Homeಮುಖಪುಟಅಮಾನುಷ ಅಪರಾಧಗಳನ್ನು ಪರಿಗಣಿಸಿ ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳಿಸಬೇಕು: ಸುಪ್ರೀಂಗೆ ಬಿಲ್ಕಿಸ್‌ ಬಾನೋ ಆಗ್ರಹ

ಅಮಾನುಷ ಅಪರಾಧಗಳನ್ನು ಪರಿಗಣಿಸಿ ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳಿಸಬೇಕು: ಸುಪ್ರೀಂಗೆ ಬಿಲ್ಕಿಸ್‌ ಬಾನೋ ಆಗ್ರಹ

- Advertisement -
- Advertisement -

ಬಿಲ್ಕಿಸ್‌ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ 11 ಮಂದಿ ಅಪರಾಧಿಗಳನ್ನು ಅವರು ನಡೆಸಿದ ಬರ್ಬರ ಅಪರಾಧವನ್ನು ಪರಿಗಣಿಸಿ ಮರಳಿ ಜೈಲಿಗೆ ಕಳುಹಿಸಬೇಕು ಎಂದು ಬಿಲ್ಕಿಸ್‌ ಪರ ವಕೀಲೆ ಶೋಭಾ ಗುಪ್ತಾ ಅವರು ಬುಧವಾರ ಸುಪ್ರೀಂ ಕೋರ್ಟ್‌ಗೆ ಹೇಳಿದ್ದಾರೆ.

ಈ 11 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ ಗುಜರಾತ್ ಸರ್ಕಾರವು ಅವರ ಶಿಕ್ಷೆ ಕಡಿತಗೊಳಿಸಿ ಬಿಡುಗಡೆಗೊಳಿಸಿದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮುಂದೆ ಹಲವು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್‌ ಭುಯನ್‌ ಅವರ ಪೀಠ ನಡೆಸುತ್ತಿದೆ.

2002ರ ಗುಜರಾತ್‌ ಗಲಭೆಗಳ ಸಂದರ್ಭ ಬಿಲ್ಕಿಸ್‌ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರಗೈದು ಆಕೆಯ ಕುಟುಂಬದ 14 ಮಂದಿಯನ್ನು ಹತ್ಯೆಗೈದ ಪ್ರಕರಣ ಇದಾಗಿದೆ. 11 ಜನ ಅಪರಾಧಿಗಳನ್ನು ಕಳೆದ ವರ್ಷದ ಆಗಸ್ಟ್‌ 15ರಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ದಿನದಂದು ಬಿಡುಗಡೆಗೊಳಿಸಲಾಗಿತ್ತು.

”ಅವರನ್ನು ಬಿಡುಗಡೆಗೊಳಿಸುವ ಮುನ್ನ ಅಪರಾಧದ ಸ್ವರೂಪವನ್ನು, ಅದು ಸಮಾಜದ ಮೇಲೆ ಬೀರುವ ಪರಿಣಾಮವನ್ನು ಸರ್ಕಾರ ಪರಿಗಣಿಸಬೇಕಿತ್ತು” ಎಂದು ಬಿಲ್ಕಿಸ್‌ ಬಾನೋ ಪರ ವಕೀಲೆ ಹೇಳಿದರು.

ಶಿಕ್ಷೆ ಕಡಿತಗೊಳಿಸುವುದು ಸುಧಾರಣೆಗೆ ಅಗತ್ಯ ಎಂದು ಅಪರಾಧಿಗಳಲ್ಲೊಬ್ಬರು ವಾದಿಸಿರುವ ಬಗ್ಗೆ ಜಸ್ಟಿಸ್‌ ನಾಗರತ್ನ ಉಲ್ಲೇಖಿಸಿದಾಗ ಅವರ ಅಪರಾಧದ ಸ್ವರೂಪ ಯಾವುದೋ ಬಂದೂಕಿನಿಂದ ಗಾಯ ಉಂಟು ಮಾಡಿರುವುದು ಅಥವಾ ಸಾಮಾನ್ಯ ಕೊಲೆ ಪ್ರಕರಣವಲ್ಲ ಎಂದು ಗುಪ್ತಾ ತಿಳಿಹೇಳುವ ಪ್ರಯತ್ನ ಮಾಡಿದರು.

ಅಪರಾಧಿಗಳು ಎಂಟು ಅಪ್ರಾಪ್ತರನ್ನು ಕೊಂದಿದ್ದಲ್ಲದೇ ಬಿಲ್ಕಿಸ್‌ ಅವರ ಮೂರು ವರ್ಷದ ಪುತ್ರಿಯ ತಲೆಯನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದ್ದರು. ಆಗ ಬಿಲ್ಕಿಸ್‌ ವಯಸ್ಸು 19 ಆಗಿತ್ತು ಹಾಗೂ ಆಕೆ ಗರ್ಭಿಣಿಯಾಗಿದ್ದರು.

”ಈ ಅಪರಾಧಗಳು ಘನಘೋರ. ಒಂದು ನಿರ್ದಿಷ್ಟ ಅವಧಿಯ ತನಕ ಶಿಕ್ಷೆ ಅನುಭವಿಸಿದ ನಂತರ ಶಿಕ್ಷೆ ಕಡಿತಗೊಳಿಸಲು ಕೋರಲು ಅಪರಾಧಿಗಳಿಗೆ ಹಕ್ಕಿದೆ. ಆದರೆ ಇಲ್ಲಿ ಸರ್ಕಾರ ಕಡೆಗಣಿಸಿದ ಅಂಶಗಳು ಮುಖ್ಯವಾಗಿವೆ, ಅಪರಾಧಿಗಳು ಜೈಲಿನಲ್ಲಿರುವಾಗಲೂ ಅವರಿಗೆ ಪೆರೋಲ್‌ ಮೇಲೆ ಬಿಡುಗಡೆ ದೊರೆಯುತ್ತಿತ್ತು. ಇಲ್ಲಿ ಕ್ಷಮಾದಾನಕ್ಕೆ ಅರ್ಹವಾದ ಪ್ರಕರಣ ಇದಲ್ಲ, ಅವರನ್ನು ವಾಪಸ್‌ ಜೈಲಿಗೆ ಕಳಿಸಬೇಕು. ಅವರು ಎಲ್ಲಿಂದ ಬಂದರೋ ಅಲ್ಲಿಗೇ ವಾಪಸ್‌ ಕಳಿಸಬೇಕೆಂದು ಕೈಮುಗಿದು ನ್ಯಾಯಾಲಯವನ್ನು ಕೇಳಿಕೊಳ್ಳುತ್ತೇನೆ” ಎಂದು ಗುಪ್ತಾ ಆಗ್ರಹಿಸಿದರು.

ಇದನ್ನೂ ಓದಿ: ತೀರ್ಪಿನ ಶೀರ್ಷಿಕೆಯಲ್ಲಿ ಆರೋಪಿಯ ಜಾತಿ ನಮೂದಿಗೆ ಆಕ್ಷೇಪಿಸಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...