Homeಕರ್ನಾಟಕಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

ಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

- Advertisement -
- Advertisement -

ಬಿಬಿಎಂಪಿ ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು (ಅಟೋ, ಟ್ರಾಕ್ಟರ್, ಕಾಂಪ್ಟ್ರಾಕ್ಟರ್ ಮತ್ತು ಲಾರಿ) ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಬುಧವಾರ ಪತ್ರಿಕಾ ಘೋಷ್ಠಿ ನಡೆಸಿತು.

ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯ ಪತ್ರಿಕಾ ಪ್ರಕಟನೆಯಲ್ಲಿ, ಬಿಬಿಎಂಪಿ ಅಧಿಕಾರಿಗಳಿಂದ ಮತ್ತು ನೆಪಮಾತ್ರ ಗುತ್ತಿಗೆದಾರರಿಂದ ಕಾರ್ಮಿಕರ ಮೇಲೆ ಆಗುತ್ತಿರುವ ಕಿರುಕುಳ, ಅನ್ಯಾಯ ನಿಲ್ಲಬೇಕು ಮತ್ತು ಈ ಕಾರ್ಮಿಕರನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಬಿಬಿಎಂಪಿಯನ್ನು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ಘನತ್ಯಾಜ್ಯ ನಿರ್ವಹಣೆಯ ಕೆಲಸವನ್ನು ಬಿಬಿಎಂಪಿಯು ಕಾನೂನು ಪ್ರಕಾರ ಕಡ್ಡಾಯವಾಗಿ ಮಾಡಲೇ ಬೇಕಾಗಿರುತ್ತದೆ ಮತ್ತು ಇದು ನಿರಂತರ ಸ್ವರೂಪದ ಕೆಲಸವಾಗಿರುತ್ತದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಸಗುಡಿಸುವ ಪೌರಕಾರ್ಮಿರಿಗೆ ನೇರವೇತನವನ್ನು ಪಾವತಿ ಮಾಡುತ್ತಿರುತ್ತಿದೆ. ಆದರೆ ಮನೆ ಮನೆಗಳಲ್ಲಿ ಆಟೋ ಮತ್ತು ಇತರೆ ವಾಹನಗಳ ಮೂಲಕ ಕಸ ಸಂಗ್ರಹಿಸುವ ಮತ್ತು ಕಸ ವಿಲೇವಾರಿ ಮಾಡುವ ಪೌರಕಾರ್ಮಿಕರನ್ನು ನಾಮಮಾತ್ರ ಗುತ್ತಿಗೆ ವ್ಯವಸ್ಥೆಯಡಿಯಲ್ಲಿ ನೇಮಕ ಮಾಡಿಕೊಂಡಿರುತ್ತದೆ. ನಿರಂತರ ಸ್ವರೂಪದ ಕೆಲಸವನ್ನು ಗುತ್ತಿಗೆ ನೀಡುವುದು ‘ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿಷೇಧ) ಕಾಯ್ದೆಯ ಅನ್ವಯ ಕಾನೂನು ಬಾಹಿರ’ ಕ್ರಮವಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

2022ರ ಜುಲೈ 1 ರಂದು ಬಿಬಿಎಎಂಪಿ ಪೌರಕಾರ್ಮಿಕರ ಸಂಘಟನೆಯು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ರಾಜ್ಯ ಮಟ್ಟದ ಅನಿರ್ಧಿಷ್ಠಾವಧಿ ಧರಣಿ ನಡೆಸಿತ್ತು. ಈ ಸಂದರ್ಭದಲಿ ಮುಖ್ಯಮಂತ್ರಿಗಳು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ಮತ್ತು ಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಾದ ಕಸ ಸಾಗಿಸುವ ಸಂಗ್ರಹಿಸುವ ಮತ್ತು ಸಾಗಿಸುವ ವಾಹನಗಳ ಚಾಲಕರು, ಲೋಡರ್‍‌ಗಳು, ಸಹಾಯಕರು ಮತ್ತು ಕ್ಲೀನರ್‍‌ಗಳನ್ನು ಮೊದಲಿಗೆ ಬಿಬಿಎಂಪಿಯಿಂದ ನೇರವೇತನ ಪಾವತಿಯಡಿಯಲ್ಲಿ ತಂದು, ನಂತರ ಖಾಯಂಗೊಳಿಸುವುದಾಗಿ ಲಿಖಿತ ರೂಪದಲ್ಲಿ ಭರವಸೆ ನೀಡಿದ್ದರು. ಈ ಸಂಬಂಧ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಕ್ಕಾಗಿ ಸರ್ಕಾರದ ಅಧಿಕಾರಿಗಳು ಸೇರಿದಂತೆ ಕಾರ್ಮಿಕ ಸಂಘಟನೆಗಳ ಮುಖಂಡರುಗಳನ್ನೊಳಗೊಂಡ ಸಮಿತಿಯನ್ನು ಸಹ ಸರ್ಕಾರ ರಚಿಸಿತ್ತು.

ಈ ಸಮಿತಿಯು 2022 ಅಕ್ಟೋಬರ್ 28ರಂದು ನಡೆಸಿದ ಸಭೆಯಲ್ಲಿ ”ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ನೆಪಮಾತ್ರ ಗುತ್ತಿಗೆ ಪೌರಕಾರ್ಮಿಕರಾದ ವಾಹನ ಚಾಲಕರು, ಲೋಡರ್‍‌ಗಳನ್ನು ಮತ್ತು ಸಹಾಯಕರನ್ನು ಮೊದಲಿಗೆ ನೇರವೇತನ ಪಾವತಿಯಡಿ ತಂದು ತಕ್ಷಣವೇ ಖಾಯಂಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಿರುತ್ತದೆ” ಎಂದು ಚರ್ಚಿಸಲಾಗಿತ್ತು.

ಆದರೆ, ಬಿಬಿಎಂಪಿಯ ಅಡಿಯಲ್ಲಿ ಬರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ರವರು 2023 ಜನವರಿ 21ರಂದು ಘನ ತ್ಯಾಜ್ಯ ನಿರ್ವಹಣೆ ಮಾಡಲು ಟೆಂಡರ್ ಕರೆಯಿತು. ಈ ರೀತಿ ವಾಹನ ಚಾಲಕರು, ಲೋಡರ್‍‌ಗಳು ಮತ್ತು ಸಹಾಯಕರನ್ನು ಗುತ್ತಿಗೆದಾರರ ಮೂಲಕ ದುಡಿಸಿಕೊಳ್ಳುವುದು ಆಧುನಿಕ ಜೀತ ಮತ್ತು ಗುಲಾಮಿ ಪದ್ಧತಿಯ ಪ್ರತೀಕವಾಗಿದೆ. ಬಿಬಿಎಂಪಿಯ ಈ ಕ್ರಮವನ್ನು ಎಐಸಿಸಿಟಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ತಕ್ಷಣದಲ್ಲೇ ಟೆಂಡರ್ ಅಧಿಸೂಚನೆಯನ್ನು ವಾಪಸ್ಸು ಪಡೆದು ಸರ್ಕಾರದ ಲಿಖಿತ ಭರವಸೆಯಂತೆ ಈ ಕಾರ್ಮಿಕರನ್ನು ಕೂಡಲೇ ನೇರವೇತನ ಪಾವತಿಯಡಿ ತಂದು, ಖಾಯಂಗೊಳಿಸಬೇಕೆಂದು ಪತಿಕಾಗೋಷ್ಠಿಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಒತ್ತಾಯಿಸಿದೆ.

ಪೌರಕಾರ್ಮಿಕ ಸಂಘಟನೆಯು ಪ್ರಮುಖ ಹಕ್ಕೋತ್ತಾಯಗಳನ್ನು ಬಿಬಿಎಂಪಿಗೆ ಸಲ್ಲಿಸಿದೆ.

1. ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು, ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕು.
2. ಬಿಬಿಎಂಪಿ ಅಡಿಯಲ್ಲಿರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ ರವರು ಕರೆದಿರುವ ಟೆಂಡರ್ ಪ್ರಕ್ರಿಯೆಯನ್ನು ತಕ್ಷಣದಲ್ಲೇ ರದ್ಧುಗೊಳಿಸಬೇಕು.
3. ಖಾಯಂಗೊಳ್ಳುವವರೆಗೆ ಕನಿಷ್ಠ ವೇತನ ಪಾವತಿ ಮಾಡಬೇಕು.
4. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಮತ್ತು ಹೆಚ್ವುವರಿ ಅವಧಿಗೆ ಅಧಿಕವೇತನ ನೀಡಬೇಕು.
5. ಸಕಾಲಕ್ಕೆ ವೇತನ ಪಾವತಿ ಮಾಡಬೇಕು ಮತ್ತು ವೇತನ ಚೀಟಿ ನೀಡಬೇಕು.
6. 3 ರಿಂದ 8 ತಿಂಗಳ ವರಗೆ ಬಾಕಿ ಇರುವ ವೇತನವನ್ನು ತಕ್ಷಣದಲ್ಲೇ ಪಾವತಿಸಬೇಕು.
7. ವಿಶ್ರಾಂತಿ ಕೊಠಡಿ, ಶೌಚಾಲಯ, ಕುಡಿಯುವ ನೀರು ಮತ್ತು ಸಮಪರ್ಕವಾದ ಪೌಷ್ಠಿಕ ಆಹಾರವನ್ನು ಒದಗಿಸಬೇಕು.
8. ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯವನ್ನು ಕಲ್ಪಿಸಬೇಕು ಮತ್ತು ಸುರಕ್ಷತಾ ಪರಿಕರಗಳನ್ನು ನೀಡಬೇಕು.
9. ಕಸ ಸಂಗ್ರಹಿಸಲು ಮತ್ತು ಸಾಗಿಸಲು ಬಳಸುವ ಆಟೋಗಳ ದುರಸ್ಥಿ ವೆಚ್ಚ ಬಿಬಿಎಂಪಿಯೇ ಭರಿಸಬೇಕು.
10. ಸರ್ಕಾರಿ ಘೋಷಿತ ಎಲ್ಲಾ ರಾಷ್ಟ್ರೀಯ ಮತ್ತು ಹಬ್ಬ ದಿನಗಳು ಒಳಗೊಂಡಂತೆ ರಜೆ ನೀಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...