Homeಮುಖಪುಟಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್‌ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು...

ಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್‌ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು…

8 ಪೊಲೀಸರ ಹತ್ಯೆಗೆ ಕಾರಣರಾದ ಮಾಹಿತಿಸೋರಿಕೆ ಶಂಕೆಯ ಆಧಾರದ ಮೇಲೆ ಶುಕ್ರವಾರದಂದು 68 ಪೊಲೀಸರನ್ನು ಕಾನ್ಪುರದ ಚೌಬೆಪುರ ಪೊಲೀಸ್ ಠಾಣೆಯಿಂದ ತೆಗೆದುಹಾಕಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ವಾರ ಎಂಟು ಪೊಲೀಸರನ್ನು ಹೊಂಚು ಹಾಕಿ ಕೊಲೆ ಮಾಡಿದ ಪ್ರಮುಖ ಆರೋಪಿ ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮಂಗಳವಾರ ದೆಹಲಿ ಬಳಿಯ ಹರಿಯಾಣದ ಫರಿದಾಬಾದ್‌ನ ಹೋಟೆಲ್‌ನಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಫರಿದಾಬಾದ್ ಹೋಟೆಲ್‌ನಲ್ಲಿ ಪೋಲಿಸರು ದಾಳಿ ನಡೆಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪೊಲೀಸರು ತಲುಪುವ ಮೊದಲೇ ವಿಕಾಸ್ ದುಬೆಯನ್ನು ಹೋಲುವ ವ್ಯಕ್ತಿಯೊಬ್ಬ ಹೋಟೆಲ್ ತೊರೆದಿದ್ದಾನೆ ಎಂದು ಹೋಟೆಲ್ ಮ್ಯಾನೇಜರ್ ಹೇಳಿದ್ದಾರೆ. ಆ ವ್ಯಕ್ತಿ ವಿಕಾಸ್ ದುಬೆ ಎಂದು ಪೊಲೀಸರು ನಂತರ ಖಚಿತಪಡಿಸಿದ್ದಾರೆ.

ಹೋಟೆಲ್‌ನ ವ್ಯವಸ್ಥಾಪಕ ರೋಮಿ NDTVಗೆ ನೀಡಿದ ಹೇಳಿಕೆಯಲ್ಲಿ, “ನಿನ್ನೆ ಮಧ್ಯಾಹ್ನ 12:30 ರ ಸುಮಾರಿಗೆ ಇಬ್ಬರು ಬಂದರು. ಅವರಲ್ಲಿ ಒಬ್ಬರು ಗುರುತಿನ ಚೀಟಿಗಳನ್ನು ತೋರಿಸಿದರು, ಫೋಟೋ ಸ್ಪಷ್ಟವಾಗಿರಲಿಲ್ಲ. ಈ ಐಡಿಯನ್ನು ಬಳಸಲಾಗುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಇದಕ್ಕೂ ಮೊದಲು ವಿಕಾಸ್ ದುಬೆ ಅವರನ್ನು ನೋಡಿರಲಿಲ್ಲ. ಸಂಜೆ 4:30 ರ ಸುಮಾರಿಗೆ ಪೊಲೀಸರು ಬಂದು ದುಬೆ ಅವರ ಕೋಣೆಯ ವಿವರಗಳನ್ನು ಕೇಳಿದರು. ನಂತರ CCTV ಕ್ಯಾಮರಾದ ತುಣುಕುಗಳನ್ನು ತೆಗೆದುಕೊಂಡರು” ಎಂದು ಹೇಳಿದ್ದಾರೆ.

ಪೊಲೀಸರು ವಶಪಡಿಸಿಕೊಂಡ CCTV ದೃಶ್ಯಾವಳಿಗಳು ವಿಕಾಸ್ ದುಬೆ ಮಾಸ್ಕ್‌ ಧರಿಸಿರುವುದು ಖಚಿತವಾಗಿದೆ. ಮಂಗಳವಾರ ಬಂಧಿಸಲ್ಪಟ್ಟ ಇಬ್ಬರಲ್ಲಿ, ಕುಖ್ಯಾತ ಅಪರಾಧಿಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಅಂಕುರ್. ಮತ್ತೊಬ್ಬ ಪ್ರಭಾತ ಎಂಬುವವನು ಸಂಚುಕೋರರ ಗ್ರಾಮದವನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ನಡೆದ ಹತ್ಯಾಕಾಂಡದ ನಂತರ ನಾಪತ್ತೆಯಾಗಿದ್ದ ವಿಕಾಸ್ ದುಬೆಯನ್ನು ಬಂಧಿಸಲು ಯುಪಿ ಪೊಲೀಸರ ಇಪ್ಪತ್ತೈದು ತಂಡಗಳು ದಾಳಿ/ತನಿಖೆ ನಡೆಸುತ್ತಿವೆ. ಆರೋಪಿಯ ಬಗ್ಗೆ ಸುಳಿವು ಕೊಟ್ಟವರಿಗೆ 2.5 ಲಕ್ಷ ಬಹುಮಾನ ಘೋಷಿಸಲಾಗಿದೆ.

ದೆಹಲಿಯ ಸಮೀಪವಿರುವ ಹರಿಯಾಣದ ಎರಡು ನಗರಗಳು – ಫರಿದಾಬಾದ್ ಮತ್ತು ಗುರಗಾಂವ್ ಹೈ-ಅಲರ್ಟ್ ಘೋಷಿಸಿವೆ. ಈ ಎಚ್ಚರಿಕೆಯ ನಡುವೆಯೇ ಕುಖ್ಯಾತ ಅಪರಾಧಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಶರಣಾಗಬಹುದು ಎಂಬ ಊಹಾಪೋಹಗಳಿವೆ.

ಬುಧವಾರ ಮುಂಜಾನೆ ಯುಪಿ ವಿಶೇಷ ಕಾರ್ಯಪಡೆ (ಎಸ್‌ಟಿಎಫ್)  ರಾಜ್ಯ ರಾಜಧಾನಿ ಲಕ್ನೋದಿಂದ 200 ಕಿ.ಮೀ ದೂರದ ಹಮೀರ್‌ಪುರ ಜಿಲ್ಲೆಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಯುಪಿ ದರೋಡೆಕೋರನ ಆಪ್ತ ಸಹಾಯಕ ಅಮರ್ ದುಬೆ ಮೃತಪಟ್ಟಿದ್ದಾನೆ. ಕಾನ್ಪುರದಲ್ಲಿ  ಶ್ಯಾಮು ಬಾಜ್‌ಪೈ ಎಂಬ ಇನ್ನೊಬ್ಬ ಸಹಾಯಕನನ್ನು ಬಂಧಿಸಲಾಗಿದೆ.

8 ಪೊಲೀಸರ ಹತ್ಯೆಗೆ ಕಾರಣರಾದ ಮಾಹಿತಿಸೋರಿಕೆ ಶಂಕೆಯ ಆಧಾರದ ಮೇಲೆ ಶುಕ್ರವಾರದಂದು 68 ಪೊಲೀಸರನ್ನು ಕಾನ್ಪುರದ ಚೌಬೆಪುರ ಪೊಲೀಸ್ ಠಾಣೆಯಿಂದ ತೆಗೆದುಹಾಕಲಾಗಿದೆ. ದುಬೆಯ ಬಿಕ್ರು ಗ್ರಾಮವು ಚೌಬೆಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ.

ಕಾನ್ಪುರ ಪೊಲೀಸರ ಮಾಜಿ ಮುಖ್ಯಸ್ಥ ಅನಂತ್ ಡಿಯೋ ಅವರನ್ನು ಯುಪಿ ಸರ್ಕಾರ ವರ್ಗಾಯಿಸಿದೆ. ಎಸ್‌ಟಿಎಫ್‌ನೊಂದಿಗೆ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಗಿರುವ ಡಿಯೊ ಅವರನ್ನು ಮೊರಾದಾಬಾದ್‌ನ ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿಗೆ ವರ್ಗಾಯಿಸಲಾಗಿದೆ. ಶುಕ್ರವಾರ ಕೊಲೆಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ ಅವರು ಮಾರ್ಚ್‌ನಲ್ಲಿ ಬರೆದ ಪತ್ರವೊಂದನ್ನು ಅವರು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಲಾಗಿದೆ.

ದೇವೇಂದ್ರ ಮಿಶ್ರಾ ಬರೆದಿದ್ದಾರೆ ಎನ್ನಲಾಗಿರುವ ಪತ್ರದಲ್ಲಿ, ಚೌಬೆಪುರ ಪೊಲೀಸ್ ಠಾಣೆಯ ಸ್ಟೇಷನ್ ಆಫೀಸರ್ ವಿನಯ್ ತಿವಾರಿ ದರೋಡೆಕೋರರಿಗೆ ಸಹಾಯ ಮಾಡುತ್ತಿದ್ದಾರೆ ಎಂದು  ಆರೋಪ ಮಾಡಿದ್ದರು. ದೂರನ್ನು ನಿರ್ಲಕ್ಷಿಸಿದರೆ “ದೊಡ್ಡ ಅಚಾತುರ್ಯ” ನಡೆಯುವ ಬಗ್ಗೆ ಪತ್ರದಲ್ಲಿ ಎಚ್ಚರಿಕೆ ನೀಡಿದ್ದರು. ಪತ್ರದ ನಕಲನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಗುತ್ತಿದೆ. ಆದರೆ ಪತ್ರ ಸಿಕ್ಕಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ವಿನಯ್ ತಿವಾರಿ ಅವರನ್ನು ಭಾನುವಾರ ಅಮಾನತು ಮಾಡಲಾಗಿದೆ.


ಇದನ್ನೂ ಓದಿ: ಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....