Homeಮುಖಪುಟಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

- Advertisement -
- Advertisement -

ಬಾಲಿವುಡ್ ನಟಿ ಆಲಿಯಾ ಭಟ್ ಮತ್ತು ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ವಿರುದ್ಧ ಗಂಗೂಬಾಯಿ ಕಾಥಿಯಾವಾಡಿ ಚಿತ್ರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ದೂರಿನ ವಿಚಾರಣೆಗೆ ಬಾಂಬೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಸ್ಥಳೀಯ ನ್ಯಾಯಾಲಯವು ಆರಂಭಿಸಿದ ವಿಚಾರಣೆಗೆ ಬಾಂಬೆ ಹೈಕೋರ್ಟ್ ಮುಂದಿನ ವಿಚಾರಣೆಯ ದಿನಾಂಕ ಸೆಪ್ಟೆಂಬರ್ 7 ರವರೆಗೆ ಮಧ್ಯಂತರ ತಡೆ ನೀಡಿದೆ.

ಈ ವರ್ಷದ ಮಾರ್ಚ್‌ನಲ್ಲಿ ಗಂಗೂಬಾಯಿ ಕಾಥಿಯಾವಾಡಿಯವರ ದತ್ತು ಪುತ್ರ ಬಾಬೂಜೀ ಶಾ, ಬಾಲಿವುಡ್ ನಟಿ ಆಲಿಯಾ ಭಟ್, ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಮತ್ತು ಬನ್ಸಾಲಿ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ದೂರಿನ ಅನ್ವಯ ಸಮನ್ಸ್ ಜಾರಿ ಮಾಡಲಾಗಿತ್ತು.

ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್‌ಗೆ ಗೂಗಲ್ ಡೂಡಲ್ ಗೌರವ

ಗಂಗೂಬಾಯಿ ಕಾಥಿಯಾವಾಡಿ ಚಿತ್ರದಲ್ಲಿ ಆಲಿಯಾ ಭಟ್ ಗಂಗೂಬಾಯಿಯಾಗಿ ಕಾಣಿಸಿಕೊಂಡಿದ್ದಾರೆ. 1960 ರ ಸಮಯದಲ್ಲಿ ಮುಂಬೈನ ಕಾಮಾಟಿಪುರದ ಅತ್ಯಂತ ಶಕ್ತಿಶಾಲಿ, ಪ್ರೀತಿಪಾತ್ರ ಮತ್ತು ಗೌರವಾನ್ವಿತರಲ್ಲಿ ಒಬ್ಬರು ಗಂಗೂಬಾಯಿ ಎನ್ನಲಾಗಿದೆ.

ಈ ಚಲನಚಿತ್ರವು “ದಿ ಮಾಫಿಯಾ ಕ್ವೀನ್ಸ್ ಆಫ್ ಮುಂಬಯಿ” ಕಾದಂಬರಿಯಿಂದ ಸ್ಫೂರ್ತಿ ಪಡೆದಿದೆ ಎಂದು ಬಾಬೂಜೀ ಶಾ ಹೇಳಿದ್ದಾರೆ. ಈ ಕಾದಂಬರಿಯ ಕೆಲವು ಭಾಗಗಳು ಮಾನಹಾನಿಕರವಾಗಿದ್ದು, ಗಂಗೂಬಾಯಿ ಕಾಥಿಯಾವಾಡಿಯವರ ಪ್ರತಿಷ್ಠೆಗೆ ಕಳಂಕ ತರುತ್ತವೆ. ಆಕೆಯ ಖಾಸಗಿತನದ ಹಕ್ಕಿಗೆ ಧಕ್ಕೆ ತಂದಿವೆ ಎಂದಿದ್ದಾರೆ.

ಬನ್ಸಾಲಿ ಮತ್ತು ಆಲಿಯಾ ಭಟ್ ಪರ ಹಾಜರಾದ ಹಿರಿಯ ವಕೀಲ ಆಬಾದ್ ಪೊಂಡಾ, ಬಾಬೂಜೀ ಶಾ ಅಸ್ತಿತ್ವದ ಬಗ್ಗೆ ತಮಗೆ ಯಾವುದೇ ಮಾಹಿತಿಯಿಲ್ಲ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ಅಶ್ಲೀಲ ಚಿತ್ರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾಗೆ ಮಧ್ಯಂತರ ಜಾಮೀನು

All about 'Matriarch of Kamathipura' Gangubai Kathiawadi, the woman who Alia Bhatt plays in Sanjay Leela Bhansali's film

ಇತ್ತ ಮತ್ತೊಂದು ಹೈಕೋರ್ಟ್ ಪೀಠ ಚಲನಚಿತ್ರ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದೆ.

ಚಲನಚಿತ್ರ ಬಿಡುಗಡೆಗೆ ತಡೆ ಕೋರಿ, ಕಾದಂಬರಿಯ ಬರಹಗಾರರು/ಪ್ರಕಾಶಕರು ಯಾವುದೇ ತೃತೀಯ ಹಕ್ಕುಗಳನ್ನು ಸೃಷ್ಟಿಸದಂತೆ, ಗಂಗೂಬಾಯಿ ಕಾಥಿಯಾವಾಡಿಯವರ ಜೀವನದ ಬಗ್ಗೆ ಯಾವುದೇ ಕಥೆಯನ್ನು ಬರೆಯದಂತೆ ಬಾಬೂಜೀ ಶಾ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ಆದರೆ, ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಅವರು ಅರ್ಜಿಯನ್ನು ತಿರಸ್ಕರಿಸಿ, ಮಾನಹಾನಿಕರದಂತಹ ಯಾವುದೇ ವಿಷಯವು ಆ ವ್ಯಕ್ತಿಯ ಸಾವಿನೊಂದಿಗೆ ಕೊನೆಗೊಳ್ಳುತ್ತದೆ ಎಂದು ತಿಳಿಸಿದ್ದಾರೆ. ಜೊತೆಗೆ “ತಾನು ಗಂಗೂಬಾಯಿ ಕಾಥಿಯಾವಾಡಿಯ ದತ್ತು ಪುತ್ರನೆಂದು ಸಾಭೀತುಪಡಿಸುವಲ್ಲಿ ಅರ್ಜಿದಾರ ವಿಫಲನಾಗಿದ್ದಾನೆ” ಎಂದು ಹೇಳಿದ್ದರು.

ಈ ಚಲನಚಿತ್ರವನ್ನು ಮೊದಲು ಸೆಪ್ಟೆಂಬರ್ 2020 ರಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು, ಆದರೆ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು. ಈ ವರ್ಷದ ಆರಂಭದಲ್ಲಿ, ಚಲನಚಿತ್ರವು 2021 ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಯಾರಕರು ಘೋಷಿಸಿದ್ದರು. ಮುಂದಿನ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿಲ್ಲ.


ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...