Homeಮುಖಪುಟಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ...

ಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ ಸಲಹೆ

- Advertisement -
- Advertisement -

ಮಧ್ಯಪ್ರದೇಶದ ಅತಿ ಹೆಚ್ಚು ಜನನಿಬಿಡ ನಗರವಾದ ಇಂದೋರ್‌ನಲ್ಲಿ ಮುಂಬರುವ ನವರಾತ್ರಿ ಆಚರಣೆಯ ವೇಳೆ ಆಗಮಿಸುವ ಜನರನ್ನು ಶುದ್ಧೀಕರಿಸಲು ಮತ್ತು ಬೇರೆ ಸಮುದಾಯಗಳ ಜನರ ಅನಗತ್ಯ ಪ್ರವೇಶವನ್ನು ಪರೀಕ್ಷಿಸಲು ದನದ ಮೂತ್ರ ಬಳಸುವಂತೆ ಆಡಳಿತಾರೂಢ ಬಿಜೆಪಿ ನಾಯಕರೊಬ್ಬರು ವಿಲಕ್ಷಣ ಸಲಹೆಯನ್ನು ನೀಡಿದ್ದಾರೆ.ಗರ್ಬಾ ಪೆಂಡಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸುವವರು ಪ್ರವೇಶದ್ವಾರದಲ್ಲಿ ದನದ ಮೂತ್ರವನ್ನು ನೀಡಬೇಖು. ಗರ್ಬಾ ಸ್ಥಳಗಳಿಗೆ ಪ್ರವೇಶಿಸುವ ಮೊದಲು ದನದ ಮೂತ್ರವನ್ನು ಹೀರುವುದನ್ನು ಯಾವುದೇ ಹಿಂದೂಗಳು ವಿರೋಧಿಸುವುದಿಲ್ಲ” ಎಂದು ಇಂದೋರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಚಿಂಟು ವರ್ಮಾ ಹೇಳಿದ್ದಾರೆ.

“ದನದ ಮೂತ್ರವು ನಮಗೆ ಗೋಮಾತೆಯಷ್ಟೇ ಪವಿತ್ರ. ​​ಅನಾದಿ ಕಾಲದಿಂದಲೂ ಇದನ್ನು ನಮ್ಮ ಋಷಿಮುನಿಗಳು ಶುದ್ಧೀಕರಣಕ್ಕಾಗಿ ಬಳಸುತ್ತಿದ್ದರು. ಆದ್ದರಿಂದ ಇದನ್ನು ಪ್ರತಿ ಗರ್ಬಾ ಪೆಂಡಾಲ್‌ ಹೊರಗೆ ಇರಿಸಿ, ಗರ್ಬಾ ಆಚರಣೆ ನೋಡಲು ಬರುವವರಿಗೆ ನೀಡಬೇಕು. ಅದನ್ನು ಪ್ರಸಾದವಾಗಿ ಸೇವಿಸಲು ಯಾವುದೇ ಹಿಂದೂಗಳು ಆಕ್ಷೇಪಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ವರ್ಮಾ ಹೇಳಿದ್ದಾರೆ.

ಇದನ್ನೂಓದಿ: ಬ್ಯಾಂಕಾಕ್‌: ರಸ್ತೆ ಮಧ್ಯೆ ಹೊತ್ತಿ ಉರಿದ ಶಾಲಾ ಬಸ್‌, 25 ವಿದ್ಯಾರ್ಥಿಗಳು ಸಜೀವ ದಹನ

“ಗರ್ಬಾ ಪೆಂಡಾಲ್‌ಗೆ ಬೇರೆ ಸಮುದಾಯದ ಜನರ ಅನಗತ್ಯ ಪ್ರವೇಶವನ್ನು ಪರಿಶೀಲಿಸಲು ಇದು ಸಹಾಯ ಮಾಡುತ್ತದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಆಧಾರ್ ಕಾರ್ಡ್‌ಗಳನ್ನು ನಕಲಿ ಮಾಡಬಹುದು ಮತ್ತು ಎಡಿಟ್‌ ಮಾಡಿ ತರಬಹುದು. ಆದ್ದರಿಂದ ಗರ್ಬಾ ಪ್ರವೇಶದಲ್ಲಿ ಪ್ರಸಾದವಾಗಿ ಗೌಮುತ್ರವನ್ನು ಬಳಸುವುದು ಕಾರ್ಯಸಾಧ್ಯವಾದ ಆಯ್ಕೆಯಾಗಿದೆ. ಇದು ಹಿಂದೂ ಧರ್ಮಕ್ಕೆ ಅನುಗುಣವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ಇಂದೋರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಚಿಂಟು ವರ್ಮಾ ಅವರ ವಿಲಕ್ಷಣ ಸಲಹೆಯನ್ನು ಲೇವಡಿ ಮಾಡಿದ ಪ್ರತಿಪಕ್ಷ ಕಾಂಗ್ರೆಸ್‌ನ ರಾಜ್ಯ ಘಟಕದ ವಕ್ತಾರ ನೀಲಭ್ ಶುಕ್ಲಾ, ಬಿಜೆಪಿ ನಾಯಕರು ಗೋವಿನ ಮೇಲೆ ರಾಜಕೀಯ ಮಾಡಲು ಮಾತ್ರ ಆಸಕ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇಂತಹ ಸಲಹೆಗಳು ಮತ್ತು ಬೇಡಿಕೆಗಳನ್ನು ಮುಂದಿಡುವ ಬಿಜೆಪಿ ನಾಯಕರು ಗೋಶಾಲೆಗಳಲ್ಲಿನ ಗೋವುಗಳ ದುಸ್ಥಿತಿಯ ವಿಚಾರದಲ್ಲಿ ಏಕೆ ಮೌನವಾಗಿದ್ದಾರೆ? ಇದು ಬಿಜೆಪಿಯ ಕೋಮು ಧ್ರುವೀಕರಣ ರಾಜಕೀಯಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಶುಕ್ಲಾ ಹೇಳಿದ್ದಾರೆ.

ಈ ಸಲಹೆ ನೀಡುವ ನಾಯಕರು ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸುವ ಮೊದಲು ಮೂತ್ರವನ್ನು ಕುಡಿಯಬೇಕು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಈ ವೀಡಿಯೊಗಳನ್ನು ಪೋಸ್ಟ್ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಲೈಂಗಿಕ ಕಿರುಕುಳ ಆರೋಪ: ಮಲಯಾಳಂ ನಟ ನಿವಿನ್ ಪೌಲಿ ವಿಚಾರಣೆ ನಡೆಸಿದ ಎಸ್‌ಐಟಿ

2013 ರಲ್ಲಿ, ಆಗಿನ ಬಿಜೆಪಿ ಶಾಸಕಿ ಉಷಾ ಠಾಕೂರ್ ಅವರು ಹಿಂದೂಯೇತರ ವಿಶೇಷವಾಗಿ ಮುಸ್ಲಿಂ ಯುವಕರ ಪ್ರವೇಶವನ್ನು ತಡೆಯಲು ಗರ್ಬಾ ಸ್ಥಳಗಳಿಗೆ ಪ್ರವೇಶಿಸಲು ಆಧಾರ್ ಮತ್ತು ಇತರ ಐಡಿ ಪುರಾವೆಗಳನ್ನು ಕಡ್ಡಾಯವಾಗಿ ಮಾಡಲು ಸಲಹೆ ನೀಡಿದ್ದರು. ಅದಾಗಿ ಒಂಬತ್ತು ವರ್ಷಗಳ ನಂತರ, ಅವರು ರಾಜ್ಯದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರಾದಾಗ ಸರಿಯಾದ ಗುರುತಿನ ಪುರಾವೆಗಳಿಲ್ಲದೆ ಸಂದರ್ಶಕರಿಗೆ ಸ್ಥಳಗಳಿಗೆ ಪ್ರವೇಶವನ್ನು ಅನುಮತಿಸದಂತೆ ಗರ್ಬಾ ಪೆಂಡಾಲ್ ಮುಖ್ಯಸ್ಥರನ್ನು ಕೇಳಿದ್ದರು.

ಐದು ವರ್ಷಗಳ ಹಿಂದೆ 2017 ರಲ್ಲಿ, ಭೋಪಾಲ್‌ನಲ್ಲಿ ಹಿಂದೂ ಉತ್ಸವ ಸಮಿತಿ ಕೂಡ ರಾಜ್ಯ ರಾಜಧಾನಿಯಲ್ಲಿ ಜಿಲ್ಲಾಡಳಿತದಿಂದ ನಡೆಸುವ ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸಲು ಐಡಿ ಪುರಾವೆಯಾಗಿ ಆಧಾರ್ ದಾಖಲೆಯನ್ನು ಹೊಂದುವಂತೆ ಒತ್ತಾಯಿಸಿತ್ತು.

ನವರಾತ್ರಿಯ ಸಮಯದಲ್ಲಿ ಗರ್ಬಾ ಆಚರಣೆಯನ್ನು ಮಧ್ಯಮಪ್ರದೇಶದಾದ್ಯಂತ ಅದರಲ್ಲೂ ವಿಶೇಷವಾಗಿ ಇಂದೋರ್ ಮತ್ತು ಉಜ್ಜಯಿನಿ ಪ್ರದೇಶ ಸೇರಿದಂತೆ ರಾಜ್ಯದ ಪಶ್ಚಿಮ ಮತ್ತು ನೈಋತ್ಯ ಭಾಗಗಳಲ್ಲಿ ಬಹಳ ಜನಪ್ರಿಯವಾಗಿ ಅಚರಿಸಲಾಗುತ್ತದೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...