Homeಮುಖಪುಟಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ - ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ – ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ಈಗ ಈತ ತಾನು ಶಾಂತಿಪ್ರಿಯ, ದೀಪ್ ಸಿಧು ಜೊತೆ ಭಾಗಿಯಲ್ಲ ಎನ್ನುತ್ತಿದ್ದಾನೆ. ಆದರೆ, ಈ ಶಾಂತಿಪ್ರಿಯ ಮಹಾಶಯ, ನಿಗದಿತ ಮಾರ್ಗ ಬಿಟ್ಟು ರಿಂಗ್‌ರೋಡ್ ಮಾರ್ಗದತ್ತ ಹೋಗಿದ್ದೇಕೆ ಎಂಬ ಪ್ರಶ್ನೆಯನ್ನು ಕೇಳಬೇಕಾದ ಪೊಲೀಸರು ಸುಮ್ಮನೇ ಇದ್ದಾರೆ

- Advertisement -
- Advertisement -

ಗಣರಾಜ್ಯೋತ್ಸವದಂದು ಹಿಂಸಾಚಾರಕ್ಕೆ ಕಾರಣವಾದ ಪ್ರತಿಭಟನಾಕಾರರನ್ನು ಪ್ರಚೋದಿಸಿದ್ದಕ್ಕಾಗಿ ದೂಷಿಸಲ್ಪಟ್ಟ ಲಖಾ ಸಿಧಾನಾ, ಸ್ವತಃ ತಾನೇ ಹೇಳಿಕೊಳ್ಳುವಂತೆ, ತಾನು ರಾಷ್ಟ್ರ ರಾಜಧಾನಿಯ ರಿಂಗ್ ರಸ್ತೆಯವರೆಗೆ ಮಾತ್ರ ಮೆರವಣಿಗೆ ನಡೆಸಿದ್ದೇನೆ ಮತ್ತು ಕೆಂಪು ಕೋಟೆಯ ಕಡೆಗೆ ಹೋಗುವ ಯಾವುದೇ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸಮಜಾಯಿಷಿ ನೀಡಿದ್ದಾನೆ.

ಪಂಜಾಬ್‌ನ ಬತಿಂಡಾದ ಸಿಖಾನಾ ಗ್ರಾಮದ ಲಖ್‌ಬೀರ್ ಸಿಂಗ್ ಸಿಧಾನಾ ಅಲಿಯಾಸ್ ಲಖಾ ಸಿಧಾನಾ, “ರೈತರ ಆಂದೋಲನದ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಂಚು ಹೂಡಿದ್ದಾರೆ ಎಂದು ಆರೋಪಿಸುತ್ತಾ, ತಾನು ಯಾವಾಗಲೂ ಶಾಂತಿಗಾಗಿ ಕರೆ ನೀಡುತ್ತ ಬಂದಿದ್ದೇನೆ” ಎಂದು ತನ್ನನ್ನು ಸಮರ್ಥಿಸಿಕೊಂಡಿದ್ದಾನೆ.

ಮೊದಲಿಗೆ ಗ್ಯಾಂಗ್‌ಸ್ಟರ್ ಆಗಿದ್ದ ಈತ ಈಗ ಸಮಾಜಸೇವೆ ಮಾಡುತ್ತಿದ್ದಾನಂತೆ.

“ಮಂಗಳವಾರ ನಡೆದ ಘಟನೆಗಳ ಬಗ್ಗೆ ನನಗೆ ನೋವು ಇದೆ. ಆದರೆ ನಾನು ಇವುಗಳಲ್ಲಿ ಭಾಗಿಯಾಗಿಲ್ಲ. ನಾನು ಜನರನ್ನು ಪ್ರಚೋದಿಸಿದ್ದೇನೆ ಎಂದು ತೋರಿಸುವ ಯಾವುದೇ ವೀಡಿಯೊ, ಫೋಟೋ ಅಥವಾ ಇತರ ಪುರಾವೆಗಳಿಲ್ಲ. ನಮ್ಮ ರೈತ ಮುಖಂಡರನ್ನು ಅನುಸರಿಸಿ ನಾವು ರಿಂಗ್ ರಸ್ತೆಯ ಕಡೆಗೆ ಶಾಂತಿಯುತವಾಗಿ ಸಾಗಿದ್ದೆವು. ಕೆಂಪು ಕೋಟೆಯ ಕಡೆಗೆ ಹೋಗುವ ಯಾವುದೇ ಕಾರ್ಯಸೂಚಿಯನ್ನು ನಾವು ಎಂದಿಗೂ ಹೊಂದಿರಲಿಲ್ಲ ಎಂದು 40 ವರ್ಷದ ಸಿಧಾನಾ ಹೇಳಿದ್ದಾನೆ.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ನವೆಂಬರ್ 26 ರಿಂದ ಸಿಂಘು ಗಡಿಯಲ್ಲಿ ಟಿಕಾಣಿ ಹಾಕಿರುವ ಸಿಧಾನಾ, ಸೋಮವಾರ ಜ.25 ರ ರಾತ್ರಿ ಸಿಂಘು ಗಡಿಯಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪ ಹೊತ್ತಿರುವ ನಟ ದೀಪ್ ಸಿಧು ಜೊತೆಗೆ ವೇದಿಕೆಯನ್ನು ಹಂಚಿಕೊಂಡಿರುವ ಆರೋಪವನ್ನು ನಿರಾಕರಿಸಿದ್ದಾನೆ. ರಿಂಗ್ ರಸ್ತೆಯಲ್ಲಿ ಮೆರವಣಿಗೆ ನಡೆಸಲು ಬಯಸುತ್ತಿದ್ದ ಜನರನ್ನು ನಾನು ಸಮಾಧಾನ ಮಾಡುತ್ತಿದ್ದೆ ಅಷ್ಟೇ ಎಂದು ಹೇಳಿದ್ದಾನೆ.

ಸುಮಾರು 20 ರೈತ ಮುಖಂಡರು ತಮ್ಮ ಕಾರ್ಯಕರ್ತರೊಂದಿಗೆ ರಿಂಗ್ ರೋಡ್‌ವರೆಗೆ ಶಾಂತಿಯುತವಾಗಿ ತೆರಳಿದರು ಮತ್ತು ತಕ್ಷಣವೇ ಹಿಂದಿರುಗಿದರು ಎಂದು ಸಿಧಾನಾ ಹೇಳಿದ್ದಾನೆ.

ಹಳ್ಳಿಗಳಲ್ಲಿ ಸಮಾಜ ಸೇವೆಯ ಕಾರ್ಯಗಳನ್ನು ಮಾಡುವುದಾಗಿ ಹೇಳಿಕೊಳ್ಳುವ ಮಾಲ್ವಾ ಯೂತ್ ಫೆಡರೇಶನ್ ಮುಖ್ಯಸ್ಥರಾಗಿರುವ ಸಿಧಾನಾ ವಿರುದ್ಧ ಪಂಜಾಬ್‌ನಲ್ಲಿ 25 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿಯ ಪ್ರಕರಣಗಳು ಸೇರಿವೆ. ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದಿಂದ ಮಾನವಿಕ ವಿಭಾಗದಲ್ಲಿ ಪದವಿ ಪಡೆದಿರುವ ಈತ, ಸಾಮಾಜಿಕ ಕಾರ್ಯಗಳಿಗಾಗಿ ಅಪರಾಧ ಜಗತ್ತನ್ನು ತೊರೆದಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

2011 ರಲ್ಲಿ ಪೀಪಲ್ಸ್ ಪಾರ್ಟಿ ಆಫ್ ಪಂಜಾಬ್‌ಗೆ ಸೇರಿ, 2013 ರಲ್ಲಿ ತ್ಯಜಿಸಿದ್ದ. ಅಂದಿನಿಂದ, ಮಾಲ್ವಾ ಪ್ರದೇಶದಲ್ಲಿ ಸಿಧಾನಾ ಜನಪ್ರಿಯತೆ ಗಳಿಸಿದ. ದುರ್ಬಲ ವರ್ಗದ ಹಲವಾರು ಯುವತಿಯರ ಮದುವೆಗೆ ಸಹಾಯ ಮಾಡಿ, ಬಡ ಕುಟುಂಬಗಳಿಗೆ ಹಣ ಮತ್ತು ಇತರ ರೀತಿಯ ಸಹಾಯ ಮಾಡಿ, ಮುನ್ನೆಲೆಗೆ ಬಂದ.

ರಸ್ತೆ ಫಲಕಗಳ ಮೇಲಿನ ಇಂಗ್ಲಿಷ್ ಸಂಕೇತಗಳನ್ನು ಪಂಜಾಬಿಯಲ್ಲಿ ಬರೆಯಬೇಕೆಂದು ಒತ್ತಾಯಿಸಿ 2017 ರ ಅಕ್ಟೋಬರ್‌ನಲ್ಲಿ ನಡೆಸಿದ ಪ್ರತಿಭಟನೆಯೊಂದರ ಮೂಲಕ ಸುದ್ದಿಯಾಗಿದ್ದ. ಅಲ್ಲಿ ಗಲಾಟೆ ಸಂಭವಿಸಿದಾಗ ಆತನನ್ನು ಬಂಧಿಸಿ ಫರೀದ್‌ಕೋಟ್ ಮಾಡರ್ನ್ ಜೈಲಿಗೆ ಕಳುಹಿಸಲಾಗಿತ್ತು. ಅಲ್ಲಿ ಭತ್ತದ ತ್ಯಾಜ್ಯವನ್ನು ಸುಡಬಾರದೆಂದು ರೈತರಿಗೆ ಫೇಸ್‌ಬುಕ್ ಮೂಲಕ ಸಲಹೆ ನೀಡಿದ್ದ! ನಂತರ ಆತ‌ನಿಂದ ಸೆಲ್‌ಫೋನ್ ಅನ್ನು ವಶಪಡಿಸಿಕೊಂಡು, ಮೋಸ ಪ್ರಕರಣದಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಮೇ 2019 ರಲ್ಲಿ, ಬಾದಲ್ ಗ್ರಾಮದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸುವಾಗ ಕೊಲೆ ಯತ್ನದ ಪ್ರಕರಣದಲ್ಲಿ ಆತ ಮತ್ತು ಇತರ 60 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈಗ ಈತ ತಾನು ಶಾಂತಿಪ್ರಿಯ, ದೀಪ್ ಸಿಧು ಜೊತೆ ಭಾಗಿಯಾಗಿಲ್ಲ ಎನ್ನುತ್ತಿದ್ದಾನೆ. ಆದರೆ, ಈ ಶಾಂತಿಪ್ರಿಯ ಮಹಾಶಯ, ನಿಗದಿತ ಮಾರ್ಗ ಬಿಟ್ಟು ರಿಂಗ್‌ರೋಡ್ ಮಾರ್ಗದತ್ತ ಹೋಗಿದ್ದೇಕೆ ಎಂಬ ಪ್ರಶ್ನೆಯನ್ನು ಕೇಳಬೇಕಾದ ಪೊಲೀಸರು ಸುಮ್ಮನೇ ಇದ್ದಾರೆ ಮತ್ತು ಇರುತ್ತಾರೆ. ಬಹುಷ: ಸಂಚಿನ ಯೋಜನೆಯಲ್ಲಿ ಈತನಿಗೂ ಪ್ರಮುಖ ಪಾತ್ರ ನೀಡಲಾಗಿತ್ತು ಅಲ್ಲವೆ?


ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...