಲರ ಹೊಟ್ಟೆ ತುಂಬಿಸಬೇಕಾದರೆ ಸರ್ಕಾರವೇ ಮುಂದೆ ನಿಂತು ಸಾವಿರಾರು ಕೋಟಿ ಖರ್ಚಾದರೂ ಸರಿಯೇ ಬಡವರ ಜೀವ ಮುಖ್ಯ ಅನ್ನುವ ದಿಟ್ಟತನ ಪ್ರದರ್ಶಿಸಬೇಕು. ಹಸಿವಿನಿಂದ ಸಾಯದಂತೆ ಕಾಯುವುದೇ ತನ್ನ ಪರಮ ಗುರಿಯಾಗಿ ತೆಗೆದುಕೊಳ್ಳಬೇಕಿತ್ತು. ಆದರೆ ಅದು ಆಗುತ್ತಿಲ್ಲ. ಆದ್ದರಿಂದಲೇ ಗಂಗಮ್ಮನಂತಹ ಅದೆಷ್ಟು ಜನ ಅನಾಥ ಶವವಾಗುತ್ತಿದ್ದಾರೋ. ಅವೆಲ್ಲವೂ ವರದಿಯಾಗುತ್ತಿಲ್ಲವಷ್ಟೇ.
ಏಕೆಂದರೆ, ಗಡ್ಡ ಬಿಟ್ಟು ಟೊಪ್ಪಿ ತೊಟ್ಟ ಮುಸ್ಲಿಮರು ಯಾವ್ಯಾವುದೋ ಕಾಲದ ವಿಡಿಯೋಗಳನ್ನೆಲ್ಲಾ ಹುಡುಕುವುದರಲ್ಲಿ ಐಟಿ ಸೆಲ್‌ಗಳು ಬ್ಯುಸಿಯಾಗಿದ್ದರೆ, ಎಲ್ಲವನ್ನೂ ಸೆನ್ಸೇಷನ್ ಮಾಡಲು ಟಿಆರ್‌ಪಿ ಟಿವಿಗಳು ನಿರತವಾಗಿವೆ.

ಗಂಗಮ್ಮನ ಸಾವಿಗೆ ನೂರಾರು ಜನ ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮಿಡಿದಿದ್ದಾರೆ. ಕೊಲೆಗಾರರು ನಾವೇ ಎನ್ನುವಷ್ಟರ ಮಟ್ಟಿಗೆ ತಪ್ಪನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರೆಲ್ಲರೂ ತಮ್ಮ ಕೈಲಾದಷ್ಟು ಜನರಿಗೆ ಸಹಾಯ ಮಾಡಿದವರೆ. ಆದರೆ ಯಾರಿಗೂ ಒಂದು ಪೈಸೆ ಸಹಾಯ ಮಾಡದ ಕೆಲವು ಧರ್ಮಾಂಧರು ಇಂದಿಗೂ ಮುಸ್ಲಿಮರಿಂದಲೇ ಕೊರೊನಾ ಹರಡಿದೆ, ಜಿಹಾದಿ ವೈರಸ್ ಎನ್ನುವ ಸುಳ್ಳು ಸುದ್ದಿ ಹರಡಲು ಮುಂದಾಗಿದ್ದಾರೆ. ಮುಖ್ಯವಾಹಿನಿ ಮಾಧ್ಯಮಗಳು ಇದಕ್ಕೆ ಕುಮ್ಮಕ್ಕು ಕೊಡುತ್ತಿದ್ದು ಇಡೀ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಲು ಕೊರೊನಾವನ್ನು ಬಳಸಿಕೊಳ್ಳುತ್ತಿದ್ದಾರೆ. ನೆನಪಿಸಿಕೊಳ್ಳಿ ಇದುವರೆಗೂ ಯಾವ ಟಿವಿ ಚಾನೆಲ್‌ನವರೂ ಸಹ ಕೊರೊನಾ ವಿರುದ್ಧದ ಹೋರಾಟಕ್ಕೆ ಒಂದು ರೂಪಾಯಿ ಕೂಡ ನೆರವು ನೀಡಿಲ್ಲ. ಬದಲಿಗೆ ದ್ವೇಷದ ವಿಷ ಬಿತ್ತುತ್ತಾ ಅಮಾಯಕ ಜನರ ಸಾವನ್ನು ಸಂಭ್ರಮಿಸುತ್ತಿದ್ದಾರೆ. ಈ ನಾಡಿನಲ್ಲಾದ ಒಂದು ಸಾವಿಗೆ ಸಂಬಂಧವೇ ಇಲ್ಲದ ನೂರಾರು ಆತ್ಮಸಾಕ್ಷಿಯುಳ್ಳ ಮನಸ್ಸುಗಳು ಇದಕ್ಕೆ ನಾನು ಹೊಣೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಆದರೆ ದಿನವೀಡಿ ಇನ್ನೊಬ್ಬರ ಮೇಲೆ ದ್ವೇಷ ಕಾರುವ ಧರ್ಮವೀರರು ಮತ್ತು ಮಾಧ್ಯಮಗಳಿಗೆ ಈ ಸಾವು ಏನು ಅನ್ನಿಸುತ್ತಿಲ್ಲ ಏಕೆ?

ಗಂಗಮ್ಮನ ಸಾವನ್ನು ಯಾವ ಮುಸ್ಲಿಮರ ತಲೆಗೂ ಕಟ್ಟಲು ಸಾಧ್ಯವಿಲ್ಲವಾದ್ದರಿಂದ ಅದು ಸುದ್ದಿಯಾಗಿಲ್ಲ ಎಂಬುದನ್ನು ಮರೆಯದಿರೋಣ. ನಾವೆಂತಹ ದೇಶದಲ್ಲಿ ಬದುಕುತ್ತಿದ್ದೇವೆ? ಮಾನವೀಯತೆ ಇಲ್ಲದ ದೇಶ ಉಳಿದೀತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...