Homeಕರ್ನಾಟಕಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

ಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

- Advertisement -
- Advertisement -

ಬಿಬಿಎಂಪಿ ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು (ಅಟೋ, ಟ್ರಾಕ್ಟರ್, ಕಾಂಪ್ಟ್ರಾಕ್ಟರ್ ಮತ್ತು ಲಾರಿ) ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಬುಧವಾರ ಪತ್ರಿಕಾ ಘೋಷ್ಠಿ ನಡೆಸಿತು.

ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯ ಪತ್ರಿಕಾ ಪ್ರಕಟನೆಯಲ್ಲಿ, ಬಿಬಿಎಂಪಿ ಅಧಿಕಾರಿಗಳಿಂದ ಮತ್ತು ನೆಪಮಾತ್ರ ಗುತ್ತಿಗೆದಾರರಿಂದ ಕಾರ್ಮಿಕರ ಮೇಲೆ ಆಗುತ್ತಿರುವ ಕಿರುಕುಳ, ಅನ್ಯಾಯ ನಿಲ್ಲಬೇಕು ಮತ್ತು ಈ ಕಾರ್ಮಿಕರನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಬಿಬಿಎಂಪಿಯನ್ನು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ಘನತ್ಯಾಜ್ಯ ನಿರ್ವಹಣೆಯ ಕೆಲಸವನ್ನು ಬಿಬಿಎಂಪಿಯು ಕಾನೂನು ಪ್ರಕಾರ ಕಡ್ಡಾಯವಾಗಿ ಮಾಡಲೇ ಬೇಕಾಗಿರುತ್ತದೆ ಮತ್ತು ಇದು ನಿರಂತರ ಸ್ವರೂಪದ ಕೆಲಸವಾಗಿರುತ್ತದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಸಗುಡಿಸುವ ಪೌರಕಾರ್ಮಿರಿಗೆ ನೇರವೇತನವನ್ನು ಪಾವತಿ ಮಾಡುತ್ತಿರುತ್ತಿದೆ. ಆದರೆ ಮನೆ ಮನೆಗಳಲ್ಲಿ ಆಟೋ ಮತ್ತು ಇತರೆ ವಾಹನಗಳ ಮೂಲಕ ಕಸ ಸಂಗ್ರಹಿಸುವ ಮತ್ತು ಕಸ ವಿಲೇವಾರಿ ಮಾಡುವ ಪೌರಕಾರ್ಮಿಕರನ್ನು ನಾಮಮಾತ್ರ ಗುತ್ತಿಗೆ ವ್ಯವಸ್ಥೆಯಡಿಯಲ್ಲಿ ನೇಮಕ ಮಾಡಿಕೊಂಡಿರುತ್ತದೆ. ನಿರಂತರ ಸ್ವರೂಪದ ಕೆಲಸವನ್ನು ಗುತ್ತಿಗೆ ನೀಡುವುದು ‘ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿಷೇಧ) ಕಾಯ್ದೆಯ ಅನ್ವಯ ಕಾನೂನು ಬಾಹಿರ’ ಕ್ರಮವಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

2022ರ ಜುಲೈ 1 ರಂದು ಬಿಬಿಎಎಂಪಿ ಪೌರಕಾರ್ಮಿಕರ ಸಂಘಟನೆಯು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ರಾಜ್ಯ ಮಟ್ಟದ ಅನಿರ್ಧಿಷ್ಠಾವಧಿ ಧರಣಿ ನಡೆಸಿತ್ತು. ಈ ಸಂದರ್ಭದಲಿ ಮುಖ್ಯಮಂತ್ರಿಗಳು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ಮತ್ತು ಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಾದ ಕಸ ಸಾಗಿಸುವ ಸಂಗ್ರಹಿಸುವ ಮತ್ತು ಸಾಗಿಸುವ ವಾಹನಗಳ ಚಾಲಕರು, ಲೋಡರ್‍‌ಗಳು, ಸಹಾಯಕರು ಮತ್ತು ಕ್ಲೀನರ್‍‌ಗಳನ್ನು ಮೊದಲಿಗೆ ಬಿಬಿಎಂಪಿಯಿಂದ ನೇರವೇತನ ಪಾವತಿಯಡಿಯಲ್ಲಿ ತಂದು, ನಂತರ ಖಾಯಂಗೊಳಿಸುವುದಾಗಿ ಲಿಖಿತ ರೂಪದಲ್ಲಿ ಭರವಸೆ ನೀಡಿದ್ದರು. ಈ ಸಂಬಂಧ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಕ್ಕಾಗಿ ಸರ್ಕಾರದ ಅಧಿಕಾರಿಗಳು ಸೇರಿದಂತೆ ಕಾರ್ಮಿಕ ಸಂಘಟನೆಗಳ ಮುಖಂಡರುಗಳನ್ನೊಳಗೊಂಡ ಸಮಿತಿಯನ್ನು ಸಹ ಸರ್ಕಾರ ರಚಿಸಿತ್ತು.

ಈ ಸಮಿತಿಯು 2022 ಅಕ್ಟೋಬರ್ 28ರಂದು ನಡೆಸಿದ ಸಭೆಯಲ್ಲಿ ”ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ನೆಪಮಾತ್ರ ಗುತ್ತಿಗೆ ಪೌರಕಾರ್ಮಿಕರಾದ ವಾಹನ ಚಾಲಕರು, ಲೋಡರ್‍‌ಗಳನ್ನು ಮತ್ತು ಸಹಾಯಕರನ್ನು ಮೊದಲಿಗೆ ನೇರವೇತನ ಪಾವತಿಯಡಿ ತಂದು ತಕ್ಷಣವೇ ಖಾಯಂಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಿರುತ್ತದೆ” ಎಂದು ಚರ್ಚಿಸಲಾಗಿತ್ತು.

ಆದರೆ, ಬಿಬಿಎಂಪಿಯ ಅಡಿಯಲ್ಲಿ ಬರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ರವರು 2023 ಜನವರಿ 21ರಂದು ಘನ ತ್ಯಾಜ್ಯ ನಿರ್ವಹಣೆ ಮಾಡಲು ಟೆಂಡರ್ ಕರೆಯಿತು. ಈ ರೀತಿ ವಾಹನ ಚಾಲಕರು, ಲೋಡರ್‍‌ಗಳು ಮತ್ತು ಸಹಾಯಕರನ್ನು ಗುತ್ತಿಗೆದಾರರ ಮೂಲಕ ದುಡಿಸಿಕೊಳ್ಳುವುದು ಆಧುನಿಕ ಜೀತ ಮತ್ತು ಗುಲಾಮಿ ಪದ್ಧತಿಯ ಪ್ರತೀಕವಾಗಿದೆ. ಬಿಬಿಎಂಪಿಯ ಈ ಕ್ರಮವನ್ನು ಎಐಸಿಸಿಟಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ತಕ್ಷಣದಲ್ಲೇ ಟೆಂಡರ್ ಅಧಿಸೂಚನೆಯನ್ನು ವಾಪಸ್ಸು ಪಡೆದು ಸರ್ಕಾರದ ಲಿಖಿತ ಭರವಸೆಯಂತೆ ಈ ಕಾರ್ಮಿಕರನ್ನು ಕೂಡಲೇ ನೇರವೇತನ ಪಾವತಿಯಡಿ ತಂದು, ಖಾಯಂಗೊಳಿಸಬೇಕೆಂದು ಪತಿಕಾಗೋಷ್ಠಿಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಒತ್ತಾಯಿಸಿದೆ.

ಪೌರಕಾರ್ಮಿಕ ಸಂಘಟನೆಯು ಪ್ರಮುಖ ಹಕ್ಕೋತ್ತಾಯಗಳನ್ನು ಬಿಬಿಎಂಪಿಗೆ ಸಲ್ಲಿಸಿದೆ.

1. ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು, ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕು.
2. ಬಿಬಿಎಂಪಿ ಅಡಿಯಲ್ಲಿರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ ರವರು ಕರೆದಿರುವ ಟೆಂಡರ್ ಪ್ರಕ್ರಿಯೆಯನ್ನು ತಕ್ಷಣದಲ್ಲೇ ರದ್ಧುಗೊಳಿಸಬೇಕು.
3. ಖಾಯಂಗೊಳ್ಳುವವರೆಗೆ ಕನಿಷ್ಠ ವೇತನ ಪಾವತಿ ಮಾಡಬೇಕು.
4. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಮತ್ತು ಹೆಚ್ವುವರಿ ಅವಧಿಗೆ ಅಧಿಕವೇತನ ನೀಡಬೇಕು.
5. ಸಕಾಲಕ್ಕೆ ವೇತನ ಪಾವತಿ ಮಾಡಬೇಕು ಮತ್ತು ವೇತನ ಚೀಟಿ ನೀಡಬೇಕು.
6. 3 ರಿಂದ 8 ತಿಂಗಳ ವರಗೆ ಬಾಕಿ ಇರುವ ವೇತನವನ್ನು ತಕ್ಷಣದಲ್ಲೇ ಪಾವತಿಸಬೇಕು.
7. ವಿಶ್ರಾಂತಿ ಕೊಠಡಿ, ಶೌಚಾಲಯ, ಕುಡಿಯುವ ನೀರು ಮತ್ತು ಸಮಪರ್ಕವಾದ ಪೌಷ್ಠಿಕ ಆಹಾರವನ್ನು ಒದಗಿಸಬೇಕು.
8. ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯವನ್ನು ಕಲ್ಪಿಸಬೇಕು ಮತ್ತು ಸುರಕ್ಷತಾ ಪರಿಕರಗಳನ್ನು ನೀಡಬೇಕು.
9. ಕಸ ಸಂಗ್ರಹಿಸಲು ಮತ್ತು ಸಾಗಿಸಲು ಬಳಸುವ ಆಟೋಗಳ ದುರಸ್ಥಿ ವೆಚ್ಚ ಬಿಬಿಎಂಪಿಯೇ ಭರಿಸಬೇಕು.
10. ಸರ್ಕಾರಿ ಘೋಷಿತ ಎಲ್ಲಾ ರಾಷ್ಟ್ರೀಯ ಮತ್ತು ಹಬ್ಬ ದಿನಗಳು ಒಳಗೊಂಡಂತೆ ರಜೆ ನೀಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...