Homeಮುಖಪುಟಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ...

ಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ ಸಲಹೆ

- Advertisement -
- Advertisement -

ಮಧ್ಯಪ್ರದೇಶದ ಅತಿ ಹೆಚ್ಚು ಜನನಿಬಿಡ ನಗರವಾದ ಇಂದೋರ್‌ನಲ್ಲಿ ಮುಂಬರುವ ನವರಾತ್ರಿ ಆಚರಣೆಯ ವೇಳೆ ಆಗಮಿಸುವ ಜನರನ್ನು ಶುದ್ಧೀಕರಿಸಲು ಮತ್ತು ಬೇರೆ ಸಮುದಾಯಗಳ ಜನರ ಅನಗತ್ಯ ಪ್ರವೇಶವನ್ನು ಪರೀಕ್ಷಿಸಲು ದನದ ಮೂತ್ರ ಬಳಸುವಂತೆ ಆಡಳಿತಾರೂಢ ಬಿಜೆಪಿ ನಾಯಕರೊಬ್ಬರು ವಿಲಕ್ಷಣ ಸಲಹೆಯನ್ನು ನೀಡಿದ್ದಾರೆ.ಗರ್ಬಾ ಪೆಂಡಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸುವವರು ಪ್ರವೇಶದ್ವಾರದಲ್ಲಿ ದನದ ಮೂತ್ರವನ್ನು ನೀಡಬೇಖು. ಗರ್ಬಾ ಸ್ಥಳಗಳಿಗೆ ಪ್ರವೇಶಿಸುವ ಮೊದಲು ದನದ ಮೂತ್ರವನ್ನು ಹೀರುವುದನ್ನು ಯಾವುದೇ ಹಿಂದೂಗಳು ವಿರೋಧಿಸುವುದಿಲ್ಲ” ಎಂದು ಇಂದೋರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಚಿಂಟು ವರ್ಮಾ ಹೇಳಿದ್ದಾರೆ.

“ದನದ ಮೂತ್ರವು ನಮಗೆ ಗೋಮಾತೆಯಷ್ಟೇ ಪವಿತ್ರ. ​​ಅನಾದಿ ಕಾಲದಿಂದಲೂ ಇದನ್ನು ನಮ್ಮ ಋಷಿಮುನಿಗಳು ಶುದ್ಧೀಕರಣಕ್ಕಾಗಿ ಬಳಸುತ್ತಿದ್ದರು. ಆದ್ದರಿಂದ ಇದನ್ನು ಪ್ರತಿ ಗರ್ಬಾ ಪೆಂಡಾಲ್‌ ಹೊರಗೆ ಇರಿಸಿ, ಗರ್ಬಾ ಆಚರಣೆ ನೋಡಲು ಬರುವವರಿಗೆ ನೀಡಬೇಕು. ಅದನ್ನು ಪ್ರಸಾದವಾಗಿ ಸೇವಿಸಲು ಯಾವುದೇ ಹಿಂದೂಗಳು ಆಕ್ಷೇಪಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ವರ್ಮಾ ಹೇಳಿದ್ದಾರೆ.

ಇದನ್ನೂಓದಿ: ಬ್ಯಾಂಕಾಕ್‌: ರಸ್ತೆ ಮಧ್ಯೆ ಹೊತ್ತಿ ಉರಿದ ಶಾಲಾ ಬಸ್‌, 25 ವಿದ್ಯಾರ್ಥಿಗಳು ಸಜೀವ ದಹನ

“ಗರ್ಬಾ ಪೆಂಡಾಲ್‌ಗೆ ಬೇರೆ ಸಮುದಾಯದ ಜನರ ಅನಗತ್ಯ ಪ್ರವೇಶವನ್ನು ಪರಿಶೀಲಿಸಲು ಇದು ಸಹಾಯ ಮಾಡುತ್ತದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಆಧಾರ್ ಕಾರ್ಡ್‌ಗಳನ್ನು ನಕಲಿ ಮಾಡಬಹುದು ಮತ್ತು ಎಡಿಟ್‌ ಮಾಡಿ ತರಬಹುದು. ಆದ್ದರಿಂದ ಗರ್ಬಾ ಪ್ರವೇಶದಲ್ಲಿ ಪ್ರಸಾದವಾಗಿ ಗೌಮುತ್ರವನ್ನು ಬಳಸುವುದು ಕಾರ್ಯಸಾಧ್ಯವಾದ ಆಯ್ಕೆಯಾಗಿದೆ. ಇದು ಹಿಂದೂ ಧರ್ಮಕ್ಕೆ ಅನುಗುಣವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ಇಂದೋರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಚಿಂಟು ವರ್ಮಾ ಅವರ ವಿಲಕ್ಷಣ ಸಲಹೆಯನ್ನು ಲೇವಡಿ ಮಾಡಿದ ಪ್ರತಿಪಕ್ಷ ಕಾಂಗ್ರೆಸ್‌ನ ರಾಜ್ಯ ಘಟಕದ ವಕ್ತಾರ ನೀಲಭ್ ಶುಕ್ಲಾ, ಬಿಜೆಪಿ ನಾಯಕರು ಗೋವಿನ ಮೇಲೆ ರಾಜಕೀಯ ಮಾಡಲು ಮಾತ್ರ ಆಸಕ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇಂತಹ ಸಲಹೆಗಳು ಮತ್ತು ಬೇಡಿಕೆಗಳನ್ನು ಮುಂದಿಡುವ ಬಿಜೆಪಿ ನಾಯಕರು ಗೋಶಾಲೆಗಳಲ್ಲಿನ ಗೋವುಗಳ ದುಸ್ಥಿತಿಯ ವಿಚಾರದಲ್ಲಿ ಏಕೆ ಮೌನವಾಗಿದ್ದಾರೆ? ಇದು ಬಿಜೆಪಿಯ ಕೋಮು ಧ್ರುವೀಕರಣ ರಾಜಕೀಯಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಶುಕ್ಲಾ ಹೇಳಿದ್ದಾರೆ.

ಈ ಸಲಹೆ ನೀಡುವ ನಾಯಕರು ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸುವ ಮೊದಲು ಮೂತ್ರವನ್ನು ಕುಡಿಯಬೇಕು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಈ ವೀಡಿಯೊಗಳನ್ನು ಪೋಸ್ಟ್ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಲೈಂಗಿಕ ಕಿರುಕುಳ ಆರೋಪ: ಮಲಯಾಳಂ ನಟ ನಿವಿನ್ ಪೌಲಿ ವಿಚಾರಣೆ ನಡೆಸಿದ ಎಸ್‌ಐಟಿ

2013 ರಲ್ಲಿ, ಆಗಿನ ಬಿಜೆಪಿ ಶಾಸಕಿ ಉಷಾ ಠಾಕೂರ್ ಅವರು ಹಿಂದೂಯೇತರ ವಿಶೇಷವಾಗಿ ಮುಸ್ಲಿಂ ಯುವಕರ ಪ್ರವೇಶವನ್ನು ತಡೆಯಲು ಗರ್ಬಾ ಸ್ಥಳಗಳಿಗೆ ಪ್ರವೇಶಿಸಲು ಆಧಾರ್ ಮತ್ತು ಇತರ ಐಡಿ ಪುರಾವೆಗಳನ್ನು ಕಡ್ಡಾಯವಾಗಿ ಮಾಡಲು ಸಲಹೆ ನೀಡಿದ್ದರು. ಅದಾಗಿ ಒಂಬತ್ತು ವರ್ಷಗಳ ನಂತರ, ಅವರು ರಾಜ್ಯದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರಾದಾಗ ಸರಿಯಾದ ಗುರುತಿನ ಪುರಾವೆಗಳಿಲ್ಲದೆ ಸಂದರ್ಶಕರಿಗೆ ಸ್ಥಳಗಳಿಗೆ ಪ್ರವೇಶವನ್ನು ಅನುಮತಿಸದಂತೆ ಗರ್ಬಾ ಪೆಂಡಾಲ್ ಮುಖ್ಯಸ್ಥರನ್ನು ಕೇಳಿದ್ದರು.

ಐದು ವರ್ಷಗಳ ಹಿಂದೆ 2017 ರಲ್ಲಿ, ಭೋಪಾಲ್‌ನಲ್ಲಿ ಹಿಂದೂ ಉತ್ಸವ ಸಮಿತಿ ಕೂಡ ರಾಜ್ಯ ರಾಜಧಾನಿಯಲ್ಲಿ ಜಿಲ್ಲಾಡಳಿತದಿಂದ ನಡೆಸುವ ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸಲು ಐಡಿ ಪುರಾವೆಯಾಗಿ ಆಧಾರ್ ದಾಖಲೆಯನ್ನು ಹೊಂದುವಂತೆ ಒತ್ತಾಯಿಸಿತ್ತು.

ನವರಾತ್ರಿಯ ಸಮಯದಲ್ಲಿ ಗರ್ಬಾ ಆಚರಣೆಯನ್ನು ಮಧ್ಯಮಪ್ರದೇಶದಾದ್ಯಂತ ಅದರಲ್ಲೂ ವಿಶೇಷವಾಗಿ ಇಂದೋರ್ ಮತ್ತು ಉಜ್ಜಯಿನಿ ಪ್ರದೇಶ ಸೇರಿದಂತೆ ರಾಜ್ಯದ ಪಶ್ಚಿಮ ಮತ್ತು ನೈಋತ್ಯ ಭಾಗಗಳಲ್ಲಿ ಬಹಳ ಜನಪ್ರಿಯವಾಗಿ ಅಚರಿಸಲಾಗುತ್ತದೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...