Homeಮುಖಪುಟತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

ತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

- Advertisement -
- Advertisement -

ದೆಹಲಿಯ ತಿಹಾರ್ ಜೈಲಿನಲ್ಲಿ ಎದುರಾಳಿ ಗ್ಯಾಂಗ್ ಸದಸ್ಯರು ನಡೆಸಿದ ದಾಳಿಯಿಂದಾಗಿ ಜೈಲಿನಲ್ಲಿದ್ದ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಕೊಲೆಯಾಗಿದ್ದಾನೆ.

ಹೆಚ್ಚಿನ ಬಿಗಿಭದ್ರತೆ ಇರುವ ಜೈಲಿನಲ್ಲಿ ಗ್ಯಾಂಗ್ ಸ್ಟರ್ ಯೋಗೇಶ್ ತುಂಡಾ ಮತ್ತು ಆತನ ಸಹಚರರು ಕಬ್ಬಿಣದ ರಾಡ್‌ಗಳಿಂದ ತಿಲ್ಲು ತಾಜ್‌ಪುರಿಯಾ, ಅಲಿಯಾಸ್ ಸುನಿಲ್ ಮಾನ್ ಅವರನ್ನು ಥಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡಿದ್ದ ತಿಲ್ಲುನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೋರ್ವ ಖೈದಿ ರೋಹಿತ್ ಕೂಡ ದಾಳಿಯಲ್ಲಿ ಗಾಯಗೊಂಡಿದ್ದಾನೆ. ಸದ್ಯ ಆತ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ಯೋಗೇಶ್ ತುಂಡಾ, ದೀಪಕ್ ತೀತಾರ್, ರಿಯಾಜ್ ಖಾನ್ ಮತ್ತು ರಾಜೇಶ್- ಜೈಲಿನ ಮೊದಲ ಮಹಡಿಯಲ್ಲಿರುವ ವಾರ್ಡ್‌ನ ಕಬ್ಬಿಣದ ಗ್ರಿಲ್‌ಗಳನ್ನು ಒಡೆದಿದ್ದಾರೆ. ನೆಲ ಅಂತಸ್ತಿನ ವಾರ್ಡ್‌ನಲ್ಲಿ ಇದ್ದ ತಿಲ್ಲು ಮೇಲೆ ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎದುರಾಳಿ ಗೋಗಿ ಗ್ಯಾಂಗ್‌ನ ನಾಲ್ವರು ಸದಸ್ಯರು ನೆಲ ಮಹಡಿಗೆ ಇಳಿಯಲು ಬೆಡ್‌ಶೀಟ್‌ಗಳನ್ನು ಬಳಸಿದ್ದಾರೆ.

2021 ರ ರೋಹಿಣಿ ಕೋರ್ಟ್ ಶೂಟೌಟ್‌ನಲ್ಲಿ ಗ್ಯಾಂಗ್ ಸ್ಟರ್ ಜಿತೇಂದರ್ ಗೋಗಿ ಕೊಲ್ಲಲ್ಪಟ್ಟಾಗ ತಿಲ್ಲು ಅದರಲ್ಲಿ ಪ್ರಧಾನ ಸಂಚುಕೋರನಾಗಿದ್ದನು.

2021 ರ ಸೆಪ್ಟೆಂಬರ್ 24 ರಂದು ರೋಹಿಣಿ ನ್ಯಾಯಾಲಯದ ಒಳಗೆ ವಕೀಲರಂತೆ ವೇಷಧರಿಸಿದ ತಿಲ್ಲು ಗ್ಯಾಂಗ್‌ನ ಇಬ್ಬರು ಸದಸ್ಯರು ಜಿತೇಂದರ್ ಗೋಗಿಯನ್ನು ಗುಂಡಿಕ್ಕಿ ಕೊಂದರು. ನಂತರ ಪೊಲೀಸರು ನಡೆಸಿದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಇಬ್ಬರೂ ಕೊಲ್ಲಲ್ಪಟ್ಟರು.

“ನ್ಯಾಯಾಲಯದ ಒಳಗೆ ಜಿತೇಂದರ್ ಗೋಗಿಯ ಮೇಲೆ ಇಬ್ಬರು ವಕೀಲರ ವೇಷದಲ್ಲಿ ಗುಂಡು ಹಾರಿಸಿದರು. ಆಗ ಪೊಲೀಸರು ಪ್ರತಿದಾಳಿ ನಡೆಸಿ ಆ ಇಬ್ಬರು ದಾಳಿಕೋರರನ್ನು ಕೊಂದರು. ಇದು ಗ್ಯಾಂಗ್ ವಾರ್ ಅಲ್ಲ” ಎಂದು ಪೊಲೀಸರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಜಿತೇಂದರ್ ಗೋಗಿ ಗ್ಯಾಂಗ್ ಮತ್ತು ತಿಲ್ಲು ಗ್ಯಾಂಗ್ ನಡುವೆ ಇದ್ದ ವರ್ಷ ಕಾಲದ ಪೈಪೋಟಿಯ ಪರಿಣಾಮವೇ ಈ ದಾಳಿಯಾಗಿತ್ತು.

ಜಿತೇಂದರ್ ಗೋಗಿಯನ್ನು ಕೊಲ್ಲುವ ಸೂಚನೆಯನ್ನು ತಿಲ್ಲು ತಾಜ್‌ಪುರಿ ಫೋನ್‌ ಕರೆಯ ಮೂಲಕ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ತಿಲ್ಲು ತಾಜ್‌ಪುರಿಯ ಹತ್ಯೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಿಹಾರ್ ಜೈಲಿನಲ್ಲಿ ಒಂದು ತಿಂಗಳೊಳಗೆ ನಡೆದ ಹಿಂಸಾಚಾರ ಮತ್ತು ಎರಡು ಗ್ರೂಪಿನ ನಡುವಿನ ಪೈಪೋಟಿಗೆ ಸಂಬಂಧಿಸಿದ ಎರಡನೇ ಪ್ರಕರಣ ಇದಾಗಿದೆ. ಕಳೆದ ತಿಂಗಳು, ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಆಪ್ತ ಸಹಾಯಕ ಪ್ರಿನ್ಸ್ ತೆವಾಟಿಯಾ ಅವರನ್ನು ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರು ತಿಹಾರ್ ಜೈಲಿನಲ್ಲಿ ಕೊಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...