Homeಮುಖಪುಟಅಮಾನುಷ ಅಪರಾಧಗಳನ್ನು ಪರಿಗಣಿಸಿ ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳಿಸಬೇಕು: ಸುಪ್ರೀಂಗೆ ಬಿಲ್ಕಿಸ್‌ ಬಾನೋ ಆಗ್ರಹ

ಅಮಾನುಷ ಅಪರಾಧಗಳನ್ನು ಪರಿಗಣಿಸಿ ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳಿಸಬೇಕು: ಸುಪ್ರೀಂಗೆ ಬಿಲ್ಕಿಸ್‌ ಬಾನೋ ಆಗ್ರಹ

- Advertisement -
- Advertisement -

ಬಿಲ್ಕಿಸ್‌ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ 11 ಮಂದಿ ಅಪರಾಧಿಗಳನ್ನು ಅವರು ನಡೆಸಿದ ಬರ್ಬರ ಅಪರಾಧವನ್ನು ಪರಿಗಣಿಸಿ ಮರಳಿ ಜೈಲಿಗೆ ಕಳುಹಿಸಬೇಕು ಎಂದು ಬಿಲ್ಕಿಸ್‌ ಪರ ವಕೀಲೆ ಶೋಭಾ ಗುಪ್ತಾ ಅವರು ಬುಧವಾರ ಸುಪ್ರೀಂ ಕೋರ್ಟ್‌ಗೆ ಹೇಳಿದ್ದಾರೆ.

ಈ 11 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ ಗುಜರಾತ್ ಸರ್ಕಾರವು ಅವರ ಶಿಕ್ಷೆ ಕಡಿತಗೊಳಿಸಿ ಬಿಡುಗಡೆಗೊಳಿಸಿದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮುಂದೆ ಹಲವು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್‌ ಭುಯನ್‌ ಅವರ ಪೀಠ ನಡೆಸುತ್ತಿದೆ.

2002ರ ಗುಜರಾತ್‌ ಗಲಭೆಗಳ ಸಂದರ್ಭ ಬಿಲ್ಕಿಸ್‌ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರಗೈದು ಆಕೆಯ ಕುಟುಂಬದ 14 ಮಂದಿಯನ್ನು ಹತ್ಯೆಗೈದ ಪ್ರಕರಣ ಇದಾಗಿದೆ. 11 ಜನ ಅಪರಾಧಿಗಳನ್ನು ಕಳೆದ ವರ್ಷದ ಆಗಸ್ಟ್‌ 15ರಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ದಿನದಂದು ಬಿಡುಗಡೆಗೊಳಿಸಲಾಗಿತ್ತು.

”ಅವರನ್ನು ಬಿಡುಗಡೆಗೊಳಿಸುವ ಮುನ್ನ ಅಪರಾಧದ ಸ್ವರೂಪವನ್ನು, ಅದು ಸಮಾಜದ ಮೇಲೆ ಬೀರುವ ಪರಿಣಾಮವನ್ನು ಸರ್ಕಾರ ಪರಿಗಣಿಸಬೇಕಿತ್ತು” ಎಂದು ಬಿಲ್ಕಿಸ್‌ ಬಾನೋ ಪರ ವಕೀಲೆ ಹೇಳಿದರು.

ಶಿಕ್ಷೆ ಕಡಿತಗೊಳಿಸುವುದು ಸುಧಾರಣೆಗೆ ಅಗತ್ಯ ಎಂದು ಅಪರಾಧಿಗಳಲ್ಲೊಬ್ಬರು ವಾದಿಸಿರುವ ಬಗ್ಗೆ ಜಸ್ಟಿಸ್‌ ನಾಗರತ್ನ ಉಲ್ಲೇಖಿಸಿದಾಗ ಅವರ ಅಪರಾಧದ ಸ್ವರೂಪ ಯಾವುದೋ ಬಂದೂಕಿನಿಂದ ಗಾಯ ಉಂಟು ಮಾಡಿರುವುದು ಅಥವಾ ಸಾಮಾನ್ಯ ಕೊಲೆ ಪ್ರಕರಣವಲ್ಲ ಎಂದು ಗುಪ್ತಾ ತಿಳಿಹೇಳುವ ಪ್ರಯತ್ನ ಮಾಡಿದರು.

ಅಪರಾಧಿಗಳು ಎಂಟು ಅಪ್ರಾಪ್ತರನ್ನು ಕೊಂದಿದ್ದಲ್ಲದೇ ಬಿಲ್ಕಿಸ್‌ ಅವರ ಮೂರು ವರ್ಷದ ಪುತ್ರಿಯ ತಲೆಯನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದ್ದರು. ಆಗ ಬಿಲ್ಕಿಸ್‌ ವಯಸ್ಸು 19 ಆಗಿತ್ತು ಹಾಗೂ ಆಕೆ ಗರ್ಭಿಣಿಯಾಗಿದ್ದರು.

”ಈ ಅಪರಾಧಗಳು ಘನಘೋರ. ಒಂದು ನಿರ್ದಿಷ್ಟ ಅವಧಿಯ ತನಕ ಶಿಕ್ಷೆ ಅನುಭವಿಸಿದ ನಂತರ ಶಿಕ್ಷೆ ಕಡಿತಗೊಳಿಸಲು ಕೋರಲು ಅಪರಾಧಿಗಳಿಗೆ ಹಕ್ಕಿದೆ. ಆದರೆ ಇಲ್ಲಿ ಸರ್ಕಾರ ಕಡೆಗಣಿಸಿದ ಅಂಶಗಳು ಮುಖ್ಯವಾಗಿವೆ, ಅಪರಾಧಿಗಳು ಜೈಲಿನಲ್ಲಿರುವಾಗಲೂ ಅವರಿಗೆ ಪೆರೋಲ್‌ ಮೇಲೆ ಬಿಡುಗಡೆ ದೊರೆಯುತ್ತಿತ್ತು. ಇಲ್ಲಿ ಕ್ಷಮಾದಾನಕ್ಕೆ ಅರ್ಹವಾದ ಪ್ರಕರಣ ಇದಲ್ಲ, ಅವರನ್ನು ವಾಪಸ್‌ ಜೈಲಿಗೆ ಕಳಿಸಬೇಕು. ಅವರು ಎಲ್ಲಿಂದ ಬಂದರೋ ಅಲ್ಲಿಗೇ ವಾಪಸ್‌ ಕಳಿಸಬೇಕೆಂದು ಕೈಮುಗಿದು ನ್ಯಾಯಾಲಯವನ್ನು ಕೇಳಿಕೊಳ್ಳುತ್ತೇನೆ” ಎಂದು ಗುಪ್ತಾ ಆಗ್ರಹಿಸಿದರು.

ಇದನ್ನೂ ಓದಿ: ತೀರ್ಪಿನ ಶೀರ್ಷಿಕೆಯಲ್ಲಿ ಆರೋಪಿಯ ಜಾತಿ ನಮೂದಿಗೆ ಆಕ್ಷೇಪಿಸಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...