Homeಮುಖಪುಟತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

ತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

- Advertisement -
- Advertisement -

ದೆಹಲಿಯ ತಿಹಾರ್ ಜೈಲಿನಲ್ಲಿ ಎದುರಾಳಿ ಗ್ಯಾಂಗ್ ಸದಸ್ಯರು ನಡೆಸಿದ ದಾಳಿಯಿಂದಾಗಿ ಜೈಲಿನಲ್ಲಿದ್ದ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಕೊಲೆಯಾಗಿದ್ದಾನೆ.

ಹೆಚ್ಚಿನ ಬಿಗಿಭದ್ರತೆ ಇರುವ ಜೈಲಿನಲ್ಲಿ ಗ್ಯಾಂಗ್ ಸ್ಟರ್ ಯೋಗೇಶ್ ತುಂಡಾ ಮತ್ತು ಆತನ ಸಹಚರರು ಕಬ್ಬಿಣದ ರಾಡ್‌ಗಳಿಂದ ತಿಲ್ಲು ತಾಜ್‌ಪುರಿಯಾ, ಅಲಿಯಾಸ್ ಸುನಿಲ್ ಮಾನ್ ಅವರನ್ನು ಥಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡಿದ್ದ ತಿಲ್ಲುನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೋರ್ವ ಖೈದಿ ರೋಹಿತ್ ಕೂಡ ದಾಳಿಯಲ್ಲಿ ಗಾಯಗೊಂಡಿದ್ದಾನೆ. ಸದ್ಯ ಆತ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ಯೋಗೇಶ್ ತುಂಡಾ, ದೀಪಕ್ ತೀತಾರ್, ರಿಯಾಜ್ ಖಾನ್ ಮತ್ತು ರಾಜೇಶ್- ಜೈಲಿನ ಮೊದಲ ಮಹಡಿಯಲ್ಲಿರುವ ವಾರ್ಡ್‌ನ ಕಬ್ಬಿಣದ ಗ್ರಿಲ್‌ಗಳನ್ನು ಒಡೆದಿದ್ದಾರೆ. ನೆಲ ಅಂತಸ್ತಿನ ವಾರ್ಡ್‌ನಲ್ಲಿ ಇದ್ದ ತಿಲ್ಲು ಮೇಲೆ ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎದುರಾಳಿ ಗೋಗಿ ಗ್ಯಾಂಗ್‌ನ ನಾಲ್ವರು ಸದಸ್ಯರು ನೆಲ ಮಹಡಿಗೆ ಇಳಿಯಲು ಬೆಡ್‌ಶೀಟ್‌ಗಳನ್ನು ಬಳಸಿದ್ದಾರೆ.

2021 ರ ರೋಹಿಣಿ ಕೋರ್ಟ್ ಶೂಟೌಟ್‌ನಲ್ಲಿ ಗ್ಯಾಂಗ್ ಸ್ಟರ್ ಜಿತೇಂದರ್ ಗೋಗಿ ಕೊಲ್ಲಲ್ಪಟ್ಟಾಗ ತಿಲ್ಲು ಅದರಲ್ಲಿ ಪ್ರಧಾನ ಸಂಚುಕೋರನಾಗಿದ್ದನು.

2021 ರ ಸೆಪ್ಟೆಂಬರ್ 24 ರಂದು ರೋಹಿಣಿ ನ್ಯಾಯಾಲಯದ ಒಳಗೆ ವಕೀಲರಂತೆ ವೇಷಧರಿಸಿದ ತಿಲ್ಲು ಗ್ಯಾಂಗ್‌ನ ಇಬ್ಬರು ಸದಸ್ಯರು ಜಿತೇಂದರ್ ಗೋಗಿಯನ್ನು ಗುಂಡಿಕ್ಕಿ ಕೊಂದರು. ನಂತರ ಪೊಲೀಸರು ನಡೆಸಿದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಇಬ್ಬರೂ ಕೊಲ್ಲಲ್ಪಟ್ಟರು.

“ನ್ಯಾಯಾಲಯದ ಒಳಗೆ ಜಿತೇಂದರ್ ಗೋಗಿಯ ಮೇಲೆ ಇಬ್ಬರು ವಕೀಲರ ವೇಷದಲ್ಲಿ ಗುಂಡು ಹಾರಿಸಿದರು. ಆಗ ಪೊಲೀಸರು ಪ್ರತಿದಾಳಿ ನಡೆಸಿ ಆ ಇಬ್ಬರು ದಾಳಿಕೋರರನ್ನು ಕೊಂದರು. ಇದು ಗ್ಯಾಂಗ್ ವಾರ್ ಅಲ್ಲ” ಎಂದು ಪೊಲೀಸರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಜಿತೇಂದರ್ ಗೋಗಿ ಗ್ಯಾಂಗ್ ಮತ್ತು ತಿಲ್ಲು ಗ್ಯಾಂಗ್ ನಡುವೆ ಇದ್ದ ವರ್ಷ ಕಾಲದ ಪೈಪೋಟಿಯ ಪರಿಣಾಮವೇ ಈ ದಾಳಿಯಾಗಿತ್ತು.

ಜಿತೇಂದರ್ ಗೋಗಿಯನ್ನು ಕೊಲ್ಲುವ ಸೂಚನೆಯನ್ನು ತಿಲ್ಲು ತಾಜ್‌ಪುರಿ ಫೋನ್‌ ಕರೆಯ ಮೂಲಕ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ತಿಲ್ಲು ತಾಜ್‌ಪುರಿಯ ಹತ್ಯೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಿಹಾರ್ ಜೈಲಿನಲ್ಲಿ ಒಂದು ತಿಂಗಳೊಳಗೆ ನಡೆದ ಹಿಂಸಾಚಾರ ಮತ್ತು ಎರಡು ಗ್ರೂಪಿನ ನಡುವಿನ ಪೈಪೋಟಿಗೆ ಸಂಬಂಧಿಸಿದ ಎರಡನೇ ಪ್ರಕರಣ ಇದಾಗಿದೆ. ಕಳೆದ ತಿಂಗಳು, ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಆಪ್ತ ಸಹಾಯಕ ಪ್ರಿನ್ಸ್ ತೆವಾಟಿಯಾ ಅವರನ್ನು ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರು ತಿಹಾರ್ ಜೈಲಿನಲ್ಲಿ ಕೊಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...