Homeಮುಖಪುಟಅಮಾನುಷ ಅಪರಾಧಗಳನ್ನು ಪರಿಗಣಿಸಿ ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳಿಸಬೇಕು: ಸುಪ್ರೀಂಗೆ ಬಿಲ್ಕಿಸ್‌ ಬಾನೋ ಆಗ್ರಹ

ಅಮಾನುಷ ಅಪರಾಧಗಳನ್ನು ಪರಿಗಣಿಸಿ ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳಿಸಬೇಕು: ಸುಪ್ರೀಂಗೆ ಬಿಲ್ಕಿಸ್‌ ಬಾನೋ ಆಗ್ರಹ

- Advertisement -
- Advertisement -

ಬಿಲ್ಕಿಸ್‌ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ 11 ಮಂದಿ ಅಪರಾಧಿಗಳನ್ನು ಅವರು ನಡೆಸಿದ ಬರ್ಬರ ಅಪರಾಧವನ್ನು ಪರಿಗಣಿಸಿ ಮರಳಿ ಜೈಲಿಗೆ ಕಳುಹಿಸಬೇಕು ಎಂದು ಬಿಲ್ಕಿಸ್‌ ಪರ ವಕೀಲೆ ಶೋಭಾ ಗುಪ್ತಾ ಅವರು ಬುಧವಾರ ಸುಪ್ರೀಂ ಕೋರ್ಟ್‌ಗೆ ಹೇಳಿದ್ದಾರೆ.

ಈ 11 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ ಗುಜರಾತ್ ಸರ್ಕಾರವು ಅವರ ಶಿಕ್ಷೆ ಕಡಿತಗೊಳಿಸಿ ಬಿಡುಗಡೆಗೊಳಿಸಿದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮುಂದೆ ಹಲವು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್‌ ಭುಯನ್‌ ಅವರ ಪೀಠ ನಡೆಸುತ್ತಿದೆ.

2002ರ ಗುಜರಾತ್‌ ಗಲಭೆಗಳ ಸಂದರ್ಭ ಬಿಲ್ಕಿಸ್‌ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರಗೈದು ಆಕೆಯ ಕುಟುಂಬದ 14 ಮಂದಿಯನ್ನು ಹತ್ಯೆಗೈದ ಪ್ರಕರಣ ಇದಾಗಿದೆ. 11 ಜನ ಅಪರಾಧಿಗಳನ್ನು ಕಳೆದ ವರ್ಷದ ಆಗಸ್ಟ್‌ 15ರಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ದಿನದಂದು ಬಿಡುಗಡೆಗೊಳಿಸಲಾಗಿತ್ತು.

”ಅವರನ್ನು ಬಿಡುಗಡೆಗೊಳಿಸುವ ಮುನ್ನ ಅಪರಾಧದ ಸ್ವರೂಪವನ್ನು, ಅದು ಸಮಾಜದ ಮೇಲೆ ಬೀರುವ ಪರಿಣಾಮವನ್ನು ಸರ್ಕಾರ ಪರಿಗಣಿಸಬೇಕಿತ್ತು” ಎಂದು ಬಿಲ್ಕಿಸ್‌ ಬಾನೋ ಪರ ವಕೀಲೆ ಹೇಳಿದರು.

ಶಿಕ್ಷೆ ಕಡಿತಗೊಳಿಸುವುದು ಸುಧಾರಣೆಗೆ ಅಗತ್ಯ ಎಂದು ಅಪರಾಧಿಗಳಲ್ಲೊಬ್ಬರು ವಾದಿಸಿರುವ ಬಗ್ಗೆ ಜಸ್ಟಿಸ್‌ ನಾಗರತ್ನ ಉಲ್ಲೇಖಿಸಿದಾಗ ಅವರ ಅಪರಾಧದ ಸ್ವರೂಪ ಯಾವುದೋ ಬಂದೂಕಿನಿಂದ ಗಾಯ ಉಂಟು ಮಾಡಿರುವುದು ಅಥವಾ ಸಾಮಾನ್ಯ ಕೊಲೆ ಪ್ರಕರಣವಲ್ಲ ಎಂದು ಗುಪ್ತಾ ತಿಳಿಹೇಳುವ ಪ್ರಯತ್ನ ಮಾಡಿದರು.

ಅಪರಾಧಿಗಳು ಎಂಟು ಅಪ್ರಾಪ್ತರನ್ನು ಕೊಂದಿದ್ದಲ್ಲದೇ ಬಿಲ್ಕಿಸ್‌ ಅವರ ಮೂರು ವರ್ಷದ ಪುತ್ರಿಯ ತಲೆಯನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದ್ದರು. ಆಗ ಬಿಲ್ಕಿಸ್‌ ವಯಸ್ಸು 19 ಆಗಿತ್ತು ಹಾಗೂ ಆಕೆ ಗರ್ಭಿಣಿಯಾಗಿದ್ದರು.

”ಈ ಅಪರಾಧಗಳು ಘನಘೋರ. ಒಂದು ನಿರ್ದಿಷ್ಟ ಅವಧಿಯ ತನಕ ಶಿಕ್ಷೆ ಅನುಭವಿಸಿದ ನಂತರ ಶಿಕ್ಷೆ ಕಡಿತಗೊಳಿಸಲು ಕೋರಲು ಅಪರಾಧಿಗಳಿಗೆ ಹಕ್ಕಿದೆ. ಆದರೆ ಇಲ್ಲಿ ಸರ್ಕಾರ ಕಡೆಗಣಿಸಿದ ಅಂಶಗಳು ಮುಖ್ಯವಾಗಿವೆ, ಅಪರಾಧಿಗಳು ಜೈಲಿನಲ್ಲಿರುವಾಗಲೂ ಅವರಿಗೆ ಪೆರೋಲ್‌ ಮೇಲೆ ಬಿಡುಗಡೆ ದೊರೆಯುತ್ತಿತ್ತು. ಇಲ್ಲಿ ಕ್ಷಮಾದಾನಕ್ಕೆ ಅರ್ಹವಾದ ಪ್ರಕರಣ ಇದಲ್ಲ, ಅವರನ್ನು ವಾಪಸ್‌ ಜೈಲಿಗೆ ಕಳಿಸಬೇಕು. ಅವರು ಎಲ್ಲಿಂದ ಬಂದರೋ ಅಲ್ಲಿಗೇ ವಾಪಸ್‌ ಕಳಿಸಬೇಕೆಂದು ಕೈಮುಗಿದು ನ್ಯಾಯಾಲಯವನ್ನು ಕೇಳಿಕೊಳ್ಳುತ್ತೇನೆ” ಎಂದು ಗುಪ್ತಾ ಆಗ್ರಹಿಸಿದರು.

ಇದನ್ನೂ ಓದಿ: ತೀರ್ಪಿನ ಶೀರ್ಷಿಕೆಯಲ್ಲಿ ಆರೋಪಿಯ ಜಾತಿ ನಮೂದಿಗೆ ಆಕ್ಷೇಪಿಸಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...