Homeಮುಖಪುಟಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್‌ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು...

ಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್‌ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು…

8 ಪೊಲೀಸರ ಹತ್ಯೆಗೆ ಕಾರಣರಾದ ಮಾಹಿತಿಸೋರಿಕೆ ಶಂಕೆಯ ಆಧಾರದ ಮೇಲೆ ಶುಕ್ರವಾರದಂದು 68 ಪೊಲೀಸರನ್ನು ಕಾನ್ಪುರದ ಚೌಬೆಪುರ ಪೊಲೀಸ್ ಠಾಣೆಯಿಂದ ತೆಗೆದುಹಾಕಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ವಾರ ಎಂಟು ಪೊಲೀಸರನ್ನು ಹೊಂಚು ಹಾಕಿ ಕೊಲೆ ಮಾಡಿದ ಪ್ರಮುಖ ಆರೋಪಿ ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮಂಗಳವಾರ ದೆಹಲಿ ಬಳಿಯ ಹರಿಯಾಣದ ಫರಿದಾಬಾದ್‌ನ ಹೋಟೆಲ್‌ನಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಫರಿದಾಬಾದ್ ಹೋಟೆಲ್‌ನಲ್ಲಿ ಪೋಲಿಸರು ದಾಳಿ ನಡೆಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪೊಲೀಸರು ತಲುಪುವ ಮೊದಲೇ ವಿಕಾಸ್ ದುಬೆಯನ್ನು ಹೋಲುವ ವ್ಯಕ್ತಿಯೊಬ್ಬ ಹೋಟೆಲ್ ತೊರೆದಿದ್ದಾನೆ ಎಂದು ಹೋಟೆಲ್ ಮ್ಯಾನೇಜರ್ ಹೇಳಿದ್ದಾರೆ. ಆ ವ್ಯಕ್ತಿ ವಿಕಾಸ್ ದುಬೆ ಎಂದು ಪೊಲೀಸರು ನಂತರ ಖಚಿತಪಡಿಸಿದ್ದಾರೆ.

ಹೋಟೆಲ್‌ನ ವ್ಯವಸ್ಥಾಪಕ ರೋಮಿ NDTVಗೆ ನೀಡಿದ ಹೇಳಿಕೆಯಲ್ಲಿ, “ನಿನ್ನೆ ಮಧ್ಯಾಹ್ನ 12:30 ರ ಸುಮಾರಿಗೆ ಇಬ್ಬರು ಬಂದರು. ಅವರಲ್ಲಿ ಒಬ್ಬರು ಗುರುತಿನ ಚೀಟಿಗಳನ್ನು ತೋರಿಸಿದರು, ಫೋಟೋ ಸ್ಪಷ್ಟವಾಗಿರಲಿಲ್ಲ. ಈ ಐಡಿಯನ್ನು ಬಳಸಲಾಗುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಇದಕ್ಕೂ ಮೊದಲು ವಿಕಾಸ್ ದುಬೆ ಅವರನ್ನು ನೋಡಿರಲಿಲ್ಲ. ಸಂಜೆ 4:30 ರ ಸುಮಾರಿಗೆ ಪೊಲೀಸರು ಬಂದು ದುಬೆ ಅವರ ಕೋಣೆಯ ವಿವರಗಳನ್ನು ಕೇಳಿದರು. ನಂತರ CCTV ಕ್ಯಾಮರಾದ ತುಣುಕುಗಳನ್ನು ತೆಗೆದುಕೊಂಡರು” ಎಂದು ಹೇಳಿದ್ದಾರೆ.

ಪೊಲೀಸರು ವಶಪಡಿಸಿಕೊಂಡ CCTV ದೃಶ್ಯಾವಳಿಗಳು ವಿಕಾಸ್ ದುಬೆ ಮಾಸ್ಕ್‌ ಧರಿಸಿರುವುದು ಖಚಿತವಾಗಿದೆ. ಮಂಗಳವಾರ ಬಂಧಿಸಲ್ಪಟ್ಟ ಇಬ್ಬರಲ್ಲಿ, ಕುಖ್ಯಾತ ಅಪರಾಧಿಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಅಂಕುರ್. ಮತ್ತೊಬ್ಬ ಪ್ರಭಾತ ಎಂಬುವವನು ಸಂಚುಕೋರರ ಗ್ರಾಮದವನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ನಡೆದ ಹತ್ಯಾಕಾಂಡದ ನಂತರ ನಾಪತ್ತೆಯಾಗಿದ್ದ ವಿಕಾಸ್ ದುಬೆಯನ್ನು ಬಂಧಿಸಲು ಯುಪಿ ಪೊಲೀಸರ ಇಪ್ಪತ್ತೈದು ತಂಡಗಳು ದಾಳಿ/ತನಿಖೆ ನಡೆಸುತ್ತಿವೆ. ಆರೋಪಿಯ ಬಗ್ಗೆ ಸುಳಿವು ಕೊಟ್ಟವರಿಗೆ 2.5 ಲಕ್ಷ ಬಹುಮಾನ ಘೋಷಿಸಲಾಗಿದೆ.

ದೆಹಲಿಯ ಸಮೀಪವಿರುವ ಹರಿಯಾಣದ ಎರಡು ನಗರಗಳು – ಫರಿದಾಬಾದ್ ಮತ್ತು ಗುರಗಾಂವ್ ಹೈ-ಅಲರ್ಟ್ ಘೋಷಿಸಿವೆ. ಈ ಎಚ್ಚರಿಕೆಯ ನಡುವೆಯೇ ಕುಖ್ಯಾತ ಅಪರಾಧಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಶರಣಾಗಬಹುದು ಎಂಬ ಊಹಾಪೋಹಗಳಿವೆ.

ಬುಧವಾರ ಮುಂಜಾನೆ ಯುಪಿ ವಿಶೇಷ ಕಾರ್ಯಪಡೆ (ಎಸ್‌ಟಿಎಫ್)  ರಾಜ್ಯ ರಾಜಧಾನಿ ಲಕ್ನೋದಿಂದ 200 ಕಿ.ಮೀ ದೂರದ ಹಮೀರ್‌ಪುರ ಜಿಲ್ಲೆಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಯುಪಿ ದರೋಡೆಕೋರನ ಆಪ್ತ ಸಹಾಯಕ ಅಮರ್ ದುಬೆ ಮೃತಪಟ್ಟಿದ್ದಾನೆ. ಕಾನ್ಪುರದಲ್ಲಿ  ಶ್ಯಾಮು ಬಾಜ್‌ಪೈ ಎಂಬ ಇನ್ನೊಬ್ಬ ಸಹಾಯಕನನ್ನು ಬಂಧಿಸಲಾಗಿದೆ.

8 ಪೊಲೀಸರ ಹತ್ಯೆಗೆ ಕಾರಣರಾದ ಮಾಹಿತಿಸೋರಿಕೆ ಶಂಕೆಯ ಆಧಾರದ ಮೇಲೆ ಶುಕ್ರವಾರದಂದು 68 ಪೊಲೀಸರನ್ನು ಕಾನ್ಪುರದ ಚೌಬೆಪುರ ಪೊಲೀಸ್ ಠಾಣೆಯಿಂದ ತೆಗೆದುಹಾಕಲಾಗಿದೆ. ದುಬೆಯ ಬಿಕ್ರು ಗ್ರಾಮವು ಚೌಬೆಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ.

ಕಾನ್ಪುರ ಪೊಲೀಸರ ಮಾಜಿ ಮುಖ್ಯಸ್ಥ ಅನಂತ್ ಡಿಯೋ ಅವರನ್ನು ಯುಪಿ ಸರ್ಕಾರ ವರ್ಗಾಯಿಸಿದೆ. ಎಸ್‌ಟಿಎಫ್‌ನೊಂದಿಗೆ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಗಿರುವ ಡಿಯೊ ಅವರನ್ನು ಮೊರಾದಾಬಾದ್‌ನ ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿಗೆ ವರ್ಗಾಯಿಸಲಾಗಿದೆ. ಶುಕ್ರವಾರ ಕೊಲೆಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ ಅವರು ಮಾರ್ಚ್‌ನಲ್ಲಿ ಬರೆದ ಪತ್ರವೊಂದನ್ನು ಅವರು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಲಾಗಿದೆ.

ದೇವೇಂದ್ರ ಮಿಶ್ರಾ ಬರೆದಿದ್ದಾರೆ ಎನ್ನಲಾಗಿರುವ ಪತ್ರದಲ್ಲಿ, ಚೌಬೆಪುರ ಪೊಲೀಸ್ ಠಾಣೆಯ ಸ್ಟೇಷನ್ ಆಫೀಸರ್ ವಿನಯ್ ತಿವಾರಿ ದರೋಡೆಕೋರರಿಗೆ ಸಹಾಯ ಮಾಡುತ್ತಿದ್ದಾರೆ ಎಂದು  ಆರೋಪ ಮಾಡಿದ್ದರು. ದೂರನ್ನು ನಿರ್ಲಕ್ಷಿಸಿದರೆ “ದೊಡ್ಡ ಅಚಾತುರ್ಯ” ನಡೆಯುವ ಬಗ್ಗೆ ಪತ್ರದಲ್ಲಿ ಎಚ್ಚರಿಕೆ ನೀಡಿದ್ದರು. ಪತ್ರದ ನಕಲನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಗುತ್ತಿದೆ. ಆದರೆ ಪತ್ರ ಸಿಕ್ಕಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ವಿನಯ್ ತಿವಾರಿ ಅವರನ್ನು ಭಾನುವಾರ ಅಮಾನತು ಮಾಡಲಾಗಿದೆ.


ಇದನ್ನೂ ಓದಿ: ಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...