Homeಮುಖಪುಟಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ...

ಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ ಸಲಹೆ

- Advertisement -
- Advertisement -

ಮಧ್ಯಪ್ರದೇಶದ ಅತಿ ಹೆಚ್ಚು ಜನನಿಬಿಡ ನಗರವಾದ ಇಂದೋರ್‌ನಲ್ಲಿ ಮುಂಬರುವ ನವರಾತ್ರಿ ಆಚರಣೆಯ ವೇಳೆ ಆಗಮಿಸುವ ಜನರನ್ನು ಶುದ್ಧೀಕರಿಸಲು ಮತ್ತು ಬೇರೆ ಸಮುದಾಯಗಳ ಜನರ ಅನಗತ್ಯ ಪ್ರವೇಶವನ್ನು ಪರೀಕ್ಷಿಸಲು ದನದ ಮೂತ್ರ ಬಳಸುವಂತೆ ಆಡಳಿತಾರೂಢ ಬಿಜೆಪಿ ನಾಯಕರೊಬ್ಬರು ವಿಲಕ್ಷಣ ಸಲಹೆಯನ್ನು ನೀಡಿದ್ದಾರೆ.ಗರ್ಬಾ ಪೆಂಡಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸುವವರು ಪ್ರವೇಶದ್ವಾರದಲ್ಲಿ ದನದ ಮೂತ್ರವನ್ನು ನೀಡಬೇಖು. ಗರ್ಬಾ ಸ್ಥಳಗಳಿಗೆ ಪ್ರವೇಶಿಸುವ ಮೊದಲು ದನದ ಮೂತ್ರವನ್ನು ಹೀರುವುದನ್ನು ಯಾವುದೇ ಹಿಂದೂಗಳು ವಿರೋಧಿಸುವುದಿಲ್ಲ” ಎಂದು ಇಂದೋರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಚಿಂಟು ವರ್ಮಾ ಹೇಳಿದ್ದಾರೆ.

“ದನದ ಮೂತ್ರವು ನಮಗೆ ಗೋಮಾತೆಯಷ್ಟೇ ಪವಿತ್ರ. ​​ಅನಾದಿ ಕಾಲದಿಂದಲೂ ಇದನ್ನು ನಮ್ಮ ಋಷಿಮುನಿಗಳು ಶುದ್ಧೀಕರಣಕ್ಕಾಗಿ ಬಳಸುತ್ತಿದ್ದರು. ಆದ್ದರಿಂದ ಇದನ್ನು ಪ್ರತಿ ಗರ್ಬಾ ಪೆಂಡಾಲ್‌ ಹೊರಗೆ ಇರಿಸಿ, ಗರ್ಬಾ ಆಚರಣೆ ನೋಡಲು ಬರುವವರಿಗೆ ನೀಡಬೇಕು. ಅದನ್ನು ಪ್ರಸಾದವಾಗಿ ಸೇವಿಸಲು ಯಾವುದೇ ಹಿಂದೂಗಳು ಆಕ್ಷೇಪಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ವರ್ಮಾ ಹೇಳಿದ್ದಾರೆ.

ಇದನ್ನೂಓದಿ: ಬ್ಯಾಂಕಾಕ್‌: ರಸ್ತೆ ಮಧ್ಯೆ ಹೊತ್ತಿ ಉರಿದ ಶಾಲಾ ಬಸ್‌, 25 ವಿದ್ಯಾರ್ಥಿಗಳು ಸಜೀವ ದಹನ

“ಗರ್ಬಾ ಪೆಂಡಾಲ್‌ಗೆ ಬೇರೆ ಸಮುದಾಯದ ಜನರ ಅನಗತ್ಯ ಪ್ರವೇಶವನ್ನು ಪರಿಶೀಲಿಸಲು ಇದು ಸಹಾಯ ಮಾಡುತ್ತದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಆಧಾರ್ ಕಾರ್ಡ್‌ಗಳನ್ನು ನಕಲಿ ಮಾಡಬಹುದು ಮತ್ತು ಎಡಿಟ್‌ ಮಾಡಿ ತರಬಹುದು. ಆದ್ದರಿಂದ ಗರ್ಬಾ ಪ್ರವೇಶದಲ್ಲಿ ಪ್ರಸಾದವಾಗಿ ಗೌಮುತ್ರವನ್ನು ಬಳಸುವುದು ಕಾರ್ಯಸಾಧ್ಯವಾದ ಆಯ್ಕೆಯಾಗಿದೆ. ಇದು ಹಿಂದೂ ಧರ್ಮಕ್ಕೆ ಅನುಗುಣವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ಇಂದೋರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಚಿಂಟು ವರ್ಮಾ ಅವರ ವಿಲಕ್ಷಣ ಸಲಹೆಯನ್ನು ಲೇವಡಿ ಮಾಡಿದ ಪ್ರತಿಪಕ್ಷ ಕಾಂಗ್ರೆಸ್‌ನ ರಾಜ್ಯ ಘಟಕದ ವಕ್ತಾರ ನೀಲಭ್ ಶುಕ್ಲಾ, ಬಿಜೆಪಿ ನಾಯಕರು ಗೋವಿನ ಮೇಲೆ ರಾಜಕೀಯ ಮಾಡಲು ಮಾತ್ರ ಆಸಕ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇಂತಹ ಸಲಹೆಗಳು ಮತ್ತು ಬೇಡಿಕೆಗಳನ್ನು ಮುಂದಿಡುವ ಬಿಜೆಪಿ ನಾಯಕರು ಗೋಶಾಲೆಗಳಲ್ಲಿನ ಗೋವುಗಳ ದುಸ್ಥಿತಿಯ ವಿಚಾರದಲ್ಲಿ ಏಕೆ ಮೌನವಾಗಿದ್ದಾರೆ? ಇದು ಬಿಜೆಪಿಯ ಕೋಮು ಧ್ರುವೀಕರಣ ರಾಜಕೀಯಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಶುಕ್ಲಾ ಹೇಳಿದ್ದಾರೆ.

ಈ ಸಲಹೆ ನೀಡುವ ನಾಯಕರು ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸುವ ಮೊದಲು ಮೂತ್ರವನ್ನು ಕುಡಿಯಬೇಕು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಈ ವೀಡಿಯೊಗಳನ್ನು ಪೋಸ್ಟ್ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಲೈಂಗಿಕ ಕಿರುಕುಳ ಆರೋಪ: ಮಲಯಾಳಂ ನಟ ನಿವಿನ್ ಪೌಲಿ ವಿಚಾರಣೆ ನಡೆಸಿದ ಎಸ್‌ಐಟಿ

2013 ರಲ್ಲಿ, ಆಗಿನ ಬಿಜೆಪಿ ಶಾಸಕಿ ಉಷಾ ಠಾಕೂರ್ ಅವರು ಹಿಂದೂಯೇತರ ವಿಶೇಷವಾಗಿ ಮುಸ್ಲಿಂ ಯುವಕರ ಪ್ರವೇಶವನ್ನು ತಡೆಯಲು ಗರ್ಬಾ ಸ್ಥಳಗಳಿಗೆ ಪ್ರವೇಶಿಸಲು ಆಧಾರ್ ಮತ್ತು ಇತರ ಐಡಿ ಪುರಾವೆಗಳನ್ನು ಕಡ್ಡಾಯವಾಗಿ ಮಾಡಲು ಸಲಹೆ ನೀಡಿದ್ದರು. ಅದಾಗಿ ಒಂಬತ್ತು ವರ್ಷಗಳ ನಂತರ, ಅವರು ರಾಜ್ಯದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರಾದಾಗ ಸರಿಯಾದ ಗುರುತಿನ ಪುರಾವೆಗಳಿಲ್ಲದೆ ಸಂದರ್ಶಕರಿಗೆ ಸ್ಥಳಗಳಿಗೆ ಪ್ರವೇಶವನ್ನು ಅನುಮತಿಸದಂತೆ ಗರ್ಬಾ ಪೆಂಡಾಲ್ ಮುಖ್ಯಸ್ಥರನ್ನು ಕೇಳಿದ್ದರು.

ಐದು ವರ್ಷಗಳ ಹಿಂದೆ 2017 ರಲ್ಲಿ, ಭೋಪಾಲ್‌ನಲ್ಲಿ ಹಿಂದೂ ಉತ್ಸವ ಸಮಿತಿ ಕೂಡ ರಾಜ್ಯ ರಾಜಧಾನಿಯಲ್ಲಿ ಜಿಲ್ಲಾಡಳಿತದಿಂದ ನಡೆಸುವ ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸಲು ಐಡಿ ಪುರಾವೆಯಾಗಿ ಆಧಾರ್ ದಾಖಲೆಯನ್ನು ಹೊಂದುವಂತೆ ಒತ್ತಾಯಿಸಿತ್ತು.

ನವರಾತ್ರಿಯ ಸಮಯದಲ್ಲಿ ಗರ್ಬಾ ಆಚರಣೆಯನ್ನು ಮಧ್ಯಮಪ್ರದೇಶದಾದ್ಯಂತ ಅದರಲ್ಲೂ ವಿಶೇಷವಾಗಿ ಇಂದೋರ್ ಮತ್ತು ಉಜ್ಜಯಿನಿ ಪ್ರದೇಶ ಸೇರಿದಂತೆ ರಾಜ್ಯದ ಪಶ್ಚಿಮ ಮತ್ತು ನೈಋತ್ಯ ಭಾಗಗಳಲ್ಲಿ ಬಹಳ ಜನಪ್ರಿಯವಾಗಿ ಅಚರಿಸಲಾಗುತ್ತದೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...