Homeಮುಖಪುಟತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

ತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

- Advertisement -
- Advertisement -

ದೆಹಲಿಯ ತಿಹಾರ್ ಜೈಲಿನಲ್ಲಿ ಎದುರಾಳಿ ಗ್ಯಾಂಗ್ ಸದಸ್ಯರು ನಡೆಸಿದ ದಾಳಿಯಿಂದಾಗಿ ಜೈಲಿನಲ್ಲಿದ್ದ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಕೊಲೆಯಾಗಿದ್ದಾನೆ.

ಹೆಚ್ಚಿನ ಬಿಗಿಭದ್ರತೆ ಇರುವ ಜೈಲಿನಲ್ಲಿ ಗ್ಯಾಂಗ್ ಸ್ಟರ್ ಯೋಗೇಶ್ ತುಂಡಾ ಮತ್ತು ಆತನ ಸಹಚರರು ಕಬ್ಬಿಣದ ರಾಡ್‌ಗಳಿಂದ ತಿಲ್ಲು ತಾಜ್‌ಪುರಿಯಾ, ಅಲಿಯಾಸ್ ಸುನಿಲ್ ಮಾನ್ ಅವರನ್ನು ಥಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡಿದ್ದ ತಿಲ್ಲುನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೋರ್ವ ಖೈದಿ ರೋಹಿತ್ ಕೂಡ ದಾಳಿಯಲ್ಲಿ ಗಾಯಗೊಂಡಿದ್ದಾನೆ. ಸದ್ಯ ಆತ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ಯೋಗೇಶ್ ತುಂಡಾ, ದೀಪಕ್ ತೀತಾರ್, ರಿಯಾಜ್ ಖಾನ್ ಮತ್ತು ರಾಜೇಶ್- ಜೈಲಿನ ಮೊದಲ ಮಹಡಿಯಲ್ಲಿರುವ ವಾರ್ಡ್‌ನ ಕಬ್ಬಿಣದ ಗ್ರಿಲ್‌ಗಳನ್ನು ಒಡೆದಿದ್ದಾರೆ. ನೆಲ ಅಂತಸ್ತಿನ ವಾರ್ಡ್‌ನಲ್ಲಿ ಇದ್ದ ತಿಲ್ಲು ಮೇಲೆ ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎದುರಾಳಿ ಗೋಗಿ ಗ್ಯಾಂಗ್‌ನ ನಾಲ್ವರು ಸದಸ್ಯರು ನೆಲ ಮಹಡಿಗೆ ಇಳಿಯಲು ಬೆಡ್‌ಶೀಟ್‌ಗಳನ್ನು ಬಳಸಿದ್ದಾರೆ.

2021 ರ ರೋಹಿಣಿ ಕೋರ್ಟ್ ಶೂಟೌಟ್‌ನಲ್ಲಿ ಗ್ಯಾಂಗ್ ಸ್ಟರ್ ಜಿತೇಂದರ್ ಗೋಗಿ ಕೊಲ್ಲಲ್ಪಟ್ಟಾಗ ತಿಲ್ಲು ಅದರಲ್ಲಿ ಪ್ರಧಾನ ಸಂಚುಕೋರನಾಗಿದ್ದನು.

2021 ರ ಸೆಪ್ಟೆಂಬರ್ 24 ರಂದು ರೋಹಿಣಿ ನ್ಯಾಯಾಲಯದ ಒಳಗೆ ವಕೀಲರಂತೆ ವೇಷಧರಿಸಿದ ತಿಲ್ಲು ಗ್ಯಾಂಗ್‌ನ ಇಬ್ಬರು ಸದಸ್ಯರು ಜಿತೇಂದರ್ ಗೋಗಿಯನ್ನು ಗುಂಡಿಕ್ಕಿ ಕೊಂದರು. ನಂತರ ಪೊಲೀಸರು ನಡೆಸಿದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಇಬ್ಬರೂ ಕೊಲ್ಲಲ್ಪಟ್ಟರು.

“ನ್ಯಾಯಾಲಯದ ಒಳಗೆ ಜಿತೇಂದರ್ ಗೋಗಿಯ ಮೇಲೆ ಇಬ್ಬರು ವಕೀಲರ ವೇಷದಲ್ಲಿ ಗುಂಡು ಹಾರಿಸಿದರು. ಆಗ ಪೊಲೀಸರು ಪ್ರತಿದಾಳಿ ನಡೆಸಿ ಆ ಇಬ್ಬರು ದಾಳಿಕೋರರನ್ನು ಕೊಂದರು. ಇದು ಗ್ಯಾಂಗ್ ವಾರ್ ಅಲ್ಲ” ಎಂದು ಪೊಲೀಸರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಜಿತೇಂದರ್ ಗೋಗಿ ಗ್ಯಾಂಗ್ ಮತ್ತು ತಿಲ್ಲು ಗ್ಯಾಂಗ್ ನಡುವೆ ಇದ್ದ ವರ್ಷ ಕಾಲದ ಪೈಪೋಟಿಯ ಪರಿಣಾಮವೇ ಈ ದಾಳಿಯಾಗಿತ್ತು.

ಜಿತೇಂದರ್ ಗೋಗಿಯನ್ನು ಕೊಲ್ಲುವ ಸೂಚನೆಯನ್ನು ತಿಲ್ಲು ತಾಜ್‌ಪುರಿ ಫೋನ್‌ ಕರೆಯ ಮೂಲಕ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ತಿಲ್ಲು ತಾಜ್‌ಪುರಿಯ ಹತ್ಯೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಿಹಾರ್ ಜೈಲಿನಲ್ಲಿ ಒಂದು ತಿಂಗಳೊಳಗೆ ನಡೆದ ಹಿಂಸಾಚಾರ ಮತ್ತು ಎರಡು ಗ್ರೂಪಿನ ನಡುವಿನ ಪೈಪೋಟಿಗೆ ಸಂಬಂಧಿಸಿದ ಎರಡನೇ ಪ್ರಕರಣ ಇದಾಗಿದೆ. ಕಳೆದ ತಿಂಗಳು, ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಆಪ್ತ ಸಹಾಯಕ ಪ್ರಿನ್ಸ್ ತೆವಾಟಿಯಾ ಅವರನ್ನು ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರು ತಿಹಾರ್ ಜೈಲಿನಲ್ಲಿ ಕೊಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚೀನಾ ನಿರ್ಮಿತ ರೋಬೋಟ್ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿದ್ದ ಗ್ಯಾಲ್ಗೋಟಿಯಾ ವಿವಿ AI ಸಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...