Homeಮುಖಪುಟಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ...

ಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ ಸಲಹೆ

- Advertisement -
- Advertisement -

ಮಧ್ಯಪ್ರದೇಶದ ಅತಿ ಹೆಚ್ಚು ಜನನಿಬಿಡ ನಗರವಾದ ಇಂದೋರ್‌ನಲ್ಲಿ ಮುಂಬರುವ ನವರಾತ್ರಿ ಆಚರಣೆಯ ವೇಳೆ ಆಗಮಿಸುವ ಜನರನ್ನು ಶುದ್ಧೀಕರಿಸಲು ಮತ್ತು ಬೇರೆ ಸಮುದಾಯಗಳ ಜನರ ಅನಗತ್ಯ ಪ್ರವೇಶವನ್ನು ಪರೀಕ್ಷಿಸಲು ದನದ ಮೂತ್ರ ಬಳಸುವಂತೆ ಆಡಳಿತಾರೂಢ ಬಿಜೆಪಿ ನಾಯಕರೊಬ್ಬರು ವಿಲಕ್ಷಣ ಸಲಹೆಯನ್ನು ನೀಡಿದ್ದಾರೆ.ಗರ್ಬಾ ಪೆಂಡಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸುವವರು ಪ್ರವೇಶದ್ವಾರದಲ್ಲಿ ದನದ ಮೂತ್ರವನ್ನು ನೀಡಬೇಖು. ಗರ್ಬಾ ಸ್ಥಳಗಳಿಗೆ ಪ್ರವೇಶಿಸುವ ಮೊದಲು ದನದ ಮೂತ್ರವನ್ನು ಹೀರುವುದನ್ನು ಯಾವುದೇ ಹಿಂದೂಗಳು ವಿರೋಧಿಸುವುದಿಲ್ಲ” ಎಂದು ಇಂದೋರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಚಿಂಟು ವರ್ಮಾ ಹೇಳಿದ್ದಾರೆ.

“ದನದ ಮೂತ್ರವು ನಮಗೆ ಗೋಮಾತೆಯಷ್ಟೇ ಪವಿತ್ರ. ​​ಅನಾದಿ ಕಾಲದಿಂದಲೂ ಇದನ್ನು ನಮ್ಮ ಋಷಿಮುನಿಗಳು ಶುದ್ಧೀಕರಣಕ್ಕಾಗಿ ಬಳಸುತ್ತಿದ್ದರು. ಆದ್ದರಿಂದ ಇದನ್ನು ಪ್ರತಿ ಗರ್ಬಾ ಪೆಂಡಾಲ್‌ ಹೊರಗೆ ಇರಿಸಿ, ಗರ್ಬಾ ಆಚರಣೆ ನೋಡಲು ಬರುವವರಿಗೆ ನೀಡಬೇಕು. ಅದನ್ನು ಪ್ರಸಾದವಾಗಿ ಸೇವಿಸಲು ಯಾವುದೇ ಹಿಂದೂಗಳು ಆಕ್ಷೇಪಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ವರ್ಮಾ ಹೇಳಿದ್ದಾರೆ.

ಇದನ್ನೂಓದಿ: ಬ್ಯಾಂಕಾಕ್‌: ರಸ್ತೆ ಮಧ್ಯೆ ಹೊತ್ತಿ ಉರಿದ ಶಾಲಾ ಬಸ್‌, 25 ವಿದ್ಯಾರ್ಥಿಗಳು ಸಜೀವ ದಹನ

“ಗರ್ಬಾ ಪೆಂಡಾಲ್‌ಗೆ ಬೇರೆ ಸಮುದಾಯದ ಜನರ ಅನಗತ್ಯ ಪ್ರವೇಶವನ್ನು ಪರಿಶೀಲಿಸಲು ಇದು ಸಹಾಯ ಮಾಡುತ್ತದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಆಧಾರ್ ಕಾರ್ಡ್‌ಗಳನ್ನು ನಕಲಿ ಮಾಡಬಹುದು ಮತ್ತು ಎಡಿಟ್‌ ಮಾಡಿ ತರಬಹುದು. ಆದ್ದರಿಂದ ಗರ್ಬಾ ಪ್ರವೇಶದಲ್ಲಿ ಪ್ರಸಾದವಾಗಿ ಗೌಮುತ್ರವನ್ನು ಬಳಸುವುದು ಕಾರ್ಯಸಾಧ್ಯವಾದ ಆಯ್ಕೆಯಾಗಿದೆ. ಇದು ಹಿಂದೂ ಧರ್ಮಕ್ಕೆ ಅನುಗುಣವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ಇಂದೋರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಚಿಂಟು ವರ್ಮಾ ಅವರ ವಿಲಕ್ಷಣ ಸಲಹೆಯನ್ನು ಲೇವಡಿ ಮಾಡಿದ ಪ್ರತಿಪಕ್ಷ ಕಾಂಗ್ರೆಸ್‌ನ ರಾಜ್ಯ ಘಟಕದ ವಕ್ತಾರ ನೀಲಭ್ ಶುಕ್ಲಾ, ಬಿಜೆಪಿ ನಾಯಕರು ಗೋವಿನ ಮೇಲೆ ರಾಜಕೀಯ ಮಾಡಲು ಮಾತ್ರ ಆಸಕ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇಂತಹ ಸಲಹೆಗಳು ಮತ್ತು ಬೇಡಿಕೆಗಳನ್ನು ಮುಂದಿಡುವ ಬಿಜೆಪಿ ನಾಯಕರು ಗೋಶಾಲೆಗಳಲ್ಲಿನ ಗೋವುಗಳ ದುಸ್ಥಿತಿಯ ವಿಚಾರದಲ್ಲಿ ಏಕೆ ಮೌನವಾಗಿದ್ದಾರೆ? ಇದು ಬಿಜೆಪಿಯ ಕೋಮು ಧ್ರುವೀಕರಣ ರಾಜಕೀಯಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಶುಕ್ಲಾ ಹೇಳಿದ್ದಾರೆ.

ಈ ಸಲಹೆ ನೀಡುವ ನಾಯಕರು ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸುವ ಮೊದಲು ಮೂತ್ರವನ್ನು ಕುಡಿಯಬೇಕು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಈ ವೀಡಿಯೊಗಳನ್ನು ಪೋಸ್ಟ್ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಲೈಂಗಿಕ ಕಿರುಕುಳ ಆರೋಪ: ಮಲಯಾಳಂ ನಟ ನಿವಿನ್ ಪೌಲಿ ವಿಚಾರಣೆ ನಡೆಸಿದ ಎಸ್‌ಐಟಿ

2013 ರಲ್ಲಿ, ಆಗಿನ ಬಿಜೆಪಿ ಶಾಸಕಿ ಉಷಾ ಠಾಕೂರ್ ಅವರು ಹಿಂದೂಯೇತರ ವಿಶೇಷವಾಗಿ ಮುಸ್ಲಿಂ ಯುವಕರ ಪ್ರವೇಶವನ್ನು ತಡೆಯಲು ಗರ್ಬಾ ಸ್ಥಳಗಳಿಗೆ ಪ್ರವೇಶಿಸಲು ಆಧಾರ್ ಮತ್ತು ಇತರ ಐಡಿ ಪುರಾವೆಗಳನ್ನು ಕಡ್ಡಾಯವಾಗಿ ಮಾಡಲು ಸಲಹೆ ನೀಡಿದ್ದರು. ಅದಾಗಿ ಒಂಬತ್ತು ವರ್ಷಗಳ ನಂತರ, ಅವರು ರಾಜ್ಯದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರಾದಾಗ ಸರಿಯಾದ ಗುರುತಿನ ಪುರಾವೆಗಳಿಲ್ಲದೆ ಸಂದರ್ಶಕರಿಗೆ ಸ್ಥಳಗಳಿಗೆ ಪ್ರವೇಶವನ್ನು ಅನುಮತಿಸದಂತೆ ಗರ್ಬಾ ಪೆಂಡಾಲ್ ಮುಖ್ಯಸ್ಥರನ್ನು ಕೇಳಿದ್ದರು.

ಐದು ವರ್ಷಗಳ ಹಿಂದೆ 2017 ರಲ್ಲಿ, ಭೋಪಾಲ್‌ನಲ್ಲಿ ಹಿಂದೂ ಉತ್ಸವ ಸಮಿತಿ ಕೂಡ ರಾಜ್ಯ ರಾಜಧಾನಿಯಲ್ಲಿ ಜಿಲ್ಲಾಡಳಿತದಿಂದ ನಡೆಸುವ ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸಲು ಐಡಿ ಪುರಾವೆಯಾಗಿ ಆಧಾರ್ ದಾಖಲೆಯನ್ನು ಹೊಂದುವಂತೆ ಒತ್ತಾಯಿಸಿತ್ತು.

ನವರಾತ್ರಿಯ ಸಮಯದಲ್ಲಿ ಗರ್ಬಾ ಆಚರಣೆಯನ್ನು ಮಧ್ಯಮಪ್ರದೇಶದಾದ್ಯಂತ ಅದರಲ್ಲೂ ವಿಶೇಷವಾಗಿ ಇಂದೋರ್ ಮತ್ತು ಉಜ್ಜಯಿನಿ ಪ್ರದೇಶ ಸೇರಿದಂತೆ ರಾಜ್ಯದ ಪಶ್ಚಿಮ ಮತ್ತು ನೈಋತ್ಯ ಭಾಗಗಳಲ್ಲಿ ಬಹಳ ಜನಪ್ರಿಯವಾಗಿ ಅಚರಿಸಲಾಗುತ್ತದೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...