Homeಕರ್ನಾಟಕಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

ಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

- Advertisement -
- Advertisement -

ಬಿಬಿಎಂಪಿ ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು (ಅಟೋ, ಟ್ರಾಕ್ಟರ್, ಕಾಂಪ್ಟ್ರಾಕ್ಟರ್ ಮತ್ತು ಲಾರಿ) ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಬುಧವಾರ ಪತ್ರಿಕಾ ಘೋಷ್ಠಿ ನಡೆಸಿತು.

ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯ ಪತ್ರಿಕಾ ಪ್ರಕಟನೆಯಲ್ಲಿ, ಬಿಬಿಎಂಪಿ ಅಧಿಕಾರಿಗಳಿಂದ ಮತ್ತು ನೆಪಮಾತ್ರ ಗುತ್ತಿಗೆದಾರರಿಂದ ಕಾರ್ಮಿಕರ ಮೇಲೆ ಆಗುತ್ತಿರುವ ಕಿರುಕುಳ, ಅನ್ಯಾಯ ನಿಲ್ಲಬೇಕು ಮತ್ತು ಈ ಕಾರ್ಮಿಕರನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಬಿಬಿಎಂಪಿಯನ್ನು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ಘನತ್ಯಾಜ್ಯ ನಿರ್ವಹಣೆಯ ಕೆಲಸವನ್ನು ಬಿಬಿಎಂಪಿಯು ಕಾನೂನು ಪ್ರಕಾರ ಕಡ್ಡಾಯವಾಗಿ ಮಾಡಲೇ ಬೇಕಾಗಿರುತ್ತದೆ ಮತ್ತು ಇದು ನಿರಂತರ ಸ್ವರೂಪದ ಕೆಲಸವಾಗಿರುತ್ತದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಸಗುಡಿಸುವ ಪೌರಕಾರ್ಮಿರಿಗೆ ನೇರವೇತನವನ್ನು ಪಾವತಿ ಮಾಡುತ್ತಿರುತ್ತಿದೆ. ಆದರೆ ಮನೆ ಮನೆಗಳಲ್ಲಿ ಆಟೋ ಮತ್ತು ಇತರೆ ವಾಹನಗಳ ಮೂಲಕ ಕಸ ಸಂಗ್ರಹಿಸುವ ಮತ್ತು ಕಸ ವಿಲೇವಾರಿ ಮಾಡುವ ಪೌರಕಾರ್ಮಿಕರನ್ನು ನಾಮಮಾತ್ರ ಗುತ್ತಿಗೆ ವ್ಯವಸ್ಥೆಯಡಿಯಲ್ಲಿ ನೇಮಕ ಮಾಡಿಕೊಂಡಿರುತ್ತದೆ. ನಿರಂತರ ಸ್ವರೂಪದ ಕೆಲಸವನ್ನು ಗುತ್ತಿಗೆ ನೀಡುವುದು ‘ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿಷೇಧ) ಕಾಯ್ದೆಯ ಅನ್ವಯ ಕಾನೂನು ಬಾಹಿರ’ ಕ್ರಮವಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

2022ರ ಜುಲೈ 1 ರಂದು ಬಿಬಿಎಎಂಪಿ ಪೌರಕಾರ್ಮಿಕರ ಸಂಘಟನೆಯು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ರಾಜ್ಯ ಮಟ್ಟದ ಅನಿರ್ಧಿಷ್ಠಾವಧಿ ಧರಣಿ ನಡೆಸಿತ್ತು. ಈ ಸಂದರ್ಭದಲಿ ಮುಖ್ಯಮಂತ್ರಿಗಳು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ಮತ್ತು ಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಾದ ಕಸ ಸಾಗಿಸುವ ಸಂಗ್ರಹಿಸುವ ಮತ್ತು ಸಾಗಿಸುವ ವಾಹನಗಳ ಚಾಲಕರು, ಲೋಡರ್‍‌ಗಳು, ಸಹಾಯಕರು ಮತ್ತು ಕ್ಲೀನರ್‍‌ಗಳನ್ನು ಮೊದಲಿಗೆ ಬಿಬಿಎಂಪಿಯಿಂದ ನೇರವೇತನ ಪಾವತಿಯಡಿಯಲ್ಲಿ ತಂದು, ನಂತರ ಖಾಯಂಗೊಳಿಸುವುದಾಗಿ ಲಿಖಿತ ರೂಪದಲ್ಲಿ ಭರವಸೆ ನೀಡಿದ್ದರು. ಈ ಸಂಬಂಧ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಕ್ಕಾಗಿ ಸರ್ಕಾರದ ಅಧಿಕಾರಿಗಳು ಸೇರಿದಂತೆ ಕಾರ್ಮಿಕ ಸಂಘಟನೆಗಳ ಮುಖಂಡರುಗಳನ್ನೊಳಗೊಂಡ ಸಮಿತಿಯನ್ನು ಸಹ ಸರ್ಕಾರ ರಚಿಸಿತ್ತು.

ಈ ಸಮಿತಿಯು 2022 ಅಕ್ಟೋಬರ್ 28ರಂದು ನಡೆಸಿದ ಸಭೆಯಲ್ಲಿ ”ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ನೆಪಮಾತ್ರ ಗುತ್ತಿಗೆ ಪೌರಕಾರ್ಮಿಕರಾದ ವಾಹನ ಚಾಲಕರು, ಲೋಡರ್‍‌ಗಳನ್ನು ಮತ್ತು ಸಹಾಯಕರನ್ನು ಮೊದಲಿಗೆ ನೇರವೇತನ ಪಾವತಿಯಡಿ ತಂದು ತಕ್ಷಣವೇ ಖಾಯಂಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಿರುತ್ತದೆ” ಎಂದು ಚರ್ಚಿಸಲಾಗಿತ್ತು.

ಆದರೆ, ಬಿಬಿಎಂಪಿಯ ಅಡಿಯಲ್ಲಿ ಬರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ರವರು 2023 ಜನವರಿ 21ರಂದು ಘನ ತ್ಯಾಜ್ಯ ನಿರ್ವಹಣೆ ಮಾಡಲು ಟೆಂಡರ್ ಕರೆಯಿತು. ಈ ರೀತಿ ವಾಹನ ಚಾಲಕರು, ಲೋಡರ್‍‌ಗಳು ಮತ್ತು ಸಹಾಯಕರನ್ನು ಗುತ್ತಿಗೆದಾರರ ಮೂಲಕ ದುಡಿಸಿಕೊಳ್ಳುವುದು ಆಧುನಿಕ ಜೀತ ಮತ್ತು ಗುಲಾಮಿ ಪದ್ಧತಿಯ ಪ್ರತೀಕವಾಗಿದೆ. ಬಿಬಿಎಂಪಿಯ ಈ ಕ್ರಮವನ್ನು ಎಐಸಿಸಿಟಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ತಕ್ಷಣದಲ್ಲೇ ಟೆಂಡರ್ ಅಧಿಸೂಚನೆಯನ್ನು ವಾಪಸ್ಸು ಪಡೆದು ಸರ್ಕಾರದ ಲಿಖಿತ ಭರವಸೆಯಂತೆ ಈ ಕಾರ್ಮಿಕರನ್ನು ಕೂಡಲೇ ನೇರವೇತನ ಪಾವತಿಯಡಿ ತಂದು, ಖಾಯಂಗೊಳಿಸಬೇಕೆಂದು ಪತಿಕಾಗೋಷ್ಠಿಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಒತ್ತಾಯಿಸಿದೆ.

ಪೌರಕಾರ್ಮಿಕ ಸಂಘಟನೆಯು ಪ್ರಮುಖ ಹಕ್ಕೋತ್ತಾಯಗಳನ್ನು ಬಿಬಿಎಂಪಿಗೆ ಸಲ್ಲಿಸಿದೆ.

1. ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು, ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕು.
2. ಬಿಬಿಎಂಪಿ ಅಡಿಯಲ್ಲಿರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ ರವರು ಕರೆದಿರುವ ಟೆಂಡರ್ ಪ್ರಕ್ರಿಯೆಯನ್ನು ತಕ್ಷಣದಲ್ಲೇ ರದ್ಧುಗೊಳಿಸಬೇಕು.
3. ಖಾಯಂಗೊಳ್ಳುವವರೆಗೆ ಕನಿಷ್ಠ ವೇತನ ಪಾವತಿ ಮಾಡಬೇಕು.
4. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಮತ್ತು ಹೆಚ್ವುವರಿ ಅವಧಿಗೆ ಅಧಿಕವೇತನ ನೀಡಬೇಕು.
5. ಸಕಾಲಕ್ಕೆ ವೇತನ ಪಾವತಿ ಮಾಡಬೇಕು ಮತ್ತು ವೇತನ ಚೀಟಿ ನೀಡಬೇಕು.
6. 3 ರಿಂದ 8 ತಿಂಗಳ ವರಗೆ ಬಾಕಿ ಇರುವ ವೇತನವನ್ನು ತಕ್ಷಣದಲ್ಲೇ ಪಾವತಿಸಬೇಕು.
7. ವಿಶ್ರಾಂತಿ ಕೊಠಡಿ, ಶೌಚಾಲಯ, ಕುಡಿಯುವ ನೀರು ಮತ್ತು ಸಮಪರ್ಕವಾದ ಪೌಷ್ಠಿಕ ಆಹಾರವನ್ನು ಒದಗಿಸಬೇಕು.
8. ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯವನ್ನು ಕಲ್ಪಿಸಬೇಕು ಮತ್ತು ಸುರಕ್ಷತಾ ಪರಿಕರಗಳನ್ನು ನೀಡಬೇಕು.
9. ಕಸ ಸಂಗ್ರಹಿಸಲು ಮತ್ತು ಸಾಗಿಸಲು ಬಳಸುವ ಆಟೋಗಳ ದುರಸ್ಥಿ ವೆಚ್ಚ ಬಿಬಿಎಂಪಿಯೇ ಭರಿಸಬೇಕು.
10. ಸರ್ಕಾರಿ ಘೋಷಿತ ಎಲ್ಲಾ ರಾಷ್ಟ್ರೀಯ ಮತ್ತು ಹಬ್ಬ ದಿನಗಳು ಒಳಗೊಂಡಂತೆ ರಜೆ ನೀಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...