Homeಮುಖಪುಟಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ - ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ – ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ಈಗ ಈತ ತಾನು ಶಾಂತಿಪ್ರಿಯ, ದೀಪ್ ಸಿಧು ಜೊತೆ ಭಾಗಿಯಲ್ಲ ಎನ್ನುತ್ತಿದ್ದಾನೆ. ಆದರೆ, ಈ ಶಾಂತಿಪ್ರಿಯ ಮಹಾಶಯ, ನಿಗದಿತ ಮಾರ್ಗ ಬಿಟ್ಟು ರಿಂಗ್‌ರೋಡ್ ಮಾರ್ಗದತ್ತ ಹೋಗಿದ್ದೇಕೆ ಎಂಬ ಪ್ರಶ್ನೆಯನ್ನು ಕೇಳಬೇಕಾದ ಪೊಲೀಸರು ಸುಮ್ಮನೇ ಇದ್ದಾರೆ

- Advertisement -
- Advertisement -

ಗಣರಾಜ್ಯೋತ್ಸವದಂದು ಹಿಂಸಾಚಾರಕ್ಕೆ ಕಾರಣವಾದ ಪ್ರತಿಭಟನಾಕಾರರನ್ನು ಪ್ರಚೋದಿಸಿದ್ದಕ್ಕಾಗಿ ದೂಷಿಸಲ್ಪಟ್ಟ ಲಖಾ ಸಿಧಾನಾ, ಸ್ವತಃ ತಾನೇ ಹೇಳಿಕೊಳ್ಳುವಂತೆ, ತಾನು ರಾಷ್ಟ್ರ ರಾಜಧಾನಿಯ ರಿಂಗ್ ರಸ್ತೆಯವರೆಗೆ ಮಾತ್ರ ಮೆರವಣಿಗೆ ನಡೆಸಿದ್ದೇನೆ ಮತ್ತು ಕೆಂಪು ಕೋಟೆಯ ಕಡೆಗೆ ಹೋಗುವ ಯಾವುದೇ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸಮಜಾಯಿಷಿ ನೀಡಿದ್ದಾನೆ.

ಪಂಜಾಬ್‌ನ ಬತಿಂಡಾದ ಸಿಖಾನಾ ಗ್ರಾಮದ ಲಖ್‌ಬೀರ್ ಸಿಂಗ್ ಸಿಧಾನಾ ಅಲಿಯಾಸ್ ಲಖಾ ಸಿಧಾನಾ, “ರೈತರ ಆಂದೋಲನದ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಂಚು ಹೂಡಿದ್ದಾರೆ ಎಂದು ಆರೋಪಿಸುತ್ತಾ, ತಾನು ಯಾವಾಗಲೂ ಶಾಂತಿಗಾಗಿ ಕರೆ ನೀಡುತ್ತ ಬಂದಿದ್ದೇನೆ” ಎಂದು ತನ್ನನ್ನು ಸಮರ್ಥಿಸಿಕೊಂಡಿದ್ದಾನೆ.

ಮೊದಲಿಗೆ ಗ್ಯಾಂಗ್‌ಸ್ಟರ್ ಆಗಿದ್ದ ಈತ ಈಗ ಸಮಾಜಸೇವೆ ಮಾಡುತ್ತಿದ್ದಾನಂತೆ.

“ಮಂಗಳವಾರ ನಡೆದ ಘಟನೆಗಳ ಬಗ್ಗೆ ನನಗೆ ನೋವು ಇದೆ. ಆದರೆ ನಾನು ಇವುಗಳಲ್ಲಿ ಭಾಗಿಯಾಗಿಲ್ಲ. ನಾನು ಜನರನ್ನು ಪ್ರಚೋದಿಸಿದ್ದೇನೆ ಎಂದು ತೋರಿಸುವ ಯಾವುದೇ ವೀಡಿಯೊ, ಫೋಟೋ ಅಥವಾ ಇತರ ಪುರಾವೆಗಳಿಲ್ಲ. ನಮ್ಮ ರೈತ ಮುಖಂಡರನ್ನು ಅನುಸರಿಸಿ ನಾವು ರಿಂಗ್ ರಸ್ತೆಯ ಕಡೆಗೆ ಶಾಂತಿಯುತವಾಗಿ ಸಾಗಿದ್ದೆವು. ಕೆಂಪು ಕೋಟೆಯ ಕಡೆಗೆ ಹೋಗುವ ಯಾವುದೇ ಕಾರ್ಯಸೂಚಿಯನ್ನು ನಾವು ಎಂದಿಗೂ ಹೊಂದಿರಲಿಲ್ಲ ಎಂದು 40 ವರ್ಷದ ಸಿಧಾನಾ ಹೇಳಿದ್ದಾನೆ.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ನವೆಂಬರ್ 26 ರಿಂದ ಸಿಂಘು ಗಡಿಯಲ್ಲಿ ಟಿಕಾಣಿ ಹಾಕಿರುವ ಸಿಧಾನಾ, ಸೋಮವಾರ ಜ.25 ರ ರಾತ್ರಿ ಸಿಂಘು ಗಡಿಯಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪ ಹೊತ್ತಿರುವ ನಟ ದೀಪ್ ಸಿಧು ಜೊತೆಗೆ ವೇದಿಕೆಯನ್ನು ಹಂಚಿಕೊಂಡಿರುವ ಆರೋಪವನ್ನು ನಿರಾಕರಿಸಿದ್ದಾನೆ. ರಿಂಗ್ ರಸ್ತೆಯಲ್ಲಿ ಮೆರವಣಿಗೆ ನಡೆಸಲು ಬಯಸುತ್ತಿದ್ದ ಜನರನ್ನು ನಾನು ಸಮಾಧಾನ ಮಾಡುತ್ತಿದ್ದೆ ಅಷ್ಟೇ ಎಂದು ಹೇಳಿದ್ದಾನೆ.

ಸುಮಾರು 20 ರೈತ ಮುಖಂಡರು ತಮ್ಮ ಕಾರ್ಯಕರ್ತರೊಂದಿಗೆ ರಿಂಗ್ ರೋಡ್‌ವರೆಗೆ ಶಾಂತಿಯುತವಾಗಿ ತೆರಳಿದರು ಮತ್ತು ತಕ್ಷಣವೇ ಹಿಂದಿರುಗಿದರು ಎಂದು ಸಿಧಾನಾ ಹೇಳಿದ್ದಾನೆ.

ಹಳ್ಳಿಗಳಲ್ಲಿ ಸಮಾಜ ಸೇವೆಯ ಕಾರ್ಯಗಳನ್ನು ಮಾಡುವುದಾಗಿ ಹೇಳಿಕೊಳ್ಳುವ ಮಾಲ್ವಾ ಯೂತ್ ಫೆಡರೇಶನ್ ಮುಖ್ಯಸ್ಥರಾಗಿರುವ ಸಿಧಾನಾ ವಿರುದ್ಧ ಪಂಜಾಬ್‌ನಲ್ಲಿ 25 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿಯ ಪ್ರಕರಣಗಳು ಸೇರಿವೆ. ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದಿಂದ ಮಾನವಿಕ ವಿಭಾಗದಲ್ಲಿ ಪದವಿ ಪಡೆದಿರುವ ಈತ, ಸಾಮಾಜಿಕ ಕಾರ್ಯಗಳಿಗಾಗಿ ಅಪರಾಧ ಜಗತ್ತನ್ನು ತೊರೆದಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

2011 ರಲ್ಲಿ ಪೀಪಲ್ಸ್ ಪಾರ್ಟಿ ಆಫ್ ಪಂಜಾಬ್‌ಗೆ ಸೇರಿ, 2013 ರಲ್ಲಿ ತ್ಯಜಿಸಿದ್ದ. ಅಂದಿನಿಂದ, ಮಾಲ್ವಾ ಪ್ರದೇಶದಲ್ಲಿ ಸಿಧಾನಾ ಜನಪ್ರಿಯತೆ ಗಳಿಸಿದ. ದುರ್ಬಲ ವರ್ಗದ ಹಲವಾರು ಯುವತಿಯರ ಮದುವೆಗೆ ಸಹಾಯ ಮಾಡಿ, ಬಡ ಕುಟುಂಬಗಳಿಗೆ ಹಣ ಮತ್ತು ಇತರ ರೀತಿಯ ಸಹಾಯ ಮಾಡಿ, ಮುನ್ನೆಲೆಗೆ ಬಂದ.

ರಸ್ತೆ ಫಲಕಗಳ ಮೇಲಿನ ಇಂಗ್ಲಿಷ್ ಸಂಕೇತಗಳನ್ನು ಪಂಜಾಬಿಯಲ್ಲಿ ಬರೆಯಬೇಕೆಂದು ಒತ್ತಾಯಿಸಿ 2017 ರ ಅಕ್ಟೋಬರ್‌ನಲ್ಲಿ ನಡೆಸಿದ ಪ್ರತಿಭಟನೆಯೊಂದರ ಮೂಲಕ ಸುದ್ದಿಯಾಗಿದ್ದ. ಅಲ್ಲಿ ಗಲಾಟೆ ಸಂಭವಿಸಿದಾಗ ಆತನನ್ನು ಬಂಧಿಸಿ ಫರೀದ್‌ಕೋಟ್ ಮಾಡರ್ನ್ ಜೈಲಿಗೆ ಕಳುಹಿಸಲಾಗಿತ್ತು. ಅಲ್ಲಿ ಭತ್ತದ ತ್ಯಾಜ್ಯವನ್ನು ಸುಡಬಾರದೆಂದು ರೈತರಿಗೆ ಫೇಸ್‌ಬುಕ್ ಮೂಲಕ ಸಲಹೆ ನೀಡಿದ್ದ! ನಂತರ ಆತ‌ನಿಂದ ಸೆಲ್‌ಫೋನ್ ಅನ್ನು ವಶಪಡಿಸಿಕೊಂಡು, ಮೋಸ ಪ್ರಕರಣದಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಮೇ 2019 ರಲ್ಲಿ, ಬಾದಲ್ ಗ್ರಾಮದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸುವಾಗ ಕೊಲೆ ಯತ್ನದ ಪ್ರಕರಣದಲ್ಲಿ ಆತ ಮತ್ತು ಇತರ 60 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈಗ ಈತ ತಾನು ಶಾಂತಿಪ್ರಿಯ, ದೀಪ್ ಸಿಧು ಜೊತೆ ಭಾಗಿಯಾಗಿಲ್ಲ ಎನ್ನುತ್ತಿದ್ದಾನೆ. ಆದರೆ, ಈ ಶಾಂತಿಪ್ರಿಯ ಮಹಾಶಯ, ನಿಗದಿತ ಮಾರ್ಗ ಬಿಟ್ಟು ರಿಂಗ್‌ರೋಡ್ ಮಾರ್ಗದತ್ತ ಹೋಗಿದ್ದೇಕೆ ಎಂಬ ಪ್ರಶ್ನೆಯನ್ನು ಕೇಳಬೇಕಾದ ಪೊಲೀಸರು ಸುಮ್ಮನೇ ಇದ್ದಾರೆ ಮತ್ತು ಇರುತ್ತಾರೆ. ಬಹುಷ: ಸಂಚಿನ ಯೋಜನೆಯಲ್ಲಿ ಈತನಿಗೂ ಪ್ರಮುಖ ಪಾತ್ರ ನೀಡಲಾಗಿತ್ತು ಅಲ್ಲವೆ?


ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...