Homeಮುಖಪುಟಯುಪಿ ಸರ್ಕಾರದ ಬಯಕೆಯಂತೆ ಗ್ಯಾಂಗ್‌ಸ್ಟರ್ ಅತೀಕ್, ಅಶ್ರಫ್ ಶೂಟೌಟ್: ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಬಿಜೆಪಿ...

ಯುಪಿ ಸರ್ಕಾರದ ಬಯಕೆಯಂತೆ ಗ್ಯಾಂಗ್‌ಸ್ಟರ್ ಅತೀಕ್, ಅಶ್ರಫ್ ಶೂಟೌಟ್: ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಬಿಜೆಪಿ ಸಂಸದ

- Advertisement -
- Advertisement -

ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದ ಬಿಜೆಪಿ ಸಂಸದ, ಉತ್ತರ ಪ್ರದೇಶ ಸರ್ಕಾರದ ಬಯಕೆಯಂತೆ ಕೊಲೆ ಮಾಡಲಾಗಿದೆ ಎಂದು ಬರೆದು, ಆ ಬಳಿಕ ಆ ಟ್ವೀಟ್‌ನ್ನು ಡಿಲೀಟ್ ಮಾಡಿದ್ದಾರೆ.

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದಾರಿಗಿರುವ ಪಿಸಿ ಮೋಹನ್‌ ಅವರು, ಈ ಬಗ್ಗೆ ಟ್ವೀಟ್ ಮಾಡಿ ಬಳಿಕ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಆದರೆ ಡಿಲಿಟ್ ಮಾಡುವ ಮುನ್ನವೇ ಕೆಲವರು ಅದರ ಸ್ಕ್ರೀನ್‌ಶಾಟ್ ತೆಗೆದು ಸಾಮಾಜಿಕ ಮಾಧ್ಯದಲ್ಲಿ ಹಂಚಿಕೊಂಡಿದ್ದಾರೆ.

ಈ ಪ್ರಕರಣದ ಬಳಿಕ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ವಿಚಾರವಾಗಿ ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷಗಳ ನಡುವೆ ಭಾರೀ ಚರ್ಚೆ ಮಾಡಲಾಗುತ್ತಿದೆ. ಈ ನಡುವೆ ಕರ್ನಾಟಕದ ಬಿಜೆಪಿ ಸಂಸದ ಪಿಸಿ ಮೋಹನ್ ಅವರು, ಈ ಕೊಲೆಯನ್ನು ಬಿಜೆಪಿ ಯೋಗಿ ನೇತೃತ್ವದ ಸರ್ಕಾರ ಬಯಸಿದಂತೆ ಈ ಕೊಲೆಯನ್ನು ಮಾಡಲಾಗಿದೆ ಎನ್ನುವಂತೆ ಯೋಗಿ ಅವರ ಪೋಟೋ ಹಾಕಿ ಟ್ವೀಟ್ ಮಾಡಿದ್ದಾರೆ. ಆ ಬಳಿಕ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪೊಲೀಸ್ ಭದ್ರತೆಯಲ್ಲೇ ದುಷ್ಕರ್ಮಿಗಳ ಗುಂಡೇಟಿಗೆ ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಬಲಿ

ಏನಿದು ಘಟನೆ?

ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳು ಗುಂಡಿ ದಾಳಿ ನಡೆಸಿದ್ದಾರೆ.

ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಮೇಲೆ ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕೃತ್ಯ ಎಸಗಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರು ಮತ್ತು ಮಾಧ್ಯಮದವರ ಎದುರೇ ಪತ್ರಕರ್ತರ ಸೋಗಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅತೀಕ್‌ ಮತ್ತು ಅಶ್ರಫ್‌ ಮೇಲೆ ಏಕಾಏಕಿ ದಾಳಿ ನಡೆಸಿದರು. ತೀರಾ ಹತ್ತಿರದಲ್ಲಿಯೇ ದಾಳಿ ನಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೂವರು ಆರೋಪಿಗಳನ್ನು ಅರುಣ್ ಮೌರ್ಯ, ಲವಲೇಶ್ ತಿವಾರಿ ಮತ್ತು ಸನ್ನಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಪತ್ರಿಕಾ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ವಿಪಕ್ಷಗಳ ಪ್ರತಿಕ್ರಿಯೆ:

ಈ ಘಟನೆ ಬಗ್ಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಟ್ವೀಟ್ ಮಾಡಿದ್ದು, ”ಬಿಜೆಪಿ ಭಾರತವನ್ನು ಮಾಫಿಯಾ ಗಣರಾಜ್ಯವನ್ನಾಗಿ ಮಾಡಿದೆ ಎಂದು ಇಲ್ಲಿಯೂ ಹೇಳುತ್ತೇನೆ, ವಿದೇಶದಲ್ಲೂ ಹೇಳುತ್ತೇನೆ, ಎಲ್ಲೆಲ್ಲೂ ಹೇಳುತ್ತೇನೆ ಏಕೆಂದರೆ ಇದು ಸತ್ಯ. ಬಂಧನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಮತ್ತು ಕ್ಯಾಮೆರಾಗಳ ಮುಂದೆಯೇ ಗುಂಡಿಕ್ಕಿ ಕೊಂದರು- ಇದು ಕಾನೂನು ನಿಯಮಗಳ ಸಾವು” ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ”ಉತ್ತರ ಪ್ರದೇಶದಲ್ಲಿ ಅಪರಾಧ ಉತ್ತುಂಗಕ್ಕೇರಿದೆ ಮತ್ತು ಅಪರಾಧಿಗಳು ಬೆಚ್ಚಿಬೀಳುತ್ತಿಲ್ಲ. ಪೊಲೀಸ್ ಸರ್ಪಗಾವಲಿನ ನಡುವೆ ಯಾರನ್ನಾದರೂ ಗುಂಡಿಕ್ಕಿ ಕೊಲ್ಲಬಹುದು, ಆಗ ಸಾಮಾನ್ಯರ ಪಾಡೇನು? ಇದರಿಂದ ಸಾರ್ವಜನಿಕರ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದ್ದು, ಕೆಲವರು ಉದ್ದೇಶಪೂರ್ವಕವಾಗಿ ಇಂತಹ ವಾತಾವರಣ ಸೃಷ್ಟಿಸುತ್ತಿರುವಂತೆ ಕಾಣುತ್ತಿದೆ” ಎಂದಿದ್ಧಾರೆ.

ಅತೀಕ್-ಅಶ್ರಫ್ ಹತ್ಯೆ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಾತನಾಡಿ, ”ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಮತ್ತು ಈ ಬಗ್ಗೆ ತಂಡವನ್ನು ರಚಿಸಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ಗೆ ನಾನು ಒತ್ತಾಯಿಸುತ್ತೇನೆ. ಅಲ್ಲಿರುವ ಎಲ್ಲಾ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ತೆಗೆದುಹಾಕಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...