Homeಕರ್ನಾಟಕಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

ಕಸ ಸಂಗ್ರಹಣೆ, ವಿಲೇವಾರಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು: ಬಿಬಿಎಂಪಿಗೆ ಕಾರ್ಮಿಕರ ಸಂಘಟನೆಯಿಂದ ಒತ್ತಾಯ

- Advertisement -
- Advertisement -

ಬಿಬಿಎಂಪಿ ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು (ಅಟೋ, ಟ್ರಾಕ್ಟರ್, ಕಾಂಪ್ಟ್ರಾಕ್ಟರ್ ಮತ್ತು ಲಾರಿ) ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಬುಧವಾರ ಪತ್ರಿಕಾ ಘೋಷ್ಠಿ ನಡೆಸಿತು.

ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯ ಪತ್ರಿಕಾ ಪ್ರಕಟನೆಯಲ್ಲಿ, ಬಿಬಿಎಂಪಿ ಅಧಿಕಾರಿಗಳಿಂದ ಮತ್ತು ನೆಪಮಾತ್ರ ಗುತ್ತಿಗೆದಾರರಿಂದ ಕಾರ್ಮಿಕರ ಮೇಲೆ ಆಗುತ್ತಿರುವ ಕಿರುಕುಳ, ಅನ್ಯಾಯ ನಿಲ್ಲಬೇಕು ಮತ್ತು ಈ ಕಾರ್ಮಿಕರನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕೆಂದು ಬಿಬಿಎಂಪಿಯನ್ನು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ಘನತ್ಯಾಜ್ಯ ನಿರ್ವಹಣೆಯ ಕೆಲಸವನ್ನು ಬಿಬಿಎಂಪಿಯು ಕಾನೂನು ಪ್ರಕಾರ ಕಡ್ಡಾಯವಾಗಿ ಮಾಡಲೇ ಬೇಕಾಗಿರುತ್ತದೆ ಮತ್ತು ಇದು ನಿರಂತರ ಸ್ವರೂಪದ ಕೆಲಸವಾಗಿರುತ್ತದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಸಗುಡಿಸುವ ಪೌರಕಾರ್ಮಿರಿಗೆ ನೇರವೇತನವನ್ನು ಪಾವತಿ ಮಾಡುತ್ತಿರುತ್ತಿದೆ. ಆದರೆ ಮನೆ ಮನೆಗಳಲ್ಲಿ ಆಟೋ ಮತ್ತು ಇತರೆ ವಾಹನಗಳ ಮೂಲಕ ಕಸ ಸಂಗ್ರಹಿಸುವ ಮತ್ತು ಕಸ ವಿಲೇವಾರಿ ಮಾಡುವ ಪೌರಕಾರ್ಮಿಕರನ್ನು ನಾಮಮಾತ್ರ ಗುತ್ತಿಗೆ ವ್ಯವಸ್ಥೆಯಡಿಯಲ್ಲಿ ನೇಮಕ ಮಾಡಿಕೊಂಡಿರುತ್ತದೆ. ನಿರಂತರ ಸ್ವರೂಪದ ಕೆಲಸವನ್ನು ಗುತ್ತಿಗೆ ನೀಡುವುದು ‘ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿಷೇಧ) ಕಾಯ್ದೆಯ ಅನ್ವಯ ಕಾನೂನು ಬಾಹಿರ’ ಕ್ರಮವಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

2022ರ ಜುಲೈ 1 ರಂದು ಬಿಬಿಎಎಂಪಿ ಪೌರಕಾರ್ಮಿಕರ ಸಂಘಟನೆಯು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ರಾಜ್ಯ ಮಟ್ಟದ ಅನಿರ್ಧಿಷ್ಠಾವಧಿ ಧರಣಿ ನಡೆಸಿತ್ತು. ಈ ಸಂದರ್ಭದಲಿ ಮುಖ್ಯಮಂತ್ರಿಗಳು ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ಮತ್ತು ಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಾದ ಕಸ ಸಾಗಿಸುವ ಸಂಗ್ರಹಿಸುವ ಮತ್ತು ಸಾಗಿಸುವ ವಾಹನಗಳ ಚಾಲಕರು, ಲೋಡರ್‍‌ಗಳು, ಸಹಾಯಕರು ಮತ್ತು ಕ್ಲೀನರ್‍‌ಗಳನ್ನು ಮೊದಲಿಗೆ ಬಿಬಿಎಂಪಿಯಿಂದ ನೇರವೇತನ ಪಾವತಿಯಡಿಯಲ್ಲಿ ತಂದು, ನಂತರ ಖಾಯಂಗೊಳಿಸುವುದಾಗಿ ಲಿಖಿತ ರೂಪದಲ್ಲಿ ಭರವಸೆ ನೀಡಿದ್ದರು. ಈ ಸಂಬಂಧ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಕ್ಕಾಗಿ ಸರ್ಕಾರದ ಅಧಿಕಾರಿಗಳು ಸೇರಿದಂತೆ ಕಾರ್ಮಿಕ ಸಂಘಟನೆಗಳ ಮುಖಂಡರುಗಳನ್ನೊಳಗೊಂಡ ಸಮಿತಿಯನ್ನು ಸಹ ಸರ್ಕಾರ ರಚಿಸಿತ್ತು.

ಈ ಸಮಿತಿಯು 2022 ಅಕ್ಟೋಬರ್ 28ರಂದು ನಡೆಸಿದ ಸಭೆಯಲ್ಲಿ ”ಘನತ್ಯಾಜ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ನೆಪಮಾತ್ರ ಗುತ್ತಿಗೆ ಪೌರಕಾರ್ಮಿಕರಾದ ವಾಹನ ಚಾಲಕರು, ಲೋಡರ್‍‌ಗಳನ್ನು ಮತ್ತು ಸಹಾಯಕರನ್ನು ಮೊದಲಿಗೆ ನೇರವೇತನ ಪಾವತಿಯಡಿ ತಂದು ತಕ್ಷಣವೇ ಖಾಯಂಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಿರುತ್ತದೆ” ಎಂದು ಚರ್ಚಿಸಲಾಗಿತ್ತು.

ಆದರೆ, ಬಿಬಿಎಂಪಿಯ ಅಡಿಯಲ್ಲಿ ಬರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ರವರು 2023 ಜನವರಿ 21ರಂದು ಘನ ತ್ಯಾಜ್ಯ ನಿರ್ವಹಣೆ ಮಾಡಲು ಟೆಂಡರ್ ಕರೆಯಿತು. ಈ ರೀತಿ ವಾಹನ ಚಾಲಕರು, ಲೋಡರ್‍‌ಗಳು ಮತ್ತು ಸಹಾಯಕರನ್ನು ಗುತ್ತಿಗೆದಾರರ ಮೂಲಕ ದುಡಿಸಿಕೊಳ್ಳುವುದು ಆಧುನಿಕ ಜೀತ ಮತ್ತು ಗುಲಾಮಿ ಪದ್ಧತಿಯ ಪ್ರತೀಕವಾಗಿದೆ. ಬಿಬಿಎಂಪಿಯ ಈ ಕ್ರಮವನ್ನು ಎಐಸಿಸಿಟಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ತಕ್ಷಣದಲ್ಲೇ ಟೆಂಡರ್ ಅಧಿಸೂಚನೆಯನ್ನು ವಾಪಸ್ಸು ಪಡೆದು ಸರ್ಕಾರದ ಲಿಖಿತ ಭರವಸೆಯಂತೆ ಈ ಕಾರ್ಮಿಕರನ್ನು ಕೂಡಲೇ ನೇರವೇತನ ಪಾವತಿಯಡಿ ತಂದು, ಖಾಯಂಗೊಳಿಸಬೇಕೆಂದು ಪತಿಕಾಗೋಷ್ಠಿಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆಯು ಒತ್ತಾಯಿಸಿದೆ.

ಪೌರಕಾರ್ಮಿಕ ಸಂಘಟನೆಯು ಪ್ರಮುಖ ಹಕ್ಕೋತ್ತಾಯಗಳನ್ನು ಬಿಬಿಎಂಪಿಗೆ ಸಲ್ಲಿಸಿದೆ.

1. ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು, ಸಹಾಯಕರು, ಲೋಡರ್‍‌ಗಳು ಮತ್ತು ಕ್ಲೀನರ್‍‌ಗಳನ್ನು ನೇರವೇತನ ಪಾವತಿಯಡಿಯಲ್ಲಿ ತಂದು ಖಾಯಂಗೊಳಿಸಬೇಕು.
2. ಬಿಬಿಎಂಪಿ ಅಡಿಯಲ್ಲಿರುವ ‘ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‍ಮೆಂಟ್ ಲೀ.’ ರವರು ಕರೆದಿರುವ ಟೆಂಡರ್ ಪ್ರಕ್ರಿಯೆಯನ್ನು ತಕ್ಷಣದಲ್ಲೇ ರದ್ಧುಗೊಳಿಸಬೇಕು.
3. ಖಾಯಂಗೊಳ್ಳುವವರೆಗೆ ಕನಿಷ್ಠ ವೇತನ ಪಾವತಿ ಮಾಡಬೇಕು.
4. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಮತ್ತು ಹೆಚ್ವುವರಿ ಅವಧಿಗೆ ಅಧಿಕವೇತನ ನೀಡಬೇಕು.
5. ಸಕಾಲಕ್ಕೆ ವೇತನ ಪಾವತಿ ಮಾಡಬೇಕು ಮತ್ತು ವೇತನ ಚೀಟಿ ನೀಡಬೇಕು.
6. 3 ರಿಂದ 8 ತಿಂಗಳ ವರಗೆ ಬಾಕಿ ಇರುವ ವೇತನವನ್ನು ತಕ್ಷಣದಲ್ಲೇ ಪಾವತಿಸಬೇಕು.
7. ವಿಶ್ರಾಂತಿ ಕೊಠಡಿ, ಶೌಚಾಲಯ, ಕುಡಿಯುವ ನೀರು ಮತ್ತು ಸಮಪರ್ಕವಾದ ಪೌಷ್ಠಿಕ ಆಹಾರವನ್ನು ಒದಗಿಸಬೇಕು.
8. ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯವನ್ನು ಕಲ್ಪಿಸಬೇಕು ಮತ್ತು ಸುರಕ್ಷತಾ ಪರಿಕರಗಳನ್ನು ನೀಡಬೇಕು.
9. ಕಸ ಸಂಗ್ರಹಿಸಲು ಮತ್ತು ಸಾಗಿಸಲು ಬಳಸುವ ಆಟೋಗಳ ದುರಸ್ಥಿ ವೆಚ್ಚ ಬಿಬಿಎಂಪಿಯೇ ಭರಿಸಬೇಕು.
10. ಸರ್ಕಾರಿ ಘೋಷಿತ ಎಲ್ಲಾ ರಾಷ್ಟ್ರೀಯ ಮತ್ತು ಹಬ್ಬ ದಿನಗಳು ಒಳಗೊಂಡಂತೆ ರಜೆ ನೀಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...