Homeಮುಖಪುಟತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

ತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

- Advertisement -
- Advertisement -

ದೆಹಲಿಯ ತಿಹಾರ್ ಜೈಲಿನಲ್ಲಿ ಎದುರಾಳಿ ಗ್ಯಾಂಗ್ ಸದಸ್ಯರು ನಡೆಸಿದ ದಾಳಿಯಿಂದಾಗಿ ಜೈಲಿನಲ್ಲಿದ್ದ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಕೊಲೆಯಾಗಿದ್ದಾನೆ.

ಹೆಚ್ಚಿನ ಬಿಗಿಭದ್ರತೆ ಇರುವ ಜೈಲಿನಲ್ಲಿ ಗ್ಯಾಂಗ್ ಸ್ಟರ್ ಯೋಗೇಶ್ ತುಂಡಾ ಮತ್ತು ಆತನ ಸಹಚರರು ಕಬ್ಬಿಣದ ರಾಡ್‌ಗಳಿಂದ ತಿಲ್ಲು ತಾಜ್‌ಪುರಿಯಾ, ಅಲಿಯಾಸ್ ಸುನಿಲ್ ಮಾನ್ ಅವರನ್ನು ಥಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡಿದ್ದ ತಿಲ್ಲುನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೋರ್ವ ಖೈದಿ ರೋಹಿತ್ ಕೂಡ ದಾಳಿಯಲ್ಲಿ ಗಾಯಗೊಂಡಿದ್ದಾನೆ. ಸದ್ಯ ಆತ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ಯೋಗೇಶ್ ತುಂಡಾ, ದೀಪಕ್ ತೀತಾರ್, ರಿಯಾಜ್ ಖಾನ್ ಮತ್ತು ರಾಜೇಶ್- ಜೈಲಿನ ಮೊದಲ ಮಹಡಿಯಲ್ಲಿರುವ ವಾರ್ಡ್‌ನ ಕಬ್ಬಿಣದ ಗ್ರಿಲ್‌ಗಳನ್ನು ಒಡೆದಿದ್ದಾರೆ. ನೆಲ ಅಂತಸ್ತಿನ ವಾರ್ಡ್‌ನಲ್ಲಿ ಇದ್ದ ತಿಲ್ಲು ಮೇಲೆ ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎದುರಾಳಿ ಗೋಗಿ ಗ್ಯಾಂಗ್‌ನ ನಾಲ್ವರು ಸದಸ್ಯರು ನೆಲ ಮಹಡಿಗೆ ಇಳಿಯಲು ಬೆಡ್‌ಶೀಟ್‌ಗಳನ್ನು ಬಳಸಿದ್ದಾರೆ.

2021 ರ ರೋಹಿಣಿ ಕೋರ್ಟ್ ಶೂಟೌಟ್‌ನಲ್ಲಿ ಗ್ಯಾಂಗ್ ಸ್ಟರ್ ಜಿತೇಂದರ್ ಗೋಗಿ ಕೊಲ್ಲಲ್ಪಟ್ಟಾಗ ತಿಲ್ಲು ಅದರಲ್ಲಿ ಪ್ರಧಾನ ಸಂಚುಕೋರನಾಗಿದ್ದನು.

2021 ರ ಸೆಪ್ಟೆಂಬರ್ 24 ರಂದು ರೋಹಿಣಿ ನ್ಯಾಯಾಲಯದ ಒಳಗೆ ವಕೀಲರಂತೆ ವೇಷಧರಿಸಿದ ತಿಲ್ಲು ಗ್ಯಾಂಗ್‌ನ ಇಬ್ಬರು ಸದಸ್ಯರು ಜಿತೇಂದರ್ ಗೋಗಿಯನ್ನು ಗುಂಡಿಕ್ಕಿ ಕೊಂದರು. ನಂತರ ಪೊಲೀಸರು ನಡೆಸಿದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಇಬ್ಬರೂ ಕೊಲ್ಲಲ್ಪಟ್ಟರು.

“ನ್ಯಾಯಾಲಯದ ಒಳಗೆ ಜಿತೇಂದರ್ ಗೋಗಿಯ ಮೇಲೆ ಇಬ್ಬರು ವಕೀಲರ ವೇಷದಲ್ಲಿ ಗುಂಡು ಹಾರಿಸಿದರು. ಆಗ ಪೊಲೀಸರು ಪ್ರತಿದಾಳಿ ನಡೆಸಿ ಆ ಇಬ್ಬರು ದಾಳಿಕೋರರನ್ನು ಕೊಂದರು. ಇದು ಗ್ಯಾಂಗ್ ವಾರ್ ಅಲ್ಲ” ಎಂದು ಪೊಲೀಸರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಜಿತೇಂದರ್ ಗೋಗಿ ಗ್ಯಾಂಗ್ ಮತ್ತು ತಿಲ್ಲು ಗ್ಯಾಂಗ್ ನಡುವೆ ಇದ್ದ ವರ್ಷ ಕಾಲದ ಪೈಪೋಟಿಯ ಪರಿಣಾಮವೇ ಈ ದಾಳಿಯಾಗಿತ್ತು.

ಜಿತೇಂದರ್ ಗೋಗಿಯನ್ನು ಕೊಲ್ಲುವ ಸೂಚನೆಯನ್ನು ತಿಲ್ಲು ತಾಜ್‌ಪುರಿ ಫೋನ್‌ ಕರೆಯ ಮೂಲಕ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ತಿಲ್ಲು ತಾಜ್‌ಪುರಿಯ ಹತ್ಯೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಿಹಾರ್ ಜೈಲಿನಲ್ಲಿ ಒಂದು ತಿಂಗಳೊಳಗೆ ನಡೆದ ಹಿಂಸಾಚಾರ ಮತ್ತು ಎರಡು ಗ್ರೂಪಿನ ನಡುವಿನ ಪೈಪೋಟಿಗೆ ಸಂಬಂಧಿಸಿದ ಎರಡನೇ ಪ್ರಕರಣ ಇದಾಗಿದೆ. ಕಳೆದ ತಿಂಗಳು, ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಆಪ್ತ ಸಹಾಯಕ ಪ್ರಿನ್ಸ್ ತೆವಾಟಿಯಾ ಅವರನ್ನು ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರು ತಿಹಾರ್ ಜೈಲಿನಲ್ಲಿ ಕೊಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...