Homeಮುಖಪುಟಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್‌ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು...

ಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್‌ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು…

8 ಪೊಲೀಸರ ಹತ್ಯೆಗೆ ಕಾರಣರಾದ ಮಾಹಿತಿಸೋರಿಕೆ ಶಂಕೆಯ ಆಧಾರದ ಮೇಲೆ ಶುಕ್ರವಾರದಂದು 68 ಪೊಲೀಸರನ್ನು ಕಾನ್ಪುರದ ಚೌಬೆಪುರ ಪೊಲೀಸ್ ಠಾಣೆಯಿಂದ ತೆಗೆದುಹಾಕಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ವಾರ ಎಂಟು ಪೊಲೀಸರನ್ನು ಹೊಂಚು ಹಾಕಿ ಕೊಲೆ ಮಾಡಿದ ಪ್ರಮುಖ ಆರೋಪಿ ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮಂಗಳವಾರ ದೆಹಲಿ ಬಳಿಯ ಹರಿಯಾಣದ ಫರಿದಾಬಾದ್‌ನ ಹೋಟೆಲ್‌ನಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಫರಿದಾಬಾದ್ ಹೋಟೆಲ್‌ನಲ್ಲಿ ಪೋಲಿಸರು ದಾಳಿ ನಡೆಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪೊಲೀಸರು ತಲುಪುವ ಮೊದಲೇ ವಿಕಾಸ್ ದುಬೆಯನ್ನು ಹೋಲುವ ವ್ಯಕ್ತಿಯೊಬ್ಬ ಹೋಟೆಲ್ ತೊರೆದಿದ್ದಾನೆ ಎಂದು ಹೋಟೆಲ್ ಮ್ಯಾನೇಜರ್ ಹೇಳಿದ್ದಾರೆ. ಆ ವ್ಯಕ್ತಿ ವಿಕಾಸ್ ದುಬೆ ಎಂದು ಪೊಲೀಸರು ನಂತರ ಖಚಿತಪಡಿಸಿದ್ದಾರೆ.

ಹೋಟೆಲ್‌ನ ವ್ಯವಸ್ಥಾಪಕ ರೋಮಿ NDTVಗೆ ನೀಡಿದ ಹೇಳಿಕೆಯಲ್ಲಿ, “ನಿನ್ನೆ ಮಧ್ಯಾಹ್ನ 12:30 ರ ಸುಮಾರಿಗೆ ಇಬ್ಬರು ಬಂದರು. ಅವರಲ್ಲಿ ಒಬ್ಬರು ಗುರುತಿನ ಚೀಟಿಗಳನ್ನು ತೋರಿಸಿದರು, ಫೋಟೋ ಸ್ಪಷ್ಟವಾಗಿರಲಿಲ್ಲ. ಈ ಐಡಿಯನ್ನು ಬಳಸಲಾಗುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಇದಕ್ಕೂ ಮೊದಲು ವಿಕಾಸ್ ದುಬೆ ಅವರನ್ನು ನೋಡಿರಲಿಲ್ಲ. ಸಂಜೆ 4:30 ರ ಸುಮಾರಿಗೆ ಪೊಲೀಸರು ಬಂದು ದುಬೆ ಅವರ ಕೋಣೆಯ ವಿವರಗಳನ್ನು ಕೇಳಿದರು. ನಂತರ CCTV ಕ್ಯಾಮರಾದ ತುಣುಕುಗಳನ್ನು ತೆಗೆದುಕೊಂಡರು” ಎಂದು ಹೇಳಿದ್ದಾರೆ.

ಪೊಲೀಸರು ವಶಪಡಿಸಿಕೊಂಡ CCTV ದೃಶ್ಯಾವಳಿಗಳು ವಿಕಾಸ್ ದುಬೆ ಮಾಸ್ಕ್‌ ಧರಿಸಿರುವುದು ಖಚಿತವಾಗಿದೆ. ಮಂಗಳವಾರ ಬಂಧಿಸಲ್ಪಟ್ಟ ಇಬ್ಬರಲ್ಲಿ, ಕುಖ್ಯಾತ ಅಪರಾಧಿಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಅಂಕುರ್. ಮತ್ತೊಬ್ಬ ಪ್ರಭಾತ ಎಂಬುವವನು ಸಂಚುಕೋರರ ಗ್ರಾಮದವನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ನಡೆದ ಹತ್ಯಾಕಾಂಡದ ನಂತರ ನಾಪತ್ತೆಯಾಗಿದ್ದ ವಿಕಾಸ್ ದುಬೆಯನ್ನು ಬಂಧಿಸಲು ಯುಪಿ ಪೊಲೀಸರ ಇಪ್ಪತ್ತೈದು ತಂಡಗಳು ದಾಳಿ/ತನಿಖೆ ನಡೆಸುತ್ತಿವೆ. ಆರೋಪಿಯ ಬಗ್ಗೆ ಸುಳಿವು ಕೊಟ್ಟವರಿಗೆ 2.5 ಲಕ್ಷ ಬಹುಮಾನ ಘೋಷಿಸಲಾಗಿದೆ.

ದೆಹಲಿಯ ಸಮೀಪವಿರುವ ಹರಿಯಾಣದ ಎರಡು ನಗರಗಳು – ಫರಿದಾಬಾದ್ ಮತ್ತು ಗುರಗಾಂವ್ ಹೈ-ಅಲರ್ಟ್ ಘೋಷಿಸಿವೆ. ಈ ಎಚ್ಚರಿಕೆಯ ನಡುವೆಯೇ ಕುಖ್ಯಾತ ಅಪರಾಧಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಶರಣಾಗಬಹುದು ಎಂಬ ಊಹಾಪೋಹಗಳಿವೆ.

ಬುಧವಾರ ಮುಂಜಾನೆ ಯುಪಿ ವಿಶೇಷ ಕಾರ್ಯಪಡೆ (ಎಸ್‌ಟಿಎಫ್)  ರಾಜ್ಯ ರಾಜಧಾನಿ ಲಕ್ನೋದಿಂದ 200 ಕಿ.ಮೀ ದೂರದ ಹಮೀರ್‌ಪುರ ಜಿಲ್ಲೆಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಯುಪಿ ದರೋಡೆಕೋರನ ಆಪ್ತ ಸಹಾಯಕ ಅಮರ್ ದುಬೆ ಮೃತಪಟ್ಟಿದ್ದಾನೆ. ಕಾನ್ಪುರದಲ್ಲಿ  ಶ್ಯಾಮು ಬಾಜ್‌ಪೈ ಎಂಬ ಇನ್ನೊಬ್ಬ ಸಹಾಯಕನನ್ನು ಬಂಧಿಸಲಾಗಿದೆ.

8 ಪೊಲೀಸರ ಹತ್ಯೆಗೆ ಕಾರಣರಾದ ಮಾಹಿತಿಸೋರಿಕೆ ಶಂಕೆಯ ಆಧಾರದ ಮೇಲೆ ಶುಕ್ರವಾರದಂದು 68 ಪೊಲೀಸರನ್ನು ಕಾನ್ಪುರದ ಚೌಬೆಪುರ ಪೊಲೀಸ್ ಠಾಣೆಯಿಂದ ತೆಗೆದುಹಾಕಲಾಗಿದೆ. ದುಬೆಯ ಬಿಕ್ರು ಗ್ರಾಮವು ಚೌಬೆಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ.

ಕಾನ್ಪುರ ಪೊಲೀಸರ ಮಾಜಿ ಮುಖ್ಯಸ್ಥ ಅನಂತ್ ಡಿಯೋ ಅವರನ್ನು ಯುಪಿ ಸರ್ಕಾರ ವರ್ಗಾಯಿಸಿದೆ. ಎಸ್‌ಟಿಎಫ್‌ನೊಂದಿಗೆ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಗಿರುವ ಡಿಯೊ ಅವರನ್ನು ಮೊರಾದಾಬಾದ್‌ನ ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿಗೆ ವರ್ಗಾಯಿಸಲಾಗಿದೆ. ಶುಕ್ರವಾರ ಕೊಲೆಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ ಅವರು ಮಾರ್ಚ್‌ನಲ್ಲಿ ಬರೆದ ಪತ್ರವೊಂದನ್ನು ಅವರು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಲಾಗಿದೆ.

ದೇವೇಂದ್ರ ಮಿಶ್ರಾ ಬರೆದಿದ್ದಾರೆ ಎನ್ನಲಾಗಿರುವ ಪತ್ರದಲ್ಲಿ, ಚೌಬೆಪುರ ಪೊಲೀಸ್ ಠಾಣೆಯ ಸ್ಟೇಷನ್ ಆಫೀಸರ್ ವಿನಯ್ ತಿವಾರಿ ದರೋಡೆಕೋರರಿಗೆ ಸಹಾಯ ಮಾಡುತ್ತಿದ್ದಾರೆ ಎಂದು  ಆರೋಪ ಮಾಡಿದ್ದರು. ದೂರನ್ನು ನಿರ್ಲಕ್ಷಿಸಿದರೆ “ದೊಡ್ಡ ಅಚಾತುರ್ಯ” ನಡೆಯುವ ಬಗ್ಗೆ ಪತ್ರದಲ್ಲಿ ಎಚ್ಚರಿಕೆ ನೀಡಿದ್ದರು. ಪತ್ರದ ನಕಲನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಗುತ್ತಿದೆ. ಆದರೆ ಪತ್ರ ಸಿಕ್ಕಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ವಿನಯ್ ತಿವಾರಿ ಅವರನ್ನು ಭಾನುವಾರ ಅಮಾನತು ಮಾಡಲಾಗಿದೆ.


ಇದನ್ನೂ ಓದಿ: ಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...