Homeಮುಖಪುಟಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ - ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ – ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ಈಗ ಈತ ತಾನು ಶಾಂತಿಪ್ರಿಯ, ದೀಪ್ ಸಿಧು ಜೊತೆ ಭಾಗಿಯಲ್ಲ ಎನ್ನುತ್ತಿದ್ದಾನೆ. ಆದರೆ, ಈ ಶಾಂತಿಪ್ರಿಯ ಮಹಾಶಯ, ನಿಗದಿತ ಮಾರ್ಗ ಬಿಟ್ಟು ರಿಂಗ್‌ರೋಡ್ ಮಾರ್ಗದತ್ತ ಹೋಗಿದ್ದೇಕೆ ಎಂಬ ಪ್ರಶ್ನೆಯನ್ನು ಕೇಳಬೇಕಾದ ಪೊಲೀಸರು ಸುಮ್ಮನೇ ಇದ್ದಾರೆ

- Advertisement -
- Advertisement -

ಗಣರಾಜ್ಯೋತ್ಸವದಂದು ಹಿಂಸಾಚಾರಕ್ಕೆ ಕಾರಣವಾದ ಪ್ರತಿಭಟನಾಕಾರರನ್ನು ಪ್ರಚೋದಿಸಿದ್ದಕ್ಕಾಗಿ ದೂಷಿಸಲ್ಪಟ್ಟ ಲಖಾ ಸಿಧಾನಾ, ಸ್ವತಃ ತಾನೇ ಹೇಳಿಕೊಳ್ಳುವಂತೆ, ತಾನು ರಾಷ್ಟ್ರ ರಾಜಧಾನಿಯ ರಿಂಗ್ ರಸ್ತೆಯವರೆಗೆ ಮಾತ್ರ ಮೆರವಣಿಗೆ ನಡೆಸಿದ್ದೇನೆ ಮತ್ತು ಕೆಂಪು ಕೋಟೆಯ ಕಡೆಗೆ ಹೋಗುವ ಯಾವುದೇ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸಮಜಾಯಿಷಿ ನೀಡಿದ್ದಾನೆ.

ಪಂಜಾಬ್‌ನ ಬತಿಂಡಾದ ಸಿಖಾನಾ ಗ್ರಾಮದ ಲಖ್‌ಬೀರ್ ಸಿಂಗ್ ಸಿಧಾನಾ ಅಲಿಯಾಸ್ ಲಖಾ ಸಿಧಾನಾ, “ರೈತರ ಆಂದೋಲನದ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಂಚು ಹೂಡಿದ್ದಾರೆ ಎಂದು ಆರೋಪಿಸುತ್ತಾ, ತಾನು ಯಾವಾಗಲೂ ಶಾಂತಿಗಾಗಿ ಕರೆ ನೀಡುತ್ತ ಬಂದಿದ್ದೇನೆ” ಎಂದು ತನ್ನನ್ನು ಸಮರ್ಥಿಸಿಕೊಂಡಿದ್ದಾನೆ.

ಮೊದಲಿಗೆ ಗ್ಯಾಂಗ್‌ಸ್ಟರ್ ಆಗಿದ್ದ ಈತ ಈಗ ಸಮಾಜಸೇವೆ ಮಾಡುತ್ತಿದ್ದಾನಂತೆ.

“ಮಂಗಳವಾರ ನಡೆದ ಘಟನೆಗಳ ಬಗ್ಗೆ ನನಗೆ ನೋವು ಇದೆ. ಆದರೆ ನಾನು ಇವುಗಳಲ್ಲಿ ಭಾಗಿಯಾಗಿಲ್ಲ. ನಾನು ಜನರನ್ನು ಪ್ರಚೋದಿಸಿದ್ದೇನೆ ಎಂದು ತೋರಿಸುವ ಯಾವುದೇ ವೀಡಿಯೊ, ಫೋಟೋ ಅಥವಾ ಇತರ ಪುರಾವೆಗಳಿಲ್ಲ. ನಮ್ಮ ರೈತ ಮುಖಂಡರನ್ನು ಅನುಸರಿಸಿ ನಾವು ರಿಂಗ್ ರಸ್ತೆಯ ಕಡೆಗೆ ಶಾಂತಿಯುತವಾಗಿ ಸಾಗಿದ್ದೆವು. ಕೆಂಪು ಕೋಟೆಯ ಕಡೆಗೆ ಹೋಗುವ ಯಾವುದೇ ಕಾರ್ಯಸೂಚಿಯನ್ನು ನಾವು ಎಂದಿಗೂ ಹೊಂದಿರಲಿಲ್ಲ ಎಂದು 40 ವರ್ಷದ ಸಿಧಾನಾ ಹೇಳಿದ್ದಾನೆ.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ನವೆಂಬರ್ 26 ರಿಂದ ಸಿಂಘು ಗಡಿಯಲ್ಲಿ ಟಿಕಾಣಿ ಹಾಕಿರುವ ಸಿಧಾನಾ, ಸೋಮವಾರ ಜ.25 ರ ರಾತ್ರಿ ಸಿಂಘು ಗಡಿಯಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪ ಹೊತ್ತಿರುವ ನಟ ದೀಪ್ ಸಿಧು ಜೊತೆಗೆ ವೇದಿಕೆಯನ್ನು ಹಂಚಿಕೊಂಡಿರುವ ಆರೋಪವನ್ನು ನಿರಾಕರಿಸಿದ್ದಾನೆ. ರಿಂಗ್ ರಸ್ತೆಯಲ್ಲಿ ಮೆರವಣಿಗೆ ನಡೆಸಲು ಬಯಸುತ್ತಿದ್ದ ಜನರನ್ನು ನಾನು ಸಮಾಧಾನ ಮಾಡುತ್ತಿದ್ದೆ ಅಷ್ಟೇ ಎಂದು ಹೇಳಿದ್ದಾನೆ.

ಸುಮಾರು 20 ರೈತ ಮುಖಂಡರು ತಮ್ಮ ಕಾರ್ಯಕರ್ತರೊಂದಿಗೆ ರಿಂಗ್ ರೋಡ್‌ವರೆಗೆ ಶಾಂತಿಯುತವಾಗಿ ತೆರಳಿದರು ಮತ್ತು ತಕ್ಷಣವೇ ಹಿಂದಿರುಗಿದರು ಎಂದು ಸಿಧಾನಾ ಹೇಳಿದ್ದಾನೆ.

ಹಳ್ಳಿಗಳಲ್ಲಿ ಸಮಾಜ ಸೇವೆಯ ಕಾರ್ಯಗಳನ್ನು ಮಾಡುವುದಾಗಿ ಹೇಳಿಕೊಳ್ಳುವ ಮಾಲ್ವಾ ಯೂತ್ ಫೆಡರೇಶನ್ ಮುಖ್ಯಸ್ಥರಾಗಿರುವ ಸಿಧಾನಾ ವಿರುದ್ಧ ಪಂಜಾಬ್‌ನಲ್ಲಿ 25 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿಯ ಪ್ರಕರಣಗಳು ಸೇರಿವೆ. ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದಿಂದ ಮಾನವಿಕ ವಿಭಾಗದಲ್ಲಿ ಪದವಿ ಪಡೆದಿರುವ ಈತ, ಸಾಮಾಜಿಕ ಕಾರ್ಯಗಳಿಗಾಗಿ ಅಪರಾಧ ಜಗತ್ತನ್ನು ತೊರೆದಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

2011 ರಲ್ಲಿ ಪೀಪಲ್ಸ್ ಪಾರ್ಟಿ ಆಫ್ ಪಂಜಾಬ್‌ಗೆ ಸೇರಿ, 2013 ರಲ್ಲಿ ತ್ಯಜಿಸಿದ್ದ. ಅಂದಿನಿಂದ, ಮಾಲ್ವಾ ಪ್ರದೇಶದಲ್ಲಿ ಸಿಧಾನಾ ಜನಪ್ರಿಯತೆ ಗಳಿಸಿದ. ದುರ್ಬಲ ವರ್ಗದ ಹಲವಾರು ಯುವತಿಯರ ಮದುವೆಗೆ ಸಹಾಯ ಮಾಡಿ, ಬಡ ಕುಟುಂಬಗಳಿಗೆ ಹಣ ಮತ್ತು ಇತರ ರೀತಿಯ ಸಹಾಯ ಮಾಡಿ, ಮುನ್ನೆಲೆಗೆ ಬಂದ.

ರಸ್ತೆ ಫಲಕಗಳ ಮೇಲಿನ ಇಂಗ್ಲಿಷ್ ಸಂಕೇತಗಳನ್ನು ಪಂಜಾಬಿಯಲ್ಲಿ ಬರೆಯಬೇಕೆಂದು ಒತ್ತಾಯಿಸಿ 2017 ರ ಅಕ್ಟೋಬರ್‌ನಲ್ಲಿ ನಡೆಸಿದ ಪ್ರತಿಭಟನೆಯೊಂದರ ಮೂಲಕ ಸುದ್ದಿಯಾಗಿದ್ದ. ಅಲ್ಲಿ ಗಲಾಟೆ ಸಂಭವಿಸಿದಾಗ ಆತನನ್ನು ಬಂಧಿಸಿ ಫರೀದ್‌ಕೋಟ್ ಮಾಡರ್ನ್ ಜೈಲಿಗೆ ಕಳುಹಿಸಲಾಗಿತ್ತು. ಅಲ್ಲಿ ಭತ್ತದ ತ್ಯಾಜ್ಯವನ್ನು ಸುಡಬಾರದೆಂದು ರೈತರಿಗೆ ಫೇಸ್‌ಬುಕ್ ಮೂಲಕ ಸಲಹೆ ನೀಡಿದ್ದ! ನಂತರ ಆತ‌ನಿಂದ ಸೆಲ್‌ಫೋನ್ ಅನ್ನು ವಶಪಡಿಸಿಕೊಂಡು, ಮೋಸ ಪ್ರಕರಣದಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಮೇ 2019 ರಲ್ಲಿ, ಬಾದಲ್ ಗ್ರಾಮದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸುವಾಗ ಕೊಲೆ ಯತ್ನದ ಪ್ರಕರಣದಲ್ಲಿ ಆತ ಮತ್ತು ಇತರ 60 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈಗ ಈತ ತಾನು ಶಾಂತಿಪ್ರಿಯ, ದೀಪ್ ಸಿಧು ಜೊತೆ ಭಾಗಿಯಾಗಿಲ್ಲ ಎನ್ನುತ್ತಿದ್ದಾನೆ. ಆದರೆ, ಈ ಶಾಂತಿಪ್ರಿಯ ಮಹಾಶಯ, ನಿಗದಿತ ಮಾರ್ಗ ಬಿಟ್ಟು ರಿಂಗ್‌ರೋಡ್ ಮಾರ್ಗದತ್ತ ಹೋಗಿದ್ದೇಕೆ ಎಂಬ ಪ್ರಶ್ನೆಯನ್ನು ಕೇಳಬೇಕಾದ ಪೊಲೀಸರು ಸುಮ್ಮನೇ ಇದ್ದಾರೆ ಮತ್ತು ಇರುತ್ತಾರೆ. ಬಹುಷ: ಸಂಚಿನ ಯೋಜನೆಯಲ್ಲಿ ಈತನಿಗೂ ಪ್ರಮುಖ ಪಾತ್ರ ನೀಡಲಾಗಿತ್ತು ಅಲ್ಲವೆ?


ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...