Homeಮುಖಪುಟತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

ತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

- Advertisement -
- Advertisement -

ದೆಹಲಿಯ ತಿಹಾರ್ ಜೈಲಿನಲ್ಲಿ ಎದುರಾಳಿ ಗ್ಯಾಂಗ್ ಸದಸ್ಯರು ನಡೆಸಿದ ದಾಳಿಯಿಂದಾಗಿ ಜೈಲಿನಲ್ಲಿದ್ದ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಕೊಲೆಯಾಗಿದ್ದಾನೆ.

ಹೆಚ್ಚಿನ ಬಿಗಿಭದ್ರತೆ ಇರುವ ಜೈಲಿನಲ್ಲಿ ಗ್ಯಾಂಗ್ ಸ್ಟರ್ ಯೋಗೇಶ್ ತುಂಡಾ ಮತ್ತು ಆತನ ಸಹಚರರು ಕಬ್ಬಿಣದ ರಾಡ್‌ಗಳಿಂದ ತಿಲ್ಲು ತಾಜ್‌ಪುರಿಯಾ, ಅಲಿಯಾಸ್ ಸುನಿಲ್ ಮಾನ್ ಅವರನ್ನು ಥಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡಿದ್ದ ತಿಲ್ಲುನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೋರ್ವ ಖೈದಿ ರೋಹಿತ್ ಕೂಡ ದಾಳಿಯಲ್ಲಿ ಗಾಯಗೊಂಡಿದ್ದಾನೆ. ಸದ್ಯ ಆತ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ಯೋಗೇಶ್ ತುಂಡಾ, ದೀಪಕ್ ತೀತಾರ್, ರಿಯಾಜ್ ಖಾನ್ ಮತ್ತು ರಾಜೇಶ್- ಜೈಲಿನ ಮೊದಲ ಮಹಡಿಯಲ್ಲಿರುವ ವಾರ್ಡ್‌ನ ಕಬ್ಬಿಣದ ಗ್ರಿಲ್‌ಗಳನ್ನು ಒಡೆದಿದ್ದಾರೆ. ನೆಲ ಅಂತಸ್ತಿನ ವಾರ್ಡ್‌ನಲ್ಲಿ ಇದ್ದ ತಿಲ್ಲು ಮೇಲೆ ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎದುರಾಳಿ ಗೋಗಿ ಗ್ಯಾಂಗ್‌ನ ನಾಲ್ವರು ಸದಸ್ಯರು ನೆಲ ಮಹಡಿಗೆ ಇಳಿಯಲು ಬೆಡ್‌ಶೀಟ್‌ಗಳನ್ನು ಬಳಸಿದ್ದಾರೆ.

2021 ರ ರೋಹಿಣಿ ಕೋರ್ಟ್ ಶೂಟೌಟ್‌ನಲ್ಲಿ ಗ್ಯಾಂಗ್ ಸ್ಟರ್ ಜಿತೇಂದರ್ ಗೋಗಿ ಕೊಲ್ಲಲ್ಪಟ್ಟಾಗ ತಿಲ್ಲು ಅದರಲ್ಲಿ ಪ್ರಧಾನ ಸಂಚುಕೋರನಾಗಿದ್ದನು.

2021 ರ ಸೆಪ್ಟೆಂಬರ್ 24 ರಂದು ರೋಹಿಣಿ ನ್ಯಾಯಾಲಯದ ಒಳಗೆ ವಕೀಲರಂತೆ ವೇಷಧರಿಸಿದ ತಿಲ್ಲು ಗ್ಯಾಂಗ್‌ನ ಇಬ್ಬರು ಸದಸ್ಯರು ಜಿತೇಂದರ್ ಗೋಗಿಯನ್ನು ಗುಂಡಿಕ್ಕಿ ಕೊಂದರು. ನಂತರ ಪೊಲೀಸರು ನಡೆಸಿದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಇಬ್ಬರೂ ಕೊಲ್ಲಲ್ಪಟ್ಟರು.

“ನ್ಯಾಯಾಲಯದ ಒಳಗೆ ಜಿತೇಂದರ್ ಗೋಗಿಯ ಮೇಲೆ ಇಬ್ಬರು ವಕೀಲರ ವೇಷದಲ್ಲಿ ಗುಂಡು ಹಾರಿಸಿದರು. ಆಗ ಪೊಲೀಸರು ಪ್ರತಿದಾಳಿ ನಡೆಸಿ ಆ ಇಬ್ಬರು ದಾಳಿಕೋರರನ್ನು ಕೊಂದರು. ಇದು ಗ್ಯಾಂಗ್ ವಾರ್ ಅಲ್ಲ” ಎಂದು ಪೊಲೀಸರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಜಿತೇಂದರ್ ಗೋಗಿ ಗ್ಯಾಂಗ್ ಮತ್ತು ತಿಲ್ಲು ಗ್ಯಾಂಗ್ ನಡುವೆ ಇದ್ದ ವರ್ಷ ಕಾಲದ ಪೈಪೋಟಿಯ ಪರಿಣಾಮವೇ ಈ ದಾಳಿಯಾಗಿತ್ತು.

ಜಿತೇಂದರ್ ಗೋಗಿಯನ್ನು ಕೊಲ್ಲುವ ಸೂಚನೆಯನ್ನು ತಿಲ್ಲು ತಾಜ್‌ಪುರಿ ಫೋನ್‌ ಕರೆಯ ಮೂಲಕ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ತಿಲ್ಲು ತಾಜ್‌ಪುರಿಯ ಹತ್ಯೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಿಹಾರ್ ಜೈಲಿನಲ್ಲಿ ಒಂದು ತಿಂಗಳೊಳಗೆ ನಡೆದ ಹಿಂಸಾಚಾರ ಮತ್ತು ಎರಡು ಗ್ರೂಪಿನ ನಡುವಿನ ಪೈಪೋಟಿಗೆ ಸಂಬಂಧಿಸಿದ ಎರಡನೇ ಪ್ರಕರಣ ಇದಾಗಿದೆ. ಕಳೆದ ತಿಂಗಳು, ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಆಪ್ತ ಸಹಾಯಕ ಪ್ರಿನ್ಸ್ ತೆವಾಟಿಯಾ ಅವರನ್ನು ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರು ತಿಹಾರ್ ಜೈಲಿನಲ್ಲಿ ಕೊಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...