Homeಮುಖಪುಟಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ - ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ – ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

ಈಗ ಈತ ತಾನು ಶಾಂತಿಪ್ರಿಯ, ದೀಪ್ ಸಿಧು ಜೊತೆ ಭಾಗಿಯಲ್ಲ ಎನ್ನುತ್ತಿದ್ದಾನೆ. ಆದರೆ, ಈ ಶಾಂತಿಪ್ರಿಯ ಮಹಾಶಯ, ನಿಗದಿತ ಮಾರ್ಗ ಬಿಟ್ಟು ರಿಂಗ್‌ರೋಡ್ ಮಾರ್ಗದತ್ತ ಹೋಗಿದ್ದೇಕೆ ಎಂಬ ಪ್ರಶ್ನೆಯನ್ನು ಕೇಳಬೇಕಾದ ಪೊಲೀಸರು ಸುಮ್ಮನೇ ಇದ್ದಾರೆ

- Advertisement -
- Advertisement -

ಗಣರಾಜ್ಯೋತ್ಸವದಂದು ಹಿಂಸಾಚಾರಕ್ಕೆ ಕಾರಣವಾದ ಪ್ರತಿಭಟನಾಕಾರರನ್ನು ಪ್ರಚೋದಿಸಿದ್ದಕ್ಕಾಗಿ ದೂಷಿಸಲ್ಪಟ್ಟ ಲಖಾ ಸಿಧಾನಾ, ಸ್ವತಃ ತಾನೇ ಹೇಳಿಕೊಳ್ಳುವಂತೆ, ತಾನು ರಾಷ್ಟ್ರ ರಾಜಧಾನಿಯ ರಿಂಗ್ ರಸ್ತೆಯವರೆಗೆ ಮಾತ್ರ ಮೆರವಣಿಗೆ ನಡೆಸಿದ್ದೇನೆ ಮತ್ತು ಕೆಂಪು ಕೋಟೆಯ ಕಡೆಗೆ ಹೋಗುವ ಯಾವುದೇ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸಮಜಾಯಿಷಿ ನೀಡಿದ್ದಾನೆ.

ಪಂಜಾಬ್‌ನ ಬತಿಂಡಾದ ಸಿಖಾನಾ ಗ್ರಾಮದ ಲಖ್‌ಬೀರ್ ಸಿಂಗ್ ಸಿಧಾನಾ ಅಲಿಯಾಸ್ ಲಖಾ ಸಿಧಾನಾ, “ರೈತರ ಆಂದೋಲನದ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಂಚು ಹೂಡಿದ್ದಾರೆ ಎಂದು ಆರೋಪಿಸುತ್ತಾ, ತಾನು ಯಾವಾಗಲೂ ಶಾಂತಿಗಾಗಿ ಕರೆ ನೀಡುತ್ತ ಬಂದಿದ್ದೇನೆ” ಎಂದು ತನ್ನನ್ನು ಸಮರ್ಥಿಸಿಕೊಂಡಿದ್ದಾನೆ.

ಮೊದಲಿಗೆ ಗ್ಯಾಂಗ್‌ಸ್ಟರ್ ಆಗಿದ್ದ ಈತ ಈಗ ಸಮಾಜಸೇವೆ ಮಾಡುತ್ತಿದ್ದಾನಂತೆ.

“ಮಂಗಳವಾರ ನಡೆದ ಘಟನೆಗಳ ಬಗ್ಗೆ ನನಗೆ ನೋವು ಇದೆ. ಆದರೆ ನಾನು ಇವುಗಳಲ್ಲಿ ಭಾಗಿಯಾಗಿಲ್ಲ. ನಾನು ಜನರನ್ನು ಪ್ರಚೋದಿಸಿದ್ದೇನೆ ಎಂದು ತೋರಿಸುವ ಯಾವುದೇ ವೀಡಿಯೊ, ಫೋಟೋ ಅಥವಾ ಇತರ ಪುರಾವೆಗಳಿಲ್ಲ. ನಮ್ಮ ರೈತ ಮುಖಂಡರನ್ನು ಅನುಸರಿಸಿ ನಾವು ರಿಂಗ್ ರಸ್ತೆಯ ಕಡೆಗೆ ಶಾಂತಿಯುತವಾಗಿ ಸಾಗಿದ್ದೆವು. ಕೆಂಪು ಕೋಟೆಯ ಕಡೆಗೆ ಹೋಗುವ ಯಾವುದೇ ಕಾರ್ಯಸೂಚಿಯನ್ನು ನಾವು ಎಂದಿಗೂ ಹೊಂದಿರಲಿಲ್ಲ ಎಂದು 40 ವರ್ಷದ ಸಿಧಾನಾ ಹೇಳಿದ್ದಾನೆ.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ನವೆಂಬರ್ 26 ರಿಂದ ಸಿಂಘು ಗಡಿಯಲ್ಲಿ ಟಿಕಾಣಿ ಹಾಕಿರುವ ಸಿಧಾನಾ, ಸೋಮವಾರ ಜ.25 ರ ರಾತ್ರಿ ಸಿಂಘು ಗಡಿಯಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪ ಹೊತ್ತಿರುವ ನಟ ದೀಪ್ ಸಿಧು ಜೊತೆಗೆ ವೇದಿಕೆಯನ್ನು ಹಂಚಿಕೊಂಡಿರುವ ಆರೋಪವನ್ನು ನಿರಾಕರಿಸಿದ್ದಾನೆ. ರಿಂಗ್ ರಸ್ತೆಯಲ್ಲಿ ಮೆರವಣಿಗೆ ನಡೆಸಲು ಬಯಸುತ್ತಿದ್ದ ಜನರನ್ನು ನಾನು ಸಮಾಧಾನ ಮಾಡುತ್ತಿದ್ದೆ ಅಷ್ಟೇ ಎಂದು ಹೇಳಿದ್ದಾನೆ.

ಸುಮಾರು 20 ರೈತ ಮುಖಂಡರು ತಮ್ಮ ಕಾರ್ಯಕರ್ತರೊಂದಿಗೆ ರಿಂಗ್ ರೋಡ್‌ವರೆಗೆ ಶಾಂತಿಯುತವಾಗಿ ತೆರಳಿದರು ಮತ್ತು ತಕ್ಷಣವೇ ಹಿಂದಿರುಗಿದರು ಎಂದು ಸಿಧಾನಾ ಹೇಳಿದ್ದಾನೆ.

ಹಳ್ಳಿಗಳಲ್ಲಿ ಸಮಾಜ ಸೇವೆಯ ಕಾರ್ಯಗಳನ್ನು ಮಾಡುವುದಾಗಿ ಹೇಳಿಕೊಳ್ಳುವ ಮಾಲ್ವಾ ಯೂತ್ ಫೆಡರೇಶನ್ ಮುಖ್ಯಸ್ಥರಾಗಿರುವ ಸಿಧಾನಾ ವಿರುದ್ಧ ಪಂಜಾಬ್‌ನಲ್ಲಿ 25 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿಯ ಪ್ರಕರಣಗಳು ಸೇರಿವೆ. ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದಿಂದ ಮಾನವಿಕ ವಿಭಾಗದಲ್ಲಿ ಪದವಿ ಪಡೆದಿರುವ ಈತ, ಸಾಮಾಜಿಕ ಕಾರ್ಯಗಳಿಗಾಗಿ ಅಪರಾಧ ಜಗತ್ತನ್ನು ತೊರೆದಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

2011 ರಲ್ಲಿ ಪೀಪಲ್ಸ್ ಪಾರ್ಟಿ ಆಫ್ ಪಂಜಾಬ್‌ಗೆ ಸೇರಿ, 2013 ರಲ್ಲಿ ತ್ಯಜಿಸಿದ್ದ. ಅಂದಿನಿಂದ, ಮಾಲ್ವಾ ಪ್ರದೇಶದಲ್ಲಿ ಸಿಧಾನಾ ಜನಪ್ರಿಯತೆ ಗಳಿಸಿದ. ದುರ್ಬಲ ವರ್ಗದ ಹಲವಾರು ಯುವತಿಯರ ಮದುವೆಗೆ ಸಹಾಯ ಮಾಡಿ, ಬಡ ಕುಟುಂಬಗಳಿಗೆ ಹಣ ಮತ್ತು ಇತರ ರೀತಿಯ ಸಹಾಯ ಮಾಡಿ, ಮುನ್ನೆಲೆಗೆ ಬಂದ.

ರಸ್ತೆ ಫಲಕಗಳ ಮೇಲಿನ ಇಂಗ್ಲಿಷ್ ಸಂಕೇತಗಳನ್ನು ಪಂಜಾಬಿಯಲ್ಲಿ ಬರೆಯಬೇಕೆಂದು ಒತ್ತಾಯಿಸಿ 2017 ರ ಅಕ್ಟೋಬರ್‌ನಲ್ಲಿ ನಡೆಸಿದ ಪ್ರತಿಭಟನೆಯೊಂದರ ಮೂಲಕ ಸುದ್ದಿಯಾಗಿದ್ದ. ಅಲ್ಲಿ ಗಲಾಟೆ ಸಂಭವಿಸಿದಾಗ ಆತನನ್ನು ಬಂಧಿಸಿ ಫರೀದ್‌ಕೋಟ್ ಮಾಡರ್ನ್ ಜೈಲಿಗೆ ಕಳುಹಿಸಲಾಗಿತ್ತು. ಅಲ್ಲಿ ಭತ್ತದ ತ್ಯಾಜ್ಯವನ್ನು ಸುಡಬಾರದೆಂದು ರೈತರಿಗೆ ಫೇಸ್‌ಬುಕ್ ಮೂಲಕ ಸಲಹೆ ನೀಡಿದ್ದ! ನಂತರ ಆತ‌ನಿಂದ ಸೆಲ್‌ಫೋನ್ ಅನ್ನು ವಶಪಡಿಸಿಕೊಂಡು, ಮೋಸ ಪ್ರಕರಣದಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಮೇ 2019 ರಲ್ಲಿ, ಬಾದಲ್ ಗ್ರಾಮದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸುವಾಗ ಕೊಲೆ ಯತ್ನದ ಪ್ರಕರಣದಲ್ಲಿ ಆತ ಮತ್ತು ಇತರ 60 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈಗ ಈತ ತಾನು ಶಾಂತಿಪ್ರಿಯ, ದೀಪ್ ಸಿಧು ಜೊತೆ ಭಾಗಿಯಾಗಿಲ್ಲ ಎನ್ನುತ್ತಿದ್ದಾನೆ. ಆದರೆ, ಈ ಶಾಂತಿಪ್ರಿಯ ಮಹಾಶಯ, ನಿಗದಿತ ಮಾರ್ಗ ಬಿಟ್ಟು ರಿಂಗ್‌ರೋಡ್ ಮಾರ್ಗದತ್ತ ಹೋಗಿದ್ದೇಕೆ ಎಂಬ ಪ್ರಶ್ನೆಯನ್ನು ಕೇಳಬೇಕಾದ ಪೊಲೀಸರು ಸುಮ್ಮನೇ ಇದ್ದಾರೆ ಮತ್ತು ಇರುತ್ತಾರೆ. ಬಹುಷ: ಸಂಚಿನ ಯೋಜನೆಯಲ್ಲಿ ಈತನಿಗೂ ಪ್ರಮುಖ ಪಾತ್ರ ನೀಡಲಾಗಿತ್ತು ಅಲ್ಲವೆ?


ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...