Homeಮುಖಪುಟಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ - ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ – ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ಈಗ ಈತ ತಾನು ಶಾಂತಿಪ್ರಿಯ, ದೀಪ್ ಸಿಧು ಜೊತೆ ಭಾಗಿಯಲ್ಲ ಎನ್ನುತ್ತಿದ್ದಾನೆ. ಆದರೆ, ಈ ಶಾಂತಿಪ್ರಿಯ ಮಹಾಶಯ, ನಿಗದಿತ ಮಾರ್ಗ ಬಿಟ್ಟು ರಿಂಗ್‌ರೋಡ್ ಮಾರ್ಗದತ್ತ ಹೋಗಿದ್ದೇಕೆ ಎಂಬ ಪ್ರಶ್ನೆಯನ್ನು ಕೇಳಬೇಕಾದ ಪೊಲೀಸರು ಸುಮ್ಮನೇ ಇದ್ದಾರೆ

- Advertisement -
- Advertisement -

ಗಣರಾಜ್ಯೋತ್ಸವದಂದು ಹಿಂಸಾಚಾರಕ್ಕೆ ಕಾರಣವಾದ ಪ್ರತಿಭಟನಾಕಾರರನ್ನು ಪ್ರಚೋದಿಸಿದ್ದಕ್ಕಾಗಿ ದೂಷಿಸಲ್ಪಟ್ಟ ಲಖಾ ಸಿಧಾನಾ, ಸ್ವತಃ ತಾನೇ ಹೇಳಿಕೊಳ್ಳುವಂತೆ, ತಾನು ರಾಷ್ಟ್ರ ರಾಜಧಾನಿಯ ರಿಂಗ್ ರಸ್ತೆಯವರೆಗೆ ಮಾತ್ರ ಮೆರವಣಿಗೆ ನಡೆಸಿದ್ದೇನೆ ಮತ್ತು ಕೆಂಪು ಕೋಟೆಯ ಕಡೆಗೆ ಹೋಗುವ ಯಾವುದೇ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸಮಜಾಯಿಷಿ ನೀಡಿದ್ದಾನೆ.

ಪಂಜಾಬ್‌ನ ಬತಿಂಡಾದ ಸಿಖಾನಾ ಗ್ರಾಮದ ಲಖ್‌ಬೀರ್ ಸಿಂಗ್ ಸಿಧಾನಾ ಅಲಿಯಾಸ್ ಲಖಾ ಸಿಧಾನಾ, “ರೈತರ ಆಂದೋಲನದ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಂಚು ಹೂಡಿದ್ದಾರೆ ಎಂದು ಆರೋಪಿಸುತ್ತಾ, ತಾನು ಯಾವಾಗಲೂ ಶಾಂತಿಗಾಗಿ ಕರೆ ನೀಡುತ್ತ ಬಂದಿದ್ದೇನೆ” ಎಂದು ತನ್ನನ್ನು ಸಮರ್ಥಿಸಿಕೊಂಡಿದ್ದಾನೆ.

ಮೊದಲಿಗೆ ಗ್ಯಾಂಗ್‌ಸ್ಟರ್ ಆಗಿದ್ದ ಈತ ಈಗ ಸಮಾಜಸೇವೆ ಮಾಡುತ್ತಿದ್ದಾನಂತೆ.

“ಮಂಗಳವಾರ ನಡೆದ ಘಟನೆಗಳ ಬಗ್ಗೆ ನನಗೆ ನೋವು ಇದೆ. ಆದರೆ ನಾನು ಇವುಗಳಲ್ಲಿ ಭಾಗಿಯಾಗಿಲ್ಲ. ನಾನು ಜನರನ್ನು ಪ್ರಚೋದಿಸಿದ್ದೇನೆ ಎಂದು ತೋರಿಸುವ ಯಾವುದೇ ವೀಡಿಯೊ, ಫೋಟೋ ಅಥವಾ ಇತರ ಪುರಾವೆಗಳಿಲ್ಲ. ನಮ್ಮ ರೈತ ಮುಖಂಡರನ್ನು ಅನುಸರಿಸಿ ನಾವು ರಿಂಗ್ ರಸ್ತೆಯ ಕಡೆಗೆ ಶಾಂತಿಯುತವಾಗಿ ಸಾಗಿದ್ದೆವು. ಕೆಂಪು ಕೋಟೆಯ ಕಡೆಗೆ ಹೋಗುವ ಯಾವುದೇ ಕಾರ್ಯಸೂಚಿಯನ್ನು ನಾವು ಎಂದಿಗೂ ಹೊಂದಿರಲಿಲ್ಲ ಎಂದು 40 ವರ್ಷದ ಸಿಧಾನಾ ಹೇಳಿದ್ದಾನೆ.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ನವೆಂಬರ್ 26 ರಿಂದ ಸಿಂಘು ಗಡಿಯಲ್ಲಿ ಟಿಕಾಣಿ ಹಾಕಿರುವ ಸಿಧಾನಾ, ಸೋಮವಾರ ಜ.25 ರ ರಾತ್ರಿ ಸಿಂಘು ಗಡಿಯಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪ ಹೊತ್ತಿರುವ ನಟ ದೀಪ್ ಸಿಧು ಜೊತೆಗೆ ವೇದಿಕೆಯನ್ನು ಹಂಚಿಕೊಂಡಿರುವ ಆರೋಪವನ್ನು ನಿರಾಕರಿಸಿದ್ದಾನೆ. ರಿಂಗ್ ರಸ್ತೆಯಲ್ಲಿ ಮೆರವಣಿಗೆ ನಡೆಸಲು ಬಯಸುತ್ತಿದ್ದ ಜನರನ್ನು ನಾನು ಸಮಾಧಾನ ಮಾಡುತ್ತಿದ್ದೆ ಅಷ್ಟೇ ಎಂದು ಹೇಳಿದ್ದಾನೆ.

ಸುಮಾರು 20 ರೈತ ಮುಖಂಡರು ತಮ್ಮ ಕಾರ್ಯಕರ್ತರೊಂದಿಗೆ ರಿಂಗ್ ರೋಡ್‌ವರೆಗೆ ಶಾಂತಿಯುತವಾಗಿ ತೆರಳಿದರು ಮತ್ತು ತಕ್ಷಣವೇ ಹಿಂದಿರುಗಿದರು ಎಂದು ಸಿಧಾನಾ ಹೇಳಿದ್ದಾನೆ.

ಹಳ್ಳಿಗಳಲ್ಲಿ ಸಮಾಜ ಸೇವೆಯ ಕಾರ್ಯಗಳನ್ನು ಮಾಡುವುದಾಗಿ ಹೇಳಿಕೊಳ್ಳುವ ಮಾಲ್ವಾ ಯೂತ್ ಫೆಡರೇಶನ್ ಮುಖ್ಯಸ್ಥರಾಗಿರುವ ಸಿಧಾನಾ ವಿರುದ್ಧ ಪಂಜಾಬ್‌ನಲ್ಲಿ 25 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿಯ ಪ್ರಕರಣಗಳು ಸೇರಿವೆ. ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದಿಂದ ಮಾನವಿಕ ವಿಭಾಗದಲ್ಲಿ ಪದವಿ ಪಡೆದಿರುವ ಈತ, ಸಾಮಾಜಿಕ ಕಾರ್ಯಗಳಿಗಾಗಿ ಅಪರಾಧ ಜಗತ್ತನ್ನು ತೊರೆದಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

2011 ರಲ್ಲಿ ಪೀಪಲ್ಸ್ ಪಾರ್ಟಿ ಆಫ್ ಪಂಜಾಬ್‌ಗೆ ಸೇರಿ, 2013 ರಲ್ಲಿ ತ್ಯಜಿಸಿದ್ದ. ಅಂದಿನಿಂದ, ಮಾಲ್ವಾ ಪ್ರದೇಶದಲ್ಲಿ ಸಿಧಾನಾ ಜನಪ್ರಿಯತೆ ಗಳಿಸಿದ. ದುರ್ಬಲ ವರ್ಗದ ಹಲವಾರು ಯುವತಿಯರ ಮದುವೆಗೆ ಸಹಾಯ ಮಾಡಿ, ಬಡ ಕುಟುಂಬಗಳಿಗೆ ಹಣ ಮತ್ತು ಇತರ ರೀತಿಯ ಸಹಾಯ ಮಾಡಿ, ಮುನ್ನೆಲೆಗೆ ಬಂದ.

ರಸ್ತೆ ಫಲಕಗಳ ಮೇಲಿನ ಇಂಗ್ಲಿಷ್ ಸಂಕೇತಗಳನ್ನು ಪಂಜಾಬಿಯಲ್ಲಿ ಬರೆಯಬೇಕೆಂದು ಒತ್ತಾಯಿಸಿ 2017 ರ ಅಕ್ಟೋಬರ್‌ನಲ್ಲಿ ನಡೆಸಿದ ಪ್ರತಿಭಟನೆಯೊಂದರ ಮೂಲಕ ಸುದ್ದಿಯಾಗಿದ್ದ. ಅಲ್ಲಿ ಗಲಾಟೆ ಸಂಭವಿಸಿದಾಗ ಆತನನ್ನು ಬಂಧಿಸಿ ಫರೀದ್‌ಕೋಟ್ ಮಾಡರ್ನ್ ಜೈಲಿಗೆ ಕಳುಹಿಸಲಾಗಿತ್ತು. ಅಲ್ಲಿ ಭತ್ತದ ತ್ಯಾಜ್ಯವನ್ನು ಸುಡಬಾರದೆಂದು ರೈತರಿಗೆ ಫೇಸ್‌ಬುಕ್ ಮೂಲಕ ಸಲಹೆ ನೀಡಿದ್ದ! ನಂತರ ಆತ‌ನಿಂದ ಸೆಲ್‌ಫೋನ್ ಅನ್ನು ವಶಪಡಿಸಿಕೊಂಡು, ಮೋಸ ಪ್ರಕರಣದಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಮೇ 2019 ರಲ್ಲಿ, ಬಾದಲ್ ಗ್ರಾಮದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸುವಾಗ ಕೊಲೆ ಯತ್ನದ ಪ್ರಕರಣದಲ್ಲಿ ಆತ ಮತ್ತು ಇತರ 60 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈಗ ಈತ ತಾನು ಶಾಂತಿಪ್ರಿಯ, ದೀಪ್ ಸಿಧು ಜೊತೆ ಭಾಗಿಯಾಗಿಲ್ಲ ಎನ್ನುತ್ತಿದ್ದಾನೆ. ಆದರೆ, ಈ ಶಾಂತಿಪ್ರಿಯ ಮಹಾಶಯ, ನಿಗದಿತ ಮಾರ್ಗ ಬಿಟ್ಟು ರಿಂಗ್‌ರೋಡ್ ಮಾರ್ಗದತ್ತ ಹೋಗಿದ್ದೇಕೆ ಎಂಬ ಪ್ರಶ್ನೆಯನ್ನು ಕೇಳಬೇಕಾದ ಪೊಲೀಸರು ಸುಮ್ಮನೇ ಇದ್ದಾರೆ ಮತ್ತು ಇರುತ್ತಾರೆ. ಬಹುಷ: ಸಂಚಿನ ಯೋಜನೆಯಲ್ಲಿ ಈತನಿಗೂ ಪ್ರಮುಖ ಪಾತ್ರ ನೀಡಲಾಗಿತ್ತು ಅಲ್ಲವೆ?


ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...