Homeಕರ್ನಾಟಕಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

ಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

- Advertisement -
- Advertisement -

ಬಿಬಿಎಂಪಿ ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು (ಅಟೋ, ಟ್ರಾಕ್ಟರ್, ಕಾಂಪ್ಟ್ರಾಕ್ಟರ್ ಮತ್ತು ಲಾರಿ) ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಬುಧವಾರ ಪತ್ರಿಕಾ ಘೋಷ್ಠಿ ನಡೆಸಿತು.

ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯ ಪತ್ರಿಕಾ ಪ್ರಕಟನೆಯಲ್ಲಿ, ಬಿಬಿಎಂಪಿ ಅಧಿಕಾರಿಗಳಿಂದ ಮತ್ತು ನೆಪಮಾತ್ರ ಗುತ್ತಿಗೆದಾರರಿಂದ ಕಾರ್ಮಿಕರ ಮೇಲೆ ಆಗುತ್ತಿರುವ ಕಿರುಕುಳ, ಅನ್ಯಾಯ ನಿಲ್ಲಬೇಕು ಮತ್ತು ಈ ಕಾರ್ಮಿಕರನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಬಿಬಿಎಂಪಿಯನ್ನು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ಘನತ್ಯಾಜ್ಯ ನಿರ್ವಹಣೆಯ ಕೆಲಸವನ್ನು ಬಿಬಿಎಂಪಿಯು ಕಾನೂನು ಪ್ರಕಾರ ಕಡ್ಡಾಯವಾಗಿ ಮಾಡಲೇ ಬೇಕಾಗಿರುತ್ತದೆ ಮತ್ತು ಇದು ನಿರಂತರ ಸ್ವರೂಪದ ಕೆಲಸವಾಗಿರುತ್ತದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಸಗುಡಿಸುವ ಪೌರಕಾರ್ಮಿರಿಗೆ ನೇರವೇತನವನ್ನು ಪಾವತಿ ಮಾಡುತ್ತಿರುತ್ತಿದೆ. ಆದರೆ ಮನೆ ಮನೆಗಳಲ್ಲಿ ಆಟೋ ಮತ್ತು ಇತರೆ ವಾಹನಗಳ ಮೂಲಕ ಕಸ ಸಂಗ್ರಹಿಸುವ ಮತ್ತು ಕಸ ವಿಲೇವಾರಿ ಮಾಡುವ ಪೌರಕಾರ್ಮಿಕರನ್ನು ನಾಮಮಾತ್ರ ಗುತ್ತಿಗೆ ವ್ಯವಸ್ಥೆಯಡಿಯಲ್ಲಿ ನೇಮಕ ಮಾಡಿಕೊಂಡಿರುತ್ತದೆ. ನಿರಂತರ ಸ್ವರೂಪದ ಕೆಲಸವನ್ನು ಗುತ್ತಿಗೆ ನೀಡುವುದು ‘ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿಷೇಧ) ಕಾಯ್ದೆಯ ಅನ್ವಯ ಕಾನೂನು ಬಾಹಿರ’ ಕ್ರಮವಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

2022ರ ಜುಲೈ 1 ರಂದು ಬಿಬಿಎಎಂಪಿ ಪೌರಕಾರ್ಮಿಕರ ಸಂಘಟನೆಯು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ರಾಜ್ಯ ಮಟ್ಟದ ಅನಿರ್ಧಿಷ್ಠಾವಧಿ ಧರಣಿ ನಡೆಸಿತ್ತು. ಈ ಸಂದರ್ಭದಲಿ ಮುಖ್ಯಮಂತ್ರಿಗಳು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ಮತ್ತು ಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಾದ ಕಸ ಸಾಗಿಸುವ ಸಂಗ್ರಹಿಸುವ ಮತ್ತು ಸಾಗಿಸುವ ವಾಹನಗಳ ಚಾಲಕರು, ಲೋಡರ್‍‌ಗಳು, ಸಹಾಯಕರು ಮತ್ತು ಕ್ಲೀನರ್‍‌ಗಳನ್ನು ಮೊದಲಿಗೆ ಬಿಬಿಎಂಪಿಯಿಂದ ನೇರವೇತನ ಪಾವತಿಯಡಿಯಲ್ಲಿ ತಂದು, ನಂತರ ಖಾಯಂಗೊಳಿಸುವುದಾಗಿ ಲಿಖಿತ ರೂಪದಲ್ಲಿ ಭರವಸೆ ನೀಡಿದ್ದರು. ಈ ಸಂಬಂಧ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಕ್ಕಾಗಿ ಸರ್ಕಾರದ ಅಧಿಕಾರಿಗಳು ಸೇರಿದಂತೆ ಕಾರ್ಮಿಕ ಸಂಘಟನೆಗಳ ಮುಖಂಡರುಗಳನ್ನೊಳಗೊಂಡ ಸಮಿತಿಯನ್ನು ಸಹ ಸರ್ಕಾರ ರಚಿಸಿತ್ತು.

ಈ ಸಮಿತಿಯು 2022 ಅಕ್ಟೋಬರ್ 28ರಂದು ನಡೆಸಿದ ಸಭೆಯಲ್ಲಿ ”ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ನೆಪಮಾತ್ರ ಗುತ್ತಿಗೆ ಪೌರಕಾರ್ಮಿಕರಾದ ವಾಹನ ಚಾಲಕರು, ಲೋಡರ್‍‌ಗಳನ್ನು ಮತ್ತು ಸಹಾಯಕರನ್ನು ಮೊದಲಿಗೆ ನೇರವೇತನ ಪಾವತಿಯಡಿ ತಂದು ತಕ್ಷಣವೇ ಖಾಯಂಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಿರುತ್ತದೆ” ಎಂದು ಚರ್ಚಿಸಲಾಗಿತ್ತು.

ಆದರೆ, ಬಿಬಿಎಂಪಿಯ ಅಡಿಯಲ್ಲಿ ಬರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ರವರು 2023 ಜನವರಿ 21ರಂದು ಘನ ತ್ಯಾಜ್ಯ ನಿರ್ವಹಣೆ ಮಾಡಲು ಟೆಂಡರ್ ಕರೆಯಿತು. ಈ ರೀತಿ ವಾಹನ ಚಾಲಕರು, ಲೋಡರ್‍‌ಗಳು ಮತ್ತು ಸಹಾಯಕರನ್ನು ಗುತ್ತಿಗೆದಾರರ ಮೂಲಕ ದುಡಿಸಿಕೊಳ್ಳುವುದು ಆಧುನಿಕ ಜೀತ ಮತ್ತು ಗುಲಾಮಿ ಪದ್ಧತಿಯ ಪ್ರತೀಕವಾಗಿದೆ. ಬಿಬಿಎಂಪಿಯ ಈ ಕ್ರಮವನ್ನು ಎಐಸಿಸಿಟಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ತಕ್ಷಣದಲ್ಲೇ ಟೆಂಡರ್ ಅಧಿಸೂಚನೆಯನ್ನು ವಾಪಸ್ಸು ಪಡೆದು ಸರ್ಕಾರದ ಲಿಖಿತ ಭರವಸೆಯಂತೆ ಈ ಕಾರ್ಮಿಕರನ್ನು ಕೂಡಲೇ ನೇರವೇತನ ಪಾವತಿಯಡಿ ತಂದು, ಖಾಯಂಗೊಳಿಸಬೇಕೆಂದು ಪತಿಕಾಗೋಷ್ಠಿಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಒತ್ತಾಯಿಸಿದೆ.

ಪೌರಕಾರ್ಮಿಕ ಸಂಘಟನೆಯು ಪ್ರಮುಖ ಹಕ್ಕೋತ್ತಾಯಗಳನ್ನು ಬಿಬಿಎಂಪಿಗೆ ಸಲ್ಲಿಸಿದೆ.

1. ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು, ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕು.
2. ಬಿಬಿಎಂಪಿ ಅಡಿಯಲ್ಲಿರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ ರವರು ಕರೆದಿರುವ ಟೆಂಡರ್ ಪ್ರಕ್ರಿಯೆಯನ್ನು ತಕ್ಷಣದಲ್ಲೇ ರದ್ಧುಗೊಳಿಸಬೇಕು.
3. ಖಾಯಂಗೊಳ್ಳುವವರೆಗೆ ಕನಿಷ್ಠ ವೇತನ ಪಾವತಿ ಮಾಡಬೇಕು.
4. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಮತ್ತು ಹೆಚ್ವುವರಿ ಅವಧಿಗೆ ಅಧಿಕವೇತನ ನೀಡಬೇಕು.
5. ಸಕಾಲಕ್ಕೆ ವೇತನ ಪಾವತಿ ಮಾಡಬೇಕು ಮತ್ತು ವೇತನ ಚೀಟಿ ನೀಡಬೇಕು.
6. 3 ರಿಂದ 8 ತಿಂಗಳ ವರಗೆ ಬಾಕಿ ಇರುವ ವೇತನವನ್ನು ತಕ್ಷಣದಲ್ಲೇ ಪಾವತಿಸಬೇಕು.
7. ವಿಶ್ರಾಂತಿ ಕೊಠಡಿ, ಶೌಚಾಲಯ, ಕುಡಿಯುವ ನೀರು ಮತ್ತು ಸಮಪರ್ಕವಾದ ಪೌಷ್ಠಿಕ ಆಹಾರವನ್ನು ಒದಗಿಸಬೇಕು.
8. ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯವನ್ನು ಕಲ್ಪಿಸಬೇಕು ಮತ್ತು ಸುರಕ್ಷತಾ ಪರಿಕರಗಳನ್ನು ನೀಡಬೇಕು.
9. ಕಸ ಸಂಗ್ರಹಿಸಲು ಮತ್ತು ಸಾಗಿಸಲು ಬಳಸುವ ಆಟೋಗಳ ದುರಸ್ಥಿ ವೆಚ್ಚ ಬಿಬಿಎಂಪಿಯೇ ಭರಿಸಬೇಕು.
10. ಸರ್ಕಾರಿ ಘೋಷಿತ ಎಲ್ಲಾ ರಾಷ್ಟ್ರೀಯ ಮತ್ತು ಹಬ್ಬ ದಿನಗಳು ಒಳಗೊಂಡಂತೆ ರಜೆ ನೀಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...