Homeಮುಖಪುಟಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್‌ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು...

ಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್‌ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು…

8 ಪೊಲೀಸರ ಹತ್ಯೆಗೆ ಕಾರಣರಾದ ಮಾಹಿತಿಸೋರಿಕೆ ಶಂಕೆಯ ಆಧಾರದ ಮೇಲೆ ಶುಕ್ರವಾರದಂದು 68 ಪೊಲೀಸರನ್ನು ಕಾನ್ಪುರದ ಚೌಬೆಪುರ ಪೊಲೀಸ್ ಠಾಣೆಯಿಂದ ತೆಗೆದುಹಾಕಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ವಾರ ಎಂಟು ಪೊಲೀಸರನ್ನು ಹೊಂಚು ಹಾಕಿ ಕೊಲೆ ಮಾಡಿದ ಪ್ರಮುಖ ಆರೋಪಿ ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮಂಗಳವಾರ ದೆಹಲಿ ಬಳಿಯ ಹರಿಯಾಣದ ಫರಿದಾಬಾದ್‌ನ ಹೋಟೆಲ್‌ನಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಫರಿದಾಬಾದ್ ಹೋಟೆಲ್‌ನಲ್ಲಿ ಪೋಲಿಸರು ದಾಳಿ ನಡೆಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪೊಲೀಸರು ತಲುಪುವ ಮೊದಲೇ ವಿಕಾಸ್ ದುಬೆಯನ್ನು ಹೋಲುವ ವ್ಯಕ್ತಿಯೊಬ್ಬ ಹೋಟೆಲ್ ತೊರೆದಿದ್ದಾನೆ ಎಂದು ಹೋಟೆಲ್ ಮ್ಯಾನೇಜರ್ ಹೇಳಿದ್ದಾರೆ. ಆ ವ್ಯಕ್ತಿ ವಿಕಾಸ್ ದುಬೆ ಎಂದು ಪೊಲೀಸರು ನಂತರ ಖಚಿತಪಡಿಸಿದ್ದಾರೆ.

ಹೋಟೆಲ್‌ನ ವ್ಯವಸ್ಥಾಪಕ ರೋಮಿ NDTVಗೆ ನೀಡಿದ ಹೇಳಿಕೆಯಲ್ಲಿ, “ನಿನ್ನೆ ಮಧ್ಯಾಹ್ನ 12:30 ರ ಸುಮಾರಿಗೆ ಇಬ್ಬರು ಬಂದರು. ಅವರಲ್ಲಿ ಒಬ್ಬರು ಗುರುತಿನ ಚೀಟಿಗಳನ್ನು ತೋರಿಸಿದರು, ಫೋಟೋ ಸ್ಪಷ್ಟವಾಗಿರಲಿಲ್ಲ. ಈ ಐಡಿಯನ್ನು ಬಳಸಲಾಗುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಇದಕ್ಕೂ ಮೊದಲು ವಿಕಾಸ್ ದುಬೆ ಅವರನ್ನು ನೋಡಿರಲಿಲ್ಲ. ಸಂಜೆ 4:30 ರ ಸುಮಾರಿಗೆ ಪೊಲೀಸರು ಬಂದು ದುಬೆ ಅವರ ಕೋಣೆಯ ವಿವರಗಳನ್ನು ಕೇಳಿದರು. ನಂತರ CCTV ಕ್ಯಾಮರಾದ ತುಣುಕುಗಳನ್ನು ತೆಗೆದುಕೊಂಡರು” ಎಂದು ಹೇಳಿದ್ದಾರೆ.

ಪೊಲೀಸರು ವಶಪಡಿಸಿಕೊಂಡ CCTV ದೃಶ್ಯಾವಳಿಗಳು ವಿಕಾಸ್ ದುಬೆ ಮಾಸ್ಕ್‌ ಧರಿಸಿರುವುದು ಖಚಿತವಾಗಿದೆ. ಮಂಗಳವಾರ ಬಂಧಿಸಲ್ಪಟ್ಟ ಇಬ್ಬರಲ್ಲಿ, ಕುಖ್ಯಾತ ಅಪರಾಧಿಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಅಂಕುರ್. ಮತ್ತೊಬ್ಬ ಪ್ರಭಾತ ಎಂಬುವವನು ಸಂಚುಕೋರರ ಗ್ರಾಮದವನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ನಡೆದ ಹತ್ಯಾಕಾಂಡದ ನಂತರ ನಾಪತ್ತೆಯಾಗಿದ್ದ ವಿಕಾಸ್ ದುಬೆಯನ್ನು ಬಂಧಿಸಲು ಯುಪಿ ಪೊಲೀಸರ ಇಪ್ಪತ್ತೈದು ತಂಡಗಳು ದಾಳಿ/ತನಿಖೆ ನಡೆಸುತ್ತಿವೆ. ಆರೋಪಿಯ ಬಗ್ಗೆ ಸುಳಿವು ಕೊಟ್ಟವರಿಗೆ 2.5 ಲಕ್ಷ ಬಹುಮಾನ ಘೋಷಿಸಲಾಗಿದೆ.

ದೆಹಲಿಯ ಸಮೀಪವಿರುವ ಹರಿಯಾಣದ ಎರಡು ನಗರಗಳು – ಫರಿದಾಬಾದ್ ಮತ್ತು ಗುರಗಾಂವ್ ಹೈ-ಅಲರ್ಟ್ ಘೋಷಿಸಿವೆ. ಈ ಎಚ್ಚರಿಕೆಯ ನಡುವೆಯೇ ಕುಖ್ಯಾತ ಅಪರಾಧಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಶರಣಾಗಬಹುದು ಎಂಬ ಊಹಾಪೋಹಗಳಿವೆ.

ಬುಧವಾರ ಮುಂಜಾನೆ ಯುಪಿ ವಿಶೇಷ ಕಾರ್ಯಪಡೆ (ಎಸ್‌ಟಿಎಫ್)  ರಾಜ್ಯ ರಾಜಧಾನಿ ಲಕ್ನೋದಿಂದ 200 ಕಿ.ಮೀ ದೂರದ ಹಮೀರ್‌ಪುರ ಜಿಲ್ಲೆಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಯುಪಿ ದರೋಡೆಕೋರನ ಆಪ್ತ ಸಹಾಯಕ ಅಮರ್ ದುಬೆ ಮೃತಪಟ್ಟಿದ್ದಾನೆ. ಕಾನ್ಪುರದಲ್ಲಿ  ಶ್ಯಾಮು ಬಾಜ್‌ಪೈ ಎಂಬ ಇನ್ನೊಬ್ಬ ಸಹಾಯಕನನ್ನು ಬಂಧಿಸಲಾಗಿದೆ.

8 ಪೊಲೀಸರ ಹತ್ಯೆಗೆ ಕಾರಣರಾದ ಮಾಹಿತಿಸೋರಿಕೆ ಶಂಕೆಯ ಆಧಾರದ ಮೇಲೆ ಶುಕ್ರವಾರದಂದು 68 ಪೊಲೀಸರನ್ನು ಕಾನ್ಪುರದ ಚೌಬೆಪುರ ಪೊಲೀಸ್ ಠಾಣೆಯಿಂದ ತೆಗೆದುಹಾಕಲಾಗಿದೆ. ದುಬೆಯ ಬಿಕ್ರು ಗ್ರಾಮವು ಚೌಬೆಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ.

ಕಾನ್ಪುರ ಪೊಲೀಸರ ಮಾಜಿ ಮುಖ್ಯಸ್ಥ ಅನಂತ್ ಡಿಯೋ ಅವರನ್ನು ಯುಪಿ ಸರ್ಕಾರ ವರ್ಗಾಯಿಸಿದೆ. ಎಸ್‌ಟಿಎಫ್‌ನೊಂದಿಗೆ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಗಿರುವ ಡಿಯೊ ಅವರನ್ನು ಮೊರಾದಾಬಾದ್‌ನ ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿಗೆ ವರ್ಗಾಯಿಸಲಾಗಿದೆ. ಶುಕ್ರವಾರ ಕೊಲೆಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ ಅವರು ಮಾರ್ಚ್‌ನಲ್ಲಿ ಬರೆದ ಪತ್ರವೊಂದನ್ನು ಅವರು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಲಾಗಿದೆ.

ದೇವೇಂದ್ರ ಮಿಶ್ರಾ ಬರೆದಿದ್ದಾರೆ ಎನ್ನಲಾಗಿರುವ ಪತ್ರದಲ್ಲಿ, ಚೌಬೆಪುರ ಪೊಲೀಸ್ ಠಾಣೆಯ ಸ್ಟೇಷನ್ ಆಫೀಸರ್ ವಿನಯ್ ತಿವಾರಿ ದರೋಡೆಕೋರರಿಗೆ ಸಹಾಯ ಮಾಡುತ್ತಿದ್ದಾರೆ ಎಂದು  ಆರೋಪ ಮಾಡಿದ್ದರು. ದೂರನ್ನು ನಿರ್ಲಕ್ಷಿಸಿದರೆ “ದೊಡ್ಡ ಅಚಾತುರ್ಯ” ನಡೆಯುವ ಬಗ್ಗೆ ಪತ್ರದಲ್ಲಿ ಎಚ್ಚರಿಕೆ ನೀಡಿದ್ದರು. ಪತ್ರದ ನಕಲನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಗುತ್ತಿದೆ. ಆದರೆ ಪತ್ರ ಸಿಕ್ಕಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ವಿನಯ್ ತಿವಾರಿ ಅವರನ್ನು ಭಾನುವಾರ ಅಮಾನತು ಮಾಡಲಾಗಿದೆ.


ಇದನ್ನೂ ಓದಿ: ಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...