Homeಕರ್ನಾಟಕಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?

ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ?

ಈ ನಾಡಿನಲ್ಲಾದ ಒಂದು ಸಾವಿಗೆ ಸಂಬಂಧವೇ ಇಲ್ಲದ ನೂರಾರು ಆತ್ಮಸಾಕ್ಷಿಯುಳ್ಳ ಮನಸ್ಸುಗಳು ಇದಕ್ಕೆ ನಾನು ಹೊಣೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಆದರೆ ದಿನವೀಡಿ ಇನ್ನೊಬ್ಬರ ಮೇಲೆ ದ್ವೇಷ ಕಾರುವ ಧರ್ಮವೀರರು ಮತ್ತು ಮಾಧ್ಯಮಗಳಿಗೆ ಈ ಸಾವು ಏನು ಅನ್ನಿಸುತ್ತಿಲ್ಲ ಏಕೆ? 

- Advertisement -
- Advertisement -

ಏಪ್ರಿಲ್ 5ರ ರಾತ್ರಿ 9ಗಂಟೆಗೆ ದೇಶದ ಬಹುತೇಕರು ದೇಶದ ಪ್ರಧಾನಿಗಳ ಕರೆಗೆ ಓಗೊಟ್ಟು 9 ನಿಮಿಷಗಳ ಕಾಲ ದೀಪ ಹಚ್ಚಿದರು. ಇನ್ನು ಕೆಲವರು ಪಟಾಕಿ ಹೊಡೆದು ಹುಚ್ಚೆದ್ದು ಕುಣಿದರು. ಅದೇ ಸಂದರ್ಭದಲ್ಲಿ ಅನ್ನ ಆಹಾರವಿಲ್ಲದೇ, ಮನೆ ತಲುಪುವ ಉದ್ದೇಶದಿಂದ ಮೂರು ದಿನ ನಡೆದ ಕಾರಣಕ್ಕೆ ಬಳಲಿದ್ದ ಗಂಗಮ್ಮ ಎಂಬ ಅಮಾಯಕ ಮಹಿಳೆ ತನ್ನ ಸಾವಿನ ಕ್ಷಣಗಳನ್ನು ಎಣಿಸುತ್ತಾ ಬಳ್ಳಾರಿಯ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದಳು.

ಪೂರ್ವ ಸಿದ್ದತೆ ಮತ್ತು ಬಡವರ ಸ್ಥಿತಿಗತಿ ಏನಾಗಬಹುದೆಂದು ಯೋಚಿಸದೇ ಘೋಷಿಸಿದ ಲಾಕ್‌ಡೌನ್‌ನಿಂದ 30ಕ್ಕೂ ಹೆಚ್ಚು ಜನರು ಜೀವತೆತ್ತಿದ್ದಾರೆ. ಹಸಿವಿನಿಂದ ಸತ್ತವರ ಲೆಕ್ಕ ಸಿಕ್ಕಿಲ್ಲ ಮತ್ತು ಸಿಗುವುದೂ ಇಲ್ಲ. ಈ ನಡುವೆ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸಿಂಧನೂರಿನ 29 ವರ್ಷದ ಗಂಗಮ್ಮ ಎಂಬ ಮಹಿಳೆ ತನ್ನೂರಿಗೆ ತೆರಳಲು ನಡೆದು ನಡೆದು ಸುಸ್ತಾಗಿ, ಅನ್ನ ನೀರಿಲ್ಲದೆ ಸೋಮವಾರ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಪತ್ರಿಕೆಗಳಲ್ಲಿ ವರದಿಯಾಗಿದೆ.

ಬೆಂಗಳೂರಿನ ಗ್ಲೋಬಲ್ ವಿಲೇಜ್ ಎಂಬ ಐಟಿ ಕಂಪನಿಯು ಪ್ರಪಂಚದಲ್ಲಿಯೇ ಫೇಮಸ್. ಆದರೆ ಅದೇ ಅಪಾರ್ಟ್ಮೆಂಟ್ ನಿರ್ಮಾಣದಲ್ಲಿ ತೊಡಗಿಸಿಕೊಂಡ ಕೂಲಿ ಕಾರ್ಮಿಕರ ಬಗ್ಗೆ ಯಾರೂ ಕಾಳಜಿ ವಹಿಸುವುದಿಲ್ಲ. ಅಂತಹ ನತದೃಷ್ಟರಲ್ಲಿ ಗಂಗಮ್ಮಳು ಕೂಡ ಒಬ್ಬಳು. ಅವಳ ಸಾವಿನ ನಂತರದ ಅವರ ಮನೆ ಪರಿಸ್ಥಿತಿಯನ್ನು ಗಮನಿಸಿದರೆ ನಾವೆಲ್ಲರೂ ನಾಗರಿಕರು ಎನಿಸಿಕೊಳ್ಳಲು ಸಹ ನಾಚಿಕೆಯಾಗುತ್ತದೆ.

ಗಂಗಮ್ಮಳ ಗಂಡ ಕುಡಿತದ ದಾಸನಾಗಿದ್ದನು. ಈತನ ಕಿರುಕುಳದಿಂದ ರೋಸಿಹೋಗಿದ್ದ ಗಂಗಮ್ಮ ಒಮ್ಮೆ ಮಲೇರಿಯಾ ರೋಗಕ್ಕೆ ತುತ್ತಾದಳು. ಇನ್ನು ಅಲ್ಲಿರುವುದು ಅಸಾಧ್ಯ ಎನಿಸಿದಾಗ ಉಳಿದೊಂದು ದಾರಿಯಂತೆ ಬೆಂಗಳೂರಿಗೆ ಗುಳೆ ಹೊರಟಳು.

ಕಟ್ಟಡ ನಿರ್ಮಾಣದಲ್ಲಿ ದುಡಿದು ದುಡಿದು ಬಸವಳಿದಿದ್ದ ಆಕೆ ಇಲ್ಲಿ ಒಂದಷ್ಟು ನೆಮ್ಮದಿಯನ್ನಾದರೂ ಕಂಡುಕೊಂಡಿದ್ದಳು. ಅಷ್ಟರಲ್ಲಿ ಅಪ್ಪಳಿಸಿದ್ದೆ 21 ದಿನಗಳ ಕೊರೊನಾ ಲಾಕ್‌ಡೌನ್. ಎಷ್ಟು ದಿನ ಕಾದರೂ ಕೆಲಸ ಸಿಗದಾಗ ಮತ್ತೆ ತನ್ನೂರು ಸಿಂಧನೂರಿಗೆ ಹೊರಟು ನಿಂತಿದ್ದಾಳೆ. ಕೈಯಲ್ಲಿ ದುಡ್ಡಿಲ್ಲ, ಹೊಟ್ಟೆಗೆ ಆಹಾರವಿಲ್ಲ. ಊರು ತಲುಪಿದರೆ ಏನಾದರೂ ಸಿಗಬಹುದೆಂಬ ಆಸೆಯೊತ್ತು ಹೊರಟ ಗಂಗಮ್ಮ ಕೊನೆಗೆ ಸೇರಿದ್ದು ಮಾತ್ರ ಸ್ಮಶಾನಕ್ಕೆ.

ಟ್ರಾಕ್ಟರ್‌ನಲ್ಲಿ ಒಂದಷ್ಟು ಜೊತೆಗಾರರೊಂದಿಗೆ ಗಂಗಮ್ಮ ಹೊರಟಿದ್ದಾಗ ತುಮಕೂರಿನಲ್ಲಿ ಪೊಲೀಸರು ತಡೆದಿದ್ದಾರೆ. ಅಲ್ಲಿಂದ ಕಾಲ್ನಡಿಗೆ ಆರಂಭಿಸಿದ ಆಕೆಗೆ ಆಹಾರ ನೀರು ದಕ್ಕಿಲ್ಲ. ಮೊದಲೇ ಅನಾರೋಗ್ಯವಿದ್ದ ಆಕೆ ಛಲಬಿಡದೇ ನಡೆದಿದ್ದಾಳೆ. ನಂತರ ಟ್ರಾಕ್ಟರ್ ಬಂದು ಬಳ್ಳಾರಿವರೆಗೂ ತಲುಪಿಸಿದೆ. ಅಷ್ಟರಲ್ಲಿ ಬಸವಳಿದಿದ್ದ ಆಕೆಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನ ಅಲ್ಲಿಯೂ ನರಳಿದ ಆಕೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾಳೆ.

ಸತ್ತ ನಂತರವೂ ಬಿಡದ ಅವಮಾನ

ಗಂಗಮ್ಮ ಸಾವನಪ್ಪುವ ಮುನ್ನ ಒಂದು ವಾರಗಳ ಮುಂಚೆ ತಾನೇ ಆಕೆಯ ಅತ್ತೆ (ಗಂಡನ ತಾಯಿ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಗಂಗಮ್ಮನ ಮೃತದೇಹವನ್ನು ಸಿಂಧನೂರಿಗೆ ತರಬಾರದು, ಇದರಿಂದ ಇಡೀ ನಗರಕ್ಕೆ ತೊಂದರೆಯಾಗುತ್ತದೆ ಎಂದು ವೆಂಕಟೇಶ್ವರ ನಗರದ ಕೆಲವರು ತಗಾದೆ ತೆಗೆದಿದ್ದಾರೆ.

ಇದರಿಂದ ಮತ್ತಷ್ಟು ಭೀತಿಕ್ಕೊಳಗಾದ ಕುಟುಂಬವು ಸಾಸಲುಮರೆ ಎಂಬ ಗ್ರಾಮದಲ್ಲಿ ರಾತ್ರೋರಾತ್ರಿ ದಫನ್ ಮಾಡಿದೆ. ಕುಟುಂಬದ ಕಡೆ ಯಾರೂ ಸಹ ತಿರುಗಿ ನೋಡಿಲ್ಲ. ಬಡವರ ಸಾವಿಗೆ ಅಳುವವರು ಯಾರು ಎಂಬಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾಲುತ್ತಿಲ್ಲ ಸಹಾಯ

ಮೋದಿ ಸರ್ಕಾರವೇನೋ ಲಾಕ್‌ಡೌನ್‌ ಘೋಷಿಸಿ ಮಧ್ಯಮ ವರ್ಗದ ಜನರಿಗೆ ಬೇಸರವಾಗದಿರಲೆಂದು ಟಿವಿಯಲ್ಲಿ ರಾಮಾಯಣ, ಮಹಾಭಾರತ ಪ್ರದರ್ಶನ ಮಾಡುತ್ತಿದೆ. ಇನ್ನೂ ಮುಂದೆ ಹೋಗಿ ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ವಾರಕ್ಕೊಂದು ಕರೆ ನೀಡಲಾಗುತ್ತಿದೆ. ಆದರೆ ದೇಶದ ಅರ್ಧ ಸಂಖ್ಯೆಯಷ್ಟಿರುವ ಬಡವರು ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ, ಅವರಿಗೆ ಊಟ ವಸತಿ ಸಿಗುತ್ತಿದೆಯೇ ಎಂದು ಯೋಚಿಸುವ ಗೋಜಿಗೆ ಸರ್ಕಾರ ಹೋಗಿಲ್ಲ. ಚಿಲ್ಲರೆ ಪ್ಯಾಕೇಜ್ ಘೋಷಿಸಿ ಕೇಂದ್ರ ಸರ್ಕಾರ ಕೈತೊಳೆದುಕೊಂಡರೆ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟ ಕೊಡಲಾರದಷ್ಟು ಬೊಕ್ಕಸದಲ್ಲಿ ಹಣವಿಲ್ಲದೇ ಒದ್ದಾಡುತ್ತಾ ದಾನಿಗಳತ್ತ ಮುಖ ಮಾಡಿದೆ.

ಅಂದ ಮಾತ್ರಕ್ಕೆ ಪ್ರಜ್ಞಾವಂತರು, ಮಾನವೀಯ ಕಾಳಜಿಯುಳ್ಳವರು ಕೈಕಟ್ಟಿ ಕುಳಿತಿದ್ದಾರೆ ಅಂತಲ್ಲ. ದೇಶಾದ್ಯಂತ ಲಕ್ಷಾಂತರ ಮಂದಿ ಪ್ರಾಣದ ಹಂಗು ತೊರೆದು ಬಡವರಿಗೆ ತುತ್ತು ಊಟ ಕೊಡಲು ಶ್ರಮಿಸುತ್ತಿದ್ದಾರೆ. ದಿನಕ್ಕೆ ಲಕ್ಷಾಂತರ ಖರ್ಚು ಮಾಡಿ ಊಟ ಬೇಯಿಸಿ ಅಗತ್ಯವಿದ್ದವರಿಗೆ ತಲುಪಿಸುವ ಮಾದರಿ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಮುಸ್ಲಿಂ ಧರ್ಮಿಯರು ಸಹಾಯಹಸ್ತ ಕೆಲಸದಲ್ಲಿ ನಿರತರಾಗಿದ್ದಾರೆ ಎಂಬುದನ್ನು ಒತ್ತಿಯೇ ಹೇಳಬೇಕಾಗಿದೆ.

ಆದರೂ ಸಾಲುತ್ತಿಲ್ಲ. ಹಸಿದ ಎಲ್ಲರ ಹೊಟ್ಟೆ ಹೊರೆಯಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ಭಾರತ ಬೃಹತ್ ರಾಷ್ಟ್ರ. ಇಲ್ಲಿನ ಎಲ್ಲರ ಹೊಟ್ಟೆ ತುಂಬಿಸಬೇಕಾದರೆ ಸರ್ಕಾರವೇ ಮುಂದೆ ನಿಂತು ಸಾವಿರಾರು ಕೋಟಿ ಖರ್ಚಾದರೂ ಸರಿಯೇ ಬಡವರ ಜೀವ ಮುಖ್ಯ ಅನ್ನುವ ದಿಟ್ಟತನ ಪ್ರದರ್ಶಿಸಬೇಕು. ಹಸಿವಿನಿಂದ ಸಾಯದಂತೆ ಕಾಯುವುದೇ ತನ್ನ ಪರಮ ಗುರಿಯಾಗಿ ತೆಗೆದುಕೊಳ್ಳಬೇಕಿತ್ತು. ಆದರೆ ಅದು ಆಗುತ್ತಿಲ್ಲ. ಆದ್ದರಿಂದಲೇ ಗಂಗಮ್ಮನಂತಹ ಅದೆಷ್ಟು ಜನ ಅನಾಥ ಶವವಾಗುತ್ತಿದ್ದಾರೋ. ಅವೆಲ್ಲವೂ ವರದಿಯಾಗುತ್ತಿಲ್ಲವಷ್ಟೇ.
ಏಕೆಂದರೆ, ಗಡ್ಡ ಬಿಟ್ಟು ಟೊಪ್ಪಿ ತೊಟ್ಟ ಮುಸ್ಲಿಮರು ಯಾವ್ಯಾವುದೋ ಕಾಲದ ವಿಡಿಯೋಗಳನ್ನೆಲ್ಲಾ ಹುಡುಕುವುದರಲ್ಲಿ ಐಟಿ ಸೆಲ್‌ಗಳು ಬ್ಯುಸಿಯಾಗಿದ್ದರೆ, ಎಲ್ಲವನ್ನೂ ಸೆನ್ಸೇಷನ್ ಮಾಡಲು ಟಿಆರ್‌ಪಿ ಟಿವಿಗಳು ನಿರತವಾಗಿವೆ.

ಗಂಗಮ್ಮನ ಸಾವಿಗೆ ನೂರಾರು ಜನ ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮಿಡಿದಿದ್ದಾರೆ. ಕೊಲೆಗಾರರು ನಾವೇ ಎನ್ನುವಷ್ಟರ ಮಟ್ಟಿಗೆ ತಪ್ಪನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರೆಲ್ಲರೂ ತಮ್ಮ ಕೈಲಾದಷ್ಟು ಜನರಿಗೆ ಸಹಾಯ ಮಾಡಿದವರೆ. ಆದರೆ ಯಾರಿಗೂ ಒಂದು ಪೈಸೆ ಸಹಾಯ ಮಾಡದ ಕೆಲವು ಧರ್ಮಾಂಧರು ಇಂದಿಗೂ ಮುಸ್ಲಿಮರಿಂದಲೇ ಕೊರೊನಾ ಹರಡಿದೆ, ಜಿಹಾದಿ ವೈರಸ್ ಎನ್ನುವ ಸುಳ್ಳು ಸುದ್ದಿ ಹರಡಲು ಮುಂದಾಗಿದ್ದಾರೆ. ಮುಖ್ಯವಾಹಿನಿ ಮಾಧ್ಯಮಗಳು ಇದಕ್ಕೆ ಕುಮ್ಮಕ್ಕು ಕೊಡುತ್ತಿದ್ದು ಇಡೀ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಲು ಕೊರೊನಾವನ್ನು ಬಳಸಿಕೊಳ್ಳುತ್ತಿದ್ದಾರೆ. ನೆನಪಿಸಿಕೊಳ್ಳಿ ಇದುವರೆಗೂ ಯಾವ ಟಿವಿ ಚಾನೆಲ್‌ನವರೂ ಸಹ ಕೊರೊನಾ ವಿರುದ್ಧದ ಹೋರಾಟಕ್ಕೆ ಒಂದು ರೂಪಾಯಿ ಕೂಡ ನೆರವು ನೀಡಿಲ್ಲ. ಬದಲಿಗೆ ದ್ವೇಷದ ವಿಷ ಬಿತ್ತುತ್ತಾ ಅಮಾಯಕ ಜನರ ಸಾವನ್ನು ಸಂಭ್ರಮಿಸುತ್ತಿದ್ದಾರೆ. ಈ ನಾಡಿನಲ್ಲಾದ ಒಂದು ಸಾವಿಗೆ ಸಂಬಂಧವೇ ಇಲ್ಲದ ನೂರಾರು ಆತ್ಮಸಾಕ್ಷಿಯುಳ್ಳ ಮನಸ್ಸುಗಳು ಇದಕ್ಕೆ ನಾನು ಹೊಣೆ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಆದರೆ ದಿನವೀಡಿ ಇನ್ನೊಬ್ಬರ ಮೇಲೆ ದ್ವೇಷ ಕಾರುವ ಧರ್ಮವೀರರು ಮತ್ತು ಮಾಧ್ಯಮಗಳಿಗೆ ಈ ಸಾವು ಏನು ಅನ್ನಿಸುತ್ತಿಲ್ಲ ಏಕೆ?

ಗಂಗಮ್ಮನ ಸಾವನ್ನು ಯಾವ ಮುಸ್ಲಿಮರ ತಲೆಗೂ ಕಟ್ಟಲು ಸಾಧ್ಯವಿಲ್ಲವಾದ್ದರಿಂದ ಅದು ಸುದ್ದಿಯಾಗಿಲ್ಲ ಎಂಬುದನ್ನು ಮರೆಯದಿರೋಣ. ನಾವೆಂತಹ ದೇಶದಲ್ಲಿ ಬದುಕುತ್ತಿದ್ದೇವೆ? ಮಾನವೀಯತೆ ಇಲ್ಲದ ದೇಶ ಉಳಿದೀತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...