Homeಮುಖಪುಟಉಪಶಮನ ನೀತಿಯಡಿ ಗ್ಯಾಂಗ್‌ಸ್ಟರ್‌ ರಾಜಕಾರಣಿ ಆನಂದ್‌ ಬಿಡುಗಡೆ; ನ್ಯಾಯದ ಅಣಕ ಎಂದ ಐಎಎಸ್ ಸಂಘ

ಉಪಶಮನ ನೀತಿಯಡಿ ಗ್ಯಾಂಗ್‌ಸ್ಟರ್‌ ರಾಜಕಾರಣಿ ಆನಂದ್‌ ಬಿಡುಗಡೆ; ನ್ಯಾಯದ ಅಣಕ ಎಂದ ಐಎಎಸ್ ಸಂಘ

- Advertisement -
- Advertisement -

ಗ್ಯಾಂಗ್‌ಸ್ಟರ್‌ ರಾಜಕಾರಣಿಯಾಗಿರುವ ಆನಂದ್ ಮೋಹನ್‌ ಅವರನ್ನು ಜೈಲಿನಿಂದ ಶೀಘ್ರವೇ ಬಿಡುಗಡೆ ಮಾಡುವ ಬಿಹಾರ ಸರ್ಕಾರದ ನಿರ್ಧಾರದಿಂದ ತೀವ್ರ ನಿರಾಶೆಯಾಗಿದೆ ಎಂದು ಕೇಂದ್ರೀಯ ಭಾರತೀಯ ಆಡಳಿತ ಸೇವಾ (ಐಎಎಸ್‌) ಸಂಘ ಮಂಗಳವಾರ ಹೇಳಿದೆ.

ಈಗ ನಿಷ್ಕ್ರಿಯವಾಗಿರುವ ಬಿಹಾರ ಪೀಪಲ್ಸ್ ಪಾರ್ಟಿಯನ್ನು ಸ್ಥಾಪಿಸಿದ ಮೋಹನ್, 1994ರಲ್ಲಿ ನಡೆದ ಗೋಪಾಲ್‌ಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಜಿ.ಕೃಷ್ಣಯ್ಯನವರ ಹತ್ಯೆಯಲ್ಲಿ ಅಪರಾಧಿಯಾಗಿದ್ದು, ಜೈಲು ಶಿಕ್ಷೆಗೆ ಒಳಗಾಗಿದ್ದಾರೆ.

ಮತ್ತೊಬ್ಬ ಗ್ಯಾಂಗ್‌ಸ್ಟರ್‌ ಆಗಿರುವ ಬಿಹಾರ ಪೀಪಲ್ಸ್ ಪಾರ್ಟಿಯ ರಾಜಕಾರಣಿ ಛೋಟಾನ್ ಶುಕ್ಲಾನ ಹತ್ಯೆಯನ್ನು ಪ್ರತಿಭಟಿಸಿದ ಗುಂಪನ್ನು ಪ್ರಚೋದಿಸಿದ ಆರೋಪದಲ್ಲಿ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿದೆ.

ಮಾಜಿ ಸಂಸದರಾಗಿರುವ ಮೋಹನ್ ಜೀವಾವಧಿ ಶಿಕ್ಷೆಗೆ ಒಳಗಾದ 27 ಕೈದಿಗಳಲ್ಲಿ ಒಬ್ಬರಾಗಿದ್ದಾರೆ. ಅವರನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಬಿಹಾರ ಸರ್ಕಾರ ಪ್ರಕಟಿಸಿದೆ. ಏಪ್ರಿಲ್ 10ರಂದು ಬಿಹಾರ ಸರ್ಕಾರವು ತನ್ನ ಜೈಲು ಕೈಪಿಡಿಯನ್ನು ತಿದ್ದುಪಡಿ ಮಾಡಿತು. ಕರ್ತವ್ಯದಲ್ಲಿದ್ದ ಸಾರ್ವಜನಿಕ ಸೇವಕನನ್ನು ಕೊಲೆ ಮಾಡಿದ ಅಪರಾಧಿಗಳಿಗೆ ಕ್ಷಮಾಪಣೆ ನೀಡುವ ಅನುಮತಿಯನ್ನು ತಿದ್ದುಪಡಿ ಕೈಪಿಡಿ ನೀಡಿತು.

ಅಂತಹ ಅಪರಾಧಗಳಿಗೆ ಶಿಕ್ಷೆಗೊಳಗಾದವರು 14 ವರ್ಷಗಳ ಜೈಲು ಶಿಕ್ಷೆ ಅಥವಾ 20 ವರ್ಷಗಳ ಜೈಲು ಶಿಕ್ಷೆಗೆ ಒಳಗಾಗಿದ್ದರೆ ಅವರನ್ನು ಬಿಡುಗಡೆ ಮಾಡಲು ತಿದ್ದುಪಡಿ ಅನುಮತಿಸುತ್ತದೆ.

ಮೋಹನ್ ಅವರನ್ನು ಸಹರ್ಸಾ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿತ್ತು ಮತ್ತು ಇತ್ತೀಚೆಗೆ ಅವರ ಕುಟುಂಬದಲ್ಲಿ ಮದುವೆಗೆ ಹಾಜರಾಗಲು ಪೆರೋಲ್ ಮೇಲೆ ಬಿಡುಗಡೆ ಮಾಡಲಾಯಿತು.

ಮೋಹನ್ ಬಿಡುಗಡೆ ಆದೇಶಕ್ಕೆ ಕಾರಣವಾದ ಜೈಲು ಕೈಪಿಡಿಯ ತಿದ್ದುಪಡಿಯು ನ್ಯಾಯ ನಿರಾಕರಣೆಗೆ ಸಮನಾಗಿದೆ ಎಂದು ಕೇಂದ್ರ ಐಎಎಸ್ ಅಸೋಸಿಯೇಷನ್ ಮಂಗಳವಾರ ಹೇಳಿದೆ.

“ಇಂತಹ ದುರ್ಬಲಗೊಳಿಸುವಿಕೆಯು ನಿರ್ಭಯಕ್ಕೆ ಕಾರಣವಾಗುತ್ತದೆ, ಸಾರ್ವಜನಿಕ ಸೇವಕರ ನೈತಿಕತೆಯನ್ನು ಕುಗ್ಗಿಸುತ್ತದೆ, ಸಾರ್ವಜನಿಕ ಸುವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ನ್ಯಾಯವನ್ನು ಅಪಹಾಸ್ಯ ಮಾಡುತ್ತದೆ” ಎಂದು ಐಎಎಸ್‌ ಅಧಿಕಾರಿಗಳನ್ನು ಪ್ರತಿನಿಧಿಸುವ ಸಂಘವು ಹೇಳಿದೆ. “ನಾವು ರಾಜ್ಯ ಸರ್ಕಾರವನ್ನು ಬಲವಾಗಿ ವಿನಂತಿಸುತ್ತೇವೆ. ಬಿಹಾರವು ತನ್ನ ನಿರ್ಧಾರವನ್ನು ಆದಷ್ಟು ಬೇಗ ಮರುಪರಿಶೀಲಿಸಬೇಕು” ಎಂದಿದೆ.

ಮೋಹನ್‌ಗೆ ಬಿಡುಗಡೆ ನೀಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹಲವಾರು ವಿರೋಧ ಪಕ್ಷದ ನಾಯಕರು ಬಿಹಾರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಆದರೆ, ಈ ತಿದ್ದುಪಡಿಯು ಯಾವುದೇ ವ್ಯಕ್ತಿಗೆ ಲಾಭ ತರುವ ಉದ್ದೇಶವನ್ನು ಹೊಂದಿಲ್ಲ ಎಂದು ಜನತಾ ದಳ (ಯುನೈಟೆಡ್) ಎಂಎಲ್‌ಸಿ ನೀರಜ್ ಕುಮಾರ್ ಹೇಳಿದ್ದಾರೆ.

ಬಿಹಾರ ಉಪಮುಖ್ಯಮಂತ್ರಿ ಪ್ರತಿಕ್ರಿಯಿಸಿ, “ಇದರಲ್ಲಿ ವಿವಾದವೇನು? ಅವರು ಶಿಕ್ಷೆಯನ್ನು ಪೂರೈಸಿದ್ದಾರೆ ಮತ್ತು ಕಾನೂನುಬದ್ಧವಾಗಿ ಬಿಡುಗಡೆಯಾಗುತ್ತಿದ್ದಾರೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...