Homeಮುಖಪುಟಅಮಾನುಷ ಅಪರಾಧಗಳನ್ನು ಪರಿಗಣಿಸಿ ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳಿಸಬೇಕು: ಸುಪ್ರೀಂಗೆ ಬಿಲ್ಕಿಸ್‌ ಬಾನೋ ಆಗ್ರಹ

ಅಮಾನುಷ ಅಪರಾಧಗಳನ್ನು ಪರಿಗಣಿಸಿ ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳಿಸಬೇಕು: ಸುಪ್ರೀಂಗೆ ಬಿಲ್ಕಿಸ್‌ ಬಾನೋ ಆಗ್ರಹ

- Advertisement -
- Advertisement -

ಬಿಲ್ಕಿಸ್‌ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ 11 ಮಂದಿ ಅಪರಾಧಿಗಳನ್ನು ಅವರು ನಡೆಸಿದ ಬರ್ಬರ ಅಪರಾಧವನ್ನು ಪರಿಗಣಿಸಿ ಮರಳಿ ಜೈಲಿಗೆ ಕಳುಹಿಸಬೇಕು ಎಂದು ಬಿಲ್ಕಿಸ್‌ ಪರ ವಕೀಲೆ ಶೋಭಾ ಗುಪ್ತಾ ಅವರು ಬುಧವಾರ ಸುಪ್ರೀಂ ಕೋರ್ಟ್‌ಗೆ ಹೇಳಿದ್ದಾರೆ.

ಈ 11 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ ಗುಜರಾತ್ ಸರ್ಕಾರವು ಅವರ ಶಿಕ್ಷೆ ಕಡಿತಗೊಳಿಸಿ ಬಿಡುಗಡೆಗೊಳಿಸಿದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮುಂದೆ ಹಲವು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್‌ ಭುಯನ್‌ ಅವರ ಪೀಠ ನಡೆಸುತ್ತಿದೆ.

2002ರ ಗುಜರಾತ್‌ ಗಲಭೆಗಳ ಸಂದರ್ಭ ಬಿಲ್ಕಿಸ್‌ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರಗೈದು ಆಕೆಯ ಕುಟುಂಬದ 14 ಮಂದಿಯನ್ನು ಹತ್ಯೆಗೈದ ಪ್ರಕರಣ ಇದಾಗಿದೆ. 11 ಜನ ಅಪರಾಧಿಗಳನ್ನು ಕಳೆದ ವರ್ಷದ ಆಗಸ್ಟ್‌ 15ರಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ದಿನದಂದು ಬಿಡುಗಡೆಗೊಳಿಸಲಾಗಿತ್ತು.

”ಅವರನ್ನು ಬಿಡುಗಡೆಗೊಳಿಸುವ ಮುನ್ನ ಅಪರಾಧದ ಸ್ವರೂಪವನ್ನು, ಅದು ಸಮಾಜದ ಮೇಲೆ ಬೀರುವ ಪರಿಣಾಮವನ್ನು ಸರ್ಕಾರ ಪರಿಗಣಿಸಬೇಕಿತ್ತು” ಎಂದು ಬಿಲ್ಕಿಸ್‌ ಬಾನೋ ಪರ ವಕೀಲೆ ಹೇಳಿದರು.

ಶಿಕ್ಷೆ ಕಡಿತಗೊಳಿಸುವುದು ಸುಧಾರಣೆಗೆ ಅಗತ್ಯ ಎಂದು ಅಪರಾಧಿಗಳಲ್ಲೊಬ್ಬರು ವಾದಿಸಿರುವ ಬಗ್ಗೆ ಜಸ್ಟಿಸ್‌ ನಾಗರತ್ನ ಉಲ್ಲೇಖಿಸಿದಾಗ ಅವರ ಅಪರಾಧದ ಸ್ವರೂಪ ಯಾವುದೋ ಬಂದೂಕಿನಿಂದ ಗಾಯ ಉಂಟು ಮಾಡಿರುವುದು ಅಥವಾ ಸಾಮಾನ್ಯ ಕೊಲೆ ಪ್ರಕರಣವಲ್ಲ ಎಂದು ಗುಪ್ತಾ ತಿಳಿಹೇಳುವ ಪ್ರಯತ್ನ ಮಾಡಿದರು.

ಅಪರಾಧಿಗಳು ಎಂಟು ಅಪ್ರಾಪ್ತರನ್ನು ಕೊಂದಿದ್ದಲ್ಲದೇ ಬಿಲ್ಕಿಸ್‌ ಅವರ ಮೂರು ವರ್ಷದ ಪುತ್ರಿಯ ತಲೆಯನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದ್ದರು. ಆಗ ಬಿಲ್ಕಿಸ್‌ ವಯಸ್ಸು 19 ಆಗಿತ್ತು ಹಾಗೂ ಆಕೆ ಗರ್ಭಿಣಿಯಾಗಿದ್ದರು.

”ಈ ಅಪರಾಧಗಳು ಘನಘೋರ. ಒಂದು ನಿರ್ದಿಷ್ಟ ಅವಧಿಯ ತನಕ ಶಿಕ್ಷೆ ಅನುಭವಿಸಿದ ನಂತರ ಶಿಕ್ಷೆ ಕಡಿತಗೊಳಿಸಲು ಕೋರಲು ಅಪರಾಧಿಗಳಿಗೆ ಹಕ್ಕಿದೆ. ಆದರೆ ಇಲ್ಲಿ ಸರ್ಕಾರ ಕಡೆಗಣಿಸಿದ ಅಂಶಗಳು ಮುಖ್ಯವಾಗಿವೆ, ಅಪರಾಧಿಗಳು ಜೈಲಿನಲ್ಲಿರುವಾಗಲೂ ಅವರಿಗೆ ಪೆರೋಲ್‌ ಮೇಲೆ ಬಿಡುಗಡೆ ದೊರೆಯುತ್ತಿತ್ತು. ಇಲ್ಲಿ ಕ್ಷಮಾದಾನಕ್ಕೆ ಅರ್ಹವಾದ ಪ್ರಕರಣ ಇದಲ್ಲ, ಅವರನ್ನು ವಾಪಸ್‌ ಜೈಲಿಗೆ ಕಳಿಸಬೇಕು. ಅವರು ಎಲ್ಲಿಂದ ಬಂದರೋ ಅಲ್ಲಿಗೇ ವಾಪಸ್‌ ಕಳಿಸಬೇಕೆಂದು ಕೈಮುಗಿದು ನ್ಯಾಯಾಲಯವನ್ನು ಕೇಳಿಕೊಳ್ಳುತ್ತೇನೆ” ಎಂದು ಗುಪ್ತಾ ಆಗ್ರಹಿಸಿದರು.

ಇದನ್ನೂ ಓದಿ: ತೀರ್ಪಿನ ಶೀರ್ಷಿಕೆಯಲ್ಲಿ ಆರೋಪಿಯ ಜಾತಿ ನಮೂದಿಗೆ ಆಕ್ಷೇಪಿಸಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...