Homeಮುಖಪುಟಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

- Advertisement -
- Advertisement -

ಬಾಲಿವುಡ್ ನಟಿ ಆಲಿಯಾ ಭಟ್ ಮತ್ತು ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ವಿರುದ್ಧ ಗಂಗೂಬಾಯಿ ಕಾಥಿಯಾವಾಡಿ ಚಿತ್ರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ದೂರಿನ ವಿಚಾರಣೆಗೆ ಬಾಂಬೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಸ್ಥಳೀಯ ನ್ಯಾಯಾಲಯವು ಆರಂಭಿಸಿದ ವಿಚಾರಣೆಗೆ ಬಾಂಬೆ ಹೈಕೋರ್ಟ್ ಮುಂದಿನ ವಿಚಾರಣೆಯ ದಿನಾಂಕ ಸೆಪ್ಟೆಂಬರ್ 7 ರವರೆಗೆ ಮಧ್ಯಂತರ ತಡೆ ನೀಡಿದೆ.

ಈ ವರ್ಷದ ಮಾರ್ಚ್‌ನಲ್ಲಿ ಗಂಗೂಬಾಯಿ ಕಾಥಿಯಾವಾಡಿಯವರ ದತ್ತು ಪುತ್ರ ಬಾಬೂಜೀ ಶಾ, ಬಾಲಿವುಡ್ ನಟಿ ಆಲಿಯಾ ಭಟ್, ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಮತ್ತು ಬನ್ಸಾಲಿ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ದೂರಿನ ಅನ್ವಯ ಸಮನ್ಸ್ ಜಾರಿ ಮಾಡಲಾಗಿತ್ತು.

ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್‌ಗೆ ಗೂಗಲ್ ಡೂಡಲ್ ಗೌರವ

ಗಂಗೂಬಾಯಿ ಕಾಥಿಯಾವಾಡಿ ಚಿತ್ರದಲ್ಲಿ ಆಲಿಯಾ ಭಟ್ ಗಂಗೂಬಾಯಿಯಾಗಿ ಕಾಣಿಸಿಕೊಂಡಿದ್ದಾರೆ. 1960 ರ ಸಮಯದಲ್ಲಿ ಮುಂಬೈನ ಕಾಮಾಟಿಪುರದ ಅತ್ಯಂತ ಶಕ್ತಿಶಾಲಿ, ಪ್ರೀತಿಪಾತ್ರ ಮತ್ತು ಗೌರವಾನ್ವಿತರಲ್ಲಿ ಒಬ್ಬರು ಗಂಗೂಬಾಯಿ ಎನ್ನಲಾಗಿದೆ.

ಈ ಚಲನಚಿತ್ರವು “ದಿ ಮಾಫಿಯಾ ಕ್ವೀನ್ಸ್ ಆಫ್ ಮುಂಬಯಿ” ಕಾದಂಬರಿಯಿಂದ ಸ್ಫೂರ್ತಿ ಪಡೆದಿದೆ ಎಂದು ಬಾಬೂಜೀ ಶಾ ಹೇಳಿದ್ದಾರೆ. ಈ ಕಾದಂಬರಿಯ ಕೆಲವು ಭಾಗಗಳು ಮಾನಹಾನಿಕರವಾಗಿದ್ದು, ಗಂಗೂಬಾಯಿ ಕಾಥಿಯಾವಾಡಿಯವರ ಪ್ರತಿಷ್ಠೆಗೆ ಕಳಂಕ ತರುತ್ತವೆ. ಆಕೆಯ ಖಾಸಗಿತನದ ಹಕ್ಕಿಗೆ ಧಕ್ಕೆ ತಂದಿವೆ ಎಂದಿದ್ದಾರೆ.

ಬನ್ಸಾಲಿ ಮತ್ತು ಆಲಿಯಾ ಭಟ್ ಪರ ಹಾಜರಾದ ಹಿರಿಯ ವಕೀಲ ಆಬಾದ್ ಪೊಂಡಾ, ಬಾಬೂಜೀ ಶಾ ಅಸ್ತಿತ್ವದ ಬಗ್ಗೆ ತಮಗೆ ಯಾವುದೇ ಮಾಹಿತಿಯಿಲ್ಲ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ಅಶ್ಲೀಲ ಚಿತ್ರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾಗೆ ಮಧ್ಯಂತರ ಜಾಮೀನು

All about 'Matriarch of Kamathipura' Gangubai Kathiawadi, the woman who Alia Bhatt plays in Sanjay Leela Bhansali's film

ಇತ್ತ ಮತ್ತೊಂದು ಹೈಕೋರ್ಟ್ ಪೀಠ ಚಲನಚಿತ್ರ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದೆ.

ಚಲನಚಿತ್ರ ಬಿಡುಗಡೆಗೆ ತಡೆ ಕೋರಿ, ಕಾದಂಬರಿಯ ಬರಹಗಾರರು/ಪ್ರಕಾಶಕರು ಯಾವುದೇ ತೃತೀಯ ಹಕ್ಕುಗಳನ್ನು ಸೃಷ್ಟಿಸದಂತೆ, ಗಂಗೂಬಾಯಿ ಕಾಥಿಯಾವಾಡಿಯವರ ಜೀವನದ ಬಗ್ಗೆ ಯಾವುದೇ ಕಥೆಯನ್ನು ಬರೆಯದಂತೆ ಬಾಬೂಜೀ ಶಾ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ಆದರೆ, ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಅವರು ಅರ್ಜಿಯನ್ನು ತಿರಸ್ಕರಿಸಿ, ಮಾನಹಾನಿಕರದಂತಹ ಯಾವುದೇ ವಿಷಯವು ಆ ವ್ಯಕ್ತಿಯ ಸಾವಿನೊಂದಿಗೆ ಕೊನೆಗೊಳ್ಳುತ್ತದೆ ಎಂದು ತಿಳಿಸಿದ್ದಾರೆ. ಜೊತೆಗೆ “ತಾನು ಗಂಗೂಬಾಯಿ ಕಾಥಿಯಾವಾಡಿಯ ದತ್ತು ಪುತ್ರನೆಂದು ಸಾಭೀತುಪಡಿಸುವಲ್ಲಿ ಅರ್ಜಿದಾರ ವಿಫಲನಾಗಿದ್ದಾನೆ” ಎಂದು ಹೇಳಿದ್ದರು.

ಈ ಚಲನಚಿತ್ರವನ್ನು ಮೊದಲು ಸೆಪ್ಟೆಂಬರ್ 2020 ರಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು, ಆದರೆ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು. ಈ ವರ್ಷದ ಆರಂಭದಲ್ಲಿ, ಚಲನಚಿತ್ರವು 2021 ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಯಾರಕರು ಘೋಷಿಸಿದ್ದರು. ಮುಂದಿನ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿಲ್ಲ.


ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...