Homeಮುಖಪುಟತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

ತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

- Advertisement -
- Advertisement -

ದೆಹಲಿಯ ತಿಹಾರ್ ಜೈಲಿನಲ್ಲಿ ಎದುರಾಳಿ ಗ್ಯಾಂಗ್ ಸದಸ್ಯರು ನಡೆಸಿದ ದಾಳಿಯಿಂದಾಗಿ ಜೈಲಿನಲ್ಲಿದ್ದ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಕೊಲೆಯಾಗಿದ್ದಾನೆ.

ಹೆಚ್ಚಿನ ಬಿಗಿಭದ್ರತೆ ಇರುವ ಜೈಲಿನಲ್ಲಿ ಗ್ಯಾಂಗ್ ಸ್ಟರ್ ಯೋಗೇಶ್ ತುಂಡಾ ಮತ್ತು ಆತನ ಸಹಚರರು ಕಬ್ಬಿಣದ ರಾಡ್‌ಗಳಿಂದ ತಿಲ್ಲು ತಾಜ್‌ಪುರಿಯಾ, ಅಲಿಯಾಸ್ ಸುನಿಲ್ ಮಾನ್ ಅವರನ್ನು ಥಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡಿದ್ದ ತಿಲ್ಲುನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೋರ್ವ ಖೈದಿ ರೋಹಿತ್ ಕೂಡ ದಾಳಿಯಲ್ಲಿ ಗಾಯಗೊಂಡಿದ್ದಾನೆ. ಸದ್ಯ ಆತ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ಯೋಗೇಶ್ ತುಂಡಾ, ದೀಪಕ್ ತೀತಾರ್, ರಿಯಾಜ್ ಖಾನ್ ಮತ್ತು ರಾಜೇಶ್- ಜೈಲಿನ ಮೊದಲ ಮಹಡಿಯಲ್ಲಿರುವ ವಾರ್ಡ್‌ನ ಕಬ್ಬಿಣದ ಗ್ರಿಲ್‌ಗಳನ್ನು ಒಡೆದಿದ್ದಾರೆ. ನೆಲ ಅಂತಸ್ತಿನ ವಾರ್ಡ್‌ನಲ್ಲಿ ಇದ್ದ ತಿಲ್ಲು ಮೇಲೆ ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎದುರಾಳಿ ಗೋಗಿ ಗ್ಯಾಂಗ್‌ನ ನಾಲ್ವರು ಸದಸ್ಯರು ನೆಲ ಮಹಡಿಗೆ ಇಳಿಯಲು ಬೆಡ್‌ಶೀಟ್‌ಗಳನ್ನು ಬಳಸಿದ್ದಾರೆ.

2021 ರ ರೋಹಿಣಿ ಕೋರ್ಟ್ ಶೂಟೌಟ್‌ನಲ್ಲಿ ಗ್ಯಾಂಗ್ ಸ್ಟರ್ ಜಿತೇಂದರ್ ಗೋಗಿ ಕೊಲ್ಲಲ್ಪಟ್ಟಾಗ ತಿಲ್ಲು ಅದರಲ್ಲಿ ಪ್ರಧಾನ ಸಂಚುಕೋರನಾಗಿದ್ದನು.

2021 ರ ಸೆಪ್ಟೆಂಬರ್ 24 ರಂದು ರೋಹಿಣಿ ನ್ಯಾಯಾಲಯದ ಒಳಗೆ ವಕೀಲರಂತೆ ವೇಷಧರಿಸಿದ ತಿಲ್ಲು ಗ್ಯಾಂಗ್‌ನ ಇಬ್ಬರು ಸದಸ್ಯರು ಜಿತೇಂದರ್ ಗೋಗಿಯನ್ನು ಗುಂಡಿಕ್ಕಿ ಕೊಂದರು. ನಂತರ ಪೊಲೀಸರು ನಡೆಸಿದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಇಬ್ಬರೂ ಕೊಲ್ಲಲ್ಪಟ್ಟರು.

“ನ್ಯಾಯಾಲಯದ ಒಳಗೆ ಜಿತೇಂದರ್ ಗೋಗಿಯ ಮೇಲೆ ಇಬ್ಬರು ವಕೀಲರ ವೇಷದಲ್ಲಿ ಗುಂಡು ಹಾರಿಸಿದರು. ಆಗ ಪೊಲೀಸರು ಪ್ರತಿದಾಳಿ ನಡೆಸಿ ಆ ಇಬ್ಬರು ದಾಳಿಕೋರರನ್ನು ಕೊಂದರು. ಇದು ಗ್ಯಾಂಗ್ ವಾರ್ ಅಲ್ಲ” ಎಂದು ಪೊಲೀಸರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಜಿತೇಂದರ್ ಗೋಗಿ ಗ್ಯಾಂಗ್ ಮತ್ತು ತಿಲ್ಲು ಗ್ಯಾಂಗ್ ನಡುವೆ ಇದ್ದ ವರ್ಷ ಕಾಲದ ಪೈಪೋಟಿಯ ಪರಿಣಾಮವೇ ಈ ದಾಳಿಯಾಗಿತ್ತು.

ಜಿತೇಂದರ್ ಗೋಗಿಯನ್ನು ಕೊಲ್ಲುವ ಸೂಚನೆಯನ್ನು ತಿಲ್ಲು ತಾಜ್‌ಪುರಿ ಫೋನ್‌ ಕರೆಯ ಮೂಲಕ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ತಿಲ್ಲು ತಾಜ್‌ಪುರಿಯ ಹತ್ಯೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಿಹಾರ್ ಜೈಲಿನಲ್ಲಿ ಒಂದು ತಿಂಗಳೊಳಗೆ ನಡೆದ ಹಿಂಸಾಚಾರ ಮತ್ತು ಎರಡು ಗ್ರೂಪಿನ ನಡುವಿನ ಪೈಪೋಟಿಗೆ ಸಂಬಂಧಿಸಿದ ಎರಡನೇ ಪ್ರಕರಣ ಇದಾಗಿದೆ. ಕಳೆದ ತಿಂಗಳು, ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಆಪ್ತ ಸಹಾಯಕ ಪ್ರಿನ್ಸ್ ತೆವಾಟಿಯಾ ಅವರನ್ನು ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರು ತಿಹಾರ್ ಜೈಲಿನಲ್ಲಿ ಕೊಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...