Homeಮುಖಪುಟಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

- Advertisement -
- Advertisement -

ಬಾಲಿವುಡ್ ನಟಿ ಆಲಿಯಾ ಭಟ್ ಮತ್ತು ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ವಿರುದ್ಧ ಗಂಗೂಬಾಯಿ ಕಾಥಿಯಾವಾಡಿ ಚಿತ್ರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ದೂರಿನ ವಿಚಾರಣೆಗೆ ಬಾಂಬೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಸ್ಥಳೀಯ ನ್ಯಾಯಾಲಯವು ಆರಂಭಿಸಿದ ವಿಚಾರಣೆಗೆ ಬಾಂಬೆ ಹೈಕೋರ್ಟ್ ಮುಂದಿನ ವಿಚಾರಣೆಯ ದಿನಾಂಕ ಸೆಪ್ಟೆಂಬರ್ 7 ರವರೆಗೆ ಮಧ್ಯಂತರ ತಡೆ ನೀಡಿದೆ.

ಈ ವರ್ಷದ ಮಾರ್ಚ್‌ನಲ್ಲಿ ಗಂಗೂಬಾಯಿ ಕಾಥಿಯಾವಾಡಿಯವರ ದತ್ತು ಪುತ್ರ ಬಾಬೂಜೀ ಶಾ, ಬಾಲಿವುಡ್ ನಟಿ ಆಲಿಯಾ ಭಟ್, ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಮತ್ತು ಬನ್ಸಾಲಿ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ದೂರಿನ ಅನ್ವಯ ಸಮನ್ಸ್ ಜಾರಿ ಮಾಡಲಾಗಿತ್ತು.

ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್‌ಗೆ ಗೂಗಲ್ ಡೂಡಲ್ ಗೌರವ

ಗಂಗೂಬಾಯಿ ಕಾಥಿಯಾವಾಡಿ ಚಿತ್ರದಲ್ಲಿ ಆಲಿಯಾ ಭಟ್ ಗಂಗೂಬಾಯಿಯಾಗಿ ಕಾಣಿಸಿಕೊಂಡಿದ್ದಾರೆ. 1960 ರ ಸಮಯದಲ್ಲಿ ಮುಂಬೈನ ಕಾಮಾಟಿಪುರದ ಅತ್ಯಂತ ಶಕ್ತಿಶಾಲಿ, ಪ್ರೀತಿಪಾತ್ರ ಮತ್ತು ಗೌರವಾನ್ವಿತರಲ್ಲಿ ಒಬ್ಬರು ಗಂಗೂಬಾಯಿ ಎನ್ನಲಾಗಿದೆ.

ಈ ಚಲನಚಿತ್ರವು “ದಿ ಮಾಫಿಯಾ ಕ್ವೀನ್ಸ್ ಆಫ್ ಮುಂಬಯಿ” ಕಾದಂಬರಿಯಿಂದ ಸ್ಫೂರ್ತಿ ಪಡೆದಿದೆ ಎಂದು ಬಾಬೂಜೀ ಶಾ ಹೇಳಿದ್ದಾರೆ. ಈ ಕಾದಂಬರಿಯ ಕೆಲವು ಭಾಗಗಳು ಮಾನಹಾನಿಕರವಾಗಿದ್ದು, ಗಂಗೂಬಾಯಿ ಕಾಥಿಯಾವಾಡಿಯವರ ಪ್ರತಿಷ್ಠೆಗೆ ಕಳಂಕ ತರುತ್ತವೆ. ಆಕೆಯ ಖಾಸಗಿತನದ ಹಕ್ಕಿಗೆ ಧಕ್ಕೆ ತಂದಿವೆ ಎಂದಿದ್ದಾರೆ.

ಬನ್ಸಾಲಿ ಮತ್ತು ಆಲಿಯಾ ಭಟ್ ಪರ ಹಾಜರಾದ ಹಿರಿಯ ವಕೀಲ ಆಬಾದ್ ಪೊಂಡಾ, ಬಾಬೂಜೀ ಶಾ ಅಸ್ತಿತ್ವದ ಬಗ್ಗೆ ತಮಗೆ ಯಾವುದೇ ಮಾಹಿತಿಯಿಲ್ಲ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ಅಶ್ಲೀಲ ಚಿತ್ರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾಗೆ ಮಧ್ಯಂತರ ಜಾಮೀನು

All about 'Matriarch of Kamathipura' Gangubai Kathiawadi, the woman who Alia Bhatt plays in Sanjay Leela Bhansali's film

ಇತ್ತ ಮತ್ತೊಂದು ಹೈಕೋರ್ಟ್ ಪೀಠ ಚಲನಚಿತ್ರ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದೆ.

ಚಲನಚಿತ್ರ ಬಿಡುಗಡೆಗೆ ತಡೆ ಕೋರಿ, ಕಾದಂಬರಿಯ ಬರಹಗಾರರು/ಪ್ರಕಾಶಕರು ಯಾವುದೇ ತೃತೀಯ ಹಕ್ಕುಗಳನ್ನು ಸೃಷ್ಟಿಸದಂತೆ, ಗಂಗೂಬಾಯಿ ಕಾಥಿಯಾವಾಡಿಯವರ ಜೀವನದ ಬಗ್ಗೆ ಯಾವುದೇ ಕಥೆಯನ್ನು ಬರೆಯದಂತೆ ಬಾಬೂಜೀ ಶಾ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ಆದರೆ, ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಅವರು ಅರ್ಜಿಯನ್ನು ತಿರಸ್ಕರಿಸಿ, ಮಾನಹಾನಿಕರದಂತಹ ಯಾವುದೇ ವಿಷಯವು ಆ ವ್ಯಕ್ತಿಯ ಸಾವಿನೊಂದಿಗೆ ಕೊನೆಗೊಳ್ಳುತ್ತದೆ ಎಂದು ತಿಳಿಸಿದ್ದಾರೆ. ಜೊತೆಗೆ “ತಾನು ಗಂಗೂಬಾಯಿ ಕಾಥಿಯಾವಾಡಿಯ ದತ್ತು ಪುತ್ರನೆಂದು ಸಾಭೀತುಪಡಿಸುವಲ್ಲಿ ಅರ್ಜಿದಾರ ವಿಫಲನಾಗಿದ್ದಾನೆ” ಎಂದು ಹೇಳಿದ್ದರು.

ಈ ಚಲನಚಿತ್ರವನ್ನು ಮೊದಲು ಸೆಪ್ಟೆಂಬರ್ 2020 ರಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು, ಆದರೆ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು. ಈ ವರ್ಷದ ಆರಂಭದಲ್ಲಿ, ಚಲನಚಿತ್ರವು 2021 ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಯಾರಕರು ಘೋಷಿಸಿದ್ದರು. ಮುಂದಿನ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿಲ್ಲ.


ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...