Homeಮುಖಪುಟಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ - ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ – ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ಈಗ ಈತ ತಾನು ಶಾಂತಿಪ್ರಿಯ, ದೀಪ್ ಸಿಧು ಜೊತೆ ಭಾಗಿಯಲ್ಲ ಎನ್ನುತ್ತಿದ್ದಾನೆ. ಆದರೆ, ಈ ಶಾಂತಿಪ್ರಿಯ ಮಹಾಶಯ, ನಿಗದಿತ ಮಾರ್ಗ ಬಿಟ್ಟು ರಿಂಗ್‌ರೋಡ್ ಮಾರ್ಗದತ್ತ ಹೋಗಿದ್ದೇಕೆ ಎಂಬ ಪ್ರಶ್ನೆಯನ್ನು ಕೇಳಬೇಕಾದ ಪೊಲೀಸರು ಸುಮ್ಮನೇ ಇದ್ದಾರೆ

- Advertisement -
- Advertisement -

ಗಣರಾಜ್ಯೋತ್ಸವದಂದು ಹಿಂಸಾಚಾರಕ್ಕೆ ಕಾರಣವಾದ ಪ್ರತಿಭಟನಾಕಾರರನ್ನು ಪ್ರಚೋದಿಸಿದ್ದಕ್ಕಾಗಿ ದೂಷಿಸಲ್ಪಟ್ಟ ಲಖಾ ಸಿಧಾನಾ, ಸ್ವತಃ ತಾನೇ ಹೇಳಿಕೊಳ್ಳುವಂತೆ, ತಾನು ರಾಷ್ಟ್ರ ರಾಜಧಾನಿಯ ರಿಂಗ್ ರಸ್ತೆಯವರೆಗೆ ಮಾತ್ರ ಮೆರವಣಿಗೆ ನಡೆಸಿದ್ದೇನೆ ಮತ್ತು ಕೆಂಪು ಕೋಟೆಯ ಕಡೆಗೆ ಹೋಗುವ ಯಾವುದೇ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸಮಜಾಯಿಷಿ ನೀಡಿದ್ದಾನೆ.

ಪಂಜಾಬ್‌ನ ಬತಿಂಡಾದ ಸಿಖಾನಾ ಗ್ರಾಮದ ಲಖ್‌ಬೀರ್ ಸಿಂಗ್ ಸಿಧಾನಾ ಅಲಿಯಾಸ್ ಲಖಾ ಸಿಧಾನಾ, “ರೈತರ ಆಂದೋಲನದ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಂಚು ಹೂಡಿದ್ದಾರೆ ಎಂದು ಆರೋಪಿಸುತ್ತಾ, ತಾನು ಯಾವಾಗಲೂ ಶಾಂತಿಗಾಗಿ ಕರೆ ನೀಡುತ್ತ ಬಂದಿದ್ದೇನೆ” ಎಂದು ತನ್ನನ್ನು ಸಮರ್ಥಿಸಿಕೊಂಡಿದ್ದಾನೆ.

ಮೊದಲಿಗೆ ಗ್ಯಾಂಗ್‌ಸ್ಟರ್ ಆಗಿದ್ದ ಈತ ಈಗ ಸಮಾಜಸೇವೆ ಮಾಡುತ್ತಿದ್ದಾನಂತೆ.

“ಮಂಗಳವಾರ ನಡೆದ ಘಟನೆಗಳ ಬಗ್ಗೆ ನನಗೆ ನೋವು ಇದೆ. ಆದರೆ ನಾನು ಇವುಗಳಲ್ಲಿ ಭಾಗಿಯಾಗಿಲ್ಲ. ನಾನು ಜನರನ್ನು ಪ್ರಚೋದಿಸಿದ್ದೇನೆ ಎಂದು ತೋರಿಸುವ ಯಾವುದೇ ವೀಡಿಯೊ, ಫೋಟೋ ಅಥವಾ ಇತರ ಪುರಾವೆಗಳಿಲ್ಲ. ನಮ್ಮ ರೈತ ಮುಖಂಡರನ್ನು ಅನುಸರಿಸಿ ನಾವು ರಿಂಗ್ ರಸ್ತೆಯ ಕಡೆಗೆ ಶಾಂತಿಯುತವಾಗಿ ಸಾಗಿದ್ದೆವು. ಕೆಂಪು ಕೋಟೆಯ ಕಡೆಗೆ ಹೋಗುವ ಯಾವುದೇ ಕಾರ್ಯಸೂಚಿಯನ್ನು ನಾವು ಎಂದಿಗೂ ಹೊಂದಿರಲಿಲ್ಲ ಎಂದು 40 ವರ್ಷದ ಸಿಧಾನಾ ಹೇಳಿದ್ದಾನೆ.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ನವೆಂಬರ್ 26 ರಿಂದ ಸಿಂಘು ಗಡಿಯಲ್ಲಿ ಟಿಕಾಣಿ ಹಾಕಿರುವ ಸಿಧಾನಾ, ಸೋಮವಾರ ಜ.25 ರ ರಾತ್ರಿ ಸಿಂಘು ಗಡಿಯಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪ ಹೊತ್ತಿರುವ ನಟ ದೀಪ್ ಸಿಧು ಜೊತೆಗೆ ವೇದಿಕೆಯನ್ನು ಹಂಚಿಕೊಂಡಿರುವ ಆರೋಪವನ್ನು ನಿರಾಕರಿಸಿದ್ದಾನೆ. ರಿಂಗ್ ರಸ್ತೆಯಲ್ಲಿ ಮೆರವಣಿಗೆ ನಡೆಸಲು ಬಯಸುತ್ತಿದ್ದ ಜನರನ್ನು ನಾನು ಸಮಾಧಾನ ಮಾಡುತ್ತಿದ್ದೆ ಅಷ್ಟೇ ಎಂದು ಹೇಳಿದ್ದಾನೆ.

ಸುಮಾರು 20 ರೈತ ಮುಖಂಡರು ತಮ್ಮ ಕಾರ್ಯಕರ್ತರೊಂದಿಗೆ ರಿಂಗ್ ರೋಡ್‌ವರೆಗೆ ಶಾಂತಿಯುತವಾಗಿ ತೆರಳಿದರು ಮತ್ತು ತಕ್ಷಣವೇ ಹಿಂದಿರುಗಿದರು ಎಂದು ಸಿಧಾನಾ ಹೇಳಿದ್ದಾನೆ.

ಹಳ್ಳಿಗಳಲ್ಲಿ ಸಮಾಜ ಸೇವೆಯ ಕಾರ್ಯಗಳನ್ನು ಮಾಡುವುದಾಗಿ ಹೇಳಿಕೊಳ್ಳುವ ಮಾಲ್ವಾ ಯೂತ್ ಫೆಡರೇಶನ್ ಮುಖ್ಯಸ್ಥರಾಗಿರುವ ಸಿಧಾನಾ ವಿರುದ್ಧ ಪಂಜಾಬ್‌ನಲ್ಲಿ 25 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿಯ ಪ್ರಕರಣಗಳು ಸೇರಿವೆ. ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದಿಂದ ಮಾನವಿಕ ವಿಭಾಗದಲ್ಲಿ ಪದವಿ ಪಡೆದಿರುವ ಈತ, ಸಾಮಾಜಿಕ ಕಾರ್ಯಗಳಿಗಾಗಿ ಅಪರಾಧ ಜಗತ್ತನ್ನು ತೊರೆದಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

2011 ರಲ್ಲಿ ಪೀಪಲ್ಸ್ ಪಾರ್ಟಿ ಆಫ್ ಪಂಜಾಬ್‌ಗೆ ಸೇರಿ, 2013 ರಲ್ಲಿ ತ್ಯಜಿಸಿದ್ದ. ಅಂದಿನಿಂದ, ಮಾಲ್ವಾ ಪ್ರದೇಶದಲ್ಲಿ ಸಿಧಾನಾ ಜನಪ್ರಿಯತೆ ಗಳಿಸಿದ. ದುರ್ಬಲ ವರ್ಗದ ಹಲವಾರು ಯುವತಿಯರ ಮದುವೆಗೆ ಸಹಾಯ ಮಾಡಿ, ಬಡ ಕುಟುಂಬಗಳಿಗೆ ಹಣ ಮತ್ತು ಇತರ ರೀತಿಯ ಸಹಾಯ ಮಾಡಿ, ಮುನ್ನೆಲೆಗೆ ಬಂದ.

ರಸ್ತೆ ಫಲಕಗಳ ಮೇಲಿನ ಇಂಗ್ಲಿಷ್ ಸಂಕೇತಗಳನ್ನು ಪಂಜಾಬಿಯಲ್ಲಿ ಬರೆಯಬೇಕೆಂದು ಒತ್ತಾಯಿಸಿ 2017 ರ ಅಕ್ಟೋಬರ್‌ನಲ್ಲಿ ನಡೆಸಿದ ಪ್ರತಿಭಟನೆಯೊಂದರ ಮೂಲಕ ಸುದ್ದಿಯಾಗಿದ್ದ. ಅಲ್ಲಿ ಗಲಾಟೆ ಸಂಭವಿಸಿದಾಗ ಆತನನ್ನು ಬಂಧಿಸಿ ಫರೀದ್‌ಕೋಟ್ ಮಾಡರ್ನ್ ಜೈಲಿಗೆ ಕಳುಹಿಸಲಾಗಿತ್ತು. ಅಲ್ಲಿ ಭತ್ತದ ತ್ಯಾಜ್ಯವನ್ನು ಸುಡಬಾರದೆಂದು ರೈತರಿಗೆ ಫೇಸ್‌ಬುಕ್ ಮೂಲಕ ಸಲಹೆ ನೀಡಿದ್ದ! ನಂತರ ಆತ‌ನಿಂದ ಸೆಲ್‌ಫೋನ್ ಅನ್ನು ವಶಪಡಿಸಿಕೊಂಡು, ಮೋಸ ಪ್ರಕರಣದಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಮೇ 2019 ರಲ್ಲಿ, ಬಾದಲ್ ಗ್ರಾಮದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸುವಾಗ ಕೊಲೆ ಯತ್ನದ ಪ್ರಕರಣದಲ್ಲಿ ಆತ ಮತ್ತು ಇತರ 60 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈಗ ಈತ ತಾನು ಶಾಂತಿಪ್ರಿಯ, ದೀಪ್ ಸಿಧು ಜೊತೆ ಭಾಗಿಯಾಗಿಲ್ಲ ಎನ್ನುತ್ತಿದ್ದಾನೆ. ಆದರೆ, ಈ ಶಾಂತಿಪ್ರಿಯ ಮಹಾಶಯ, ನಿಗದಿತ ಮಾರ್ಗ ಬಿಟ್ಟು ರಿಂಗ್‌ರೋಡ್ ಮಾರ್ಗದತ್ತ ಹೋಗಿದ್ದೇಕೆ ಎಂಬ ಪ್ರಶ್ನೆಯನ್ನು ಕೇಳಬೇಕಾದ ಪೊಲೀಸರು ಸುಮ್ಮನೇ ಇದ್ದಾರೆ ಮತ್ತು ಇರುತ್ತಾರೆ. ಬಹುಷ: ಸಂಚಿನ ಯೋಜನೆಯಲ್ಲಿ ಈತನಿಗೂ ಪ್ರಮುಖ ಪಾತ್ರ ನೀಡಲಾಗಿತ್ತು ಅಲ್ಲವೆ?


ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...